AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧ ಭಾರತದ ವಿಜ್ಞಾನಿಗಳು ಹೋರಾಡಿದ ಕಥೆ; ಗಮನ ಸೆಳೆದ ‘ದಿ ವ್ಯಾಕ್ಸಿನ್ ವಾರ್’ ಟ್ರೇಲರ್

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮೂಲಕ ಗಮನ ಸೆಳೆದವರು ನಿರ್ದೇಶಕ ವಿವೇಕ್ ಅಗ್ನಿಹೋತ್ರಿ. 90ರ ದಶಕದಲ್ಲಿ ನಡೆದ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆಯ ಕುರಿತು ಈ ಸಿನಿಮಾ ಸಿದ್ಧಗೊಂಡಿತ್ತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 250 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಜೋಶ್​ನಲ್ಲಿ ಅವರು ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ.

ಕೊರೊನಾ ವಿರುದ್ಧ ಭಾರತದ ವಿಜ್ಞಾನಿಗಳು ಹೋರಾಡಿದ ಕಥೆ; ಗಮನ ಸೆಳೆದ ‘ದಿ ವ್ಯಾಕ್ಸಿನ್ ವಾರ್’ ಟ್ರೇಲರ್
ನಾನಾ ಪಾಟೇಕರ್-ಸಪ್ತಮಿ ಗೌಡ
ರಾಜೇಶ್ ದುಗ್ಗುಮನೆ
|

Updated on: Sep 13, 2023 | 7:05 AM

Share

‘ದಿ ವ್ಯಾಕ್ಸಿನ್ ವಾರ್’ ಸಿನಿಮಾ (The Vaccine War Movie) ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ನಿರೀಕ್ಷೆಯನ್ನು ಹೆಚ್ಚಿಸುವ ರೀತಿಯಲ್ಲಿದೆ ಚಿತ್ರದ ಟ್ರೇಲರ್. ಸಪ್ತಮಿ ಗೌಡ (Sapthami Gowda) , ನಾನಾ ಪಾಟೇಕರ್ ಮೊದಲಾದವರು ಮಾಡಿರುವ ಪಾತ್ರ ಟ್ರೇಲರ್​ನಲ್ಲಿ ಗಮನ ಸೆಳೆದಿದ್ದಾರೆ. ಕೊರೊನಾ ಲಸಿಕೆ ಕಂಡು ಹಿಡಿಯಲು ವಿಜ್ಞಾನಿಗಳು ಹಾಕಿದ ಶ್ರಮ ಎದ್ದು ಕಾಣಿಸಿದೆ. ಸಿನಿಮಾ ನೋಡಲು ಅಭಿಮಾನಿಗಳು ಕಾದು ಕುಳಿತಿದ್ದಾರೆ. ಸೆಪ್ಟೆಂಬರ್ 28ರಂದು ಈ ಸಿನಿಮಾ ರಿಲೀಸ್ ಆಗಲಿದೆ. ಸಿನಿಮಾ ಯಾವ ರೀತಿಯಲ್ಲಿ ಸದ್ದು ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮೂಲಕ ಗಮನ ಸೆಳೆದವರು ನಿರ್ದೇಶಕ ವಿವೇಕ್ ಅಗ್ನಿಹೋತ್ರಿ. 90ರ ದಶಕದಲ್ಲಿ ನಡೆದ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆಯ ಕುರಿತು ಈ ಸಿನಿಮಾ ಸಿದ್ಧಗೊಂಡಿತ್ತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 250 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಜೋಶ್​ನಲ್ಲಿ ಅವರು ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಅವರ ಪತ್ನಿ ಪಲ್ಲವಿ ಜೋಶಿ ಬಂಡವಾಳ ಹೂಡಿದ್ದಾರೆ.

2020ರ ಆರಂಭದಲ್ಲಿ ದೇಶದಲ್ಲಿ ಕೊರೊನಾ ಕಾಣಿಸಿಕೊಂಡಿತು. ಈ ವೈರಸ್ ಇಡೀ ವಿಶ್ವವನ್ನೇ ತತ್ತರಗೊಳಿಸಿತ್ತು. ಎಲ್ಲ ಕಡೆಗಳಲ್ಲಿ ಲಾಕ್​ಡೌನ್ ಘೋಷಿಸಲಾಯಿತು. ಈ ಸಂದರ್ಭದಲ್ಲಿ ದೇಶಕ್ಕೆ ಕೊರೊನಾ ಲಸಿಕೆಯ ಅವಶ್ಯಕತೆ ಇತ್ತು. ಆಗ ಭಾರತದ ವಿಜ್ಞಾನಿಗಳು ಲಸಿಕೆ ಕಂಡು ಹಿಡಿದರು. ಈ ಲಸಿಕೆ ಸಾಕಷ್ಟು ಜನರ ಜೀವ ಉಳಿಸಿದೆ. ದೇಶವೇ ಹೆಮ್ಮೆ ಪಡುವ ಈ ಘಟನೆಯನ್ನು ಸಿನಿಮಾ ರೂಪದಲ್ಲಿ ತರಲಾಗುತ್ತಿದೆ.

ಇದನ್ನೂ ಓದಿ: ರಾತ್ರಿ ಪೂರ್ತಿ ಕುಡಿದು, ಬೆಳೆಗೆದ್ದು ನಾನು ದೇವರು ಎಂದರೆ ಯಾರೂ ಒಪ್ಪಲ್ಲ: ಪ್ರಭಾಸ್​ಗೆ ವಿವೇಕ್ ಅಗ್ನಿಹೋತ್ರಿ ಟಾಂಗ್

‘ದಿ ವ್ಯಾಕ್ಸಿನ್ ವಾರ್’ ಕೇವಲ ಒಂದು ಸಿನಿಮಾ ಅಲ್ಲ. ಲಸಿಕೆ ಕಂಡು ಹಿಡಿಯಬೇಕು ಎಂಬ ವಿಜ್ಞಾನಿಗಳ ಛಲ, ಆ ಬಳಿಕ ಎದುರಾಗುವ ಅಡೆತಡೆ, ನಿರಾಸೆ, ಯಶಸ್ಸು ಹೀಗೆ ಹಲವು ವಿಚಾರಗಳನ್ನು ಕಟ್ಟಿಕೊಡಲಾಗಿದೆ. ಈ ಟ್ರೇಲರ್ ಎಲ್ಲರ ಗಮನ ಸೆಳೆಯುತ್ತಿದೆ. ಈ ಚಿತ್ರದಲ್ಲಿ ನಾನಾ ಪಾಟೇಕರ್, ಅನುಪಮ್ ಖೇರ್, ರೈಮಾ ಸೇನ್, ಸಪ್ತಮಿ ಗೌಡ, ಪಲ್ಲವಿ ಜೋಶಿ, ಮೋಹನ್ ಕಪೂರ್ ಮೊದಲಾದವರು ನಟಿಸಿದ್ದಾರೆ. ಪಲ್ಲವಿ ಜೋಶಿ ಹಾಗೂ ಅಭಿಷೇಕ್ ಅಗರ್​ವಾಲ್ ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ