AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವೂದ್ ಜೊತೆಗಿನ ನಂಟಿನಿಂದ ಸಿನಿಮಾ ರಂಗಕ್ಕೆ ಗುಡ್ ಬೈ ಹೇಳಿದ್ದ ನಟಿ

Bollywood: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪ್ರಭಾವ ಬಾಲಿವುಡ್​ ಮೇಲೆ ಬಹಳ ಹೆಚ್ಚಾಗಿದ್ದ ಸಮಯವೊಂದಿತ್ತು. ದಾವೂದ್ ಇಬ್ರಾಹಿಂ ಸಿನಿಮಾಗಳಿಗೆ ಕಪ್ಪು ಹಣ ತೊಡಗಿಸುತ್ತಿದ್ದ, ನಟಿಯೊಬ್ಬರು ದಾವೂದ್​ಗಾಗಿ ಚಿತ್ರರಂಗವನ್ನೇ ತೊರೆದರು. ಯಾರಾಕೆ?

ದಾವೂದ್ ಜೊತೆಗಿನ ನಂಟಿನಿಂದ ಸಿನಿಮಾ ರಂಗಕ್ಕೆ ಗುಡ್ ಬೈ ಹೇಳಿದ್ದ ನಟಿ
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on: Nov 28, 2024 | 12:35 PM

1995 ರಲ್ಲಿ ಬಿಡುಗಡೆಯಾದ ‘ಕರಣ್ ಅರ್ಜುನ್’ ಚಿತ್ರ ಅಭಿಮಾನಿಗಳಿಗೆ ಇಷ್ಟ ಆಗಿತ್ತು. ಈಗ 2025ಕ್ಕೆ ‘ಕರಣ್ ಅರ್ಜುನ್’ ಸಿನಿಮಾ 30 ವರ್ಷ ಪೂರೈಸುತ್ತಿದೆ. ಹೀಗಾಗಿ ಮತ್ತೆ ಸಿನಿಮಾ ಬಿಡುಗಡೆ ಮಾಡಲು ನಿರ್ದೇಶಕರು ನಿರ್ಧರಿಸಿದ್ದಾರೆ. ಅಂದಿನ ಕಾಲದಲ್ಲಿ ಮೊದಲ ವಾರದಲ್ಲಿ ಚಿತ್ರ ಸುಮಾರು 1 ಕೋಟಿ ಕಲೆಕ್ಷನ್ ಮಾಡಿತ್ತು. ಮತ್ತೊಂದೆಡೆ ಚಿತ್ರದ ನಿರ್ದೇಶಕ ರಾಕೇಶ್ ರೋಷನ್ ಚಿತ್ರದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದಲ್ಲಿ ನಟಿ ಮಮತಾ ಕುಲಕರ್ಣಿ ಕೂಡ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದರು. ಆದರೆ ಈಗ ನಟಿ ಎಲ್ಲಿ ಮತ್ತು ಹೇಗೆ ವಾಸಿಸುತ್ತಾರೆ ಎಂದು ಯಾರಿಗೂ ತಿಳಿದಿಲ್ಲ.

ಇತ್ತೀಚೆಗೆ ಸಂದರ್ಶನವೊಂದರಲ್ಲಿ ರಾಕೇಶ್ ರೋಷನ್ ಮಮತಾ ಕುಲಕರ್ಣಿ ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದರು. ಸಂದರ್ಶನದಲ್ಲಿ ರಾಕೇಶ್ ರೋಷನ್ ಅವರಿಗೆ ನಟಿಯ ಬಗ್ಗೆ ಪ್ರಶ್ನೆ ಕೇಳಲಾಯಿತು. ಈ ಕುರಿತು ಮಾತನಾಡಿದ ಅವರು, ‘ಹಲವು ವರ್ಷಗಳಿಂದ ಮಮತಾ ಕುಲಕರ್ಣಿ ಜತೆ ಸಂಪರ್ಕದಲ್ಲಿಲ್ಲ. ಅವರು ಎಲ್ಲಿದ್ದಾರೆ ಅಂತ ಗೊತ್ತಿಲ್ಲ’ ಎಂದು ರಾಕೇಶ್ ರೋಷನ್ ಹೇಳಿದ್ದರು.

ದಿವಂಗತ ನಟ ಅಮರೀಶ್ ಪುರಿ ಬಗ್ಗೆ ರಾಕೇಶ್ ರೋಷನ್ ಕೂಡ ಹೇಳಿಕೆ ನೀಡಿದ್ದರು . ‘ಇಂದು ಅಮರೀಶ್ ಪುರಿ ಇದ್ದಿದ್ದರೆ ತುಂಬಾ ಖುಷಿಯಾಗುತ್ತಿತ್ತು. ಅಮರೀಶ್ ಪುರಿ ಮಾಡಿದಂತಹ ಪಾತ್ರಗಳನ್ನು ಯಾರೂ ಮಾಡಲು ಸಾಧ್ಯವಿಲ್ಲ’ ಎಂದು ಹೇಳುವ ಮೂಲಕ ಅಮರೀಶ್ ಪುರಿ ಅವರನ್ನು ಹೊಗಳಿದ್ದರು.

ಇದನ್ನೂ ಓದಿ:ಬಾಲಿವುಡ್ ನಾಯಕಿಯಂತಿರುವ ಬಚ್ಚನ್ ಮೊಮ್ಮಗಳಿಗೆ ಸಿನಿಮಾಗಳ ಬಗ್ಗೆ ಆಸಕ್ತಿಯಿಲ್ಲ

ಮಮತಾ ಕುಲಕರ್ಣಿ ಕುರಿತು ಮಾತನಾಡುತ್ತಾ, 22 ವರ್ಷಗಳ ಹಿಂದೆ ನಟಿ ಬಣ್ಣದ ಲೋಕಕ್ಕೆ ವಿದಾಯ ಹೇಳಿದರು. 2002ರಲ್ಲಿ ತೆರೆಕಂಡ ‘ಕಭಿ ತುಮ್ ಕಭಿ ಹಮ್’ ಚಿತ್ರದ ನಂತರ ಈ ನಟಿ ಯಾವುದೇ ಸಿನಿಮಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಖ್ಯಾತ ನಟಿಯರ ಪಟ್ಟಿಯಲ್ಲಿ ಮಮತಾ ಅಗ್ರಸ್ಥಾನದಲ್ಲಿದ್ದ ಕಾಲವೊಂದಿತ್ತು. ಅಂಡರ್ವರ್ಡ್ ಡಾನ್ ದಾವೂದ್ ಜೊತೆಗಿನ ಸಂಬಂಧವು ನಟಿಯ ಇಡೀ ಜೀವನವನ್ನು ಹಾಳುಮಾಡಿತು.

ಮಮತಾ ಕುಲಕರ್ಣಿ ಹಲವು ಸಿನಿಮಾಗಳಲ್ಲಿ ಪವರ್ ಫುಲ್ ಪಾತ್ರಗಳಲ್ಲಿ ನಟಿಸಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ನಟಿ ‘ಆಶಿಕ್ ಆವಾರಾ’, ‘ಕ್ರಾಂತಿವೀರ್’, ‘ವಕ್ತ್ ಹಮಾರಾ ಹೈ’, ‘ಕರಣ್ ಅರ್ಜುನ್’ ಮತ್ತು ‘ಚೈನಾ ಗೇಟ್’ ಚಿತ್ರಗಳಲ್ಲಿ ಕಾಣಿಸಿಕೊಂಡರು. ವರದಿಗಳ ಪ್ರಕಾರ, 2014 ರಲ್ಲಿ ಮಮತಾ ಅವರು ಉದ್ಯಮವನ್ನು ತೊರೆದು ಆಧ್ಯಾತ್ಮಿಕತೆಯ ಹಾದಿ ಹಿಡಿದಿರುವುದಾಗಿ ವರದಿ ಆಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?