AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರ್ಜುನ್ ರೆಡ್ಡಿ’ ಸಿನಿಮಾ ನೋಡಿ ಸಂದೀಪ್​ಗೆ ಮೆಸೇಜ್ ಮಾಡಿದ್ದ ರಣಬೀರ್; ಇದನ್ನು ಅವರು ನೋಡಲೇ ಇಲ್ಲ

‘ಒಂದೊಮ್ಮೆ ರಣಬೀರ್ ಕಪೂರ್ ಕಳುಹಿಸಿದ್ದ ಮೆಸೇಜ್​ನ ಸಂದೀಪ್ ನೋಡಿದ್ದರೆ, ಆ ಬಳಿಕ ಅವರು ಮಾತನಾಡಿದ್ದರೆ ‘ಕಬೀರ್ ಸಿಂಗ್’ ಸಿನಿಮಾದಲ್ಲಿ ಶಾಹಿದ್ ಕಪೂರ್ ಬದಲಿಗೆ ರಣಬೀರ್​ಗೆ ಆಫರ್ ನೀಡುತ್ತಿದ್ದಿರೇ’ ಎಂದು ಪ್ರಶ್ನೆ ಮಾಡಲಾಯಿತು. ಇದಕ್ಕೆ ಇಲ್ಲ ಎನ್ನುವ ಉತ್ತರ ಸಂದೀಪ್ ಕಡೆಯಿಂದ ಬಂದಿದೆ. ‘ರಣಬೀರ್ ಕಪೂರ್​ಗೆ ರಿಮೇಕ್ ಸಿನಿಮಾಗಳಲ್ಲಿ ನಟಿಸೋಕೆ ಇಷ್ಟವಿರಲಿಲ್ಲ. ಅದು ನನಗೆ ಗೊತ್ತಿತ್ತು’ ಎಂದಿದ್ದಾರೆ.

‘ಅರ್ಜುನ್ ರೆಡ್ಡಿ’ ಸಿನಿಮಾ ನೋಡಿ ಸಂದೀಪ್​ಗೆ ಮೆಸೇಜ್ ಮಾಡಿದ್ದ ರಣಬೀರ್; ಇದನ್ನು ಅವರು ನೋಡಲೇ ಇಲ್ಲ
ಸಂದೀಪ್ ರೆಡ್ಡಿ ವಂಗ, ರಣಬೀರ್​ ಕಪೂರ್​
 ಶ್ರೀಲಕ್ಷ್ಮೀ ಎಚ್
| Updated By: ಮದನ್​ ಕುಮಾರ್​|

Updated on: Feb 04, 2024 | 3:26 PM

Share

ಬಾಲಿವುಡ್​ ನಟ ರಣಬೀರ್ ಕಪೂರ್ (Ranbir Kapoor) ಹಾಗೂ ತೆಲುಗು ನಿರ್ದೇಶಕ ಸಂದೀಪ್ ರೆಡ್ಡಿ ವಂಗ ಮೊದಲ ಬಾರಿಗೆ ಒಂದಾಗಿದ್ದು ಅನಿಮಲ್’ (Animal) ಸಿನಿಮಾಗಾಗಿ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಗಳಿಕೆ ಮಾಡಿದ್ದು ಬರೋಬ್ಬರಿ 900 ಕೋಟಿ ರೂಪಾಯಿ. ಈ ಸಿನಿಮಾ ಒಂದು ವರ್ಗದ ಜನರಿಗೆ ಇಷ್ಟ ಆಗಿಲ್ಲ. ಇನ್ನೂ ಕೆಲವರು ಚಿತ್ರವನ್ನು ಟೀಕೆ ಮಾಡಿದ್ದಾರೆ. ಸಿನಿಮಾದಲ್ಲಿ ಸ್ತ್ರೀದ್ವೇಷ ಇದೆ, ಹೆಣ್ಣುಮಕ್ಕಳನ್ನು ಕೀಳಾಗಿ ನೋಡಲಾಗಿದೆ ಎಂದು ಅನೇಕರು ಟೀಕೆ ಮಾಡಿದ್ದರು. ಆದರೆ, ರಣಬೀರ್ (Ranbir Kapoor) ಮಾತ್ರ ಸಂದೀಪ್ ಕೆಲಸವನ್ನು ಭರ್ಜರಿಯಾಗಿ ಮೆಚ್ಚಿಕೊಂಡಿದ್ದಾರೆ. ‘ಅರ್ಜುನ್ ರೆಡ್ಡಿ’ ಸಿನಿಮಾ ನೋಡಿದಾಗಲೇ ಸಂದೀಪ್ ಕೆಲಸ ರಣಬೀರ್​ಗೆ ಇಷ್ಟ ಆಗಿತ್ತು. ಈ ಬಗ್ಗೆ ಅವರು ಮೆಸೇಜ್ ಮಾಡಿ ಹೇಳಿದ್ದರು. ಆದರೆ, ಈ ಮೆಸೇಜ್​ನ ಸಂದೀಪ್ ನೋಡಿರಲೇ ಇಲ್ಲ. ಈ ಬಗ್ಗೆ ಸಂದರ್ಶನ ಒಂದರಲ್ಲಿ ಹೇಳಿಕೊಂಡಿದ್ದಾರೆ.

‘ದೈನಿಕ್ ಭಾಸ್ಕರ್​’ಗೆ ನೀಡಿದ ಸಂದರ್ಶನದಲ್ಲಿ ಸಂದೀಪ್ ರೆಡ್ಡಿ ವಂಗ ಅವರು ಈ ವಿಚಾರ ಹಂಚಿಕೊಂಡಿದ್ದಾರೆ. ಅವರು ಹೇಗೆ ರಣಬೀರ್ ಕಪೂರ್ ಕಳುಹಿಸಿದ ಮೆಸೇಜ್​ನ ಮಿಸ್ ಮಾಡಿಕೊಂಡರು ಎನ್ನುವ ಬಗ್ಗೆ ಮಾತನಾಡಿದ್ದಾರೆ. ಈಗ ಎಲ್ಲರೂ ವಾಟ್ಸಾಪ್​ ಬಳಕೆ ಮಾಡುತ್ತಾರೆ. ಇದರಿಂದ ಟೆಕ್ಸ್ಟ್​ ಮೆಸೇಜ್ ನೋಡುವವರ ಸಂಖ್ಯೆ ಕಡಿಮೆ. ಸಂದೀಪ್​ಗೆ ಆದ ಸಮಸ್ಯೆ ಕೂಡ ಇದೇ. ‘ರಣಬೀರ್ ಕಪೂರ್ ಅವರು ನನಗೆ ಮೆಸೇಜ್ ಮಾಡಿದ್ದರು. ವಾಟ್ಸಾಪ್ ಬಂದ ಬಳಿಕ ಮೆಸೇಜ್ ಬಾಕ್ಸ್ ನೋಡುವ ಅಭ್ಯಾಸ ತಪ್ಪೇ ಹೋಗಿತ್ತು. ರಣಬೀರ್ ಕಪೂರ್ ಭೇಟಿ ಆದಾಗ ಈ ವಿಚಾರ ಹೇಳಿಕೊಂಡಿದ್ದರು. ರಣಬೀರ್ ರೀತಿ ನಾನು ಅನಿಲ್ ಕಪೂರ್ ಅವರ ಮೆಸೇಜ್​ನ ಕೂಡ ಮಿಸ್ ಮಾಡಿಕೊಂಡಿದ್ದೆ’ ಎಂದು ಸಂದೀಪ್ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ‘ಹೋಗಿ ಆಮಿರ್​ನ ಪ್ರಶ್ನೆ ಮಾಡಲಿ’; ತಮ್ಮ ಸಿನಿಮಾ ಟೀಕಿಸಿ ಕಿರಣ್ ರಾವ್​​ಗೆ ‘ಅನಿಮಲ್’ ನಿರ್ದೇಶಕನ ಉತ್ತರ

‘ಒಂದೊಮ್ಮೆ ರಣಬೀರ್ ಕಪೂರ್ ಕಳುಹಿಸಿದ್ದ ಮೆಸೇಜ್​ನ ಸಂದೀಪ್ ನೋಡಿದ್ದರೆ, ಆ ಬಳಿಕ ಅವರು ಮಾತನಾಡಿದ್ದರೆ ‘ಕಬೀರ್ ಸಿಂಗ್’ ಸಿನಿಮಾದಲ್ಲಿ ಶಾಹಿದ್ ಕಪೂರ್ ಬದಲಿಗೆ ರಣಬೀರ್​ಗೆ ಆಫರ್ ನೀಡುತ್ತಿದ್ದಿರೇ’ ಎಂದು ಪ್ರಶ್ನೆ ಮಾಡಲಾಯಿತು. ಇದಕ್ಕೆ ಇಲ್ಲ ಎನ್ನುವ ಉತ್ತರ ಸಂದೀಪ್ ಕಡೆಯಿಂದ ಬಂದಿದೆ. ‘ರಣಬೀರ್ ಕಪೂರ್​ಗೆ ರಿಮೇಕ್ ಸಿನಿಮಾಗಳಲ್ಲಿ ನಟಿಸೋಕೆ ಇಷ್ಟವಿರಲಿಲ್ಲ. ಅದು ನನಗೆ ಗೊತ್ತಿತ್ತು’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಅನಿಮಲ್​’ ಸಿನಿಮಾದ ನಟಿ ತೃಪ್ತಿ ದಿಮ್ರಿ ಬಾಯ್​ಫ್ರೆಂಡ್​ ಫೋಟೋ ವೈರಲ್​

ರಣಬೀರ್ ಕಪೂರ್ ಅವರ ‘ಅನಿಮಲ್’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್, ಬಾಬಿ ಡಿಯೋಲ್ ಮೊದಲಾದವರು ನಟಿಸಿದ್ದಾರೆ. ಎಲ್ಲರ ನಟನೆಯನ್ನು ಮೆಚ್ಚಿಕೊಳ್ಳಲಾಗಿದೆ. ಆದರೆ, ಒಂದು ಕೆಟ್ಟ ಚಿತ್ರಕ್ಕೆ ಕಲಾವಿದರನ್ನು ಬಳಕೆ ಮಾಡಿಕೊಂಡಂತೆ ಆಗಿದೆ ಎನ್ನುವ ಟೀಕೆಯೂ ಕೇಳಿಬಂದಿದೆ. ಒಂದು ವರ್ಗದ ಜನರು ಚಿತ್ರವನ್ನು ಹೊಗಳುತ್ತಿದ್ದಾರೆ. ಈ ಸಿನಿಮಾ ಯಶಸ್ಸಿನ ಬಳಿಕ ‘ಅನಿಮಲ್ ಪಾರ್ಕ್’ ಸಿನಿಮಾ ಮಾಡಲು ಮುಂದಾಗಿದ್ದಾರೆ ಸಂದೀಪ್ ರೆಡ್ಡಿ ವಂಗ. ಈ ಚಿತ್ರದಲ್ಲಿ ಹಲವು ಸ್ಟಾರ್​ಗಳು ಕೆಲಸ ಮಾಡೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ