AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಾಲೆಂಟೈನ್ಸ್​ ಡೇ ಪ್ರಯುಕ್ತ ಗೌರಿ ಖಾನ್​ಗೆ ಶಾರುಖ್ ನೀಡಿದ್ದ ಮೊದಲ ಗಿಫ್ಟ್​ ಏನು?

ಗೌರಿ ಖಾನ್​ ಮತ್ತು ಶಾರುಖ್​ ಖಾನ್​ ಅವರದ್ದು ಲವ್​ ಮ್ಯಾರೇಜ್​. ಪ್ರೀತಿಸಿ ಮದುವೆ ಆಗುವಾಗ ಶಾರುಖ್​ ಖಾನ್​ ಇನ್ನೂ ಸ್ಟಾರ್​ ಆಗಿರಲಿಲ್ಲ. ಆ ಸಂದರ್ಭದಲ್ಲಿ ತಾವು ನೀಡಿದ್ದ ಗಿಫ್ಟ್​ ಏನು ಎಂಬುದನ್ನು ಅವರು ಈಗಲೂ ಮರೆತಿಲ್ಲ. ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸುವಾಗ ಶಾರುಖ್​ ಖಾನ್​ ಅವರು ಈ ವಿಷಯವನ್ನು ಮೆಲುಕು ಹಾಕಿದ್ದರು. ಈ ಬಗ್ಗೆ ಇಲ್ಲಿದೆ ಮಾಹಿತಿ..

ವ್ಯಾಲೆಂಟೈನ್ಸ್​ ಡೇ ಪ್ರಯುಕ್ತ ಗೌರಿ ಖಾನ್​ಗೆ ಶಾರುಖ್ ನೀಡಿದ್ದ ಮೊದಲ ಗಿಫ್ಟ್​ ಏನು?
ಶಾರುಖ್​ ಖಾನ್​, ಗೌರಿ ಖಾನ್​
ಮದನ್​ ಕುಮಾರ್​
|

Updated on: Feb 11, 2024 | 7:49 AM

Share

ನಟ ಶಾರುಖ್​ ಖಾನ್​ (Shah Rukh Khan) ಅವರು ಫ್ಯಾಮಿಲಿ ಮ್ಯಾನ್​. ಕುಟುಂಬಕ್ಕೆ ಅವರು ಹೆಚ್ಚು ಸಮಯ ನೀಡುತ್ತಾರೆ. ಅವರ ವೃತ್ತಿಜೀವನಕ್ಕೆ ಪತ್ನಿ ಗೌರಿ ಖಾನ್​ (Gauri Khan) ಬೆಂಬಲವಾಗಿ ನಿಂತಿದ್ದಾರೆ. ಶಾರುಖ್​ ಖಾನ್​ ಮತ್ತು ಗೌರಿ ಖಾನ್​ ಅವರದ್ದು ಲವ್​ ಮ್ಯಾರೇಜ್​. ಈ ದಂಪತಿಗೆ ಮೂವರು ಮಕ್ಕಳು ಇದ್ದಾರೆ. ಈಗ ಶಾರುಖ್​ ಖಾನ್​ ಅವರು ಸೂಪರ್​ ಸ್ಟಾರ್​. ಆದರೆ ಮದುವೆ ಆಗುವಾಗ ಅವರು ಅಷ್ಟೆಲ್ಲ ಖ್ಯಾತಿ ಗಳಿಸಿರಲಿಲ್ಲ. ಆ ಸಮಯದಲ್ಲಿ ವ್ಯಾಲೆಂಟೈನ್ಸ್​ ಡೇ (Valentine’s Day) ಪ್ರಯುಕ್ತ ಗೌರಿಗೆ ನೀಡಿದ್ದ ಮೊದಲ ಗಿಫ್ಟ್​ ಏನಿರಬಹುದು ಎಂಬ ಕುತೂಹಲ ಅನೇಕರಿಗೆ ಇದೆ. ಆ ಬಗ್ಗೆ ಸ್ವತಃ ಶಾರುಖ್​ ಖಾನ್​ ನೀಡಿದ ಉತ್ತರ ಇಂಟರೆಸ್ಟಿಂಗ್ ಆಗಿತ್ತು.

ಶಾರುಖ್​ ಖಾನ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ಆಗಾಗ ಪ್ರಶ್ನೋತ್ತರ ನಡೆಸುತ್ತಾರೆ. ಆಗ ಅಭಿಮಾನಿಗಳು ಅವರಿಗೆ ಹಲವು ಬಗೆಯ ಪ್ರಶ್ನೆಗಳನ್ನು ಕೇಳುತ್ತಾರೆ. 2023ರಲ್ಲಿ ಇದೇ ರೀತಿ ಪ್ರಶ್ನೋತ್ತರ ನಡೆಸಿದಾಗ ಅಭಿಮಾನಿಯೊಬ್ಬರಿಂದ ಈ ಬಗ್ಗೆ ಪ್ರಶ್ನೆ ಎದುರಾಗಿತ್ತು. ‘ಗೌರಿ ಮೇಡಂ ಅವರಿಗೆ ನೀವು ನೀಡಿದ ಮೊದಲ ವ್ಯಾಲೆಂಟೈನ್ಸ್​ ಡೇ ಉಡುಗೊರೆ ಏನು’ ಎಂದು ಕೇಳಿದ ಪ್ರಶ್ನೆಗೆ ಶಾರುಖ್​ ಉತ್ತರ ನೀಡಿದ್ದರು.

ಇದನ್ನೂ ಓದಿ: ಶಾರುಖ್​ ಖಾನ್​ ಬಗ್ಗೆ ‘ಅನಿಮಲ್​’ ನಿರ್ದೇಶಕನಿಗೆ ಇರುವ ಅಪಾರ ಗೌರವಕ್ಕೆ ಈ ಮಾತು ಸಾಕ್ಷಿ

‘ನನಗೆ ಸರಿಯಾಗಿ ನೆನಪಿರುವುದಾದರೆ.. ಈಗಾಗಲೇ 34 ವರ್ಷಗಳು ಕಳೆದಿವೆ. ನನಗೆ ಅನಿಸಿದ ಹಾಗೆ, ಒಂದು ಜೊತೆ ಗುಲಾಬಿ ಬಣ್ಣದ ಪ್ಲಾಸ್ಟಿಕ್ ಇಯರ್​ ರಿಂಗ್ಸ್​ ನೀಡಿದ್ದೆ’ ಎಂದು ಶಾರುಖ್​ ಖಾನ್​ ಹೇಳಿದ್ದರು. ಅದಕ್ಕೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದರು. ‘ವಾವ್ ತುಂಬ ಕ್ಯೂಟ್​ ಆಗಿದೆ ಸರ್. ನೀವು ನೀಡಿದ್ದು ಪ್ಲಾಸ್ಟಿಕ್​ ಗಿಫ್ಟ್​ ಆಗಿದ್ದರೂ ಅದಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಈಗ ಬೇಕಿದ್ದರೆ ನೀವು ಡೈಮಂಡ್​ ರಿಂಗ್​ ನೀಡಬಲ್ಲಿರಿ’ ಎಂದು ಫ್ಯಾನ್ಸ್​ ಕಮೆಂಟ್​ ಮಾಡಿದ್ದರು.

ಶಾರುಖ್​ ಖಾನ್​ ಅವರು ವೃತ್ತಿಜೀವನದಲ್ಲಿ ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ. ಆ ಎಲ್ಲ ಸಂದರ್ಭಗಳಲ್ಲೂ ಅವರಿಗೆ ಗೌರಿ ಖಾನ್​ ಬೆಂಬಲವಾಗಿ ನಿಂತಿದ್ದಾರೆ. ನಿರ್ಮಾಪಕಿಯಾಗಿ, ಇಂಟೀರಿಯರ್​ ಡಿಸೈನರ್​ ಆಗಿ ಅವರು ಗುರುತಿಸಿಕೊಂಡಿದ್ದಾರೆ. ಶಾರುಖ್​ ಖಾನ್​ ಅವರು 2023ರಲ್ಲಿ ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದರು. ಅವರು ನಟಿಸಿದ ‘ಜವಾನ್​’, ‘ಪಠಾಣ್​’ ಸಿನಿಮಾಗಳು ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದವು. ‘ಡಂಕಿ’ ಸಿನಿಮಾ ಉತ್ತಮ ವಿಮರ್ಶೆ ಪಡೆದುಕೊಂಡಿತು. ಶಾರುಖ್​ ಮಕ್ಕಳಾದ ಸುಹಾನಾ ಖಾನ್​ ಮತ್ತು ಆರ್ಯನ್​ ಖಾನ್​ ಕೂಡ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಮಗಳು ನಟನೆಯಲ್ಲಿ ಆಸಕ್ತಿ ಹೊಂದಿದ್ದರೆ, ಪುತ್ರ ಆರ್ಯನ್​ ಖಾನ್​ಗೆ ನಿರ್ದೇಶನದಲ್ಲಿ ಆಸಕ್ತಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು