AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

200 ಕೋಟಿ ರೂ. ಕಲೆಕ್ಷನ್ ಮಾಡಿದ ‘ದಿ ಕೇರಳ ಸ್ಟೋರಿ’; ಚಿತ್ರದ ಬಜೆಟ್​ ಎಷ್ಟಿತ್ತು, ಲಾಭ ಎಷ್ಟು?

ರಿಲೀಸ್ ಆದ ವೀಕೆಂಡ್ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡೋದು ಸಹಜ. ‘ದಿ ಕೇರಳ ಸ್ಟೋರಿ’ ಮೂರನೇ ಭಾನುವಾರವೂ ಅಬ್ಬರಿಸಿದೆ. ಮೇ 21ರಂದು ಈ ಸಿನಿಮಾ 11.50 ಕೋಟಿ ರೂಪಾಯಿ ಬಾಚಿಕೊಂಡಿದೆ.

200 ಕೋಟಿ ರೂ. ಕಲೆಕ್ಷನ್ ಮಾಡಿದ ‘ದಿ ಕೇರಳ ಸ್ಟೋರಿ’; ಚಿತ್ರದ ಬಜೆಟ್​ ಎಷ್ಟಿತ್ತು, ಲಾಭ ಎಷ್ಟು?
ಅದಾ ಶರ್ಮಾ
ರಾಜೇಶ್ ದುಗ್ಗುಮನೆ
|

Updated on: May 22, 2023 | 1:59 PM

Share

‘ದಿ ಕೇರಳ ಸ್ಟೋರಿ’ ಸಿನಿಮಾದ (The Kerala Story Movie) ಅಬ್ಬರದ ಕಲೆಕ್ಷನ್ ಮುಂದುವರಿದಿದೆ. ರಿಲೀಸ್ ಆಗಿ 20 ದಿನ ಕಳೆಯುವುದರೊಳಗೆ ಈ ಸಿನಿಮಾ 200 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಕಡಿಮೆ ಬಜೆಟ್​​ನಲ್ಲಿ ಸಿದ್ಧವಾದ ಈ ಸಿನಿಮಾ ದೊಡ್ಡ ಮೊತ್ತದ ಗಳಿಕೆ ಮಾಡುತ್ತಿರುವುದು ನಿರ್ಮಾಪಕರಿಗೆ ಖುಷಿ ನೀಡಿದೆ. ‘ದಿ ಕೇರಳ ಸ್ಟೋರಿ’ ಸಿನಿಮಾ ಈಗ ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು ಕಲೆಕ್ಷನ್ ಹೆಚ್ಚುತ್ತಲೇ ಇದೆ. ವಾರಾಂತ್ಯ ಮಾತ್ರವಲ್ಲದೆ ವಾರದ ದಿನಗಳಲ್ಲೂ ಸಿನಿಮಾ ಅಬ್ಬರಿಸುತ್ತಿದೆ.

ರಿಲೀಸ್ ಆದ ವೀಕೆಂಡ್ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡೋದು ಸಹಜ. ‘ದಿ ಕೇರಳ ಸ್ಟೋರಿ’ ಮೂರನೇ ಭಾನುವಾರವೂ ಅಬ್ಬರಿಸಿದೆ. ಮೇ 21ರಂದು ಈ ಸಿನಿಮಾ 11.50 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಇನ್ನೂ ಕೆಲ ದಿನಗಳ ಕಾಲ ಸಿನಿಮಾ ಅಬ್ಬರಿಸುವ ಸೂಚನೆ ಸಿಕ್ಕಿದೆ.

ಸಿನಿಮಾದ ಒಟ್ಟೂ ಗಳಿಕೆ 198.97 ಕೋಟಿ ರೂಪಾಯಿ ಆಗಿದೆ. ಇಂದಿನ ಗಳಿಕೆಯೂ ಸೇರಿದರೆ ಈ ಚಿತ್ರದ ಒಟ್ಟಾರೆ ಕಲೆಕ್ಷನ್ 200 ಕೋಟಿ ರೂಪಾಯಿ ದಾಟಲಿದೆ. ಕೇವಲ 20 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಇಷ್ಟು ದೊಡ್ಡ ಮೊತ್ತದ ಗಳಿಕೆ ಮಾಡಿರುವುದರಿಂದ ನಿರ್ಮಾಪಕ ವಿಪುಲ್ ಅಮೃತ್​ಲಾಲ್ ಶಾಗೆ ಒಳ್ಳೆಯ ಲಾಭ ಆಗಿದೆ. ಇಷ್ಟೇ ಅಲ್ಲದೆ ಟಿವಿ ಹಾಗೂ ಒಟಿಟಿ ಹಕ್ಕಿನಿಂದಲೂ ನಿರ್ಮಾಪಕರಿಗೆ ಸಾಕಷ್ಟು ಹಣ ಸಿಕ್ಕಿದೆ.

‘ದಿ ಕೇರಳ ಸ್ಟೋರಿ’ ಚಿತ್ರದ ಕಲೆಕ್ಷನ್​ ರಿಪೋರ್ಟ್​:

1ನೇ ದಿನ: 8.03 ಕೋಟಿ ರೂ.

2ನೇ ದಿನ: 11.22 ಕೋಟಿ ರೂ.

3ನೇ ದಿನ: 16.40 ಕೋಟಿ ರೂ.

4ನೇ ದಿನ: 10.07 ಕೋಟಿ ರೂ.

5ನೇ ದಿನ: 11.14 ಕೋಟಿ ರೂ.

6ನೇ ದಿನ: 12 ಕೋಟಿ ರೂ.

7ನೇ ದಿನ: 12.50 ಕೋಟಿ ರೂ.

8ನೇ ದಿನ: 12.23 ಕೋಟಿ ರೂ.

9ನೇ ದಿನ: 19.50 ಕೋಟಿ ರೂ.

10ನೇ ದಿನ: 23.75 ಕೋಟಿ ರೂ.

11ನೇ ದಿನ: 10.30 ಕೋಟಿ ರೂ.

12ನೇ ದಿನ: 9.65 ಕೋಟಿ ರೂ.

13ನೇ ದಿನ: 8.03 ಕೋಟಿ ರೂ.

14ನೇ ದಿನ: 7 ಕೋಟಿ ರೂ.

15ನೇ ದಿನ: 6.60 ಕೋಟಿ ರೂ.

16ನೇ ದಿನ: 9.15 ಕೋಟಿ ರೂ.

17ನೇ ದಿನ: 11.50 ಕೋಟಿ ರೂ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ