AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ಎದುರು ಸ್ಪರ್ಧೆಗೆ ಇಳಿದ ಅಗ್ನಿಹೋತ್ರಿ; ‘ದಿ ವ್ಯಾಕ್ಸಿನ್ ವಾರ್’ ರಿಲೀಸ್ ಡೇಟ್ ಘೋಷಣೆ

ಕೊವಿಡ್ ವಿರುದ್ಧ ಹೋರಾಡಿದ ದೇಶಗಳಲ್ಲಿ ಭಾರತ ಕೂಡ ಒಂದು. ನಮ್ಮ ದೇಶದಲ್ಲಿ ಕೊರೊನಾಗೆ ವ್ಯಾಕ್ಸಿನ್ ಕಂಡು ಹಿಡಿಯಲಾಯಿತು. ಇದೇ ವಿಚಾರ ಇಟ್ಟುಕೊಂಡು ‘ದಿ ವ್ಯಾಕ್ಸಿನ್ ವಾರ್’ ಸಿದ್ಧಗೊಂಡಿದೆ ಎನ್ನಲಾಗಿದೆ. ಕನ್ನಡದ ಸಪ್ತಮಿ ಗೌಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.

ಪ್ರಭಾಸ್ ಎದುರು ಸ್ಪರ್ಧೆಗೆ ಇಳಿದ ಅಗ್ನಿಹೋತ್ರಿ; ‘ದಿ ವ್ಯಾಕ್ಸಿನ್ ವಾರ್’ ರಿಲೀಸ್ ಡೇಟ್ ಘೋಷಣೆ
ಸಪ್ತಮಿ, ಪ್ರಭಾಸ್, ವಿವೇಕ್
ರಾಜೇಶ್ ದುಗ್ಗುಮನೆ
|

Updated on: Aug 15, 2023 | 11:22 AM

Share

ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ (Salaar Movie) ಸೆಪ್ಟೆಂಬರ್ 28ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ದೊಡ್ಡ ಸಿನಿಮಾ ರಿಲೀಸ್ ಆಗುವಾಗ ಸ್ಪರ್ಧೆಗೆ ಇಳಿಯೋಕೆ ಅನೇಕರು ಹಿಂದೇಟು ಹಾಕುತ್ತಾರೆ. ಆದರೆ, ವಿವೇಕ್​ ಅಗ್ನಿಹೋತ್ರಿಗೆ ಈ ಭಯ ಇಲ್ಲ. ಅವರು ಈಗ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ (The Vaccine War Movie) ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಬಿಡುಗಡೆ ದಿನಾಂಕವನ್ನು ಅವರು ಘೋಷಣೆ ಮಾಡಿದ್ದಾರೆ. ‘ಸಲಾರ್’ ಎದುರು ತಮ್ಮ ಚಿತ್ರವನ್ನು ರಿಲೀಸ್ ಮಾಡುವುದಾಗಿ ವಿವೇಕ್ ತಿಳಿಸಿದ್ದಾರೆ.

ಇಂದು (ಆಗಸ್ಟ್ 15) ಸ್ವಾತಂತ್ರ್ಯ ದಿನಾಚರಣೆ. ಈ ವಿಶೇಷ ದಿನದಂದು ಅವರು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ‘ದಿ ವ್ಯಾಕ್ಸಿನ್ ವಾರ್’ ಚಿತ್ರದ ರಿಲೀಸ್ ದಿನಾಂಕ ಘೋಷಣೆ ಮಾಡಿದ್ದಾರೆ. ಸೆಪ್ಟೆಂಬರ್ 28ರಂದು ವಿಶ್ವಾದ್ಯಂತ ತಮ್ಮ ಸಿನಿಮಾ ರಿಲೀಸ್ ಮಾಡುವುದಾಗಿ ಅವರು ಘೋಷಣೆ ಮಾಡಿದ್ದಾರೆ. ಹೀಗಾಗಿ, ‘ಸಲಾರ್’ ಹಾಗೂ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಮಧ್ಯೆ ಯಾವ ಚಿತ್ರ ಗೆಲ್ಲಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಕೊವಿಡ್ ವಿರುದ್ಧ ಹೋರಾಡಿದ ದೇಶಗಳಲ್ಲಿ ಭಾರತ ಕೂಡ ಒಂದು. ನಮ್ಮ ದೇಶದಲ್ಲಿ ಕೊರೊನಾಗೆ ವ್ಯಾಕ್ಸಿನ್ ಕಂಡು ಹಿಡಿಯಲಾಯಿತು. ಇದೇ ವಿಚಾರ ಇಟ್ಟುಕೊಂಡು ‘ದಿ ವ್ಯಾಕ್ಸಿನ್ ವಾರ್’ ಸಿದ್ಧಗೊಂಡಿದೆ ಎನ್ನಲಾಗಿದೆ. ವಿವೇಕ್ ಅಗ್ನಿಹೋತ್ರಿ ಅವರು ಈ ಕಥೆಯನ್ನು ಯಾವ ರೀತಿಯಲ್ಲಿ ಕಟ್ಟಿಕೊಡುತ್ತಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಕನ್ನಡದ ಸಪ್ತಮಿ ಗೌಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.

ವಿವೇಕ್ ಅಗ್ನಿಹೋತ್ರಿ ಟ್ವೀಟ್

ಇದನ್ನೂ ಓದಿ: ‘ಪ್ರಭಾಸ್ ಜೊತೆ ನಾನು ಸ್ಪರ್ಧಿಸಲ್ಲ, ನನ್ನನ್ನು ಬಿಟ್ಟುಬಿಡಿ’; ಬೇಡಿಕೊಂಡ ವಿವೇಕ್ ಅಗ್ನಿಹೋತ್ರಿ

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಆಗಸ್ಟ್ 11ರಂದು ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಚಿತ್ರದ ಕೆಲಸ ಪೂರ್ಣಗೊಳ್ಳದ ಕಾರಣ ಅವರು ರಿಲೀಸ್ ದಿನಾಂಕ ಮುಂದೂಡಿದರು. ‘ಪ್ರಭಾಸ್ ನಟನೆಯ ರಾಧೆ ಶ್ಯಾಮ್ ಎದುರು ನಮ್ಮ ಚಿತ್ರ (ದಿ ಕಾಶ್ಮೀರ್ ಫೈಲ್ಸ್) ರಿಲೀಸ್ ಆಗಿ ಗೆದ್ದಿತ್ತು. ಈಗ ಮತ್ತೊಮ್ಮೆ ಪ್ರಭಾಸ್ ಎದುರು ನಮ್ಮ ಸಿನಿಮಾ ರಿಲೀಸ್ ಮಾಡುತ್ತಿದ್ದೇವೆ’ ಎಂದು ವಿವೇಕ್ ಹೇಳಿರುವುದಾಗಿ ಈ ಮೊದಲು ವರದಿ ಆಗಿತ್ತು. ಆದರೆ, ವಿವೇಕ್ ಅಗ್ನಿಹೋತ್ರಿ ಇದನ್ನು ಅಲ್ಲಗಳೆದಿದ್ದರು. ‘ನಮ್ಮದು ಸಣ್ಣ ಬಜೆಟ್ ಸಿನಿಮಾ. ದೊಡ್ಡ ಸ್ಟಾರ್​​ಗಳ ಎದುರು ನಾವು ಸಿನಿಮಾ ರಿಲೀಸ್ ಮಾಡಲ್ಲ. ಪ್ರಭಾಸ್ ದೊಡ್ಡ ಸ್ಟಾರ್’ ಎಂದು ವಿವೇಕ್ ಅಗ್ನಿಹೋತ್ರಿ ಹೇಳಿದ್ದರು. ಆದರೆ, ಈಗ ಅವರು ಸೆಪ್ಟೆಂಬರ್ 28 ಅನ್ನು ಫೈನಲ್ ಮಾಡಿರೋದು ಕುತೂಹಲ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್