AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ವ್ಯಾಕ್ಸಿನ್​ ವಾರ್​’ ಕಳಪೆ ಕಲೆಕ್ಷನ್​; ಚಿತ್ರಮಂದಿರದ ಎದುರು ಜನರ ಪ್ರತಿಭಟನೆ: ವಿಡಿಯೋ ವೈರಲ್​

‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾದ ವಿರುದ್ಧ ಜನರು ಪ್ರತಿಭಟನೆ ಮಾಡಲು ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಆದರೆ ನೆಟ್ಟಿಗರು ಈ ವೈರಲ್​ ವಿಡಿಯೋ ನೋಡಿ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಪ್ರಚಾರಕ್ಕಾಗಿ ಚಿತ್ರತಂಡದವರೇ ಇದನ್ನೆಲ್ಲ ಮಾಡಿಸಿರಬಹುದು ಎಂದು ಕೂಡ ಕೆಲವರು ಅನುಮಾನ ವ್ಯಕ್ತಪಡಿಸಿದ್ದಾರೆ.

‘ದಿ ವ್ಯಾಕ್ಸಿನ್​ ವಾರ್​’ ಕಳಪೆ ಕಲೆಕ್ಷನ್​; ಚಿತ್ರಮಂದಿರದ ಎದುರು ಜನರ ಪ್ರತಿಭಟನೆ: ವಿಡಿಯೋ ವೈರಲ್​
ವಿವೇಕ್​ ಅಗ್ನಿಹೋತ್ರಿ
ಮದನ್​ ಕುಮಾರ್​
|

Updated on: Oct 03, 2023 | 12:24 PM

Share

ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ಏನೇ ಮಾಡಿದರೂ ಸುದ್ದಿ ಆಗುತ್ತಾರೆ. ಈ ಹಿಂದೆ ಅವರು ನಿರ್ದೇಶಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಸಖತ್​ ಸದ್ದು ಮಾಡಿತ್ತು. ಈಗ ಅವರ ನಿರ್ದೇಶನದಲ್ಲಿ ‘ದಿ ವ್ಯಾಕ್ಸಿನ್​ ವಾರ್​’ (The Vaccine War) ಸಿನಿಮಾ ಮೂಡಿಬಂದಿದೆ. ಈ ಚಿತ್ರ ಕೂಡ ಹಲವು ಕಾರಣಗಳಿಂದಾಗಿ ವಿವಾದ ಮಾಡಿಕೊಂಡಿದೆ. ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರಕ್ಕೆ ನಿರೀಕ್ಷಿತ ಮಟ್ಟದ ಕಲೆಕ್ಷನ್ (Box Office Collection)​ ಆಗಿಲ್ಲ. ಕೆಲವರು ಈ ಸಿನಿಮಾದ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ಅದರ ವಿಡಿಯೋವನ್ನು ಸ್ವತಃ ವಿವೇಕ್​ ಅಗ್ನಿಹೋತ್ರಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾದ ವಿರುದ್ಧ ಜನರು ಪ್ರತಿಭಟನೆ ಮಾಡಲು ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಆದರೆ ಜನರು ಈ ವೈರಲ್​ ವಿಡಿಯೋ ನೋಡಿ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಪ್ರಚಾರಕ್ಕಾಗಿ ಚಿತ್ರತಂಡದವರೇ ಇದನ್ನೆಲ್ಲ ಮಾಡಿಸಿರಬಹುದು ಎಂದು ಕೂಡ ಕೆಲವರು ಅನುಮಾನ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ವ್ಯಂಗ್ಯವಾಡಿದ್ದಾರೆ. ‘ಬುಕ್​ ಮಾಡಿದ ಟಿಕೆಟ್​ ಕ್ಯಾನ್ಸಲ್​ ಮಾಡಿ, ಆಮೇಲೆ ದುಡ್ಡು ವಾಪಸ್​ ಕೇಳಲು ಜನರು ಪ್ರತಿಭಟನೆ ಮಾಡಿರಬಹುದು’ ಎಂದು ಕೂಡ ಕೆಲವರು ಕಾಲೆಳೆದಿದ್ದಾರೆ.

ಬಾಕ್ಸ್​ ಆಫೀಸ್​ನಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್​ ಮಾಡಲು ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ ಕಷ್ಟಪಡುತ್ತಿದೆ. ಆರಂಭದಲ್ಲಿ ಈ ಚಿತ್ರಕ್ಕೆ ಉತ್ತಮ ಓಪನಿಂಗ್​ ಸಿಗಲಿಲ್ಲ. ನಂತರದ ದಿನಗಳಲ್ಲೂ ಹೇಳಿಕೊಳ್ಳುವಂತಹ ಕಲೆಕ್ಷನ್​ ಆಗುತ್ತಿಲ್ಲ. 5 ದಿನ ಕಳೆದರೂ ಕೂಡ ಈ ಸಿನಿಮಾ ಗಳಿಸಿರುವುದು ಕೇವಲ 7.25 ಕೋಟಿ ರೂಪಾಯಿ ಮಾತ್ರ. ಈ ಸಿನಿಮಾದ ಬಜೆಟ್​ 10ರಿಂದ 12 ಕೋಟಿ ರೂಪಾಯಿ. ಹಾಕಿದ ಬಂಡವಾಳದಷ್ಟು ಮೊತ್ತವನ್ನು ಪಡೆಯಲು ಕೂಡ ಈ ಸಿನಿಮಾ ಕಷ್ಟಪಡುತ್ತಿದೆ.

ಇದನ್ನೂ ಓದಿ: ನಟಿ, ನಿರ್ಮಾಪಕಿ ಪಲ್ಲವಿ ಜೋಶಿ ಜನಪ್ರಿಯತೆ ಹೆಚ್ಚಿಸಿದ ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ

ಭಾರತದ ವಿಜ್ಞಾನಿಗಳು ಕೊರೊನಾ ವೈರಸ್​ಗೆ ಲಸಿಕೆ ಕಂಡುಹಿಡಿದ ಘಟನೆಗಳನ್ನು ಆಧರಿಸಿ ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ ಮೂಡಿಬಂದಿದೆ. ನಾನಾ ಪಾಟೇಕರ್​, ಸಪ್ತಮಿ ಗೌಡ, ಪಲ್ಲವಿ ಜೋಶಿ, ಗಿರಿಜಾ ಓಕ್​, ರೈಮಾ ಸೇನ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ‘ಚಂದ್ರಮುಖಿ 2’, ‘ಫುಕ್ರೆ 3’ ಮುಂತಾದ ಸಿನಿಮಾಗಳ ಕಠಿಣ ಪೈಪೋಟಿ ನಡುವೆ ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾದ ಕಲೆಕ್ಷನ್​ ನೀರಸವಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು