AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಕೆಲ್ ಜಾಕ್ಸನ್ ಭಾರತಕ್ಕೆ ಬಂದಾಗ ಷರತ್ತು ಹಾಕಿದ್ದ ‘ಪ್ರೀತ್ಸೆ’ ನಟಿ ಸೊನಾಲಿ ಬೇಂದ್ರೆ

ಮೈಕಲ್ ಜಾಕ್ಸನ್ ಅವರನ್ನು ಭೇಟಿಯಾಗುವ ಅವಕಾಶ ಸಿಕ್ಕಾಗ ಸೊನಾಲಿ ಬೇಂದ್ರೆ ಅವರು ಸುಲಭವಾಗಿ ಒಪ್ಪಿಕೊಂಡಿರಲಿಲ್ಲ. ಆಯೋಜಕರಿಗೆ ಅವರು ಒಂದು ಕಂಡಿಷನ್ ಹಾಕಿದ್ದರು. ಆ ಘಟನೆಯನ್ನು ಈಗ ಸೊನಾಲಿ ಬೇಂದ್ರೆ ಅವರು ಮೆಲುಕು ಹಾಕಿದ್ದಾರೆ. ಅಂದಹಾಗೆ, ಈ ಘಟನೆ ನಡೆದಿದ್ದು 1996ರಲ್ಲಿ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಮೈಕೆಲ್ ಜಾಕ್ಸನ್ ಭಾರತಕ್ಕೆ ಬಂದಾಗ ಷರತ್ತು ಹಾಕಿದ್ದ ‘ಪ್ರೀತ್ಸೆ’ ನಟಿ ಸೊನಾಲಿ ಬೇಂದ್ರೆ
Michael Jackson, Sonali Bendre
ಮದನ್​ ಕುಮಾರ್​
|

Updated on: Jun 08, 2025 | 10:48 AM

Share

ಪಾಪ್ ಲೋಕದಲ್ಲಿ ಮೈಕಲ್ ಜಾಕ್ಸನ್ (Michael Jackson) ಹುಟ್ಟುಹಾಕಿದ್ದ ಕ್ರೇಜ್ ಅಷ್ಟಿಷ್ಟಲ್ಲ. ಅವರ ಹಾಡು ಮತ್ತು ಡ್ಯಾನ್ಸ್ ವಿಶ್ವಾದ್ಯಂತ ಫೇಮಸ್ ಆಗಿತ್ತು. ಮೈಕಲ್ ಜಾಕ್ಸನ್ ಅವರಿಗೆ ಎಲ್ಲ ದೇಶಗಳಲ್ಲೂ ಅಭಿಮಾನಿಗಳು ಇದ್ದಾರೆ. ಅವರನ್ನು ಒಮ್ಮೆಯಾದರೂ ನೇರವಾಗಿ ನೋಡಬೇಕು ಎಂಬ ಆಸೆ ಎಲ್ಲರಿಗೂ ಇರುತ್ತಿತ್ತು. ಇನ್ನು, ಅವರನ್ನು ಭೇಟಿಯಾಗುವ ಅವಕಾಶ ಸಿಕ್ಕರೆ.. ಯಾರಾದ್ರೂ ಕಣ್ಮುಚ್ಚಿಕೊಂಡು ಒಪ್ಪಿಕೊಳ್ಳಲೇಬೇಕು. ಆದರೆ ನಟಿ ಸೊನಾಲಿ ಬೇಂದ್ರೆ ಅವರು ಸ್ವಲ್ಪ ಡಿಫರೆಂಟ್. ಮೈಕಲ್ ಜಾಕ್ಸನ್ ಅವರನ್ನು ಭೇಟಿಯಾಗುವ ಅವಕಾಶ ಸಿಕ್ಕರೂ ಕೂಡ ಸೊನಾಲಿ ಬೇಂದ್ರೆ (Sonali Bendre) ಅವರು ಒಂದು ಕಂಡಿಷನ್ ಹಾಕಿದ್ದರು!

ಅದು 1996ರ ಸಮಯ. ಮೈಕಲ್ ಜಾಕ್ಸನ್ ಅವರು ‘ಹಿಸ್ಟರಿ ವರ್ಲ್ಡ್ ಟೂರ್’ ಮಾಡುತ್ತಿದ್ದರು. ಹಲವು ದೇಶಗಳಿಗೆ ತೆರಳಿ ಸಂಗೀತ ಕಾರ್ಯಕ್ರಮ ನೀಡುತ್ತಿದ್ದರು. ಒಟ್ಟು 35 ದೇಶಗಳಿಗೆ ಭೇಟಿ ನೀಡಿ, 57 ನಗರಗಳಲ್ಲಿ ಅವರು ಲೈವ್ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಭಾರತಕ್ಕೆ ಬಂದಾಗ ಅವರನ್ನು ಸ್ವಾಗತಿಸಿದ್ದೇ ನಟಿ ಸೊನಾಲಿ ಬೇಂದ್ರೆ. ಆದರೆ ಒಂದು ಷರತ್ತಿನ ಮೇರೆಗೆ.

ಮೈಕಲ್ ಜಾಕ್ಸನ್ ಅವರು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಅವರನ್ನು ಸ್ವಾಗತಿಸಲು ರಾಜ್ ಠಾಕ್ರೆ ಮತ್ತು ಸೊನಾಲಿ ಬೇಂದ್ರ ತೆರಳಿದ್ದರು. ಆದರೆ ಈ ಕೆಲಸ ಮಾಡಲು ಸೊನಾಲಿ ಬೇಂದ್ರೆ ಅವರು ಅಷ್ಟು ಸುಲಭಕ್ಕೆ ಒಪ್ಪಿಕೊಂಡಿರಲಿಲ್ಲ. ಆಗ ಬಾಲಿವುಡ್​ನಲ್ಲಿ ಅವರು ಬಹುಬೇಡಿಕೆಯ ನಟಿ ಆಗಿದ್ದರು. ಆ ಘಟನೆಯನ್ನು ಅವರೀಗ ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ
Image
ಸಿನಿಮಾಗಳನ್ನು ಬಿಟ್ಟು ವಾಚ್‌ಮ್ಯಾನ್ ಆದ ನಟ; ಈ ಪರಿಸ್ಥಿತಿ ಯಾರಿಗೂ ಬರಬಾರದು
Image
ದಕ್ಷಿಣದ ನಿರ್ಮಾಪಕರ ನೋಡಿ ಕಲಿಯಿರಿ: ಸ್ಟಾರ್ ನಟ ಟಾಂಗ್
Image
ಬಾಲಿವುಡ್ ಹೀರೋಗಳ ಬಣ್ಣ ಬಯಲು ಮಾಡಿದ ಸೋನು ಸೂದ್
Image
‘ಬಾಲಿವುಡ್ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ’; ರಿಷಬ್ ಶೆಟ್ಟಿ

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಭದಲ್ಲಿ ಸೊನಾಲಿ ಬೇಂದ್ರೆ ಅವರು ಆ ಘಟನೆ ವಿವರಿಸಿದ್ದಾರೆ. ‘ಮೈಕಲ್ ಜಾಕ್ಸನ್ ಅವರನ್ನು ಸ್ವಾಗತಿಸಬೇಕು ಅಂತ ನನಗೆ ಹೇಳಿದರು. ಆದರೆ ನಾನು ಷರತ್ತು ಹಾಕಿದೆ. ಮೈಕಲ್ ಜಾಕ್ಸನ್ ಅವರ ಕಾರ್ಯಕ್ರಮದ ಹಲವು ಟಿಕೆಟ್​ಗಳನ್ನು ನೀಡದರೆ ಮಾತ್ರ ಸ್ವಾಗತಿಸಲು ಬರುತ್ತೇನೆ ಎಂದೆ. ನಮಗೆ ಸಾಕಷ್ಟು ಟಿಕೆಟ್ಸ್ ಸಿಕ್ಕವು. ನಾನು, ನನ್ನ ಸ್ನೇಹಿತೆಯರು, ನನ್ನ ಸಹೋದರಿ ಮತ್ತು ಆಕೆಯ ಫ್ರೆಂಡ್ಸ್ ಕೂಡ ಟಿಕೆಟ್ ಪಡೆದೆವು’ ಎಂದಿದ್ದಾರೆ ಸೊನಾಲಿ ಬೇಂದ್ರೆ.

ಇದನ್ನೂ ಓದಿ: ಮೈಕಲ್ ಜಾಕ್ಸನ್ ಸಾಯುವಾಗ ಇತ್ತು ಬರೋಬ್ಬರಿ 3,700 ಕೋಟಿ ರೂಪಾಯಿ ಸಾಲ

1994ರಲ್ಲಿ ಸೊನಾಲಿ ಬೇಂದ್ರೆ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಗಮನ ಸೆಳೆದರು. ಹಿಂದಿ ಮಾತ್ರವಲ್ಲದೇ ಬೇರೆ ಭಾಷೆಯ ಸಿನಿಮಾಗಳಲ್ಲಿ ಕೂಡ ಅವರು ನಟಿಸಿದರು. ಕನ್ನಡದ ‘ಪ್ರೀತ್ಸೆ’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಮತ್ತು ಉಪೇಂದ್ರ ಜೊತೆ ಸೊನಾಲಿ ಬೇಂದ್ರೆ ಅಭಿನಯಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು