AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧ ಭಾರತದ ವಿಜ್ಞಾನಿಗಳು ಹೋರಾಡಿದ ಕಥೆ; ಗಮನ ಸೆಳೆದ ‘ದಿ ವ್ಯಾಕ್ಸಿನ್ ವಾರ್’ ಟ್ರೇಲರ್

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮೂಲಕ ಗಮನ ಸೆಳೆದವರು ನಿರ್ದೇಶಕ ವಿವೇಕ್ ಅಗ್ನಿಹೋತ್ರಿ. 90ರ ದಶಕದಲ್ಲಿ ನಡೆದ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆಯ ಕುರಿತು ಈ ಸಿನಿಮಾ ಸಿದ್ಧಗೊಂಡಿತ್ತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 250 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಜೋಶ್​ನಲ್ಲಿ ಅವರು ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ.

ಕೊರೊನಾ ವಿರುದ್ಧ ಭಾರತದ ವಿಜ್ಞಾನಿಗಳು ಹೋರಾಡಿದ ಕಥೆ; ಗಮನ ಸೆಳೆದ ‘ದಿ ವ್ಯಾಕ್ಸಿನ್ ವಾರ್’ ಟ್ರೇಲರ್
ನಾನಾ ಪಾಟೇಕರ್-ಸಪ್ತಮಿ ಗೌಡ
ರಾಜೇಶ್ ದುಗ್ಗುಮನೆ
|

Updated on: Sep 13, 2023 | 7:05 AM

Share

‘ದಿ ವ್ಯಾಕ್ಸಿನ್ ವಾರ್’ ಸಿನಿಮಾ (The Vaccine War Movie) ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ನಿರೀಕ್ಷೆಯನ್ನು ಹೆಚ್ಚಿಸುವ ರೀತಿಯಲ್ಲಿದೆ ಚಿತ್ರದ ಟ್ರೇಲರ್. ಸಪ್ತಮಿ ಗೌಡ (Sapthami Gowda) , ನಾನಾ ಪಾಟೇಕರ್ ಮೊದಲಾದವರು ಮಾಡಿರುವ ಪಾತ್ರ ಟ್ರೇಲರ್​ನಲ್ಲಿ ಗಮನ ಸೆಳೆದಿದ್ದಾರೆ. ಕೊರೊನಾ ಲಸಿಕೆ ಕಂಡು ಹಿಡಿಯಲು ವಿಜ್ಞಾನಿಗಳು ಹಾಕಿದ ಶ್ರಮ ಎದ್ದು ಕಾಣಿಸಿದೆ. ಸಿನಿಮಾ ನೋಡಲು ಅಭಿಮಾನಿಗಳು ಕಾದು ಕುಳಿತಿದ್ದಾರೆ. ಸೆಪ್ಟೆಂಬರ್ 28ರಂದು ಈ ಸಿನಿಮಾ ರಿಲೀಸ್ ಆಗಲಿದೆ. ಸಿನಿಮಾ ಯಾವ ರೀತಿಯಲ್ಲಿ ಸದ್ದು ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮೂಲಕ ಗಮನ ಸೆಳೆದವರು ನಿರ್ದೇಶಕ ವಿವೇಕ್ ಅಗ್ನಿಹೋತ್ರಿ. 90ರ ದಶಕದಲ್ಲಿ ನಡೆದ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆಯ ಕುರಿತು ಈ ಸಿನಿಮಾ ಸಿದ್ಧಗೊಂಡಿತ್ತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 250 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಜೋಶ್​ನಲ್ಲಿ ಅವರು ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಅವರ ಪತ್ನಿ ಪಲ್ಲವಿ ಜೋಶಿ ಬಂಡವಾಳ ಹೂಡಿದ್ದಾರೆ.

2020ರ ಆರಂಭದಲ್ಲಿ ದೇಶದಲ್ಲಿ ಕೊರೊನಾ ಕಾಣಿಸಿಕೊಂಡಿತು. ಈ ವೈರಸ್ ಇಡೀ ವಿಶ್ವವನ್ನೇ ತತ್ತರಗೊಳಿಸಿತ್ತು. ಎಲ್ಲ ಕಡೆಗಳಲ್ಲಿ ಲಾಕ್​ಡೌನ್ ಘೋಷಿಸಲಾಯಿತು. ಈ ಸಂದರ್ಭದಲ್ಲಿ ದೇಶಕ್ಕೆ ಕೊರೊನಾ ಲಸಿಕೆಯ ಅವಶ್ಯಕತೆ ಇತ್ತು. ಆಗ ಭಾರತದ ವಿಜ್ಞಾನಿಗಳು ಲಸಿಕೆ ಕಂಡು ಹಿಡಿದರು. ಈ ಲಸಿಕೆ ಸಾಕಷ್ಟು ಜನರ ಜೀವ ಉಳಿಸಿದೆ. ದೇಶವೇ ಹೆಮ್ಮೆ ಪಡುವ ಈ ಘಟನೆಯನ್ನು ಸಿನಿಮಾ ರೂಪದಲ್ಲಿ ತರಲಾಗುತ್ತಿದೆ.

ಇದನ್ನೂ ಓದಿ: ರಾತ್ರಿ ಪೂರ್ತಿ ಕುಡಿದು, ಬೆಳೆಗೆದ್ದು ನಾನು ದೇವರು ಎಂದರೆ ಯಾರೂ ಒಪ್ಪಲ್ಲ: ಪ್ರಭಾಸ್​ಗೆ ವಿವೇಕ್ ಅಗ್ನಿಹೋತ್ರಿ ಟಾಂಗ್

‘ದಿ ವ್ಯಾಕ್ಸಿನ್ ವಾರ್’ ಕೇವಲ ಒಂದು ಸಿನಿಮಾ ಅಲ್ಲ. ಲಸಿಕೆ ಕಂಡು ಹಿಡಿಯಬೇಕು ಎಂಬ ವಿಜ್ಞಾನಿಗಳ ಛಲ, ಆ ಬಳಿಕ ಎದುರಾಗುವ ಅಡೆತಡೆ, ನಿರಾಸೆ, ಯಶಸ್ಸು ಹೀಗೆ ಹಲವು ವಿಚಾರಗಳನ್ನು ಕಟ್ಟಿಕೊಡಲಾಗಿದೆ. ಈ ಟ್ರೇಲರ್ ಎಲ್ಲರ ಗಮನ ಸೆಳೆಯುತ್ತಿದೆ. ಈ ಚಿತ್ರದಲ್ಲಿ ನಾನಾ ಪಾಟೇಕರ್, ಅನುಪಮ್ ಖೇರ್, ರೈಮಾ ಸೇನ್, ಸಪ್ತಮಿ ಗೌಡ, ಪಲ್ಲವಿ ಜೋಶಿ, ಮೋಹನ್ ಕಪೂರ್ ಮೊದಲಾದವರು ನಟಿಸಿದ್ದಾರೆ. ಪಲ್ಲವಿ ಜೋಶಿ ಹಾಗೂ ಅಭಿಷೇಕ್ ಅಗರ್​ವಾಲ್ ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ