AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Kerala Story: 200 ಕೋಟಿ ರೂಪಾಯಿ ಗಡಿ ಮುಟ್ಟಲು ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ 22 ಕೋಟಿ ರೂ. ಮಾತ್ರ ಬಾಕಿ

The Kerala Story Box Office Collection: ಸತತ 16 ದಿನಗಳ ಕಾಲ ಉತ್ತಮ ಪ್ರದರ್ಶನ ಕಂಡಿರುವ ‘ದಿ ಕೇರಳ ಸ್ಟೋರಿ’ ಚಿತ್ರ ಮೂರನೇ ವೀಕೆಂಡ್​ನಲ್ಲೂ ಭಾರಿ ಕಮಾಯಿ ಮಾಡುವ ಸಾಧ್ಯತೆ ಇದೆ. ಶೀಘ್ರದಲ್ಲೇ ಈ ಸಿನಿಮಾ ದ್ವಿಶತಕ ಬಾರಿಸಲಿದೆ.

The Kerala Story: 200 ಕೋಟಿ ರೂಪಾಯಿ ಗಡಿ ಮುಟ್ಟಲು ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ 22 ಕೋಟಿ ರೂ. ಮಾತ್ರ ಬಾಕಿ
‘ದಿ ಕೇರಳ ಸ್ಟೋರಿ’ ಸಿನಿಮಾದ ದೃಶ್ಯ
ಮದನ್​ ಕುಮಾರ್​
|

Updated on: May 20, 2023 | 4:35 PM

Share

ಸುದೀಪ್ತೋ ಸೇನ್​ ನಿರ್ದೇಶನ ಮಾಡಿದ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಈಗ 200 ಕೋಟಿ ರೂಪಾಯಿ ಗಡಿ ಮುಟ್ಟಲು ಸಜ್ಜಾಗಿದೆ. 2ನೇ ವಾರದಲ್ಲಿ ಈ ಸಿನಿಮಾ ಅದ್ದೂರಿಯಾಗಿ ಕಲೆಕ್ಷನ್​ (The Kerala Story Collection) ಮಾಡಿದೆ. ಪ್ರತಿ ದಿನವೂ ಬಹುಕೋಟಿ ರೂಪಾಯಿ ಗಳಿಕೆ ಆಗುತ್ತಿರುವುದರಿಂದ ಒಳ್ಳೆಯ ಮೊತ್ತವನ್ನು ಕಲೆಹಾಕುವಲ್ಲಿ ‘ದಿ ಕೇರಳ ಸ್ಟೋರಿ’ ಚಿತ್ರ ಯಶಸ್ವಿ ಆಗಿದೆ. ಮೇ 5ರಂದು ಈ ಸಿನಿಮಾ ತೆರೆಕಂಡಿತು. ಸತತ 16 ದಿನಗಳ ಕಾಲ ಉತ್ತಮ ಪ್ರದರ್ಶನ ಕಂಡಿರುವ ಈ ಚಿತ್ರ ಈಗ ಮೂರನೇ ವೀಕೆಂಡ್​ನಲ್ಲೂ ಭಾರಿ ಕಮಾಯಿ ಮಾಡುವ ಸಾಧ್ಯತೆ ಇದೆ. ಒಟ್ಟು 15 ದಿನಕ್ಕೆ ‘ದಿ ಕೇರಳ ಸ್ಟೋರಿ’ ಚಿತ್ರದ ಒಟ್ಟು ಕಲೆಕ್ಷನ್​ 178 ಕೋಟಿ ರೂಪಾಯಿ ಆಗಿದೆ. ಶೀಘ್ರದಲ್ಲೇ ಈ ಸಿನಿಮಾ ದ್ವಿಶತಕ ಬಾರಿಸಲಿದೆ. ಈ ಚಿತ್ರದಿಂದ ನಟಿ ಅದಾ ಶರ್ಮಾ (Adah Sharma) ಅವರು ಖ್ಯಾತಿ ಹೆಚ್ಚಿದೆ.

ಕಾಂಟ್ರವರ್ಸಿ ಸೃಷ್ಟಿಸಿದ ಸಿನಿಮಾ ಬಗ್ಗೆ ಪ್ರೇಕ್ಷಕರು ಆಸಕ್ತಿ ತೋರಿಸುವುದು ಸಹಜ. ‘ದಿ ಕೇರಳ ಸ್ಟೋರಿ’ ವಿಚಾರದಲ್ಲೂ ಹಾಗೆಯೇ ಆಯಿತು. ಟೀಸರ್​ ರಿಲೀಸ್​ ಆದಾಗಲೇ ಈ ಚಿತ್ರಕ್ಕೆ ಕೆಲವರಿಂದ ಆಕ್ಷೇಪ ವ್ಯಕ್ತವಾಗಿತ್ತು. ಸಿನಿಮಾ ಬಿಡುಗಡೆ ಆದಾಗ ಕಿರಿಕ್​ ಜೋರಾಯಿತು. ಏನೇ ಆದರೂ ಕೂಡ ಚಿತ್ರದ ಕಲೆಕ್ಷನ್​ಗೆ ಪೆಟ್ಟು ಬೀಳಲಿಲ್ಲ. ಬಹುತೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಂಡಿದೆ.

ಇದನ್ನೂ ಓದಿ: Mamata Banerjee: ‘ಕೈ ಮುಗಿದು ಕೇಳ್ತೀನಿ, ಮಮತಾ ಬ್ಯಾನರ್ಜಿ ನಮ್ಮ ಚಿತ್ರ ನೋಡಲಿ’: ‘ದಿ ಕೇರಳ ಸ್ಟೋರಿ’ ನಿರ್ಮಾಪಕನ ಮನವಿ

ಇದನ್ನೂ ಓದಿ
Image
‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಮಧ್ಯ ಪ್ರದೇಶ ಸರ್ಕಾರ
Image
The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ತೋರಿಸಿರೋದು ನಿಜವೋ ಸುಳ್ಳೋ? ಟ್ವಿಟರ್​ನಲ್ಲಿ ಜೋರಾಗಿದೆ ಚರ್ಚೆ
Image
Adah Sharma: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಗಮನ ಸೆಳೆದ ಅದಾ ಶರ್ಮಾ ನಟನೆ; ಪ್ರೇಕ್ಷಕರಿಂದ ಸಿಕ್ತು ಮೆಚ್ಚುಗೆ
Image
The Kerala Story Review: ಐಸಿಸ್ ಸಂಚಿನ ಕುರಿತು ಎಚ್ಚರಿಕೆ ಸಂದೇಶ ಸಾರುವ ‘ದಿ ಕೇರಳ ಸ್ಟೋರಿ’

‘ದಿ ಕೇರಳ ಸ್ಟೋರಿ’ ಚಿತ್ರದ ಕಲೆಕ್ಷನ್​ ರಿಪೋರ್ಟ್​:

1ನೇ ದಿನ: 8.03 ಕೋಟಿ ರೂ.

2ನೇ ದಿನ: 11.22 ಕೋಟಿ ರೂ.

3ನೇ ದಿನ: 16.40 ಕೋಟಿ ರೂ.

4ನೇ ದಿನ: 10.07 ಕೋಟಿ ರೂ.

5ನೇ ದಿನ: 11.14 ಕೋಟಿ ರೂ.

6ನೇ ದಿನ: 12 ಕೋಟಿ ರೂ.

7ನೇ ದಿನ: 12.50 ಕೋಟಿ ರೂ.

8ನೇ ದಿನ: 12.23 ಕೋಟಿ ರೂ.

9ನೇ ದಿನ: 19.50 ಕೋಟಿ ರೂ.

10ನೇ ದಿನ: 23.75 ಕೋಟಿ ರೂ.

11ನೇ ದಿನ: 10.30 ಕೋಟಿ ರೂ.

12ನೇ ದಿನ: 9.65 ಕೋಟಿ ರೂ.

13ನೇ ದಿನ: 8.03 ಕೋಟಿ ರೂ.

14ನೇ ದಿನ: 7 ಕೋಟಿ ರೂ.

15ನೇ ದಿನ: 6.60 ಕೋಟಿ ರೂ.

ಇದನ್ನೂ ಓದಿ: The Kerala Story: 2023ರಲ್ಲಿ ಅತಿ ಹೆಚ್ಚು ಕಲೆಕ್ಷನ್​ ಮಾಡಿದ ಹಿಂದಿ​ ಚಿತ್ರಗಳ ಪಟ್ಟಿಯಲ್ಲಿ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ 2ನೇ ಸ್ಥಾನ

ಸ್ಟಾರ್​ ನಟರು ಇಲ್ಲದಿದ್ದರೂ ಕೂಡ ‘ದಿ ಕೇರಳ ಸ್ಟೋರಿ’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಣ ಮಾಡಿದೆ. ಇದು ಟ್ರೇಡ್​ ವಿಶ್ಲೇಷಕರಿಗೂ ಅಚ್ಚರಿ ಮೂಡಿಸಿದೆ. ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರದ ಓಟ ಮುಂದುವರಿದಿದೆ. ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ಕೂಡ ಯಶಸ್ವಿಯಾಗಿ ಪ್ರದರ್ಶನ ಕಂಡರೆ ಸಹಜವಾಗಿಯೇ ಕಲೆಕ್ಷನ್​ ಹೆಚ್ಚಾಗಲಿದೆ.

‘ದಿ ಕೇರಳ ಸ್ಟೋರಿ’ ಸಿನಿಮಾಗೆ ಪಶ್ಚಿಮ ಬಂಗಾಳದಲ್ಲಿ ನಿಷೇಧ ಹೇರಲಾಗಿತ್ತು. ಆದರೆ ಸರ್ಕಾರದ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್​ ತೀರ್ಪು ನೀಡಿದೆ. ಇದು ಚಿತ್ರತಂಡಕ್ಕೆ ಖುಷಿ ನೀಡಿದೆ. ಈ ಬಗ್ಗೆ ನಿರ್ಮಾಪಕ ವಿಪುಲ್​ ಅಮೃತ್​ಲಾಲ್​ ಶಾ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಎಎನ್​ಐ ಸುದ್ದಿ ಸಂಸ್ಥೆ ಜೊತೆ ಮಾತನಾಡಿರುವ ಅವರು ಈ ಸಿನಿಮಾವನ್ನು ಮಮತಾ ಬ್ಯಾನರ್ಜಿ ನೋಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್