AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vivek Agnihotri: ವಿವೇಕ್​ ಅಗ್ನಿಹೋತ್ರಿಗೆ ಅಶ್ಲೀಲ ಸಂದೇಶ: ಸ್ಕ್ರೀನ್​ ಶಾಟ್​ ಸಮೇತ ಬಯಲಿಗೆ ಎಳೆದ ನಿರ್ದೇಶಕ

Vivek Agnihotri Troll: ವಿವೇಕ್​ ಅಗ್ನಿಹೋತ್ರಿ ಅವರಿಗೆ ಅಶ್ಲೀಲವಾದ ಸಂದೇಶಗಳು ಬರಲು ಆರಂಭಿಸಿವೆ. ಕೆಟ್ಟ ಭಾಷೆಯಲ್ಲಿ ನಿಂದಿಸಿದ ಮೆಸೇಜ್​ಗಳನ್ನು ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

Vivek Agnihotri: ವಿವೇಕ್​ ಅಗ್ನಿಹೋತ್ರಿಗೆ ಅಶ್ಲೀಲ ಸಂದೇಶ: ಸ್ಕ್ರೀನ್​ ಶಾಟ್​ ಸಮೇತ ಬಯಲಿಗೆ ಎಳೆದ ನಿರ್ದೇಶಕ
ವಿವೇಕ್ ಅಗ್ನಿಹೋತ್ರಿ
TV9 Web
| Edited By: |

Updated on:Dec 31, 2022 | 9:35 PM

Share

ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri)  ಅವರು ಆಗಾಗ ವಿವಾದ ಮಾಡಿಕೊಳ್ಳುತ್ತಲೇ ಇದ್ದಾರೆ. ನೇರ ನಡೆ-ನುಡಿಯಿಂದಾಗಿ ಅವರು ಅನೇಕರ ನಿಷ್ಠುರ ಕಟ್ಟಿಕೊಂಡಿದ್ದಾರೆ. ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ (The Kashmir Files) ಸೂಪರ್​ ಹಿಟ್​ ಆದ ಬಳಿಕ ಅವರ ಜನಪ್ರಿಯತೆ ಹೆಚ್ಚಾಯಿತು. ಅದರ ಜೊತೆಗೆ ಕಿರಿಕ್​ಗಳೂ ಜಾಸ್ತಿ ಆದವು. ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಅವರ ಪರ ವಹಿಸಿಕೊಂಡ ಮಾತನಾಡುತ್ತಾರೆ. ಇನ್ನು ಕೆಲವರು ಹಿಗ್ಗಾಮುಗ್ಗಾ ಟ್ರೋಲ್​ (Vivek Agnihotri Troll) ಮಾಡುತ್ತಾರೆ. ಆದರೆ ಎಲ್ಲದಕ್ಕೂ ಒಂದು ಮಿತಿ ಇರಬೇಕು. ತೀರಾ ಕೆಳಮಟ್ಟಕ್ಕೆ ಇಳಿದು ತೇಜೋವದೆ ಮಾಡುವಂತಹ ಘಟನೆಗಳು ಈಗ ನಡೆದಿವೆ. ವಿವೇಕ್ ಅಗ್ನಿಹೋತ್ರಿ ಅವರಿಗೆ ಕಿಡಿಗೇಡಿಗಳು ಅಶ್ಲೀಲ ಸಂದೇಶಗಳನ್ನು ಕಳಿಸಿದ್ದಾರೆ. ಅದರ ಸ್ಕ್ರೀನ್​ ಶಾಟ್​ಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಶಾರುಖ್​ ಖಾನ್​ ನಟನೆಯ ‘ಬೇಷರಂ ರಂಗ್​..’ ಹಾಡಿನ ಬಗ್ಗೆ ವಿವೇಕ್ ಅಗ್ನಿಹೋತ್ರಿ ಅವರು ಇತ್ತೀಚೆಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಅದರ ಬೆನ್ನಲೇ ಅವರಿಗೆ ಅಶ್ಲೀಲವಾದ ಸಂದೇಶಗಳು ಬರಲು ಆರಂಭಿಸಿವೆ. ತಮ್ಮನ್ನು ಕೆಟ್ಟ ಭಾಷೆಯಲ್ಲಿ ನಿಂದಿಸಿದ ಮೆಸೇಜ್​ಗಳನ್ನು ವಿವೇಕ್​ ಅಗ್ನಿಹೋತ್ರಿ ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
Roopesh Shetty: ‘ಬಿಗ್​ ಬಾಸ್​ನಿಂದ ಹೊರಬಂದು ಸಾನ್ಯಾನ ತಬ್ಬಿಕೊಂಡು ಈ ವಿಚಾರ ಫಸ್ಟ್​ ಕೇಳ್ತೀನಿ’: ರೂಪೇಶ್​ ಶೆಟ್ಟಿ ಮನದ ಮಾತು
Image
Bigg Boss Finale: ಬಿಗ್​ ಬಾಸ್​ ಫಿನಾಲೆಗಾಗಿ ವಿಶೇಷ ಗೆಟಪ್​ನೊಂದಿಗೆ ಕ್ಯಾಮೆರಾ ಮುಂದೆ ಬಂದ ರಾಕೇಶ್​ ಅಡಿಗ
Image
BBK 9 Finale: ಬಿಗ್​ ಬಾಸ್​ ಫಿನಾಲೆ ನಡೆಸಿಕೊಡಲು ಝಗಮಗಿಸುವ ಡ್ರೆಸ್​ ಧರಿಸಿ ವೇದಿಕೆಗೆ ಬಂದ ಕಿಚ್ಚ ಸುದೀಪ್​
Image
BBK9: ಬಿಗ್​ ಬಾಸ್​ ಮನೆಯಲ್ಲಿ ಆರ್ಯವರ್ಧನ್​ ಗುರೂಜಿ ಡಬಲ್​ ಗೇಮ್​; ಸ್ಪರ್ಧಿಗಳ ನೇರ ಆರೋಪ

ಇದನ್ನೂ ಓದಿ: Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ

ಶಾರುಖ್​ ಖಾನ್ ಅವರ ಫೋಟೋವನ್ನು ಡಿಪಿ ಮಾಡಿಕೊಂಡಿರುವ ನೆಟ್ಟಿಗರ ಸೋಶಿಯಲ್​ ಮೀಡಿಯಾ​ ಖಾತೆಗಳಿಂದ ಈ ರೀತಿಯ ಅಶ್ಲೀಲ ಸಂದೇಶಗಳು ಬಂದಿವೆ. ಹಾಗಾಗಿ ಪರೋಕ್ಷವಾಗಿ ಶಾರುಖ್​ ಖಾನ್​ ಅವರಿಗೆ ವಿವೇಕ್​ ಅಗ್ನಿಹೋತ್ರಿ ತಿವಿದಿದ್ದಾರೆ. ‘ಬಾದ್​ಷಾ ಹೇಳಿದ್ದು ನಿಜ. ಸೋಶಿಯಲ್​ ಮೀಡಿಯಾದಲ್ಲಿ ನೆಗೆಟಿವಿಟಿ ಇದೆ. ಆದರೆ ನಾವು ಪಾಸಿಟಿವ್​ ಆಗಿದ್ದೇವೆ’ ಎಂದು ವಿವೇಕ್​ ಅಗ್ನಿಹೋತ್ರಿ ಅವರು ಟ್ವೀಟ್​ ಮಾಡಿದ್ದಾರೆ.

ಕೊಲ್ಕತ್ತಾ ಸಿನಿಮೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಶಾರುಖ್​ ಖಾನ್​ ಅವರು ಅತಿಥಿಯಾಗಿ ಹೋಗಿದ್ದರು. ಆ ಸಂದರ್ಭದಲ್ಲಿ ಅವರು ಸೋಶಿಯಲ್​ ಮೀಡಿಯಾದ ನೆಗೆಟಿವಿಟಿ ಬಗ್ಗೆ ಮಾತನಾಡಿದ್ದರು. ಅದನ್ನೇ ಈಗ ವಿವೇಕ್ ಅಗ್ನಿಹೋತ್ರಿ ಅವರು ಪುನಃ ಪ್ರಸ್ತಾಪಿಸಿ, ಸ್ಕ್ರೀನ್​ ಶಾಟ್ಸ್​ ಹಂಚಿಕೊಂಡಿದ್ದಾರೆ.

‘ದಿ ವ್ಯಾಕ್ಸಿನ್​ ವಾರ್​’ ಶೂಟಿಂಗ್​ ಶುರು:

ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ ಸಿನಿಮಾದ ಕೆಲಸಗಳಿಗೆ ಚಾಲನೆ ನೀಡಿದ್ದಾರೆ. ಕೊರೊನಾ ಹಾವಳಿ ಸಂದರ್ಭದಲ್ಲಿ ಭಾರತದ ಜನತೆ ಲಸಿಕೆ ಪಡೆದಿದ್ದರ ಹಿಂದಿನ ಕಹಾನಿಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಲಾಗುತ್ತಿದೆ. ಇದು ಮೋದಿ ಸರ್ಕಾರದ ಪರವಾಗಿ ಪ್ರಚಾರ ಮಾಡುವ ಉದ್ದೇಶದಿಂದ ತಯಾರಾಗುತ್ತಿರುವ ಸಿನಿಮಾ ಎಂದು ಅನೇಕರು ಕಾಲೆಳೆಯುತ್ತಿದ್ದಾರೆ.

ಇದನ್ನೂ ಓದಿ: The Vaccine War: ವಿವೇಕ್ ಅಗ್ನಿಹೋತ್ರಿ ಹೊಸ ಚಿತ್ರದ ಕೆಲಸ ಶುರು; ಇದು 2024ರ ಚುನಾವಣೆಗೆ ಪ್ರಚಾರ ಎಂದ ನೆಟ್ಟಿಗರು

ವಿವಾದಗಳ ಕಾರಣದಿಂದ ವಿವೇಕ್​ ಅಗ್ನಿಹೋತ್ರಿ ಅವರಿಗೆ ಅನೇಕರು ಬೆದರಿಕೆ ಹಾಕಿದ್ದಾರೆ. ಹಾಗಾಗಿ ಅವರಿಗೆ ವೈ ಕೆಟಗರಿ ಭದ್ರತೆ ನೀಡಲಾಗಿದೆ. ಈ ವಿಚಾರವಾಗಿಯೂ ಅನೇಕರು ಅವರನ್ನು ಟ್ರೋಲ್​ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:35 pm, Sat, 31 December 22

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ