‘ಬಿಕಿನಿ ಧರಿಸಿಲ್ಲ ಎಂದು ಆ ಫೋಟೋಗ್ರಾಫರ್​ ಕೋಪ ಮಾಡಿಕೊಂಡಿದ್ದ’: ಮನಿಷಾ ಕೊಯಿರಾಲಾ

‘ಹೀರಾಮಂಡಿ’ ವೆಬ್​ ಸರಣಿ ಮೂಲಕ ನಟಿ ಮನಿಷಾ ಕೊಯಿರಾಲಾ ಅವರು ದೊಡ್ಡ ಯಶಸ್ಸು ಪಡೆದಿದ್ದಾರೆ. ಅವರಿಗೆ ಇದ್ದ ಬೇಡಿಕೆ ಹೆಚ್ಚಾಗಿದೆ. ಚಿತ್ರರಂಗಕ್ಕೆ ಕಾಲಿಟ್ಟ ಆರಂಭದಲ್ಲಿ ಅವರು ಅನೇಕ ಸವಾಲುಗಳನ್ನು ಎದುರಿಸಬೇಕಾಗಿತ್ತು. ಬಿಕಿನಿ ಧರಿಸುವಂತೆ ಫೋಟೋಗ್ರಾಫರ್​ಗಳು ಮನಿಷಾಗೆ ಒತ್ತಾಯ ಮಾಡುತ್ತಿದ್ದರು. ಆ ಸಂದರ್ಭ ಹೇಗಿತ್ತು ಎಂಬುದನ್ನು ಮನಿಷಾ ಈಗ ವಿವರಿಸಿದ್ದಾರೆ.

‘ಬಿಕಿನಿ ಧರಿಸಿಲ್ಲ ಎಂದು ಆ ಫೋಟೋಗ್ರಾಫರ್​ ಕೋಪ ಮಾಡಿಕೊಂಡಿದ್ದ’: ಮನಿಷಾ ಕೊಯಿರಾಲಾ
ಮನಿಷಾ ಕೊಯಿರಾಲಾ
Follow us
|

Updated on: Jul 08, 2024 | 9:28 PM

ನಟಿ ಮನಿಷಾ ಕೊಯಿರಾಲಾ ಅವರು ಸ್ಟಾರ್​ ನಟಿಯಾಗಿ ಬೆಳೆದಿದ್ದಾರೆ. ಆದರೆ ಆರಂಭದ ದಿನಗಳಲ್ಲಿ ಅವರು ಅನೇಕ ಕಹಿ ಘಟನೆಗಳನ್ನು ಎದುರಿಸಿದ್ದರು. ಆ ಪೈಕಿ ಒಂದು ಘಟನೆಯ ಬಗ್ಗೆ ಈಗ ಅವರು ಮಾತನಾಡಿದ್ದಾರೆ. 90ರ ದಶಕದಲ್ಲಿ ತಾವು ಅನುಭವಿಸಿದ ಕಷ್ಟದ ದಿನಗಳನ್ನು ಮೆಲುಕು ಹಾಕಿದ್ದಾರೆ. ನಟಿಯಾಗಬೇಕು ಎಂಬ ಹಂಬಲ ಹೊಂದಿದ್ದ ಅವರು ಫೋಟೋಶೂಟ್​ ಮಾಡಿಸಲು ತೆರಳಿದ್ದರು. ಆಗ ಫೋಟೋಗ್ರಾಫರ್​ ನಡೆದುಕೊಂಡ ರೀತಿಯ ಬಗ್ಗೆ ಮನಿಷಾಗೆ ತೀವ್ರ ಅಸಮಾಧಾನ ಇದೆ. ಬಿಕಿನಿ ಧರಿಸುವಂತೆ ಫೋಟೋಗ್ರಾಫರ್​ ಒತ್ತಾಯ ಮಾಡಿದ್ದ ಎಂಬುದನ್ನು ಮನಿಷಾ ಕೊಯಿರಾಲಾ ಈಗ ನೆನಪು ಮಾಡಿಕೊಂಡಿದ್ದಾರೆ.

‘ನನ್ನ ವೃತ್ತಿಜೀವನದ ಆರಂಭದಲ್ಲಿ ಫೋಟೋಶೂಟ್​ ಮಾಡಿಸಲು ಹೇಳಿದ್ದರು. ಆಗ ತುಂಬ ಫೇಮಸ್​ ಆಗಿದ್ದ ಫೋಟೋಗ್ರಾಫರ್​ ಒಬ್ಬರು ಇದ್ದರು. ಅಮ್ಮನ ಜೊತೆ ನಾನು ಅವರ ಬಳಿ ಹೋದೆ. ನೀವೇ ಮುಂದಿನ ಸೂಪರ್​ ಸ್ಟಾರ್​ ಎಂದು ಆ ಫೋಟೋಗ್ರಾಫರ್ ನನಗೆ ಹೇಳಿದರು. ನಂತರ ಒಂದು ಬಿಕಿನಿ ತಂದುಕೊಟ್ಟು, ಅದನ್ನು ಧರಿಸು ಅಂತ ಒತ್ತಾಯಿಸಿದರು’ ಎಂದಿದ್ದಾರೆ ಮನಿಷಾ ಕೊಯಿರಾಲಾ.

‘ಸರ್​, ನಾನು ಇದನ್ನು ಬೀಚ್​ಗೆ ಹೋದಾಗ ಅಥವಾ ಈಜಲು ಹೋದಾಗ ಮಾತ್ರ ಧರಿಸುತ್ತೇನೆ. ಒಂದು ವೇಳೆ ಈ ರೀತಿಯಲ್ಲಿ ನಾನು ಸಿನಿಮಾ ಅವಕಾಶ ಪಡೆಯಬೇಕು ಎಂಬುದಾದರೆ ಅದು ನನಗೆ ಬೇಡ. ನಾನು ಬಿಕಿನಿ ಧರಿಸುವುದಿಲ್ಲ. ನನ್ನ ಫೋಟೋ ತೆಗೆಯುವುದಾದರೆ ಪೂರ್ತಿ ಬಟ್ಟೆಯಲ್ಲೇ ತೆಗೆಯಿರಿ ಅಂತ ಅವರಿಗೆ ನೇರವಾಗಿ ಹೇಳಿದೆ’ ಎಂದು ಆ ಘಟನೆಯನ್ನು ಮನಿಷಾ ಕೊಯಿರಾಲಾ ಮೆಲುಕು ಹಾಕಿದ್ದಾರೆ.

ಇದನ್ನೂ ಓದಿ: ‘ನನ್ನ ಮದುವೆ ಆಗ್ತೀಯಾ’: ಈ ನಟಿಗೆ ಪ್ರಪೋಸ್​ ಮಾಡಿದ್ದರು ಸಲ್ಮಾನ್​ ಖಾನ್​

ಮನಿಷಾ ನೀಡಿದ ಉತ್ತರದಿಂದ ಆ ಫೋಟೋಗ್ರಾಫರ್​ಗೆ ಕೋಪ ಬಂದಿತ್ತು. ‘ಮಣ್ಣು ಹಸಿಯಾಗಲು ಒಪ್ಪದಿದ್ದರೆ ನಾನು ಮೂರ್ತಿ ಮಾಡಲು ಹೇಗೆ ಸಾಧ್ಯ’ ಎಂದು ಆತ ಸಿಟ್ಟುಮಾಡಿಕೊಂಡಿದ್ದ. ‘ಇದು ಅಂಥ ಜನರ ಮನಸ್ಥಿತಿ. ಎಲ್ಲರೂ ಹೀಗೆ ಇರುವುದಿಲ್ಲ. ನಾನು ದೊಡ್ಡ ಸೆಲೆಬ್ರಿಟಿ ಆದ ಬಳಿಕ ಅದೇ ವ್ಯಕ್ತಿ ನನ್ನ ಫೋಟೋಶೂಟ್​ ಮಾಡಿದ. ಅವರಿಗೆ ನಾನು ಅವಮಾನ ಮಾಡುತ್ತಿಲ್ಲ. ಆದರೆ ಅವರ ತಿಳಿವಳಿಕೆಯೇ ಅಷ್ಟು. ಆದ್ದರಿಂದ ಅವರು ಆ ರೀತಿ ವರ್ತಿಸಿದ್ದರು’ ಎಂದಿದ್ದಾರೆ ಮನಿಷಾ ಕೊಯಿರಾಲಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ