AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಸೂಪರ್ ಹಿಟ್ ಚಿತ್ರಗಳ ಆಫರ್​ನ ರಿಜೆಕ್ಟ್ ಮಾಡಿದ್ದರು ಸಲ್ಮಾನ್ ಖಾನ್..

ಸಲ್ಮಾನ್ ಖಾನ್ ಅವರು ‘ಟೈಗರ್ 3’ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಸಲ್ಮಾನ್ ಖಾನ್ ಅವರು ಕೆಲವು ಆಫರ್​ಗಳನ್ನು ರಿಜೆಕ್ಟ್ ಮಾಡಿದ್ದರು. ಆ ಬಳಿಕ ಸಿನಿಮಾ ಬೇರೆಯವರ ಕೈಸೇರಿತ್ತು. ಈ ರೀತಿ ಸಲ್ಲು ರಿಜೆಕ್ಟ್ ಮಾಡಿ ಹಿಟ್ ಆದ ಸಿನಿಮಾಗಳ ಬಗ್ಗೆ ಇಲ್ಲಿದೆ ಮಾಹಿತಿ.

ಈ ಸೂಪರ್ ಹಿಟ್ ಚಿತ್ರಗಳ ಆಫರ್​ನ ರಿಜೆಕ್ಟ್ ಮಾಡಿದ್ದರು ಸಲ್ಮಾನ್ ಖಾನ್..
ಈ ಸೂಪರ್ ಹಿಟ್ ಚಿತ್ರಗಳ ಆಫರ್​ನ ರಿಜೆಕ್ಟ್ ಮಾಡಿದ್ದರು ಸಲ್ಮಾನ್ ಖಾನ್..
 ಶ್ರೀಲಕ್ಷ್ಮೀ ಎಚ್
| Edited By: |

Updated on:Sep 29, 2023 | 8:59 AM

Share

ಬಾಲಿವುಡ್​ನ ಖ್ಯಾತ ನಟ ಸಲ್ಮಾನ್ ಖಾನ್ ಅವರು ಸ್ಟಾರ್ ಹೀರೋ ಆಗಿ ಬೆಳೆದಿದ್ದಾರೆ. ಅವರ ಪ್ರತಿ ಸಿನಿಮಾಗಳು ನೂರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡುತ್ತವೆ. ಸದ್ಯ ಸಲ್ಮಾನ್ ಖಾನ್ (Salman Khan) ಅವರು ‘ಟೈಗರ್ 3’ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಸಲ್ಮಾನ್ ಖಾನ್ ಅವರು ಕೆಲವು ಆಫರ್​ಗಳನ್ನು ರಿಜೆಕ್ಟ್ ಮಾಡಿದ್ದರು. ಆ ಬಳಿಕ ಸಿನಿಮಾ ಬೇರೆಯವರ ಕೈಸೇರಿತ್ತು. ಈ ರೀತಿ ಸಲ್ಲು ರಿಜೆಕ್ಟ್ ಮಾಡಿ ಹಿಟ್ ಆದ ಸಿನಿಮಾಗಳ ಬಗ್ಗೆ ಇಲ್ಲಿದೆ ಮಾಹಿತಿ.

ಬಾಜಿರಾವ್ ಮಸ್ತಾನಿ

ರಣವೀರ್ ಸಿಂಗ್, ಪ್ರಿಯಾಂಕಾ ಚೋಪ್ರಾ ಹಾಗೂ ದೀಪಿಕಾ ಪಡುಕೋಣೆ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್ ತಂದ ಚಿತ್ರ ‘ಬಾಜಿರಾವ್ ಮಸ್ತಾನಿ’ ಸಿನಿಮಾ. ಮೊದಲು ಈ ಚಿತ್ರದ ಆಫರ್​ನ ಸಲ್ಮಾನ್ ಖಾನ್​ಗೆ ನೀಡಲಾಗಿತ್ತು. ಆದರೆ, ಅವರು ಇದನ್ನು ರಿಜೆಕ್ಟ್ ಮಾಡಿದ್ದರು.

ಘಜನಿ

ಆಮಿರ್ ಖಾನ್ ವೃತ್ತಿಜೀವನದ ಸೂಪರ್ ಹಿಟ್ ಚಿತ್ರಗಳಲ್ಲಿ ‘ಘಜನಿ’ ಚಿತ್ರಕ್ಕೂ ಸ್ಥಾನ ಇದೆ. ಈ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿದೆ. ಈ ಚಿತ್ರದ ಆಫರ್ ಮೊದಲು ಸಲ್ಮಾನ್ ಖಾನ್ ಕೈ ಸೇರಿತ್ತು. ಆದರೆ, ಇದನ್ನು ಅವರು ರಿಜೆಕ್ಟ್ ಮಾಡಿದ್ದರು. ಆಮಿರ್ ಖಾನ್ ಕಥೆ ಕೇಳಿ ಸಿನಿಮಾ ಒಪ್ಪಿಕೊಂಡರು.

ಕಲ್ ಹೋ ನ ಹೋ

ಬಾಲಿವುಡ್​ನ ಸೂಪರ್ ಹಿಟ್ ಚಿತ್ರಗಳ ಸಾಲಿನಲ್ಲಿ ‘ಕಲ್​ ಹೋ ನ ಹೋ’ ಚಿತ್ರಕ್ಕೂ ಸ್ಥಾನ ಇದೆ. ಶಾರುಖ್ ಖಾನ್, ಪ್ರೀತಿ ಜಿಂಟಾ, ಸೈಫ್ ಅಲಿ ಖಾನ್ ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಸೈಫ್ ಮಾಡಿದ ಪಾತ್ರದ ಆಫರ್ ಮೊದಲು ಹೋಗಿದ್ದು ಸಲ್ಲುಗೆ. ಅವರು ರಿಜೆಕ್ಟ್ ಮಾಡಿದ ಬಳಿಕ ಸೈಫ್​ಗೆ ನೀಡಲಾಯಿತು.

ಚಾಂಪಿಯನ್ಸ್

ಆಮಿರ್ ಖಾನ್ ನಟನೆಯ ‘ಚಾಂಪಿಯನ್ಸ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಕೂಡ ನಟಿಸಬೇಕಿತ್ತು. ಆಮಿರ್ ಜೊತೆ ಕೆಲಸ ಮಾಡಬೇಕು ಎಂಬುದು ಸಲ್ಲು ಆಸೆಗಳಲ್ಲಿ ಒಂದಾಗಿತ್ತು. ಆದರೆ, ಸಲ್ಲುನೇ ಈ ಆಫರ್ ರಿಜೆಕ್ಟ್ ಮಾಡಿದ್ದರು. ಡೇಟ್ಸ್ ಹೊಂದಾಣಿಕೆ ಆಗದ ಕಾರಣ ಅವರು ಈ ಸಿನಿಮಾದಲ್ಲಿ ನಟಿಸಿಲ್ಲ ಎನ್ನಲಾಗಿದೆ.

ಜೋಶ್

ಸಲ್ಮಾನ್ ಖಾನ್ ಅವರು ‘ಜೋಶ್’ ಸಿನಿಮಾದಲ್ಲಿ ಐಶ್ವರ್ಯಾ ರೈ ಬಚ್ಚನ್ ಸಹೋದರನ ಪಾತ್ರದಲ್ಲಿ ನಟಿಸಬೇಕಿತ್ತು. ಐಶ್ವರ್ಯಾ ರೈ ಸಹೋದರನಾಗಿ ನಟಿಸಬೇಕು ಎಂಬ ಕಾರಣಕ್ಕೋ ಏನೋ ಇದನ್ನು ಅವರು ರಿಜೆಕ್ಟ್ ಮಾಡಿದರು. ಆ ಬಳಿಕ ಪಾತ್ರ ಆಮಿರ್ ಖಾನ್ ಅವರ ಬಳಿ ಹೋಯಿತು. ಅವರೂ ಇದನ್ನು ತಿರಸ್ಕರಿಸಿದರು. ಕೊನೆಯಲ್ಲಿ ಈ ಸಿನಿಮಾ ಸೇರಿದ್ದು ಶಾರುಖ್ ಖಾನ್ ಬಳಿ.

ಡಿಡಿಎಲ್​ಜೆ

ಡಿಡಿಎಲ್​ಜೆ ಸಿನಿಮಾ ಮಾಡಿದ ದಾಖಲೆಗಳು ಒಂದೆರಡಲ್ಲ. ಈ ಚಿತ್ರದಲ್ಲಿ ಶಾರುಖ್ ಖಾನ್ ಹಾಗೂ ಕಾಜೋಲ್ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಸಲ್ಲು ಬಣ್ಣ ಹಚ್ಚಬೇಕಿತ್ತು. ಆದರೆ, ಚಿತ್ರವನ್ನು ಅವರು ರಿಜೆಕ್ಟ್ ಮಾಡಿದ್ದರು.

ಬಾಜಿಗರ್

ಅಬ್ಬಾಸ್ ಹಾಗೂ ಮುಸ್ತಾನ್ ನಿರ್ದೇಶನದ ‘ಬಾಜಿಗರ್’ ಚಿತ್ರ ಸೂಪರ್ ಹಿಟ್ ಸಿನಿಮಾಗಳಲ್ಲಿ ಒಂದು. ಅಬ್ಬಾಸ್ ಹಾಗೂ ಮುಸ್ತಾನ್ ಈ ಚಿತ್ರಕ್ಕೆ ಸಲ್ಮಾನ್ ಖಾನ್ ಅವರನ್ನು ಆಯ್ಕೆ ಮಾಡಿಕೊಳ್ಳುವ ಆಲೋಚನೆಯಲ್ಲಿ ಇದ್ದರು. ಆದರೆ, ಈ ಆಫರ್​ನ ಅವರು ತಿರಸ್ಕರಿಸಿದ ಬಳಿಕ ಶಾರುಖ್ ಖಾನ್ ಬಳಿ ಹೋಯಿತು.

ಇದನ್ನೂ ಓದಿ: ಯಾರೇ ಬಂದರೂ ‘ಡಂಕಿ’ ಕ್ರಿಸ್​​ಮಸ್ ರಿಲೀಸ್ ಫಿಕ್ಸ್; ಸ್ಪಷ್ಟನೆ ನೀಡಿದ ಶಾರುಖ್ ಖಾನ್

ಚಕ್ ದೇ ಇಂಡಿಯಾ

ಶಾರುಖ್ ಖಾನ್ ಅವರು ‘ಚಕ್​ ದೇ ಇಂಡಿಯಾ’ ಚಿತ್ರದಲ್ಲಿ ನಟಿಸಿದರು. ಈ ಸಿನಿಮಾ ಯಶಸ್ಸು ಕಂಡಿದೆ. ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಅಭಿನಯಿಸಬೇಕಿತ್ತು. ಈ ಚಿತ್ರದ ಆಫರ್​ನ ಅವರು ರಿಜೆಕ್ಟ್ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:15 am, Fri, 29 September 23

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?