AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Vaccine War Twitter Review: ‘ವಿಜ್ಞಾನಿಗಳಿಗೆ ಗೌರವ ಸಲ್ಲಿಸಿದ ಸಿನಿಮಾ’: ‘ದಿ ವ್ಯಾಕ್ಸಿನ್​ ವಾರ್​’ ಚಿತ್ರದ ಟ್ವಿಟರ್​ ವಿಮರ್ಶೆ ಇಲ್ಲಿದೆ..

Vivek Agnihotri: ವಿವೇಕ್​ ಅಗ್ನಿಹೋತ್ರಿ ನಿರ್ದೇಶನ ಮಾಡಿರುವ ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ 10ರಿಂದ 12 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾಗಿದೆ. ವಿಮರ್ಶಕರಿಂದ ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ಪ್ರೇಕ್ಷಕರು ಫುಲ್​ ಮಾರ್ಕ್ಸ್​ ನೀಡಿದ್ದಾರೆ. ‘ಚಂದ್ರಮುಖಿ 2’, ‘ಫುಕ್ರೆ 3’ ಮುಂತಾದ ಸಿನಿಮಾಗಳ ಜೊತೆ ‘ದಿ ವ್ಯಾಕ್ಸಿನ್​ ವಾರ್​’ ಸ್ಪರ್ಧಿಸುತ್ತಿದೆ.

The Vaccine War Twitter Review: ‘ವಿಜ್ಞಾನಿಗಳಿಗೆ ಗೌರವ ಸಲ್ಲಿಸಿದ ಸಿನಿಮಾ’: ‘ದಿ ವ್ಯಾಕ್ಸಿನ್​ ವಾರ್​’ ಚಿತ್ರದ ಟ್ವಿಟರ್​ ವಿಮರ್ಶೆ ಇಲ್ಲಿದೆ..
ನಾನಾ ಪಾಟೇಕರ್​
ಮದನ್​ ಕುಮಾರ್​
|

Updated on: Sep 28, 2023 | 5:21 PM

Share

ಹಲವು ಕಾರಣಗಳಿಂದಾಗಿ ‘ದಿ ವ್ಯಾಕ್ಸಿನ್​ ವಾರ್​’ (The Vaccine War) ಸಿನಿಮಾ ನಿರೀಕ್ಷೆ ಮೂಡಿಸಿತ್ತು. ಇಂದು (ಸೆಪ್ಟೆಂಬರ್​ 28) ಈ ಚಿತ್ರ ಬಿಡುಗಡೆ ಆಗಿದೆ. ‘ದಿ ಕಾಶ್ಮೀರ್​ ಫೈಲ್ಸ್​’ ಖ್ಯಾತಿಯ ವಿವೇಕ್ ಅಗ್ನಿಹೋತ್ರಿ (Vivek Agnihotri) ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಚಿತ್ರದ ಹೈಪ್​ ಹೆಚ್ಚಲು ಅದು ಕೂಡ ಒಂದು ಕಾರಣ. ಪಲ್ಲವಿ ಜೋಶಿ, ರೈಮಾ ಸೇನ್​, ಸಪ್ತಮಿ ಗೌಡ, ನಾನಾ ಪಾಟೇಕರ್​, ಅನುಪಮ್​ ಖೇರ್​, ಗಿರಿಜಾ ಓಕ್​ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮೊದಲ ದಿನವೇ ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ ನೋಡಿದ ಪ್ರೇಕ್ಷಕರು ಟ್ವಿಟರ್​ ಮೂಲಕ ತಮ್ಮ ವಿಮರ್ಶೆ (The Vaccine War Twitter Review) ತಿಳಿಸಿದ್ದಾರೆ. ‘ಕೊವಿಡ್​ ವೈರಸ್​ಗೆ ವ್ಯಾಕ್ಸಿನ್​ ಕಂಡುಹಿಡಿದ ವಿಜ್ಞಾನಿಗಳಿಗೆ ಈ ಚಿತ್ರದ ಮೂಲಕ ಗೌರವ ಸಲ್ಲಿಸಲಾಗಿದೆ’ ಎಂದು ಬಹುತೇಕರು ಅಭಿಪ್ರಾಯಪಟ್ಟಿದ್ದಾರೆ. ಚಿತ್ರದ ಟ್ವಿಟರ್​ ವಿಮರ್ಶೆ ಇಲ್ಲಿದೆ..

‘ದಿ ವ್ಯಾಕ್ಸಿನ್​ ವಾರ್​ ಚಿತ್ರವನ್ನು ಮೊದಲ ದಿನ ಮೊದಲ ಶೋ ನೋಡಿದೆ. ತಾಂತ್ರಿಕವಾಗಿ ಉತ್ತಮವಾಗಿರುವ ಈ ಸಿನಿಮಾದಿಂದ ಭಾರತದ ವಿಜ್ಞಾನಿಗಳಿಗೆ ಗೌರವ ಸಲ್ಲಿಸಲಾಗಿದೆ. ಎಲ್ಲ ಕಲಾವಿದರ ನಟನೆ ಉತ್ಕೃಷ್ಟವಾಗಿದೆ. ಚಿತ್ರಕಥೆ ಮತ್ತು ಸಂಭಾಷಣೆ ತುಂಬ ಚೆನ್ನಾಗಿದೆ. ಮನರಂಜನೆ ನೀಡುವುದರ ಜೊತೆಗೆ ಎಂಗೇಜಿಂಗ್​ ಆಗಿದೆ. ಈ ಸಿನಿಮಾ ಮಾಡಿದ್ದಕ್ಕೆ ವಿವೇಕ್​ ಅಗ್ನಿಹೋತ್ರಿ ಅವರಿಗೆ ಧನ್ಯವಾದಗಳು’ ಎಂದು ಪ್ರೇಕ್ಷಕರೊಬ್ಬರು ಟ್ವೀಟ್​ ಮಾಡಿದ್ದಾರೆ.

‘ಇದು ಸೂಪರ್​ ಸಿನಿಮಾ. ವ್ಯಾಕ್ಸಿನ್​ ತಯಾರಿಸಿದ ಬಲರಾಮ್​ ಭಾರ್ಗವ್ ಸರ್​ ಮತ್ತು ಮಹಿಳಾ ವಿಜ್ಞಾನಿಗಳಿಗೆ ಹ್ಯಾಟ್ಸಾಫ್​. ಅವರ ಶ್ರಮ ಮತ್ತು ತ್ಯಾಗದ ಬಗ್ಗೆ ಇಡೀ ಜಗತ್ತಿಗೆ ಗೊತ್ತಾಗಲೇಬೇಕು. ವಿವೇಕ್​ ಅಗ್ನಿಹೋತ್ರಿ ಅವರ ಕೆಲಸ ಶ್ರೇಷ್ಠವಾಗಿದೆ’ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾದಲ್ಲಿ ಪಲ್ಲವಿ ಜೋಶಿ, ನಾನಾ ಪಾಟೇಕರ್​, ರೈಮಾ ಸೇನ್​ ಅವರ ನಟನೆಗೆ ಜನರಿಂದ ಚಪ್ಪಾಳೆ ಸಿಗುತ್ತಿದೆ.

‘ವಿವೇಕ್​ ಅಗ್ನಿಹೋತ್ರಿ ಮತ್ತು ಅವರ ತಂಡಕ್ಕೆ ಜಯವಾಗಲಿ. ತುಂಬ ಚೆನ್ನಾಗಿ ವಿವೇಕ್​ ಅವರು ನಿರ್ದೇಶನ ಮಾಡಿದ್ದಾರೆ. ನಿಮ್ಮ ಜೊತೆ ನಾವಿದ್ದೇವೆ. ಒಳ್ಳೆಯ ಸಿನಿಮಾಗಳನ್ನು ಮಾಡುವುದನ್ನು ಮುಂದುವರಿಸಿ’ ಎಂದು ವಿವೇಕ್​ ಅಗ್ನಿಹೋತ್ರಿ ಅವರಿಗೆ ಅಭಿಮಾನಿಗಳು ಶುಭ ಕೋರಿದ್ದಾರೆ. ‘ವಿವೇಕ್​ ಅಗ್ನಿಹೋತ್ರಿ ಅವರಿಗೆ ಹ್ಯಾಟ್ಸಾಫ್​. ಈ ಸಿನಿಮಾ ನಿಜಕ್ಕೂ ಮಾಸ್ಟರ್​ಪೀಸ್​. ಕೊವಿಡ್​ ವಾರಿಯರ್​ಗಳಿಗೆ ಈ ಸಿನಿಮಾ ಗೌರವ ಸಲ್ಲಿಸಿದೆ. ಭಾರತದ ಒಳಗಡೆಯೇ ಇರುವ ಶತ್ರುಗಳನ್ನು ಇದು ಬಯಲಿಗೆ ಎಳೆಯುತ್ತದೆ’ ಎಂದು ಪ್ರೇಕ್ಷಕರೊಬ್ಬರು ಟ್ವೀಟ್​ ಮಾಡಿದ್ದಾರೆ.

ಈ ಹಿಂದೆ ವಿವೇಕ್​ ಅಗ್ನಿಹೋತ್ರಿ ನಿರ್ದೇಶನ ಮಾಡಿದ್ದ ‘ದಿ ಕಾಶ್ಮೀರ್​ ಫೈಲ್ಸ್’ ಸಿನಿಮಾ 252 ಕೋಟಿ ರೂಪಾಯಿ ಗಳಿಸಿತ್ತು. ಈಗ ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ. 10ರಿಂದ 12 ಕೋಟಿ ರೂಪಾಯಿ ಬಜೆಟ್​ನಲ್ಲಿ ಈ ಸಿನಿಮಾ ಸಿದ್ಧವಾಗಿದೆ. ವಿಮರ್ಶಕರಿಂದ ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ‘ಚಂದ್ರಮುಖಿ 2’, ‘ಫುಕ್ರೆ 3’ ಮುಂತಾದ ಸಿನಿಮಾಗಳ ಜೊತೆ ‘ದಿ ವ್ಯಾಕ್ಸಿನ್​ ವಾರ್​’ ಸ್ಪರ್ಧಿಸುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?