AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವೂದ್ ಜೊತೆಗಿನ ನಂಟಿನಿಂದ ಸಿನಿಮಾ ರಂಗಕ್ಕೆ ಗುಡ್ ಬೈ ಹೇಳಿದ್ದ ನಟಿ

Bollywood: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪ್ರಭಾವ ಬಾಲಿವುಡ್​ ಮೇಲೆ ಬಹಳ ಹೆಚ್ಚಾಗಿದ್ದ ಸಮಯವೊಂದಿತ್ತು. ದಾವೂದ್ ಇಬ್ರಾಹಿಂ ಸಿನಿಮಾಗಳಿಗೆ ಕಪ್ಪು ಹಣ ತೊಡಗಿಸುತ್ತಿದ್ದ, ನಟಿಯೊಬ್ಬರು ದಾವೂದ್​ಗಾಗಿ ಚಿತ್ರರಂಗವನ್ನೇ ತೊರೆದರು. ಯಾರಾಕೆ?

ದಾವೂದ್ ಜೊತೆಗಿನ ನಂಟಿನಿಂದ ಸಿನಿಮಾ ರಂಗಕ್ಕೆ ಗುಡ್ ಬೈ ಹೇಳಿದ್ದ ನಟಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 28, 2024 | 12:35 PM

Share

1995 ರಲ್ಲಿ ಬಿಡುಗಡೆಯಾದ ‘ಕರಣ್ ಅರ್ಜುನ್’ ಚಿತ್ರ ಅಭಿಮಾನಿಗಳಿಗೆ ಇಷ್ಟ ಆಗಿತ್ತು. ಈಗ 2025ಕ್ಕೆ ‘ಕರಣ್ ಅರ್ಜುನ್’ ಸಿನಿಮಾ 30 ವರ್ಷ ಪೂರೈಸುತ್ತಿದೆ. ಹೀಗಾಗಿ ಮತ್ತೆ ಸಿನಿಮಾ ಬಿಡುಗಡೆ ಮಾಡಲು ನಿರ್ದೇಶಕರು ನಿರ್ಧರಿಸಿದ್ದಾರೆ. ಅಂದಿನ ಕಾಲದಲ್ಲಿ ಮೊದಲ ವಾರದಲ್ಲಿ ಚಿತ್ರ ಸುಮಾರು 1 ಕೋಟಿ ಕಲೆಕ್ಷನ್ ಮಾಡಿತ್ತು. ಮತ್ತೊಂದೆಡೆ ಚಿತ್ರದ ನಿರ್ದೇಶಕ ರಾಕೇಶ್ ರೋಷನ್ ಚಿತ್ರದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ನಟಿ ಮಮತಾ ಕುಲಕರ್ಣಿ ಕೂಡ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದರು. ಆದರೆ ಈಗ ನಟಿ ಎಲ್ಲಿ ಮತ್ತು ಹೇಗೆ ವಾಸಿಸುತ್ತಾರೆ ಎಂದು ಯಾರಿಗೂ ತಿಳಿದಿಲ್ಲ.

ಇತ್ತೀಚೆಗೆ ಸಂದರ್ಶನವೊಂದರಲ್ಲಿ ರಾಕೇಶ್ ರೋಷನ್ ಮಮತಾ ಕುಲಕರ್ಣಿ ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದರು. ಸಂದರ್ಶನದಲ್ಲಿ ರಾಕೇಶ್ ರೋಷನ್ ಅವರಿಗೆ ನಟಿಯ ಬಗ್ಗೆ ಪ್ರಶ್ನೆ ಕೇಳಲಾಯಿತು. ಈ ಕುರಿತು ಮಾತನಾಡಿದ ಅವರು, ‘ಹಲವು ವರ್ಷಗಳಿಂದ ಮಮತಾ ಕುಲಕರ್ಣಿ ಜತೆ ಸಂಪರ್ಕದಲ್ಲಿಲ್ಲ. ಅವರು ಎಲ್ಲಿದ್ದಾರೆ ಅಂತ ಗೊತ್ತಿಲ್ಲ’ ಎಂದು ರಾಕೇಶ್ ರೋಷನ್ ಹೇಳಿದ್ದರು.

ದಿವಂಗತ ನಟ ಅಮರೀಶ್ ಪುರಿ ಬಗ್ಗೆ ರಾಕೇಶ್ ರೋಷನ್ ಕೂಡ ಹೇಳಿಕೆ ನೀಡಿದ್ದರು . ‘ಇಂದು ಅಮರೀಶ್ ಪುರಿ ಇದ್ದಿದ್ದರೆ ತುಂಬಾ ಖುಷಿಯಾಗುತ್ತಿತ್ತು. ಅಮರೀಶ್ ಪುರಿ ಮಾಡಿದಂತಹ ಪಾತ್ರಗಳನ್ನು ಯಾರೂ ಮಾಡಲು ಸಾಧ್ಯವಿಲ್ಲ’ ಎಂದು ಹೇಳುವ ಮೂಲಕ ಅಮರೀಶ್ ಪುರಿ ಅವರನ್ನು ಹೊಗಳಿದ್ದರು.

ಇದನ್ನೂ ಓದಿ:ಬಾಲಿವುಡ್ ನಾಯಕಿಯಂತಿರುವ ಬಚ್ಚನ್ ಮೊಮ್ಮಗಳಿಗೆ ಸಿನಿಮಾಗಳ ಬಗ್ಗೆ ಆಸಕ್ತಿಯಿಲ್ಲ

ಮಮತಾ ಕುಲಕರ್ಣಿ ಕುರಿತು ಮಾತನಾಡುತ್ತಾ, 22 ವರ್ಷಗಳ ಹಿಂದೆ ನಟಿ ಬಣ್ಣದ ಲೋಕಕ್ಕೆ ವಿದಾಯ ಹೇಳಿದರು. 2002ರಲ್ಲಿ ತೆರೆಕಂಡ ‘ಕಭಿ ತುಮ್ ಕಭಿ ಹಮ್’ ಚಿತ್ರದ ನಂತರ ಈ ನಟಿ ಯಾವುದೇ ಸಿನಿಮಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಖ್ಯಾತ ನಟಿಯರ ಪಟ್ಟಿಯಲ್ಲಿ ಮಮತಾ ಅಗ್ರಸ್ಥಾನದಲ್ಲಿದ್ದ ಕಾಲವೊಂದಿತ್ತು. ಅಂಡರ್ವರ್ಡ್ ಡಾನ್ ದಾವೂದ್ ಜೊತೆಗಿನ ಸಂಬಂಧವು ನಟಿಯ ಇಡೀ ಜೀವನವನ್ನು ಹಾಳುಮಾಡಿತು.

ಮಮತಾ ಕುಲಕರ್ಣಿ ಹಲವು ಸಿನಿಮಾಗಳಲ್ಲಿ ಪವರ್ ಫುಲ್ ಪಾತ್ರಗಳಲ್ಲಿ ನಟಿಸಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ನಟಿ ‘ಆಶಿಕ್ ಆವಾರಾ’, ‘ಕ್ರಾಂತಿವೀರ್’, ‘ವಕ್ತ್ ಹಮಾರಾ ಹೈ’, ‘ಕರಣ್ ಅರ್ಜುನ್’ ಮತ್ತು ‘ಚೈನಾ ಗೇಟ್’ ಚಿತ್ರಗಳಲ್ಲಿ ಕಾಣಿಸಿಕೊಂಡರು. ವರದಿಗಳ ಪ್ರಕಾರ, 2014 ರಲ್ಲಿ ಮಮತಾ ಅವರು ಉದ್ಯಮವನ್ನು ತೊರೆದು ಆಧ್ಯಾತ್ಮಿಕತೆಯ ಹಾದಿ ಹಿಡಿದಿರುವುದಾಗಿ ವರದಿ ಆಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ