AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryan Khan: NCB ಅಧಿಕಾರಿಗೆ ತೀಕ್ಷ್ಣ ಪ್ರಶ್ನೆಗಳನ್ನು ಕೇಳಿದ್ದ ಆರ್ಯನ್​ ಖಾನ್​; ಹಲವು ತಿಂಗಳ ಬಳಿಕ ಬಾಯ್ಬಿಟ್ಟ ಆಫೀಸರ್​​

NCB | Drug Case: ಆರ್ಯನ್​ ಖಾನ್​ ಅವರು ಎನ್​ಸಿಬಿ ಕಸ್ಟಡಿಯಲ್ಲಿ ಇದ್ದಾಗ ಏನೆಲ್ಲ ಮಾತನಾಡಿದ್ದರು ಎಂಬ ವಿಚಾರ ಬಹಿರಂಗ ಆಗಿದೆ. ಆ ಕುರಿತು ಹಿರಿಯ ಅಧಿಕಾರಿಯೊಬ್ಬರು​ ಬಾಯಿ ಬಿಟ್ಟಿದ್ದಾರೆ.

Aryan Khan: NCB ಅಧಿಕಾರಿಗೆ ತೀಕ್ಷ್ಣ ಪ್ರಶ್ನೆಗಳನ್ನು ಕೇಳಿದ್ದ ಆರ್ಯನ್​ ಖಾನ್​; ಹಲವು ತಿಂಗಳ ಬಳಿಕ ಬಾಯ್ಬಿಟ್ಟ ಆಫೀಸರ್​​
ಆರ್ಯನ್ ಖಾನ್
Follow us
TV9 Web
| Updated By: ಮದನ್​ ಕುಮಾರ್​

Updated on:Jun 11, 2022 | 1:04 PM

ಬಾಲಿವುಡ್​ನ ಖ್ಯಾತ ನಟ ಶಾರುಖ್​ ಖಾನ್ (Shah Rukh Khan) ಅವರ ಪುತ್ರ ಆರ್ಯನ್​ ಖಾನ್​ ಕಳೆದ ವರ್ಷ ಡ್ರಗ್ಸ್​ ಕೇಸ್​ನಲ್ಲಿ (Drug Case) ಅರೆಸ್ಟ್​​ ಆಗಿದ್ದು ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿತ್ತು. ಆ ಪ್ರಕರಣದಿಂದ ಆರ್ಯನ್​ ಬದುಕಿನಲ್ಲಿ ಕಪ್ಪು ಚುಕ್ಕಿ ಬಿದ್ದಂತಾಗಿದೆ. ಈ ಕೇಸ್​ನಲ್ಲಿ ಅವರಿಗೆ ಇತ್ತೀಚೆಗೆ ಕ್ಲೀನ್​ ಚಿಟ್​ ಸಿಕ್ಕಿದೆ. ಹಾಗಾಗಿ ಅವರು ನಿಟ್ಟುಸಿರು ಬಿಟ್ಟಿದ್ದಾರೆ. ಆರ್ಯನ್ ಖಾನ್​ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲದಿದ್ದರೂ ಕೂಡ ಅವರನ್ನು ತಿಂಗಳುಗಟ್ಟಲೆ ವಶದಲ್ಲಿ ಇರಿಸಿಕೊಳ್ಳಲಾಗಿತ್ತು. ಇದರಿಂದ ಶಾರುಖ್​ ಪುತ್ರನ ಇಮೇಜ್​ಗೆ ಸಾಕಷ್ಟು ಧಕ್ಕೆ ಉಂಟಾಯಿತು. ಕಸ್ಟಡಿಯಲ್ಲಿ ಇದ್ದಾಗ ಎನ್​ಸಿಬಿ ಅಧಿಕಾರಿಗಳಿಗೆ ಆರ್ಯನ್​ ಖಾನ್​ ಅವರು ಕೆಲವು ತೀಕ್ಷ್ಣವಾದ ಪ್ರಶ್ನೆಗಳನ್ನು ಕೇಳಿದ್ದರು. ಆ ಬಗ್ಗೆ ಹಿರಿಯ ಎನ್​ಸಿಬಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ. ಹಾಗಾದರೆ ಎನ್​ಸಿಬಿ ಅಧಿಕಾರಿಗಳು ಮತ್ತು ಆರ್ಯನ್ ಖಾನ್​ (Aryan Khan) ನಡುವೆ ನಡೆದ ಆ ಸಂಭಾಷಣೆಗಳು ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ..

ಡ್ರಗ್ಸ್​ ಕೇಸ್​ ಬಗ್ಗೆ ಆರ್ಯನ್​ ಖಾನ್​ ಅವರು ಈವರೆಗೂ ಮೌನ ಮುರಿದಿಲ್ಲ. ಆದರೆ ಅವರು ಕಸ್ಟಡಿಯಲ್ಲಿ ಇದ್ದಾಗ ಮಾತನಾಡಿದ್ದರ ಬಗ್ಗೆ ಹಿರಿಯ ಅಧಿಕಾರಿ ಸಂಜಯ್​ ಸಿಂಗ್​ ಬಾಯಿ ಬಿಟ್ಟಿದ್ದಾರೆ. ಸಂಜಯ್​ ಸಿಂಗ್​ ಅವರು ಎನ್​ಸಿಬಿಯ ಉಪ ನಿರ್ದೇಶಕರಾಗಿದ್ದು, ಆರ್ಯನ್​ ಕೇಸ್​ನಲ್ಲಿ ವಿಶೇಷ ತನಿಖಾತಂಡದ ಮುಖ್ಯಸ್ಥರಾಗಿ ಕೆಲಸ ಮಾಡಿದ್ದರು. ಆ ಸಮಯದಲ್ಲಿ ಆಗಿದ್ದನ್ನು ಈಗ ಅವರು ವಿವರಿಸಿದ್ದಾರೆ.

ಸಂಜಯ್​ ಸಿಂಗ್​ ಪ್ರಕಾರ ಆರ್ಯನ್​ ಖಾನ್​ ಹೇಳಿದ್ದೇನು?

ಇದನ್ನೂ ಓದಿ
Image
Aryan Khan Drug Case ಆರ್ಯನ್​​ ಖಾನ್​​ ಡ್ರಗ್ಸ್​​​ ಪ್ರಕರಣ: ಬಂಧನದಿಂದ ಎನ್​​ಸಿಬಿ ಕ್ಲೀನ್ ಚಿಟ್​​ವರೆಗೆ ಏನೇನಾಯ್ತು?
Image
ಆರ್ಯನ್​ ಖಾನ್​ ಕೇಸ್​ ಮರೆತು ಸಾರ್ವಜನಿಕವಾಗಿ ಕಾಣಿಸಿಕೊಂಡ ಶಾರುಖ್ ಪತ್ನಿ ಗೌರಿ ಖಾನ್​, ಪುತ್ರಿ ಸುಹಾನಾ
Image
‘ಆರ್ಯನ್​ ಖಾನ್​ ಕಿಡ್ನಾಪ್​ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಯ್ತು’: ನವಾಬ್​ ಮಲಿಕ್​ ಗಂಭೀರ ಆರೋಪ
Image
Aryan Khan: 22 ದಿನ ಜೈಲಿನಲ್ಲಿದ್ದ ಆರ್ಯನ್​ ಖಾನ್​ಗೆ ಈಗ ಮನೆಯವರಿಂದಲೇ ಬ್ಲಡ್​ ಟೆಸ್ಟ್​; ಕಾರಣ ಏನು?

‘ಸರ್​.. ನೀವು ನನ್ನನ್ನು ಇಂಟರ್​ನ್ಯಾಷನಲ್​ ಡ್ರಗ್ಸ್​ ಟ್ರಾಫಿಕರ್​ ರೀತಿ ಬಿಂಬಿಸಿದ್ದೀರಿ. ಮಾದಕ ವಸ್ತು ಸಾಗಣೆಗೆ ನಾನು ಆರ್ಥಿಕ ಬೆಂಬಲ ನೀಡಿದ್ದೇನೆ ಅನ್ನೋ ರೀತಿಯಲ್ಲಿ ಟ್ರೀಟ್​ ಮಾಡಿದ್ದೀರಿ. ಇದೆಲ್ಲ ವಿಚಿತ್ರ ಆರೋಪಗಳಲ್ಲವೇ? ನನ್ನಲ್ಲಿ ಯಾವುದೇ ರೀತಿಯ ಡ್ರಗ್ಸ್​ ಸಿಗದಿದ್ದರೂ ಕೂಡ ಅರೆಸ್ಟ್​ ಮಾಡಿದ್ದೀರಿ. ನನ್ನ ವಿಚಾರದಲ್ಲಿ ನೀವು ತುಂಬಾ ತಪ್ಪು ಮಾಡಿದ್ದೀರಿ ಸರ್​. ನನ್ನ ಪ್ರತಿಷ್ಠೆಯನ್ನು ಹಾಳು ಮಾಡಿದ್ದೀರಿ. ನಾನು ಯಾಕೆ ಇಷ್ಟು ವಾರಗಳ ಕಾಲ ಜೈಲಿನಲ್ಲಿ ಇರಬೇಕು? ಈ ಶಿಕ್ಷೆಗೆ ನಾನು ಅರ್ಹನೇ?’ ಎಂದು ಆರ್ಯನ್​ ಖಾನ್​ ಪ್ರಶ್ನಿಸಿದ್ದರು ಎಂದು ಸಂಜಯ್​ ಸಿಂಗ್​ ಹೇಳಿರುವುದಾಗಿ ವರದಿ ಆಗಿದೆ.

ಇದನ್ನೂ ಓದಿ: ‘ಆರ್ಯನ್​ ಖಾನ್​ ಕಿಡ್ನಾಪ್​ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಯ್ತು’: ನವಾಬ್​ ಮಲಿಕ್​ ಗಂಭೀರ ಆರೋಪ

ಸದ್ಯ ಆರ್ಯನ್​ ಖಾನ್​ ಅವರು ಈಗ ನಾರ್ಮಲ್​ ಜೀವನಕ್ಕೆ ಮರಳಿದ್ದಾರೆ. ಸಾರ್ವಜನಿಕವಾಗಿಯೂ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ ಡ್ರಗ್ಸ್​ ಕೇಸ್​ನ ಕಹಿ ಘಟನೆ ಕುರಿತು ಅವರು ಎಲ್ಲಿಯೂ ಮಾತನಾಡುತ್ತಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:56 pm, Sat, 11 June 22

ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ