AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚಿತು ವ್ಯಾಕ್ಸಿನ್ ವಾರ್ ಚಿತ್ರದ ಭಾನುವಾರದ ಕಲೆಕ್ಷನ್; ಒಟ್ಟಾರೆ ಗಳಿಕೆ ಎಷ್ಟು ಕೋಟಿ ರೂಪಾಯಿ?

ವಿವೇಕ್ ಅಗ್ನಿಹೋತ್ರಿ ಅವರು ‘ದಿ ಕಾಶ್ಮಿರ್ ಫೈಲ್ಸ್’ ಸಿನಿಮಾ ಮೂಲಕ ಫೇಮಸ್ ಆದರು. ಈಗ ಅವರು ಆಯ್ಕೆ ಮಾಡಿಕೊಂಡಿದ್ದು ಕೊವಿಡ್ ಘಟನೆಯನ್ನು. ಆ ಸಂದರ್ಭದಲ್ಲಿ ಭಾರತದ ವಿಜ್ಞಾನಿಗಳು ಲಸಿಕೆ ಕಂಡು ಹಿಡಿದದ್ದನ್ನು ಆಧರಿಸಿ ಈ ಸಿನಿಮಾದ ಕಥೆ ಸಿದ್ಧಗೊಂಡಿದೆ. ಭಾನುವಾರ (ಅಕ್ಟೋಬರ್ 1) 2.20 ಕೋಟಿ ರೂಪಾಯಿ ಗಳಿಸಿದೆ.

ಹೆಚ್ಚಿತು ವ್ಯಾಕ್ಸಿನ್ ವಾರ್ ಚಿತ್ರದ ಭಾನುವಾರದ ಕಲೆಕ್ಷನ್; ಒಟ್ಟಾರೆ ಗಳಿಕೆ ಎಷ್ಟು ಕೋಟಿ ರೂಪಾಯಿ?
ನಾನಾ ಪಾಟೇಕರ್​
ರಾಜೇಶ್ ದುಗ್ಗುಮನೆ
|

Updated on:Oct 02, 2023 | 1:03 PM

Share

ವಿವೇಕ್ ಅಗ್ನಿಹೋತ್ರಿ ಅವರ ನಿರ್ದೇಶನದ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದ (The Vaccine War Movie) ಭಾನುವಾರದ ಕಲೆಕ್ಷನ್ ಹೆಚ್ಚಿದೆ. ರಿಲೀಸ್ ಆದಾಗಿನಿಂದ ಕುಂಟುತ್ತಲೇ ಸಾಗುತ್ತಿದ್ದ ಈ ಚಿತ್ರ ಸ್ವಲ್ಪ ಚೇತರಿಕೆ ಕಂಡಿದೆ. ಇಂದು (ಅಕ್ಟೋಬರ್ 2) ಗಾಂಧಿ ಜಯಂತಿ ಹಿನ್ನೆಯಲ್ಲಿ ಸರ್ಕಾರಿ ರಜೆ ಇರುವುದರಿಂದ ಒಳ್ಳೆಯ ರೀತಿಯ ಕಲೆಕ್ಷನ್ ಆಗುವ ನಿರೀಕ್ಷೆ ಇದೆ ಎಂದು ಬಾಕ್ಸ್ ಆಫೀಸ್ ಪಂಡಿತರು ಊಹಿಸಿದ್ದಾರೆ. ಈ ಮೂಲಕ ಸಿನಿಮಾದ ಒಟ್ಟಾರೆ ಗಳಿಕೆ 5.70 ಕೋಟಿ ರೂಪಾಯಿ ಆಗಿದೆ.

ವಿವೇಕ್ ಅಗ್ನಿಹೋತ್ರಿ ಅವರು ‘ದಿ ಕಾಶ್ಮಿರ್ ಫೈಲ್ಸ್’ ಸಿನಿಮಾ ಮೂಲಕ ಫೇಮಸ್ ಆದರು. ಈಗ ಅವರು ಆಯ್ಕೆ ಮಾಡಿಕೊಂಡಿದ್ದು ಕೊವಿಡ್ ಘಟನೆಯನ್ನು. ಆ ಸಂದರ್ಭದಲ್ಲಿ ಭಾರತದ ವಿಜ್ಞಾನಿಗಳು ಲಸಿಕೆ ಕಂಡು ಹಿಡಿದದ್ದನ್ನು ಆಧರಿಸಿ ಈ ಸಿನಿಮಾದ ಕಥೆ ಸಿದ್ಧಗೊಂಡಿದೆ. ಭಾನುವಾರ (ಅಕ್ಟೋಬರ್ 1) 2.20 ಕೋಟಿ ರೂಪಾಯಿ ಗಳಿಸಿದೆ. ಸಿನಿಮಾದ ಬಜೆಟ್ ಕಡಿಮೆ ಇರುವುದರಿಂದ ನಿರ್ಮಾಪಕರಿಗೆ ದೊಡ್ಡ ಹೊರೆ ಆಗುವುದಿಲ್ಲ.

‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲಿ ನಾನಾ ಪಾಟೇಕರ್, ಅನುಪಮ್ ಖೇರ್, ಸಪ್ತಮಿ ಗೌಡ ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ವಿವೇಕ್ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಶಿ ಅವರು ನಿರ್ಮಾಣ ಮಾಡಿದ್ದಾರೆ. ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಮೂಲಕ ದೊಡ್ಡ ಗೆಲುವು ಕಂಡವರು ವಿವೇಕ್ ಅಗ್ನೊಹೋತ್ರಿ. ಈಗ ಅವರು ‘ದಿ ವ್ಯಾಕ್ಸಿನ್ ವಾರ್’ ಚಿತ್ರದ ಮೂಲಕ ಸೋಲು ಕಂಡಿದ್ದಾರೆ. ಅವರು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ಸೀಕ್ವೆಲ್ ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಬಿಡುಗಡೆ ಆದ ಮೂರೇ ದಿನಕ್ಕೆ ಉಚಿತ ಟಿಕೆಟ್ ಆಫರ್ ಘೋಷಿಸಿದ 6;ದಿ ವ್ಯಾಕ್ಸಿನ್ ವಾರ್ 

‘ದಿ ವ್ಯಾಕ್ಸಿನ್ ವಾರ್’ ಸಿನಿಮಾಗೆ ಪ್ರೇಕ್ಷಕರು ಹಾಗೂ ನಿರ್ಮಾಪಕರಿಂದ ಮಿಶ್ರಪ್ರತಿಕ್ರಿಯೆ ಸಿಕ್ಕಿದೆ. ಒಂದು ಮುಖವನ್ನು ಮಾತ್ರ ಸಿನಿಮಾದಲ್ಲಿ ತೋರಿಸಲಾಗಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:39 pm, Mon, 2 October 23

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ