AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಯಿಂದ ಮೆಚ್ಚುಗೆ ಪಡೆದ ‘ದಿ ಸಾಬರಮತಿ ರಿಪೋರ್ಟ್’ ಗಳಿಸಿದ್ದೆಷ್ಟು?

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ 2022ರಲ್ಲಿ ಬಿಡುಗಡೆ ಆಯಿತು. ಈ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 3.5 ಕೋಟಿ ರೂಪಾಯಿ. ಆದರೆ, ಈ ಚಿತ್ರ ಒಟ್ಟಾರೆ ಗಳಿಕೆ ಮಾಡಿದ್ದು ಬರೋಬ್ಬರಿ 250+ ಕೋಟಿ ರೂಪಾಯಿ. ಈಗ ‘ದಿ ಸಾಬರಮತಿ ರಿಪೋರ್ಟ್’ ಕೂಡ ದಿನ ಕಳೆದಂತೆ ಹೆಚ್ಚಿನ ಕಲೆಕ್ಷನ್ ಮಾಡೋ ನಿರೀಕ್ಷೆ ಇದೆ.

ಪ್ರಧಾನಿ ಮೋದಿಯಿಂದ ಮೆಚ್ಚುಗೆ ಪಡೆದ ‘ದಿ ಸಾಬರಮತಿ ರಿಪೋರ್ಟ್’ ಗಳಿಸಿದ್ದೆಷ್ಟು?
ಸಾಬರಮತಿ ರಿಪೋರ್ಟ್
ರಾಜೇಶ್ ದುಗ್ಗುಮನೆ
|

Updated on: Nov 19, 2024 | 1:02 PM

Share

ವಿಕ್ರಾಂತ್ ಮಾಸ್ಸಿ ನಟನೆಯ ‘ದಿ ಸಾಬರಮತಿ ರಿಪೋರ್ಟ್’ ಎಲ್ಲ ಕಡೆಗಳಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರ ನವೆಂಬರ್ 15ರಂದು ಬಿಡುಗಡೆ ಕಂಡಿದೆ. ಈ ಚಿತ್ರದಲ್ಲಿ ರಾಶಿ ಖನ್ನಾ, ರಿದ್ಧಿ ಡೋಗ್ರಾ ಮೊದಲಾದವರು ನಟಿಸಿದ್ದಾರೆ. ಧೀರಜ್ ಶರ್ಮಾ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಏಕ್ತಾ ಕಪೂರ್​ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಈ ಸಿನಿಮಾ ಕುರಿತು ಪ್ರಧಾನಿ ನರೇಂದ್ರ ಮೋದಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದರು. ಈ ಸಿನಿಮಾ ನಾಲ್ಕು ದಿನಗಳಲ್ಲಿ 7 ಕೋಟಿ ರೂಪಾಯಿ ಬಾಚಿಕೊಂಡಿದೆ. ಇದು ‘ದಿ ಕಾಶ್ಮೀರ್ ಫೈಲ್ಸ್’ ರೀತಿಯ ಗಳಿಕೆ ಮಾಡುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ 2022ರಲ್ಲಿ ಬಿಡುಗಡೆ ಆಯಿತು. ಈ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 3.5 ಕೋಟಿ ರೂಪಾಯಿ. ಆದರೆ, ಈ ಚಿತ್ರ ಒಟ್ಟಾರೆ ಗಳಿಕೆ ಮಾಡಿದ್ದು ಬರೋಬ್ಬರಿ 250+ ಕೋಟಿ ರೂಪಾಯಿ. ಈಗ ‘ದಿ ಸಾಬರಮತಿ ರಿಪೋರ್ಟ್’ ಕೂಡ ದಿನ ಕಳೆದಂತೆ ಹೆಚ್ಚಿನ ಕಲೆಕ್ಷನ್ ಮಾಡೋ ನಿರೀಕ್ಷೆ ಇದೆ.

‘ದಿ ಸಾಬರಮತಿ ರಿಪೋರ್ಟ್’ ಗಳಿಕೆ ಬಗ್ಗೆ Sacnilk ವರದಿ ಮಾಡಿದೆ. ಈ ಚಿತ್ರದ ಒಟ್ಟಾರೆ ಗಳಿ 7.45 ಕೋಟಿ ರೂಪಾಯಿ ಆಗಿದೆ. ಶುಕ್ರವಾರ (ನವೆಂಬರ್ 15) 1.25 ಕೋಟಿ ರೂಪಾಯಿ, ಶನಿವಾರ ಹಾಗೂ ಭಾನುವಾರ ಅನುಕ್ರಮವಾಗಿ 2.1 ಕೋಟಿ ರೂಪಾಯಿ ಹಾಗೂ 3 ಕೋಟಿ ರೂಪಾಯಿ ಗಳಿಸಿದೆ. ವಾರದ ದಿನವಾದ ಸೋಮವಾರ ಈ ಚಿತ್ರ 1.15 ಕೋಟಿ ರೂಪಾಯಿ ಹರಿದು ಬಂದಿದೆ.

ಬುಕ್ ಮೈ ಶೋನಲ್ಲಿ ‘ದಿ ಸಾಬರ್ಮತಿ ರಿಪೋರ್ಟ್’ ಚಿತ್ರಕ್ಕೆ ಒಳ್ಳೆಯ ರೇಟಿಂಗ್ ಸಿಕ್ಕಿದೆ. 12 ಸಾವಿರಕ್ಕೂ ಅಧಿಕ ಮಂದಿ ವೋಟ್ ಮಾಡಿದ್ದು, 8.3 ರೇಟಿಂಗ್ ಸಿಕ್ಕಿದೆ. ಈ ಚಿತ್ರ ಮುಂದಿನ ದಿನಗಳಲ್ಲಿ ಯಾವ ರೀತಿಯಲ್ಲಿ ಗಳಿಕೆ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಗೋಧ್ರಾ ದುರಂತದ ಸತ್ಯ ಹೊರಬರ್ತಿದೆ: ‘ಸಾಬರಮತಿ ರಿಪೋರ್ಟ್’ ಸಿನಿಮಾ ಬಗ್ಗೆ ಮೋದಿ ಟ್ವೀಟ್

ಮೋದಿ ಟ್ವೀಟ್

‘ಸಾಮಾನ್ಯ ಜನರು ನೋಡುವ ರೀತಿಯಲ್ಲಿ ಸತ್ಯ ಹೊರಗೆ ಬರುತ್ತಿರುವುದು ಒಳ್ಳೆಯ ವಿಷಯ. ಕ್ಷಣಿಕ ಕಾಲಕ್ಕೆ ಮಾತ್ರ ಸುಳ್ಳಿನ ನಿರೂಪಣೆ ಇರಬಹುದು. ಕೊನೆಗೂ ಸತ್ಯ ಹೊರಗೆ ಬರುತ್ತದೆ’ ಎಂದು ನರೇಂದ್ರ ಮೋದಿ ಅವರು  ಟ್ವೀಟ್ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?