AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ರೀತಿ ಮಾಡೋದು ತಪ್ಪು’; ದೀಪಿಕಾಗೆ ಟಾಂಗ್ ಕೊಟ್ಟರಾ ಆಮಿರ್ ಖಾನ್?

ದೀಪಿಕಾ ಪಡುಕೋಣೆ ಅವರು "ಕಲ್ಕಿ 2898 ಎಡಿ" ಸೀಕ್ವೆಲ್‌ನಿಂದ ಹೊರ ನಡೆದಿದ್ದಾರೆ. ಅವರ ಹೆಚ್ಚಿನ ಬೇಡಿಕೆಗಳಿಂದಾಗಿ ಉಂಟಾದ ವಿವಾದದ ನಡುವೆ, ಆಮಿರ್ ಖಾನ್ ಅವರ ಹೇಳಿಕೆ ಬಾಲಿವುಡ್‌ನಲ್ಲಿ ಚರ್ಚೆಗೆ ಕಾರಣವಾಗಿದೆ. ಆಮಿರ್ ಖಾನ್ ಅವರು ಸಿನಿಮಾ ವೆಚ್ಚಗಳನ್ನು ನಿಯಂತ್ರಿಸುವ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

‘ಆ ರೀತಿ ಮಾಡೋದು ತಪ್ಪು’; ದೀಪಿಕಾಗೆ ಟಾಂಗ್ ಕೊಟ್ಟರಾ ಆಮಿರ್ ಖಾನ್?
ಆಮಿರ್-ದೀಪಿಕಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Sep 20, 2025 | 10:50 AM

Share

ಬಾಲಿವುಡ್​ನಲ್ಲಿ ದೀಪಿಕಾ ಪಡುಕೋಣೆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ ಎಂಬುದು ಗೊತ್ತಿರುವ ವಿಚಾರ. ಅವರು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಮತ್ತು ಏಳು ಗಂಟೆ ಮಾತ್ರ ಸಿನಿಮಾದಲ್ಲಿ ಕೆಲಸ ಮಾಡುತ್ತೇನೆ ಎಂದು ಹೇಳುವ ಮೂಲಕ ಅವರು ‘ಕಲ್ಕಿ 2898 ಎಡಿ’ ಚಿತ್ರದ ಸೀಕ್ವೆಲ್​ನಿಂದ ಹೊರ ನಡೆದಿದ್ದಾರೆ. ಹೀಗಿರುವಾಗಲೇ ಆಮಿರ್ ಖಾನ್ (Aamir Khan) ಅವರ ಹೇಳಿಕೆ ವೈರಲ್ ಆಗಿದೆ. ಇದು ದೀಪಿಕಾ ಅವರಂಥ ನಟಿಯರಿಗೆ ಕೊಟ್ಟ ಟಾಂಟ್ ಇರಬಹುದೇ ಎನ್ನುವ ಚರ್ಚೆ ಶುರುವಾಗಿದೆ.

ಆಮಿರ್ ಖಾನ್ ಅವರು ಬಾಲಿವುಡ್​ನಲ್ಲಿ ಹಲವು ವರ್ಷಗಳಿಂದ ಇದ್ದಾರೆ. ಅವರಿಗೆ ಚಿತ್ರರಂಗದ ಆಳ ಅಗಲ ತಿಳಿದಿದೆ. ಅವರು ನಿರ್ಮಾಪಕರಾಗಿಯೂ ಅನುಭವ ಪಡೆದಿದ್ದಾರೆ. ನಿರ್ಮಾಪಕ ಎಂದಾಗ ಹತ್ತಾರು ಸಮಸ್ಯೆಗಳು ಬರುತ್ತವೆ. ಹೀಗಾಗಿ, ಹೀರೋ ಸ್ಥಾನದಲ್ಲಿ ನಿಂತಾಗ ಅವರಿಗೆ ನಿರ್ಮಾಪಕರ ಸಮಸ್ಯೆ ಗೊತ್ತಿದೆ. ಅವರು ಸಂದರ್ಶನ ಒಂದರಲ್ಲಿ ಈ ಬಗ್ಗೆ ಮಾತನಾಡಿದ್ದರು.

ಇದನ್ನೂ ಓದಿ
Image
ಬಾಲಿವುಡ್ ಮಾಫಿಯಾ ಬಗ್ಗೆ ಮಾತನಾಡಿದ ತನುಶ್ರೀ ದತ್ತಾ
Image
ಪುನೀತ್ ಜೊತೆ ನಟಿಸಿದ ಅದಾ ಶರ್ಮಾ ನಿಜವಾದ ಹೆಸರೇನು ಗೊತ್ತಾ?
Image
ಬದಲಾಗೋದೇ ಇಲ್ಲ ಅಕ್ಷಯ್ ಅದೃಷ್ಟ; ಹೊಸ ಚಿತ್ರ, ಮತ್ತದೇ ಹೀನಾಯ ಕಲೆಕ್ಷನ್
Image
‘ಕಲ್ಕಿ’ ಚಿತ್ರದಿಂದ ಹೊರಬಂದು ಶಾರುಖ್ ಹೇಳಿಕೊಟ್ಟ ಪಾಠ ನೆನೆದ ದೀಪಿಕಾ

‘ಸಿನಿಮಾ ಏನನ್ನು ಕೇಳುತ್ತದೆಯೋ ಅದಕ್ಕೆ ಮಾತ್ರ ನೀವು ಹಣ ಕೇಳಬೇಕು. ಮೇಕಪ್​ ಮ್ಯಾನ್​​ಗೆ ಹಣ ನೀಡಿ ಎಂದೆಲ್ಲ ಕೇಳಬಾರದು. ಡ್ರೈವರ್ ಅವರು ನನಗೋಸ್ಕರ ಕೆಲಸ ಮಾಡುತ್ತಾರೆ. ಅವರಿಗೆ ನಾನು ಹಣ ಕೊಡಬೇಕೆ ಹೊರತು ನಿರ್ಮಾಪಕರಲ್ಲ. ಮೇಕಪ್ ಮಾಡಿಕೊಳ್ಳಲು ಒಂದು ವಾಹನ ಸಾಕು. ಮೀಟಿಂಗ್​ಗೆ ಇನ್ನಷ್ಟು ವಾಹನ ಬೇಕು ಎಂದರೆ ಅದನ್ನು ನಾನೇ ಬುಕ್ ಮಾಡಿಕೊಳ್ಳಬೇಕು. ಅನೇಕ ಸೆಲೆಬ್ರಿಟಿಗಳು ಇದರ ಲಾಭ ಪಡೆಯುತ್ತಿದ್ದಾರೆ. ಇದು ಸರಿ ಅಲ್ಲ’ ಎಂದು ಆಮಿರ್ ಖಾನ್ ಅವರು ಈ ಮೊದಲು ಹೇಳಿದ್ದರು.

ಇದನ್ನೂ ಓದಿ: ಯೂಟ್ಯೂಬ್​​​ನಲ್ಲಿ ಸಿನಿಮಾ ಬಿಡುಗಡೆ ಮಾಡಿ ಗೆದ್ದರೇ ಆಮಿರ್ ಖಾನ್, ಗಳಿಸಿದ್ದೆಷ್ಟು?

ಆಮಿರ್ ಖಾನ್ ಮಾತು ಸದ್ಯದ ಪರಿಸ್ಥಿತಿಗೆ ಪ್ರಸ್ತುತವಾಗಿದೆ ಎಂದು ಅನೇಕರು ಹೇಳಿದ್ದಾರೆ. ದೀಪಿಕಾ ಪಡುಕೋಣೆ ಅವರು ಅನ್ಯತಾ ನಿರ್ಮಾಪಕರಿಗೆ ಹೊರೆ ಆಗಿದ್ದರಿಂದಲೇ ಸಿನಿಮಾದಿಂದ ಅವರನ್ನು ಹೊರಕ್ಕೆ ಇಡುವ ಕೆಲಸ ಆಗಿದೆ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ, ‘ಕಲ್ಕಿ 2898 ಎಡಿ’ ಸೀಕ್ವೆಲ್ ಚಿತ್ರದ ಪರಿಸ್ಥಿತಿ ಡೋಲಾಯಮಾನವಾಗಿದೆ.  ಆಮಿರ್ ಖಾನ್ ಅವರು ಸಿನಿಮಾ ಆಯ್ಕೆಯಲ್ಲಿ ಸಖತ್ ಚ್ಯೂಸಿ ಆಗಿದ್ದಾರೆ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:49 am, Sat, 20 September 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ