AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

200 ಕೋಟಿ ರೂ. ಕಲೆಕ್ಷನ್ ಮಾಡಿದ ‘ದಿ ಕೇರಳ ಸ್ಟೋರಿ’; ಚಿತ್ರದ ಬಜೆಟ್​ ಎಷ್ಟಿತ್ತು, ಲಾಭ ಎಷ್ಟು?

ರಿಲೀಸ್ ಆದ ವೀಕೆಂಡ್ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡೋದು ಸಹಜ. ‘ದಿ ಕೇರಳ ಸ್ಟೋರಿ’ ಮೂರನೇ ಭಾನುವಾರವೂ ಅಬ್ಬರಿಸಿದೆ. ಮೇ 21ರಂದು ಈ ಸಿನಿಮಾ 11.50 ಕೋಟಿ ರೂಪಾಯಿ ಬಾಚಿಕೊಂಡಿದೆ.

200 ಕೋಟಿ ರೂ. ಕಲೆಕ್ಷನ್ ಮಾಡಿದ ‘ದಿ ಕೇರಳ ಸ್ಟೋರಿ’; ಚಿತ್ರದ ಬಜೆಟ್​ ಎಷ್ಟಿತ್ತು, ಲಾಭ ಎಷ್ಟು?
ಅದಾ ಶರ್ಮಾ
ರಾಜೇಶ್ ದುಗ್ಗುಮನೆ
|

Updated on: May 22, 2023 | 1:59 PM

Share

‘ದಿ ಕೇರಳ ಸ್ಟೋರಿ’ ಸಿನಿಮಾದ (The Kerala Story Movie) ಅಬ್ಬರದ ಕಲೆಕ್ಷನ್ ಮುಂದುವರಿದಿದೆ. ರಿಲೀಸ್ ಆಗಿ 20 ದಿನ ಕಳೆಯುವುದರೊಳಗೆ ಈ ಸಿನಿಮಾ 200 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಕಡಿಮೆ ಬಜೆಟ್​​ನಲ್ಲಿ ಸಿದ್ಧವಾದ ಈ ಸಿನಿಮಾ ದೊಡ್ಡ ಮೊತ್ತದ ಗಳಿಕೆ ಮಾಡುತ್ತಿರುವುದು ನಿರ್ಮಾಪಕರಿಗೆ ಖುಷಿ ನೀಡಿದೆ. ‘ದಿ ಕೇರಳ ಸ್ಟೋರಿ’ ಸಿನಿಮಾ ಈಗ ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು ಕಲೆಕ್ಷನ್ ಹೆಚ್ಚುತ್ತಲೇ ಇದೆ. ವಾರಾಂತ್ಯ ಮಾತ್ರವಲ್ಲದೆ ವಾರದ ದಿನಗಳಲ್ಲೂ ಸಿನಿಮಾ ಅಬ್ಬರಿಸುತ್ತಿದೆ.

ರಿಲೀಸ್ ಆದ ವೀಕೆಂಡ್ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡೋದು ಸಹಜ. ‘ದಿ ಕೇರಳ ಸ್ಟೋರಿ’ ಮೂರನೇ ಭಾನುವಾರವೂ ಅಬ್ಬರಿಸಿದೆ. ಮೇ 21ರಂದು ಈ ಸಿನಿಮಾ 11.50 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಇನ್ನೂ ಕೆಲ ದಿನಗಳ ಕಾಲ ಸಿನಿಮಾ ಅಬ್ಬರಿಸುವ ಸೂಚನೆ ಸಿಕ್ಕಿದೆ.

ಸಿನಿಮಾದ ಒಟ್ಟೂ ಗಳಿಕೆ 198.97 ಕೋಟಿ ರೂಪಾಯಿ ಆಗಿದೆ. ಇಂದಿನ ಗಳಿಕೆಯೂ ಸೇರಿದರೆ ಈ ಚಿತ್ರದ ಒಟ್ಟಾರೆ ಕಲೆಕ್ಷನ್ 200 ಕೋಟಿ ರೂಪಾಯಿ ದಾಟಲಿದೆ. ಕೇವಲ 20 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಇಷ್ಟು ದೊಡ್ಡ ಮೊತ್ತದ ಗಳಿಕೆ ಮಾಡಿರುವುದರಿಂದ ನಿರ್ಮಾಪಕ ವಿಪುಲ್ ಅಮೃತ್​ಲಾಲ್ ಶಾಗೆ ಒಳ್ಳೆಯ ಲಾಭ ಆಗಿದೆ. ಇಷ್ಟೇ ಅಲ್ಲದೆ ಟಿವಿ ಹಾಗೂ ಒಟಿಟಿ ಹಕ್ಕಿನಿಂದಲೂ ನಿರ್ಮಾಪಕರಿಗೆ ಸಾಕಷ್ಟು ಹಣ ಸಿಕ್ಕಿದೆ.

‘ದಿ ಕೇರಳ ಸ್ಟೋರಿ’ ಚಿತ್ರದ ಕಲೆಕ್ಷನ್​ ರಿಪೋರ್ಟ್​:

1ನೇ ದಿನ: 8.03 ಕೋಟಿ ರೂ.

2ನೇ ದಿನ: 11.22 ಕೋಟಿ ರೂ.

3ನೇ ದಿನ: 16.40 ಕೋಟಿ ರೂ.

4ನೇ ದಿನ: 10.07 ಕೋಟಿ ರೂ.

5ನೇ ದಿನ: 11.14 ಕೋಟಿ ರೂ.

6ನೇ ದಿನ: 12 ಕೋಟಿ ರೂ.

7ನೇ ದಿನ: 12.50 ಕೋಟಿ ರೂ.

8ನೇ ದಿನ: 12.23 ಕೋಟಿ ರೂ.

9ನೇ ದಿನ: 19.50 ಕೋಟಿ ರೂ.

10ನೇ ದಿನ: 23.75 ಕೋಟಿ ರೂ.

11ನೇ ದಿನ: 10.30 ಕೋಟಿ ರೂ.

12ನೇ ದಿನ: 9.65 ಕೋಟಿ ರೂ.

13ನೇ ದಿನ: 8.03 ಕೋಟಿ ರೂ.

14ನೇ ದಿನ: 7 ಕೋಟಿ ರೂ.

15ನೇ ದಿನ: 6.60 ಕೋಟಿ ರೂ.

16ನೇ ದಿನ: 9.15 ಕೋಟಿ ರೂ.

17ನೇ ದಿನ: 11.50 ಕೋಟಿ ರೂ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್