AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚಿತು ವ್ಯಾಕ್ಸಿನ್ ವಾರ್ ಚಿತ್ರದ ಭಾನುವಾರದ ಕಲೆಕ್ಷನ್; ಒಟ್ಟಾರೆ ಗಳಿಕೆ ಎಷ್ಟು ಕೋಟಿ ರೂಪಾಯಿ?

ವಿವೇಕ್ ಅಗ್ನಿಹೋತ್ರಿ ಅವರು ‘ದಿ ಕಾಶ್ಮಿರ್ ಫೈಲ್ಸ್’ ಸಿನಿಮಾ ಮೂಲಕ ಫೇಮಸ್ ಆದರು. ಈಗ ಅವರು ಆಯ್ಕೆ ಮಾಡಿಕೊಂಡಿದ್ದು ಕೊವಿಡ್ ಘಟನೆಯನ್ನು. ಆ ಸಂದರ್ಭದಲ್ಲಿ ಭಾರತದ ವಿಜ್ಞಾನಿಗಳು ಲಸಿಕೆ ಕಂಡು ಹಿಡಿದದ್ದನ್ನು ಆಧರಿಸಿ ಈ ಸಿನಿಮಾದ ಕಥೆ ಸಿದ್ಧಗೊಂಡಿದೆ. ಭಾನುವಾರ (ಅಕ್ಟೋಬರ್ 1) 2.20 ಕೋಟಿ ರೂಪಾಯಿ ಗಳಿಸಿದೆ.

ಹೆಚ್ಚಿತು ವ್ಯಾಕ್ಸಿನ್ ವಾರ್ ಚಿತ್ರದ ಭಾನುವಾರದ ಕಲೆಕ್ಷನ್; ಒಟ್ಟಾರೆ ಗಳಿಕೆ ಎಷ್ಟು ಕೋಟಿ ರೂಪಾಯಿ?
ನಾನಾ ಪಾಟೇಕರ್​
ರಾಜೇಶ್ ದುಗ್ಗುಮನೆ
|

Updated on:Oct 02, 2023 | 1:03 PM

Share

ವಿವೇಕ್ ಅಗ್ನಿಹೋತ್ರಿ ಅವರ ನಿರ್ದೇಶನದ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದ (The Vaccine War Movie) ಭಾನುವಾರದ ಕಲೆಕ್ಷನ್ ಹೆಚ್ಚಿದೆ. ರಿಲೀಸ್ ಆದಾಗಿನಿಂದ ಕುಂಟುತ್ತಲೇ ಸಾಗುತ್ತಿದ್ದ ಈ ಚಿತ್ರ ಸ್ವಲ್ಪ ಚೇತರಿಕೆ ಕಂಡಿದೆ. ಇಂದು (ಅಕ್ಟೋಬರ್ 2) ಗಾಂಧಿ ಜಯಂತಿ ಹಿನ್ನೆಯಲ್ಲಿ ಸರ್ಕಾರಿ ರಜೆ ಇರುವುದರಿಂದ ಒಳ್ಳೆಯ ರೀತಿಯ ಕಲೆಕ್ಷನ್ ಆಗುವ ನಿರೀಕ್ಷೆ ಇದೆ ಎಂದು ಬಾಕ್ಸ್ ಆಫೀಸ್ ಪಂಡಿತರು ಊಹಿಸಿದ್ದಾರೆ. ಈ ಮೂಲಕ ಸಿನಿಮಾದ ಒಟ್ಟಾರೆ ಗಳಿಕೆ 5.70 ಕೋಟಿ ರೂಪಾಯಿ ಆಗಿದೆ.

ವಿವೇಕ್ ಅಗ್ನಿಹೋತ್ರಿ ಅವರು ‘ದಿ ಕಾಶ್ಮಿರ್ ಫೈಲ್ಸ್’ ಸಿನಿಮಾ ಮೂಲಕ ಫೇಮಸ್ ಆದರು. ಈಗ ಅವರು ಆಯ್ಕೆ ಮಾಡಿಕೊಂಡಿದ್ದು ಕೊವಿಡ್ ಘಟನೆಯನ್ನು. ಆ ಸಂದರ್ಭದಲ್ಲಿ ಭಾರತದ ವಿಜ್ಞಾನಿಗಳು ಲಸಿಕೆ ಕಂಡು ಹಿಡಿದದ್ದನ್ನು ಆಧರಿಸಿ ಈ ಸಿನಿಮಾದ ಕಥೆ ಸಿದ್ಧಗೊಂಡಿದೆ. ಭಾನುವಾರ (ಅಕ್ಟೋಬರ್ 1) 2.20 ಕೋಟಿ ರೂಪಾಯಿ ಗಳಿಸಿದೆ. ಸಿನಿಮಾದ ಬಜೆಟ್ ಕಡಿಮೆ ಇರುವುದರಿಂದ ನಿರ್ಮಾಪಕರಿಗೆ ದೊಡ್ಡ ಹೊರೆ ಆಗುವುದಿಲ್ಲ.

‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲಿ ನಾನಾ ಪಾಟೇಕರ್, ಅನುಪಮ್ ಖೇರ್, ಸಪ್ತಮಿ ಗೌಡ ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ವಿವೇಕ್ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಶಿ ಅವರು ನಿರ್ಮಾಣ ಮಾಡಿದ್ದಾರೆ. ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಮೂಲಕ ದೊಡ್ಡ ಗೆಲುವು ಕಂಡವರು ವಿವೇಕ್ ಅಗ್ನೊಹೋತ್ರಿ. ಈಗ ಅವರು ‘ದಿ ವ್ಯಾಕ್ಸಿನ್ ವಾರ್’ ಚಿತ್ರದ ಮೂಲಕ ಸೋಲು ಕಂಡಿದ್ದಾರೆ. ಅವರು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ಸೀಕ್ವೆಲ್ ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಬಿಡುಗಡೆ ಆದ ಮೂರೇ ದಿನಕ್ಕೆ ಉಚಿತ ಟಿಕೆಟ್ ಆಫರ್ ಘೋಷಿಸಿದ 6;ದಿ ವ್ಯಾಕ್ಸಿನ್ ವಾರ್ 

‘ದಿ ವ್ಯಾಕ್ಸಿನ್ ವಾರ್’ ಸಿನಿಮಾಗೆ ಪ್ರೇಕ್ಷಕರು ಹಾಗೂ ನಿರ್ಮಾಪಕರಿಂದ ಮಿಶ್ರಪ್ರತಿಕ್ರಿಯೆ ಸಿಕ್ಕಿದೆ. ಒಂದು ಮುಖವನ್ನು ಮಾತ್ರ ಸಿನಿಮಾದಲ್ಲಿ ತೋರಿಸಲಾಗಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:39 pm, Mon, 2 October 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು