AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​ ಸೋಲಿನ ನೋವಿನ ನಡುವೆಯೂ ಟೀಮ್​ ಇಂಡಿಯಾದ ಬೆನ್ನು ತಟ್ಟಿದ ಸೆಲೆಬ್ರಿಟಿಗಳು

‘ನಿಮ್ಮನ್ನು ನಾವು ಪ್ರೀತಿಸುತ್ತೇವೆ. ನಿಮ್ಮ ಜೊತೆ ನಾವು ಬೆಂಬಲವಾಗಿ ನಿಂತುಕೊಳ್ಳುತ್ತೇವೆ. ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ’ ಎಂದು ರಿತೇಶ್​​ ದೇಶಮುಖ್​ ಬರೆದುಕೊಂಡಿದ್ದಾರೆ. ‘ಕಳೆದ ವಾರಗಳಲ್ಲಿ ನೀವು ನಮಗೆ ಸ್ಮರಣೀಯ ಕ್ಷಣಗಳನ್ನು ನೀಡಿದ್ದೀರಿ. ಅದಕ್ಕಾಗಿ ಧನ್ಯವಾದಗಳು’ ಎಂದು ದಿಯಾ ಮಿರ್ಜಾ ಅವರು ಟೀಮ್​ ಇಂಡಿಯಾದ ಬೆನ್ನು ತಟ್ಟಿದ್ದಾರೆ.

ವಿಶ್ವಕಪ್​ ಸೋಲಿನ ನೋವಿನ ನಡುವೆಯೂ ಟೀಮ್​ ಇಂಡಿಯಾದ ಬೆನ್ನು ತಟ್ಟಿದ ಸೆಲೆಬ್ರಿಟಿಗಳು
ಟೀಮ್​ ಇಂಡಿಯಾ
ಮದನ್​ ಕುಮಾರ್​
|

Updated on: Nov 20, 2023 | 7:33 AM

Share

‘ವಿಶ್ವಕಪ್​ 2023’ ಫೈನಲ್​ನಲ್ಲಿ (ICC World Cup 2023 Final) ಭಾರತ ಗೆದ್ದೇ ಗೆಲ್ಲುತ್ತದೆ ಎಲ್ಲರೂ ಭಾವಿಸಿದ್ದರು. ಆದರೆ ಆ ಊಹೆ ನಿಜವಾಗಲಿಲ್ಲ. ಆಸ್ಟ್ರೇಲಿಯಾ ತಂಡವನ್ನು ಮಣಿಸಲು ಭಾರತಕ್ಕೆ ಸಾಧ್ಯವಾಗಲೇ ಇಲ್ಲ. ಅದರಿಂದ ಕೋಟ್ಯಂತರ ಹೃದಯಗಳಿಗೆ ನೋವಾಗಿದೆ. ಬಾಲಿವುಡ್​ನ (Bollywood) ಸೆಲೆಬ್ರಿಟಿಗಳಿಗೂ ನಿರಾಸೆ ಆಗಿದೆ. ಹಾಗಂತ ಟೀಮ್​ ಇಂಡಿಯಾವನ್ನು (Team India) ಅವರು ನಿಂದಿಸುತ್ತಿಲ್ಲ. ಇಷ್ಟು ದಿನ ಉತ್ತಮ ಪರ್ಫಾರ್ಮೆನ್ಸ್​ ನೀಡಿದ ನಮ್ಮ ಆಟಗಾರರನ್ನು ಎಲ್ಲರೂ ಅಭಿನಂದಿಸುತ್ತಿದ್ದಾರೆ. ಮುಂದೆ ಇನ್ನೂ ಚೆನ್ನಾಗಿ ಆಡಲಿ ಎಂದು ಹುರಿದುಂಬಿಸಲಾಗುತ್ತಿದೆ. ಅಜಯ್​ ದೇವಗನ್​, ಅಭಿಷೇಕ್​ ಬಚ್ಚನ್​, ದಿಯಾ ಮಿರ್ಜಾ, ರಿತೇಶ್​ ದೇಶಮುಖ್​ ಸೇರಿದಂತೆ ಅನೇಕರು ಟೀಮ್ ಇಂಡಿಯಾ ಆಟಗಾರರಿಗೆ ಬೆಂಬಲ ಸೂಚಿಸಿದ್ದಾರೆ.

‘ಇದು ಒಂದು ಕೆಟ್ಟ ದಿನ ಅಷ್ಟೇ. 2023ರ ವಿಶ್ವಕಪ್​ನಲ್ಲಿ ಕಠಿಣ ಸ್ಪರ್ಧಿಯಾಗಿ ನೀವು ಎಂದೆಂದಿಗೂ ನೆನಪಿನಲ್ಲಿ ಉಳಿಯುತ್ತೀರಿ. ಚೆನ್ನಾಗಿ ಆಡಿದ್ದೀರಿ’ ಎಂದು ಆಯುಷ್ಮಾನ್​ ಖುರಾನಾ ಪೋಸ್ಟ್​ ಮಾಡಿದ್ದಾರೆ. ‘ಇಡೀ ಟೂರ್ನಿಯಲ್ಲಿ ನೀವು ಆಟ ಆಡಿದ ರೀತಿಯೇ ಗೆಲುವಿಗೆ ಸಮಾನ. ಹೆಮ್ಮೆಯಿಂದ ಇರಿ’ ಎಂದು ಅಜಯ್​ ದೇವಗನ್​ ಅವರು ಟ್ವೀಟ್​ ಮಾಡಿದ್ದಾರೆ.

‘ಸೋತು ಗೆಲ್ಲುವವರನ್ನು ಬಾಜಿಗರ್​ ಎನ್ನುತ್ತೇವೆ. ಇಂಡಿಯಾ ಚೆನ್ನಾಗಿ ಆಡಿದೆ. ವರ್ಲ್ಡ್​ ಕಪ್​ ಗೆದ್ದ ಆಸ್ಟ್ರೇಲಿಯಾಗೆ ಅಭಿನಂದನೆಗಳು’ ಎಂದು ಬರೆದುಕೊಂಡಿದ್ದಾರೆ ಕಾಜೋಲ್​.

‘ಮನಸ್ಸಿಗೆ ನೋವಾಗಿದೆ. ಇಡೀ ಸರಣಿಯಲ್ಲಿ ನಮ್ಮ ತಂಡದವರು ತುಂಬಾ ಚೆನ್ನಾಗಿ ಆಡಿದ್ದಾರೆ. ನಾವು ಎಂದೆಂದಿಗೂ ನಮ್ಮ ಆಟಗಾರರ ದೊಡ್ಡ ಅಭಿಮಾನಿಗಳಾಗಿರುತ್ತೇವೆ. ಮುಂದಿನ ವರ್ಲ್ಡ್​ ಕಪ್​​ ನಮ್ಮದಾಗಲಿದೆ’ ಎಂದು ವಿವೇಕ್​ ಒಬೆಯಾರ್​ ಬರೆದುಕೊಂಡಿದ್ದಾರೆ.

‘ಕಠಿಣ ಪರಿಶ್ರಮದ ನಡುವೆ ಬಂದ ಸೋಲು ಇದು. ಎಲ್ಲ ಪಂದ್ಯಗಳಲ್ಲೂ ನಮ್ಮವರ ಪ್ರಯತ್ನ ಚೆನ್ನಾಗಿತ್ತು. ಹೆಮ್ಮೆಯಿಂದಿರಿ. ಈ ಜರ್ನಿಗೆ ಧನ್ಯವಾದಗಳು’ ಎಂದು ಅಭಿಷೇಕ್​ ಬಚ್ಚನ್​ ಅವರು ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಗೆದ್ದ ಆಸ್ಟ್ರೇಲಿಯಾಕ್ಕೆ ಸಿಕ್ಕಿದ್ದೆಷ್ಟು? ಸೋತ ಭಾರತ ಗೆದ್ದಿದ್ದು ಎಷ್ಟು ಕೋಟಿ? ಇಲ್ಲಿದೆ ಬಹುಮಾನದ ವಿವರ

‘ನಿಮ್ಮನ್ನು ನಾವು ಪ್ರೀತಿಸುತ್ತೇವೆ. ನಿಮ್ಮ ಜೊತೆ ನಾವು ಬೆಂಬಲವಾಗಿ ನಿಂತುಕೊಳ್ಳುತ್ತೇವೆ. ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ’ ಎಂದು ರಿತೇಶ್​​ ದೇಶಮುಖ್​ ಅವರು ಬರೆದುಕೊಂಡಿದ್ದಾರೆ.

‘ಕಳೆದ ವಾರಗಳಲ್ಲಿ ನೀವು ನಮಗೆ ಸ್ಮರಣೀಯ ಕ್ಷಣಗಳನ್ನು ನೀಡಿದ್ದೀರಿ. ಅದಕ್ಕಾಗಿ ಧನ್ಯವಾದಗಳು. ಚೆನ್ನಾಗಿ ಆಡಿದ್ದೀರಿ. ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ’ ಎಂದು ಟೀಮ್​ ಇಂಡಿಯಾದ ಬೆನ್ನು ತಟ್ಟಿದ್ದಾರೆ ದಿಯಾ ಮಿರ್ಜಾ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​