AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vivek Agnihotri: ವಿವೇಕ್​ ಅಗ್ನಿಹೋತ್ರಿಗೆ ಅಶ್ಲೀಲ ಸಂದೇಶ: ಸ್ಕ್ರೀನ್​ ಶಾಟ್​ ಸಮೇತ ಬಯಲಿಗೆ ಎಳೆದ ನಿರ್ದೇಶಕ

Vivek Agnihotri Troll: ವಿವೇಕ್​ ಅಗ್ನಿಹೋತ್ರಿ ಅವರಿಗೆ ಅಶ್ಲೀಲವಾದ ಸಂದೇಶಗಳು ಬರಲು ಆರಂಭಿಸಿವೆ. ಕೆಟ್ಟ ಭಾಷೆಯಲ್ಲಿ ನಿಂದಿಸಿದ ಮೆಸೇಜ್​ಗಳನ್ನು ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

Vivek Agnihotri: ವಿವೇಕ್​ ಅಗ್ನಿಹೋತ್ರಿಗೆ ಅಶ್ಲೀಲ ಸಂದೇಶ: ಸ್ಕ್ರೀನ್​ ಶಾಟ್​ ಸಮೇತ ಬಯಲಿಗೆ ಎಳೆದ ನಿರ್ದೇಶಕ
ವಿವೇಕ್ ಅಗ್ನಿಹೋತ್ರಿ
TV9 Web
| Edited By: |

Updated on:Dec 31, 2022 | 9:35 PM

Share

ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri)  ಅವರು ಆಗಾಗ ವಿವಾದ ಮಾಡಿಕೊಳ್ಳುತ್ತಲೇ ಇದ್ದಾರೆ. ನೇರ ನಡೆ-ನುಡಿಯಿಂದಾಗಿ ಅವರು ಅನೇಕರ ನಿಷ್ಠುರ ಕಟ್ಟಿಕೊಂಡಿದ್ದಾರೆ. ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ (The Kashmir Files) ಸೂಪರ್​ ಹಿಟ್​ ಆದ ಬಳಿಕ ಅವರ ಜನಪ್ರಿಯತೆ ಹೆಚ್ಚಾಯಿತು. ಅದರ ಜೊತೆಗೆ ಕಿರಿಕ್​ಗಳೂ ಜಾಸ್ತಿ ಆದವು. ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಅವರ ಪರ ವಹಿಸಿಕೊಂಡ ಮಾತನಾಡುತ್ತಾರೆ. ಇನ್ನು ಕೆಲವರು ಹಿಗ್ಗಾಮುಗ್ಗಾ ಟ್ರೋಲ್​ (Vivek Agnihotri Troll) ಮಾಡುತ್ತಾರೆ. ಆದರೆ ಎಲ್ಲದಕ್ಕೂ ಒಂದು ಮಿತಿ ಇರಬೇಕು. ತೀರಾ ಕೆಳಮಟ್ಟಕ್ಕೆ ಇಳಿದು ತೇಜೋವದೆ ಮಾಡುವಂತಹ ಘಟನೆಗಳು ಈಗ ನಡೆದಿವೆ. ವಿವೇಕ್ ಅಗ್ನಿಹೋತ್ರಿ ಅವರಿಗೆ ಕಿಡಿಗೇಡಿಗಳು ಅಶ್ಲೀಲ ಸಂದೇಶಗಳನ್ನು ಕಳಿಸಿದ್ದಾರೆ. ಅದರ ಸ್ಕ್ರೀನ್​ ಶಾಟ್​ಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಶಾರುಖ್​ ಖಾನ್​ ನಟನೆಯ ‘ಬೇಷರಂ ರಂಗ್​..’ ಹಾಡಿನ ಬಗ್ಗೆ ವಿವೇಕ್ ಅಗ್ನಿಹೋತ್ರಿ ಅವರು ಇತ್ತೀಚೆಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಅದರ ಬೆನ್ನಲೇ ಅವರಿಗೆ ಅಶ್ಲೀಲವಾದ ಸಂದೇಶಗಳು ಬರಲು ಆರಂಭಿಸಿವೆ. ತಮ್ಮನ್ನು ಕೆಟ್ಟ ಭಾಷೆಯಲ್ಲಿ ನಿಂದಿಸಿದ ಮೆಸೇಜ್​ಗಳನ್ನು ವಿವೇಕ್​ ಅಗ್ನಿಹೋತ್ರಿ ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
Roopesh Shetty: ‘ಬಿಗ್​ ಬಾಸ್​ನಿಂದ ಹೊರಬಂದು ಸಾನ್ಯಾನ ತಬ್ಬಿಕೊಂಡು ಈ ವಿಚಾರ ಫಸ್ಟ್​ ಕೇಳ್ತೀನಿ’: ರೂಪೇಶ್​ ಶೆಟ್ಟಿ ಮನದ ಮಾತು
Image
Bigg Boss Finale: ಬಿಗ್​ ಬಾಸ್​ ಫಿನಾಲೆಗಾಗಿ ವಿಶೇಷ ಗೆಟಪ್​ನೊಂದಿಗೆ ಕ್ಯಾಮೆರಾ ಮುಂದೆ ಬಂದ ರಾಕೇಶ್​ ಅಡಿಗ
Image
BBK 9 Finale: ಬಿಗ್​ ಬಾಸ್​ ಫಿನಾಲೆ ನಡೆಸಿಕೊಡಲು ಝಗಮಗಿಸುವ ಡ್ರೆಸ್​ ಧರಿಸಿ ವೇದಿಕೆಗೆ ಬಂದ ಕಿಚ್ಚ ಸುದೀಪ್​
Image
BBK9: ಬಿಗ್​ ಬಾಸ್​ ಮನೆಯಲ್ಲಿ ಆರ್ಯವರ್ಧನ್​ ಗುರೂಜಿ ಡಬಲ್​ ಗೇಮ್​; ಸ್ಪರ್ಧಿಗಳ ನೇರ ಆರೋಪ

ಇದನ್ನೂ ಓದಿ: Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ

ಶಾರುಖ್​ ಖಾನ್ ಅವರ ಫೋಟೋವನ್ನು ಡಿಪಿ ಮಾಡಿಕೊಂಡಿರುವ ನೆಟ್ಟಿಗರ ಸೋಶಿಯಲ್​ ಮೀಡಿಯಾ​ ಖಾತೆಗಳಿಂದ ಈ ರೀತಿಯ ಅಶ್ಲೀಲ ಸಂದೇಶಗಳು ಬಂದಿವೆ. ಹಾಗಾಗಿ ಪರೋಕ್ಷವಾಗಿ ಶಾರುಖ್​ ಖಾನ್​ ಅವರಿಗೆ ವಿವೇಕ್​ ಅಗ್ನಿಹೋತ್ರಿ ತಿವಿದಿದ್ದಾರೆ. ‘ಬಾದ್​ಷಾ ಹೇಳಿದ್ದು ನಿಜ. ಸೋಶಿಯಲ್​ ಮೀಡಿಯಾದಲ್ಲಿ ನೆಗೆಟಿವಿಟಿ ಇದೆ. ಆದರೆ ನಾವು ಪಾಸಿಟಿವ್​ ಆಗಿದ್ದೇವೆ’ ಎಂದು ವಿವೇಕ್​ ಅಗ್ನಿಹೋತ್ರಿ ಅವರು ಟ್ವೀಟ್​ ಮಾಡಿದ್ದಾರೆ.

ಕೊಲ್ಕತ್ತಾ ಸಿನಿಮೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಶಾರುಖ್​ ಖಾನ್​ ಅವರು ಅತಿಥಿಯಾಗಿ ಹೋಗಿದ್ದರು. ಆ ಸಂದರ್ಭದಲ್ಲಿ ಅವರು ಸೋಶಿಯಲ್​ ಮೀಡಿಯಾದ ನೆಗೆಟಿವಿಟಿ ಬಗ್ಗೆ ಮಾತನಾಡಿದ್ದರು. ಅದನ್ನೇ ಈಗ ವಿವೇಕ್ ಅಗ್ನಿಹೋತ್ರಿ ಅವರು ಪುನಃ ಪ್ರಸ್ತಾಪಿಸಿ, ಸ್ಕ್ರೀನ್​ ಶಾಟ್ಸ್​ ಹಂಚಿಕೊಂಡಿದ್ದಾರೆ.

‘ದಿ ವ್ಯಾಕ್ಸಿನ್​ ವಾರ್​’ ಶೂಟಿಂಗ್​ ಶುರು:

ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ ಸಿನಿಮಾದ ಕೆಲಸಗಳಿಗೆ ಚಾಲನೆ ನೀಡಿದ್ದಾರೆ. ಕೊರೊನಾ ಹಾವಳಿ ಸಂದರ್ಭದಲ್ಲಿ ಭಾರತದ ಜನತೆ ಲಸಿಕೆ ಪಡೆದಿದ್ದರ ಹಿಂದಿನ ಕಹಾನಿಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಲಾಗುತ್ತಿದೆ. ಇದು ಮೋದಿ ಸರ್ಕಾರದ ಪರವಾಗಿ ಪ್ರಚಾರ ಮಾಡುವ ಉದ್ದೇಶದಿಂದ ತಯಾರಾಗುತ್ತಿರುವ ಸಿನಿಮಾ ಎಂದು ಅನೇಕರು ಕಾಲೆಳೆಯುತ್ತಿದ್ದಾರೆ.

ಇದನ್ನೂ ಓದಿ: The Vaccine War: ವಿವೇಕ್ ಅಗ್ನಿಹೋತ್ರಿ ಹೊಸ ಚಿತ್ರದ ಕೆಲಸ ಶುರು; ಇದು 2024ರ ಚುನಾವಣೆಗೆ ಪ್ರಚಾರ ಎಂದ ನೆಟ್ಟಿಗರು

ವಿವಾದಗಳ ಕಾರಣದಿಂದ ವಿವೇಕ್​ ಅಗ್ನಿಹೋತ್ರಿ ಅವರಿಗೆ ಅನೇಕರು ಬೆದರಿಕೆ ಹಾಕಿದ್ದಾರೆ. ಹಾಗಾಗಿ ಅವರಿಗೆ ವೈ ಕೆಟಗರಿ ಭದ್ರತೆ ನೀಡಲಾಗಿದೆ. ಈ ವಿಚಾರವಾಗಿಯೂ ಅನೇಕರು ಅವರನ್ನು ಟ್ರೋಲ್​ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:35 pm, Sat, 31 December 22

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!