AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​ ಸೋಲಿನ ನೋವಿನ ನಡುವೆಯೂ ಟೀಮ್​ ಇಂಡಿಯಾದ ಬೆನ್ನು ತಟ್ಟಿದ ಸೆಲೆಬ್ರಿಟಿಗಳು

‘ನಿಮ್ಮನ್ನು ನಾವು ಪ್ರೀತಿಸುತ್ತೇವೆ. ನಿಮ್ಮ ಜೊತೆ ನಾವು ಬೆಂಬಲವಾಗಿ ನಿಂತುಕೊಳ್ಳುತ್ತೇವೆ. ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ’ ಎಂದು ರಿತೇಶ್​​ ದೇಶಮುಖ್​ ಬರೆದುಕೊಂಡಿದ್ದಾರೆ. ‘ಕಳೆದ ವಾರಗಳಲ್ಲಿ ನೀವು ನಮಗೆ ಸ್ಮರಣೀಯ ಕ್ಷಣಗಳನ್ನು ನೀಡಿದ್ದೀರಿ. ಅದಕ್ಕಾಗಿ ಧನ್ಯವಾದಗಳು’ ಎಂದು ದಿಯಾ ಮಿರ್ಜಾ ಅವರು ಟೀಮ್​ ಇಂಡಿಯಾದ ಬೆನ್ನು ತಟ್ಟಿದ್ದಾರೆ.

ವಿಶ್ವಕಪ್​ ಸೋಲಿನ ನೋವಿನ ನಡುವೆಯೂ ಟೀಮ್​ ಇಂಡಿಯಾದ ಬೆನ್ನು ತಟ್ಟಿದ ಸೆಲೆಬ್ರಿಟಿಗಳು
ಟೀಮ್​ ಇಂಡಿಯಾ
ಮದನ್​ ಕುಮಾರ್​
|

Updated on: Nov 20, 2023 | 7:33 AM

Share

‘ವಿಶ್ವಕಪ್​ 2023’ ಫೈನಲ್​ನಲ್ಲಿ (ICC World Cup 2023 Final) ಭಾರತ ಗೆದ್ದೇ ಗೆಲ್ಲುತ್ತದೆ ಎಲ್ಲರೂ ಭಾವಿಸಿದ್ದರು. ಆದರೆ ಆ ಊಹೆ ನಿಜವಾಗಲಿಲ್ಲ. ಆಸ್ಟ್ರೇಲಿಯಾ ತಂಡವನ್ನು ಮಣಿಸಲು ಭಾರತಕ್ಕೆ ಸಾಧ್ಯವಾಗಲೇ ಇಲ್ಲ. ಅದರಿಂದ ಕೋಟ್ಯಂತರ ಹೃದಯಗಳಿಗೆ ನೋವಾಗಿದೆ. ಬಾಲಿವುಡ್​ನ (Bollywood) ಸೆಲೆಬ್ರಿಟಿಗಳಿಗೂ ನಿರಾಸೆ ಆಗಿದೆ. ಹಾಗಂತ ಟೀಮ್​ ಇಂಡಿಯಾವನ್ನು (Team India) ಅವರು ನಿಂದಿಸುತ್ತಿಲ್ಲ. ಇಷ್ಟು ದಿನ ಉತ್ತಮ ಪರ್ಫಾರ್ಮೆನ್ಸ್​ ನೀಡಿದ ನಮ್ಮ ಆಟಗಾರರನ್ನು ಎಲ್ಲರೂ ಅಭಿನಂದಿಸುತ್ತಿದ್ದಾರೆ. ಮುಂದೆ ಇನ್ನೂ ಚೆನ್ನಾಗಿ ಆಡಲಿ ಎಂದು ಹುರಿದುಂಬಿಸಲಾಗುತ್ತಿದೆ. ಅಜಯ್​ ದೇವಗನ್​, ಅಭಿಷೇಕ್​ ಬಚ್ಚನ್​, ದಿಯಾ ಮಿರ್ಜಾ, ರಿತೇಶ್​ ದೇಶಮುಖ್​ ಸೇರಿದಂತೆ ಅನೇಕರು ಟೀಮ್ ಇಂಡಿಯಾ ಆಟಗಾರರಿಗೆ ಬೆಂಬಲ ಸೂಚಿಸಿದ್ದಾರೆ.

‘ಇದು ಒಂದು ಕೆಟ್ಟ ದಿನ ಅಷ್ಟೇ. 2023ರ ವಿಶ್ವಕಪ್​ನಲ್ಲಿ ಕಠಿಣ ಸ್ಪರ್ಧಿಯಾಗಿ ನೀವು ಎಂದೆಂದಿಗೂ ನೆನಪಿನಲ್ಲಿ ಉಳಿಯುತ್ತೀರಿ. ಚೆನ್ನಾಗಿ ಆಡಿದ್ದೀರಿ’ ಎಂದು ಆಯುಷ್ಮಾನ್​ ಖುರಾನಾ ಪೋಸ್ಟ್​ ಮಾಡಿದ್ದಾರೆ. ‘ಇಡೀ ಟೂರ್ನಿಯಲ್ಲಿ ನೀವು ಆಟ ಆಡಿದ ರೀತಿಯೇ ಗೆಲುವಿಗೆ ಸಮಾನ. ಹೆಮ್ಮೆಯಿಂದ ಇರಿ’ ಎಂದು ಅಜಯ್​ ದೇವಗನ್​ ಅವರು ಟ್ವೀಟ್​ ಮಾಡಿದ್ದಾರೆ.

‘ಸೋತು ಗೆಲ್ಲುವವರನ್ನು ಬಾಜಿಗರ್​ ಎನ್ನುತ್ತೇವೆ. ಇಂಡಿಯಾ ಚೆನ್ನಾಗಿ ಆಡಿದೆ. ವರ್ಲ್ಡ್​ ಕಪ್​ ಗೆದ್ದ ಆಸ್ಟ್ರೇಲಿಯಾಗೆ ಅಭಿನಂದನೆಗಳು’ ಎಂದು ಬರೆದುಕೊಂಡಿದ್ದಾರೆ ಕಾಜೋಲ್​.

‘ಮನಸ್ಸಿಗೆ ನೋವಾಗಿದೆ. ಇಡೀ ಸರಣಿಯಲ್ಲಿ ನಮ್ಮ ತಂಡದವರು ತುಂಬಾ ಚೆನ್ನಾಗಿ ಆಡಿದ್ದಾರೆ. ನಾವು ಎಂದೆಂದಿಗೂ ನಮ್ಮ ಆಟಗಾರರ ದೊಡ್ಡ ಅಭಿಮಾನಿಗಳಾಗಿರುತ್ತೇವೆ. ಮುಂದಿನ ವರ್ಲ್ಡ್​ ಕಪ್​​ ನಮ್ಮದಾಗಲಿದೆ’ ಎಂದು ವಿವೇಕ್​ ಒಬೆಯಾರ್​ ಬರೆದುಕೊಂಡಿದ್ದಾರೆ.

‘ಕಠಿಣ ಪರಿಶ್ರಮದ ನಡುವೆ ಬಂದ ಸೋಲು ಇದು. ಎಲ್ಲ ಪಂದ್ಯಗಳಲ್ಲೂ ನಮ್ಮವರ ಪ್ರಯತ್ನ ಚೆನ್ನಾಗಿತ್ತು. ಹೆಮ್ಮೆಯಿಂದಿರಿ. ಈ ಜರ್ನಿಗೆ ಧನ್ಯವಾದಗಳು’ ಎಂದು ಅಭಿಷೇಕ್​ ಬಚ್ಚನ್​ ಅವರು ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಗೆದ್ದ ಆಸ್ಟ್ರೇಲಿಯಾಕ್ಕೆ ಸಿಕ್ಕಿದ್ದೆಷ್ಟು? ಸೋತ ಭಾರತ ಗೆದ್ದಿದ್ದು ಎಷ್ಟು ಕೋಟಿ? ಇಲ್ಲಿದೆ ಬಹುಮಾನದ ವಿವರ

‘ನಿಮ್ಮನ್ನು ನಾವು ಪ್ರೀತಿಸುತ್ತೇವೆ. ನಿಮ್ಮ ಜೊತೆ ನಾವು ಬೆಂಬಲವಾಗಿ ನಿಂತುಕೊಳ್ಳುತ್ತೇವೆ. ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ’ ಎಂದು ರಿತೇಶ್​​ ದೇಶಮುಖ್​ ಅವರು ಬರೆದುಕೊಂಡಿದ್ದಾರೆ.

‘ಕಳೆದ ವಾರಗಳಲ್ಲಿ ನೀವು ನಮಗೆ ಸ್ಮರಣೀಯ ಕ್ಷಣಗಳನ್ನು ನೀಡಿದ್ದೀರಿ. ಅದಕ್ಕಾಗಿ ಧನ್ಯವಾದಗಳು. ಚೆನ್ನಾಗಿ ಆಡಿದ್ದೀರಿ. ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ’ ಎಂದು ಟೀಮ್​ ಇಂಡಿಯಾದ ಬೆನ್ನು ತಟ್ಟಿದ್ದಾರೆ ದಿಯಾ ಮಿರ್ಜಾ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ