ಪ್ರಭಾಸ್ ಎದುರು ಸ್ಪರ್ಧೆಗೆ ಇಳಿದ ಅಗ್ನಿಹೋತ್ರಿ; ‘ದಿ ವ್ಯಾಕ್ಸಿನ್ ವಾರ್’ ರಿಲೀಸ್ ಡೇಟ್ ಘೋಷಣೆ

ಕೊವಿಡ್ ವಿರುದ್ಧ ಹೋರಾಡಿದ ದೇಶಗಳಲ್ಲಿ ಭಾರತ ಕೂಡ ಒಂದು. ನಮ್ಮ ದೇಶದಲ್ಲಿ ಕೊರೊನಾಗೆ ವ್ಯಾಕ್ಸಿನ್ ಕಂಡು ಹಿಡಿಯಲಾಯಿತು. ಇದೇ ವಿಚಾರ ಇಟ್ಟುಕೊಂಡು ‘ದಿ ವ್ಯಾಕ್ಸಿನ್ ವಾರ್’ ಸಿದ್ಧಗೊಂಡಿದೆ ಎನ್ನಲಾಗಿದೆ. ಕನ್ನಡದ ಸಪ್ತಮಿ ಗೌಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.

ಪ್ರಭಾಸ್ ಎದುರು ಸ್ಪರ್ಧೆಗೆ ಇಳಿದ ಅಗ್ನಿಹೋತ್ರಿ; ‘ದಿ ವ್ಯಾಕ್ಸಿನ್ ವಾರ್’ ರಿಲೀಸ್ ಡೇಟ್ ಘೋಷಣೆ
ಸಪ್ತಮಿ, ಪ್ರಭಾಸ್, ವಿವೇಕ್
Follow us
|

Updated on: Aug 15, 2023 | 11:22 AM

ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ (Salaar Movie) ಸೆಪ್ಟೆಂಬರ್ 28ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ದೊಡ್ಡ ಸಿನಿಮಾ ರಿಲೀಸ್ ಆಗುವಾಗ ಸ್ಪರ್ಧೆಗೆ ಇಳಿಯೋಕೆ ಅನೇಕರು ಹಿಂದೇಟು ಹಾಕುತ್ತಾರೆ. ಆದರೆ, ವಿವೇಕ್​ ಅಗ್ನಿಹೋತ್ರಿಗೆ ಈ ಭಯ ಇಲ್ಲ. ಅವರು ಈಗ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ (The Vaccine War Movie) ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಬಿಡುಗಡೆ ದಿನಾಂಕವನ್ನು ಅವರು ಘೋಷಣೆ ಮಾಡಿದ್ದಾರೆ. ‘ಸಲಾರ್’ ಎದುರು ತಮ್ಮ ಚಿತ್ರವನ್ನು ರಿಲೀಸ್ ಮಾಡುವುದಾಗಿ ವಿವೇಕ್ ತಿಳಿಸಿದ್ದಾರೆ.

ಇಂದು (ಆಗಸ್ಟ್ 15) ಸ್ವಾತಂತ್ರ್ಯ ದಿನಾಚರಣೆ. ಈ ವಿಶೇಷ ದಿನದಂದು ಅವರು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ‘ದಿ ವ್ಯಾಕ್ಸಿನ್ ವಾರ್’ ಚಿತ್ರದ ರಿಲೀಸ್ ದಿನಾಂಕ ಘೋಷಣೆ ಮಾಡಿದ್ದಾರೆ. ಸೆಪ್ಟೆಂಬರ್ 28ರಂದು ವಿಶ್ವಾದ್ಯಂತ ತಮ್ಮ ಸಿನಿಮಾ ರಿಲೀಸ್ ಮಾಡುವುದಾಗಿ ಅವರು ಘೋಷಣೆ ಮಾಡಿದ್ದಾರೆ. ಹೀಗಾಗಿ, ‘ಸಲಾರ್’ ಹಾಗೂ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಮಧ್ಯೆ ಯಾವ ಚಿತ್ರ ಗೆಲ್ಲಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಕೊವಿಡ್ ವಿರುದ್ಧ ಹೋರಾಡಿದ ದೇಶಗಳಲ್ಲಿ ಭಾರತ ಕೂಡ ಒಂದು. ನಮ್ಮ ದೇಶದಲ್ಲಿ ಕೊರೊನಾಗೆ ವ್ಯಾಕ್ಸಿನ್ ಕಂಡು ಹಿಡಿಯಲಾಯಿತು. ಇದೇ ವಿಚಾರ ಇಟ್ಟುಕೊಂಡು ‘ದಿ ವ್ಯಾಕ್ಸಿನ್ ವಾರ್’ ಸಿದ್ಧಗೊಂಡಿದೆ ಎನ್ನಲಾಗಿದೆ. ವಿವೇಕ್ ಅಗ್ನಿಹೋತ್ರಿ ಅವರು ಈ ಕಥೆಯನ್ನು ಯಾವ ರೀತಿಯಲ್ಲಿ ಕಟ್ಟಿಕೊಡುತ್ತಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಕನ್ನಡದ ಸಪ್ತಮಿ ಗೌಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.

ವಿವೇಕ್ ಅಗ್ನಿಹೋತ್ರಿ ಟ್ವೀಟ್

ಇದನ್ನೂ ಓದಿ: ‘ಪ್ರಭಾಸ್ ಜೊತೆ ನಾನು ಸ್ಪರ್ಧಿಸಲ್ಲ, ನನ್ನನ್ನು ಬಿಟ್ಟುಬಿಡಿ’; ಬೇಡಿಕೊಂಡ ವಿವೇಕ್ ಅಗ್ನಿಹೋತ್ರಿ

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಆಗಸ್ಟ್ 11ರಂದು ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಚಿತ್ರದ ಕೆಲಸ ಪೂರ್ಣಗೊಳ್ಳದ ಕಾರಣ ಅವರು ರಿಲೀಸ್ ದಿನಾಂಕ ಮುಂದೂಡಿದರು. ‘ಪ್ರಭಾಸ್ ನಟನೆಯ ರಾಧೆ ಶ್ಯಾಮ್ ಎದುರು ನಮ್ಮ ಚಿತ್ರ (ದಿ ಕಾಶ್ಮೀರ್ ಫೈಲ್ಸ್) ರಿಲೀಸ್ ಆಗಿ ಗೆದ್ದಿತ್ತು. ಈಗ ಮತ್ತೊಮ್ಮೆ ಪ್ರಭಾಸ್ ಎದುರು ನಮ್ಮ ಸಿನಿಮಾ ರಿಲೀಸ್ ಮಾಡುತ್ತಿದ್ದೇವೆ’ ಎಂದು ವಿವೇಕ್ ಹೇಳಿರುವುದಾಗಿ ಈ ಮೊದಲು ವರದಿ ಆಗಿತ್ತು. ಆದರೆ, ವಿವೇಕ್ ಅಗ್ನಿಹೋತ್ರಿ ಇದನ್ನು ಅಲ್ಲಗಳೆದಿದ್ದರು. ‘ನಮ್ಮದು ಸಣ್ಣ ಬಜೆಟ್ ಸಿನಿಮಾ. ದೊಡ್ಡ ಸ್ಟಾರ್​​ಗಳ ಎದುರು ನಾವು ಸಿನಿಮಾ ರಿಲೀಸ್ ಮಾಡಲ್ಲ. ಪ್ರಭಾಸ್ ದೊಡ್ಡ ಸ್ಟಾರ್’ ಎಂದು ವಿವೇಕ್ ಅಗ್ನಿಹೋತ್ರಿ ಹೇಳಿದ್ದರು. ಆದರೆ, ಈಗ ಅವರು ಸೆಪ್ಟೆಂಬರ್ 28 ಅನ್ನು ಫೈನಲ್ ಮಾಡಿರೋದು ಕುತೂಹಲ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ