AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ದಿನಕ್ಕೆ ಕೇವಲ 3.25 ಕೋಟಿ ರೂಪಾಯಿ ಗಳಿಸಿದ ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ

The Vaccine War Box Office Collection: ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ 3 ದಿನಕ್ಕೆ ಗಳಿಸಿರುವುದು 3.25 ಕೋಟಿ ರೂಪಾಯಿ ಮಾತ್ರ. ನೈಜ ಘಟನೆಗಳನ್ನು ಆಧರಿಸಿ ಈ ಚಿತ್ರ ತಯಾರಾಗಿದೆ. ಭಾರತದ ಮೊದಲ ಬಯೋ ಸೈನ್ಸ್​ ಸಿನಿಮಾ ಎಂಬ ಖ್ಯಾತಿ ಈ ಚಿತ್ರಕ್ಕಿದ್ದರೂ ಕೂಡ ಸಿನಿಪ್ರಿಯರು ಆಸಕ್ತಿ ತೋರಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ಕಲೆಕ್ಷನ್​ ಇನ್ನಷ್ಟು ತಗ್ಗುವ ಸಾಧ್ಯತೆ ಇದೆ.

ಮೂರು ದಿನಕ್ಕೆ ಕೇವಲ 3.25 ಕೋಟಿ ರೂಪಾಯಿ ಗಳಿಸಿದ ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ
ದಿ ವ್ಯಾಕ್ಸಿನ್​ ವಾರ್​
ಮದನ್​ ಕುಮಾರ್​
|

Updated on: Oct 01, 2023 | 1:33 PM

Share

ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾದಿಂದ ನಿರೀಕ್ಷಿತ ಮಟ್ಟದ ಗೆಲುವು ಕಾಣಲು ಸಾಧ್ಯವಾಗುತ್ತಿಲ್ಲ. ಸೆಪ್ಟೆಂಬರ್​ 28ರಂದು ಈ ಸಿನಿಮಾ ಬಿಡುಗಡೆ ಆಯಿತು. ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರಕ್ಕೆ ಹೇಳಿಕೊಳ್ಳುವಂತಹ ಕಲೆಕ್ಷನ್​ ಆಗುತ್ತಿಲ್ಲ. ಮೂರು ದಿನ ಕಳೆದರೂ ಈ ಸಿನಿಮಾ ಗಳಿಸಿರುವುದು ಕೇವಲ 3.25 ಕೋಟಿ ರೂಪಾಯಿ ಪಾತ್ರ. ಈದ್​ ಮಿಲಾದ್​ ಹಬ್ಬದ ರಜೆ, ವೀಕೆಂಡ್​ ಇದ್ದರೂ ಕೂಡ ದಿ ವ್ಯಾಕ್ಸಿನ್​ ವಾರ್​’ (The Vaccine War) ಸಿನಿಮಾಗೆ ಯಾವುದೇ ರೀತಿಯ ಉಪಯೋಗ ಆಗಿಲ್ಲ. ಸೋಮವಾರದ ನಂತರ ಈ ಸಿನಿಮಾದ ಕಲೆಕ್ಷನ್​ (The Vaccine War Collection) ಇನ್ನಷ್ಟು ಕುಸಿಯುವ ಸಾಧ್ಯತೆ ಇದೆ. ಕಡಿಮೆ ಬಜೆಟ್​ನಲ್ಲಿ ನಿರ್ಮಾಣ ಆಗಿರುವುದರಿಂದ ಚಿತ್ರತಂಡಕ್ಕೆ ದೊಡ್ಡ ಹೊರೆ ಆಗುವುದಿಲ್ಲ ಎಂಬುದಷ್ಟೇ ಸಮಾಧಾನಕರ ಸಂಗತಿ.

ಕೊವಿಡ್​ ಹರಡಿದ್ದಾಗ ಭಾರತವು ವ್ಯಾಕ್ಸಿನ್​ ಕಂಡು ಹಿಡಿದ ಕಥೆಯನ್ನು ಇಟ್ಟುಕೊಂಡು ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ ಮಾಡಲಾಗಿದೆ. ಈ ಸಿನಿಮಾಗೆ ವಿವೇಕ್​ ಅಗ್ನಿಹೋತ್ರಿ ಅವರ ಪತ್ನಿ ಪಲ್ಲವಿ ಜೋಶಿ ಅವರು ಬಂಡವಾಳ ಹೂಡಿದ್ದಾರೆ. 10ರಿಂದ 12 ಕೋಟಿ ರೂಪಾಯಿ ಬಜೆಟ್​ನಲ್ಲಿ ಈ ಚಿತ್ರ ನಿರ್ಮಾಣ ಆಗಿದೆ. ಬಾಕ್ಸ್​ ಆಫೀಸ್​ನಲ್ಲಿ ಹೇಳಿಕೊಳ್ಳುವಂತಹ ಕಲೆಕ್ಷನ್​ ಆಗಿಲ್ಲ. ಈ ಚಿತ್ರದ ಒಟಿಟಿ ಪ್ರಸಾರ ಹಕ್ಕುಗಳು ಈಗಾಗಲೇ ಸೇಲ್​ ಆಗಿರುವುದರಿಂದ ನಿರ್ಮಾಪಕರು ನಿಟ್ಟುಸಿರು ಬಿಡುವಂತಾಗಿದೆ.

ಇದನ್ನೂ ಓದಿ: ನಟಿ, ನಿರ್ಮಾಪಕಿ ಪಲ್ಲವಿ ಜೋಶಿ ಜನಪ್ರಿಯತೆ ಹೆಚ್ಚಿಸಿದ ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ

ನಾನಾ ಪಾಟೇಕರ್​, ಸಪ್ತಮಿ ಗೌಡ, ಪಲ್ಲವಿ ಜೋಶಿ, ಅನುಪಮ್ ಖೇರ್​, ರೈಮಾ ಸೇನ್​, ಗಿರಿಜಾ ಓಕ್​ ಮುಂತಾದವರು ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ವಿಮರ್ಶಕರಿಂದ ಈ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಚಿತ್ರದಲ್ಲಿ ತೋರಿಸಿರುವ ವಿವರಗಳು ಏಕಪಕ್ಷೀಯವಾಗಿವೆ ಎಂಬ ಟೀಕೆ ಕೂಡ ಎದುರಾಗಿದೆ. ಈ ಎಲ್ಲ ಕಾರಣಗಳಿಂದಾಗಿ ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾದ ಕಲೆಕ್ಷನ್​ ನೀರಸವಾಗಿದೆ.

ಇದನ್ನೂ ಓದಿ: ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾದಲ್ಲಿ ಮಿಂಚಿದ ನಟಿ ರೈಮಾ ಸೇನ್​

ಮೊದಲ ದಿನವಾದ ಸೆಪ್ಟೆಂಬರ್​ 28ರಂದು ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾಗೆ 85 ಲಕ್ಷ ರೂಪಾಯಿ ಕಲೆಕ್ಷನ್​ ಆಗಿತ್ತು. ಎರಡನೇ ದಿನ 90 ಲಕ್ಷ ರೂಪಾಯಿ ಮಾತ್ರ ಸಂಗ್ರಹ ಆಯಿತು. ಮೂರನೇ ದಿನವಾದ ಶನಿವಾರ (ಸೆಪ್ಟೆಂಬರ್​ 30) ಈ ಸಿನಿಮಾಗೆ 1.5 ಕೋಟಿ ರೂಪಾಯಿ ಕಲೆಕ್ಷನ್​ ಆಯಿತು. ಒಟ್ಟು ಮೂರು ದಿನಕ್ಕೆ ಈ ಸಿನಿಮಾ ಗಳಿಸಿರುವುದು 3.25 ಕೋಟಿ ರೂಪಾಯಿ ಮಾತ್ರ. ನೈಜ ಘಟನೆಗಳನ್ನು ಆಧರಿಸಿ ಈ ಚಿತ್ರ ತಯಾರಾಗಿದೆ. ಭಾರತದ ಮೊದಲ ಬಯೋ ಸೈನ್ಸ್​ ಸಿನಿಮಾ ಎಂಬ ಖ್ಯಾತಿ ಈ ಚಿತ್ರಕ್ಕಿದ್ದರೂ ಕೂಡ ಸಿನಿಪ್ರಿಯರು ‘ದಿ ವ್ಯಾಕ್ಸಿನ್​ ವಾರ್​’ ಈ ಬಗ್ಗೆ ಆಸಕ್ತಿ ತೋರಿಸುತ್ತಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?