AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನಿಗೆ ನೋವಾಗದ ರೀತಿಯಲ್ಲಿ ಸಂಸಾರದ ಸಮಸ್ಯೆ ಪರಿಹರಿಸಿಕೊಂಡ ಆಮಿರ್​ ಖಾನ್​-ಕಿರಣ್​ ರಾವ್​

ಆಮಿರ್ ಖಾನ್​ ಮತ್ತು ಕಿರಣ್​ ರಾವ್​ ಅವರಿಗೆ ಆಜಾದ್​ ರಾವ್​ ಖಾನ್ ಎಂಬ ಮಗನಿದ್ದಾನೆ. ಆತನಿಗೆ ಈಗ 12 ವರ್ಷ ವಯಸ್ಸು. ಪುತ್ರನ ಮನಸ್ಸಿಗೆ ನೋವು ಆಗಬಾರದು ಎಂಬ ಕಾರಣದಿಂದ ಆಮಿರ್​ ಖಾನ್​ ಮತ್ತು ಕಿರಣ್​ ರಾವ್​ ಅವರು ತಮ್ಮ ವಿಚ್ಛೇದನ ವಿಚಾರವನ್ನು ರಂಪಾಟ ಮಾಡಿಲ್ಲ. ‘ಲಾಪತಾ ಲೇಡೀಸ್​’ ಸಿನಿಮಾದ ಪ್ರಚಾರದ ಸಂದರ್ಭದಲ್ಲಿ ಈ ಕುರಿತು ಮಾಜಿ ದಂಪತಿ ಮಾತನಾಡಿದ್ದಾರೆ.

ಮಗನಿಗೆ ನೋವಾಗದ ರೀತಿಯಲ್ಲಿ ಸಂಸಾರದ ಸಮಸ್ಯೆ ಪರಿಹರಿಸಿಕೊಂಡ ಆಮಿರ್​ ಖಾನ್​-ಕಿರಣ್​ ರಾವ್​
ಆಜಾದ್​ ರಾವ್​ ಖಾನ್​​, ಆಮಿರ್​ ಖಾನ್​, ಕಿರಣ್​ ರಾವ್​
ಮದನ್​ ಕುಮಾರ್​
|

Updated on: Feb 27, 2024 | 6:25 PM

Share

ನಟ ಆಮಿರ್​ ಖಾನ್​ (Aamir Khan) ಮತ್ತು ನಿರ್ದೇಶಕಿ ಕಿರಣ್​ ರಾವ್​ ಅವರು ವಿಚ್ಛೇದನ ಪಡೆದಾಗ ಅವರ ಅಭಿಮಾನಿಗಳಿಗೆ ಶಾಕ್​ ಆಗಿತ್ತು. ಯಾಕೆಂದರೆ, ಬಹಳ ಅನ್ಯೋನ್ಯವಾಗಿ ಸಂಸಾರ ನಡೆಸುತ್ತಿದ್ದ ಅವರು ಹೀಗೆ ಡಿವೋರ್ಸ್​ ಪಡೆಯುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಸಾಮಾನ್ಯವಾಗಿ ಡಿವೋರ್ಸ್​ ವಿಚಾರ ಬಂದಾಗ ಪತಿ-ಪತ್ನಿ ಸಾಕಷ್ಟು ಕಿತ್ತಾಟ ನಡೆಸುತ್ತಾರೆ. ಪರಸ್ಪರ ಮುಖ ನೋಡಿಕೊಳ್ಳಲಾಗದ ಸ್ಥಿತಿಗೆ ಅವರ ಜಗಳ ತಲುಪುತ್ತದೆ. ಆದರೆ ಕಿರಣ್​ ರಾವ್​ (Kiran Rao) ಮತ್ತು ಆಮಿರ್ ಖಾನ್​ ಅವರು ಆ ರೀತಿ ಕಿತ್ತಾಡಿಲ್ಲ. ಸಂಸಾರದ ಸಮಸ್ಯೆಯನ್ನು ಅವರು ತುಂಬ ಕೂಲ್​ ಆಗಿ ಬಗೆಹರಿಸಿಕೊಂಡಿದ್ದು ಪುತ್ರ ಆಜಾದ್​ ರಾವ್​ ಖಾನ್​ (Azaad Rao Khan) ಸಲುವಾಗಿ!

ದಂಪತಿ ಡಿವೋರ್ಸ್​ ಪಡೆದಾಗ ಅದರಿಂದ ಹೆಚ್ಚು ಸಮಸ್ಯೆ ಆಗುವುದು ಮಕ್ಕಳಿಗೆ. ಅಪ್ಪ-ಅಮ್ಮ ಬೇರಾಗಿದ್ದಕ್ಕೆ ಮಕ್ಕಳಿಗೆ ಏಕಾಏಕಿ ಅನಾಥ ಪ್ರಜ್ಞೆ ಕಾಡುತ್ತದೆ. ಇನ್ನೂ ಆ ವಿಚ್ಛೇದನದ ನಡುವೆ ಜಗಳ ನಡೆದರೆ ಮಕ್ಕಳ ಮನಸ್ಸಿನ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ. ಆ ರೀತಿ ಆಗಬಾರದು ಎಂದು ಆಮಿರ್ ಖಾನ್​ ಮತ್ತು ಕಿರಣ್​ ರಾವ್​ ಅವರು ತಮ್ಮ ನಡುವಿನ ಮನಸ್ತಾಪಗಳನ್ನು ಇಟ್ಟುಕೊಂಡು ರಂಪಾಟ ಮಾಡಿಲ್ಲ.

ಇದನ್ನೂ ಓದಿ: ‘ಗಂಡನಾಗಿ ನನ್ನಲ್ಲಿ ಏನು ಕೊರತೆ ಇತ್ತು?’: ಮಾಜಿ ಪತ್ನಿಯ ಪ್ರತಿಕ್ರಿಯೆ ಕೇಳಿದ ಆಮಿರ್​ ಖಾನ್​

ವಿಚ್ಛೇದನ ಪಡೆದ ಸಂದರ್ಭದಲ್ಲಿ ಆಮಿರ್​ ಖಾನ್​ ಮತ್ತು ಕಿರಣ್​ ರಾವ್​ ಅವರು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿರಲಿಲ್ಲ. ಅಚ್ಚರಿ ಏನೆಂದರೆ, ಈಗ ಇಬ್ಬರೂ ಒಟ್ಟೊಟ್ಟಿಗೆ ಮಾಧ್ಯಮಗಳು ಎದುರು ಕುಳಿತು ತಮ್ಮ ಡಿವೋರ್ಸ್​ ವಿಚಾರವನ್ನು ಚರ್ಚೆ ಮಾಡುತ್ತಿದ್ದಾರೆ. ಅದಕ್ಕೆ ಕಾರಣ ಆಗಿರುವುದು ‘ಲಾಪತಾ ಲೇಡೀಸ್​’ ಸಿನಿಮಾ. ಮಾರ್ಚ್​ 1ರಂದು ಬಿಡುಗಡೆ ಆಗಲಿರುವ ಈ ಸಿನಿಮಾಗೆ ಕಿರಣ್​ ರಾವ್​ ನಿರ್ದೇಶನ ಮಾಡಿದ್ದಾರೆ. ಆಮಿರ್​ ಖಾನ್​ ಬಂಡವಾಳ ಹೂಡಿದ್ದಾರೆ. ಸಿನಿಮಾದ ಪ್ರಚಾರದಲ್ಲಿ ಇಬ್ಬರೂ ಒಟ್ಟಿಗೆ ಭಾಗಿ ಆಗುತ್ತಿದ್ದಾರೆ.

‘ನಮ್ಮಿಬ್ಬರ ವಿಚ್ಛೇದನದಿಂದ ಮಗನಿಗೆ ಯಾವುದೇ ರೀತಿಯಲ್ಲೂ ನೋವಾಗಬಾರದು ಎಂದು ನಾವು ನಿರ್ಧರಿಸಿದ್ದೆವು. ನಮ್ಮ ಡಿವೋರ್ಸ್​ ಆಗಿದ್ದು ಕೊವಿಡ್​ ಸಂದರ್ಭದಲ್ಲಿ. ಅದರಿಂದ ನಮಗೆ ಸಹಾಯ ಆಯಿತು. ಯಾಕೆಂದರೆ, ತುಂಬ ದಿನಗಳ ಕಾಲ ನಾವು ಒಂದೇ ಮನೆಯಲ್ಲಿ ಇದ್ದೆವು. ಹಾಗಾಗಿ ವಿಚ್ಛೇದನದ ಬಳಿಕವೂ ಹೆಚ್ಚೇನೂ ಬದಲಾವಣೆ ಎನಿಸಲಿಲ್ಲ. ಈಗಲೂ ಒಟ್ಟಿಗೆ ಕೆಲಸ ಮಾಡಲು ನಾನು ಬಯಸುತ್ತೇನೆ’ ಎಂದು ಕಿರಣ್​ ರಾವ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ