AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ಎದುರು ಸ್ಪರ್ಧೆಗೆ ಇಳಿದ ಅಗ್ನಿಹೋತ್ರಿ; ‘ದಿ ವ್ಯಾಕ್ಸಿನ್ ವಾರ್’ ರಿಲೀಸ್ ಡೇಟ್ ಘೋಷಣೆ

ಕೊವಿಡ್ ವಿರುದ್ಧ ಹೋರಾಡಿದ ದೇಶಗಳಲ್ಲಿ ಭಾರತ ಕೂಡ ಒಂದು. ನಮ್ಮ ದೇಶದಲ್ಲಿ ಕೊರೊನಾಗೆ ವ್ಯಾಕ್ಸಿನ್ ಕಂಡು ಹಿಡಿಯಲಾಯಿತು. ಇದೇ ವಿಚಾರ ಇಟ್ಟುಕೊಂಡು ‘ದಿ ವ್ಯಾಕ್ಸಿನ್ ವಾರ್’ ಸಿದ್ಧಗೊಂಡಿದೆ ಎನ್ನಲಾಗಿದೆ. ಕನ್ನಡದ ಸಪ್ತಮಿ ಗೌಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.

ಪ್ರಭಾಸ್ ಎದುರು ಸ್ಪರ್ಧೆಗೆ ಇಳಿದ ಅಗ್ನಿಹೋತ್ರಿ; ‘ದಿ ವ್ಯಾಕ್ಸಿನ್ ವಾರ್’ ರಿಲೀಸ್ ಡೇಟ್ ಘೋಷಣೆ
ಸಪ್ತಮಿ, ಪ್ರಭಾಸ್, ವಿವೇಕ್
ರಾಜೇಶ್ ದುಗ್ಗುಮನೆ
|

Updated on: Aug 15, 2023 | 11:22 AM

Share

ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ (Salaar Movie) ಸೆಪ್ಟೆಂಬರ್ 28ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ದೊಡ್ಡ ಸಿನಿಮಾ ರಿಲೀಸ್ ಆಗುವಾಗ ಸ್ಪರ್ಧೆಗೆ ಇಳಿಯೋಕೆ ಅನೇಕರು ಹಿಂದೇಟು ಹಾಕುತ್ತಾರೆ. ಆದರೆ, ವಿವೇಕ್​ ಅಗ್ನಿಹೋತ್ರಿಗೆ ಈ ಭಯ ಇಲ್ಲ. ಅವರು ಈಗ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ (The Vaccine War Movie) ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಬಿಡುಗಡೆ ದಿನಾಂಕವನ್ನು ಅವರು ಘೋಷಣೆ ಮಾಡಿದ್ದಾರೆ. ‘ಸಲಾರ್’ ಎದುರು ತಮ್ಮ ಚಿತ್ರವನ್ನು ರಿಲೀಸ್ ಮಾಡುವುದಾಗಿ ವಿವೇಕ್ ತಿಳಿಸಿದ್ದಾರೆ.

ಇಂದು (ಆಗಸ್ಟ್ 15) ಸ್ವಾತಂತ್ರ್ಯ ದಿನಾಚರಣೆ. ಈ ವಿಶೇಷ ದಿನದಂದು ಅವರು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ‘ದಿ ವ್ಯಾಕ್ಸಿನ್ ವಾರ್’ ಚಿತ್ರದ ರಿಲೀಸ್ ದಿನಾಂಕ ಘೋಷಣೆ ಮಾಡಿದ್ದಾರೆ. ಸೆಪ್ಟೆಂಬರ್ 28ರಂದು ವಿಶ್ವಾದ್ಯಂತ ತಮ್ಮ ಸಿನಿಮಾ ರಿಲೀಸ್ ಮಾಡುವುದಾಗಿ ಅವರು ಘೋಷಣೆ ಮಾಡಿದ್ದಾರೆ. ಹೀಗಾಗಿ, ‘ಸಲಾರ್’ ಹಾಗೂ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಮಧ್ಯೆ ಯಾವ ಚಿತ್ರ ಗೆಲ್ಲಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಕೊವಿಡ್ ವಿರುದ್ಧ ಹೋರಾಡಿದ ದೇಶಗಳಲ್ಲಿ ಭಾರತ ಕೂಡ ಒಂದು. ನಮ್ಮ ದೇಶದಲ್ಲಿ ಕೊರೊನಾಗೆ ವ್ಯಾಕ್ಸಿನ್ ಕಂಡು ಹಿಡಿಯಲಾಯಿತು. ಇದೇ ವಿಚಾರ ಇಟ್ಟುಕೊಂಡು ‘ದಿ ವ್ಯಾಕ್ಸಿನ್ ವಾರ್’ ಸಿದ್ಧಗೊಂಡಿದೆ ಎನ್ನಲಾಗಿದೆ. ವಿವೇಕ್ ಅಗ್ನಿಹೋತ್ರಿ ಅವರು ಈ ಕಥೆಯನ್ನು ಯಾವ ರೀತಿಯಲ್ಲಿ ಕಟ್ಟಿಕೊಡುತ್ತಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಕನ್ನಡದ ಸಪ್ತಮಿ ಗೌಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.

ವಿವೇಕ್ ಅಗ್ನಿಹೋತ್ರಿ ಟ್ವೀಟ್

ಇದನ್ನೂ ಓದಿ: ‘ಪ್ರಭಾಸ್ ಜೊತೆ ನಾನು ಸ್ಪರ್ಧಿಸಲ್ಲ, ನನ್ನನ್ನು ಬಿಟ್ಟುಬಿಡಿ’; ಬೇಡಿಕೊಂಡ ವಿವೇಕ್ ಅಗ್ನಿಹೋತ್ರಿ

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಆಗಸ್ಟ್ 11ರಂದು ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಚಿತ್ರದ ಕೆಲಸ ಪೂರ್ಣಗೊಳ್ಳದ ಕಾರಣ ಅವರು ರಿಲೀಸ್ ದಿನಾಂಕ ಮುಂದೂಡಿದರು. ‘ಪ್ರಭಾಸ್ ನಟನೆಯ ರಾಧೆ ಶ್ಯಾಮ್ ಎದುರು ನಮ್ಮ ಚಿತ್ರ (ದಿ ಕಾಶ್ಮೀರ್ ಫೈಲ್ಸ್) ರಿಲೀಸ್ ಆಗಿ ಗೆದ್ದಿತ್ತು. ಈಗ ಮತ್ತೊಮ್ಮೆ ಪ್ರಭಾಸ್ ಎದುರು ನಮ್ಮ ಸಿನಿಮಾ ರಿಲೀಸ್ ಮಾಡುತ್ತಿದ್ದೇವೆ’ ಎಂದು ವಿವೇಕ್ ಹೇಳಿರುವುದಾಗಿ ಈ ಮೊದಲು ವರದಿ ಆಗಿತ್ತು. ಆದರೆ, ವಿವೇಕ್ ಅಗ್ನಿಹೋತ್ರಿ ಇದನ್ನು ಅಲ್ಲಗಳೆದಿದ್ದರು. ‘ನಮ್ಮದು ಸಣ್ಣ ಬಜೆಟ್ ಸಿನಿಮಾ. ದೊಡ್ಡ ಸ್ಟಾರ್​​ಗಳ ಎದುರು ನಾವು ಸಿನಿಮಾ ರಿಲೀಸ್ ಮಾಡಲ್ಲ. ಪ್ರಭಾಸ್ ದೊಡ್ಡ ಸ್ಟಾರ್’ ಎಂದು ವಿವೇಕ್ ಅಗ್ನಿಹೋತ್ರಿ ಹೇಳಿದ್ದರು. ಆದರೆ, ಈಗ ಅವರು ಸೆಪ್ಟೆಂಬರ್ 28 ಅನ್ನು ಫೈನಲ್ ಮಾಡಿರೋದು ಕುತೂಹಲ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ