AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಪುತ್ರನಿಗೆ ಶಾರುಖ್​, ಸಲ್ಮಾನ್​, ದೀಪಿಕಾ ಕೊಟ್ಟ ಉಡುಗೊರೆ ಏನು?

ಬಾಲಿವುಡ್​ ಕಲಾವಿದರು ಅನಂತ್​ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್​ ಅವರ ಪ್ರೀ-ವೆಡ್ಡಿಂಗ್​ ಸಮಾರಂಭಕ್ಕೆ ಬಂದು ಮನರಂಜನೆ ನೀಡಿದ್ದು ಮಾತ್ರವಲ್ಲದೇ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಉಡುಗೊರೆಗಳನ್ನೂ ನೀಡಿದ್ದಾರೆ. ಶಾರುಖ್​ ಖಾನ್​, ದೀಪಿಕಾ ಪಡುಕೋಣೆ, ಸಲ್ಮಾನ್​ ಖಾನ್​ ಮುಂತಾದ ಸೆಲೆಬ್ರಿಟಿಗಳು ದುಬಾರಿ ಗಿಫ್ಟ್​ ನೀಡಿರುವ ಬಗ್ಗೆ ಸುದ್ದಿ ಆಗಿದೆ.

ಅಂಬಾನಿ ಪುತ್ರನಿಗೆ ಶಾರುಖ್​, ಸಲ್ಮಾನ್​, ದೀಪಿಕಾ ಕೊಟ್ಟ ಉಡುಗೊರೆ ಏನು?
ಅನಂತ್​ ಅಂಬಾನಿ, ರಾಧಿಕಾ ಮರ್ಚೆಂಟ್​, ಬಾಲಿವುಡ್​ ಸೆಲೆಬ್ರಿಟಿಗಳು
ಮದನ್​ ಕುಮಾರ್​
|

Updated on: Mar 12, 2024 | 3:15 PM

Share

ಕೆಲವೇ ದಿನಗಳ ಹಿಂದೆ ಅನಂತ್​ ಅಂಬಾನಿ (Anant Ambani) ಹಾಗೂ ರಾಧಿಕಾ ಮೆರ್ಚೆಂಟ್​ ಅವರ ಪ್ರೀ-ವೆಡ್ಡಿಂಗ್​ ಸಮಾರಂಭ ನಡೆಯಿತು. ಮುಖೇಶ್​ ಅಂಬಾನಿ (Mukesh Ambani) ಪುತ್ರನ ವಿವಾಹಪೂರ್ವ ಸಮಾರಂಭದ ಅದ್ದೂರಿತನ ಹೇಗಿತ್ತು ಎಂಬುದನ್ನು ಜಗತ್ತು ಈಗಾಗಲೇ ಕಂಡಿದೆ. ಜಾಗತಿಕ ಮಟ್ಟದ ದೊಡ್ಡ ದೊಡ್ಡ ಕಂಪನಿಗಳ ಸಿಇಓಗಳೆಲ್ಲ ಬಂದು ಈ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಬಾಲಿವುಡ್​ನ (Bollywood) ಘಟಾನುಘಟಿ ಸೆಲೆಬ್ರಿಟಿಗಳು ಕೂಡ ಅನಂತ್​ ಅಂಬಾನಿಯ ಪ್ರೀ-ವೆಡ್ಡಿಂಗ್​ ಇವೆಂಟ್​ನಲ್ಲಿ ಡ್ಯಾನ್ಸ್​ ಮಾಡಿದರು. ಅಷ್ಟೇ ಅಲ್ಲದೇ ದುಬಾರಿ ಗಿಫ್ಟ್​ಗಳನ್ನು ನೀಡಿದ್ದಾರೆ. ಅದರ ಬಗ್ಗೆ ಗಾಸಿಪ್​ ಹರಿದಾಡುತ್ತಿದೆ.

ಮುಖೇಶ್​ ಅಂಬಾನಿ ಅವರ ಆಸ್ತಿಯನ್ನು ಲೆಕ್ಕ ಹಾಕುವುದು ಕಷ್ಟ. ಅಷ್ಟು ದೊಡ್ಡ ಶ್ರೀಮಂತರ ಎದುರು ಸಾವಿರಾರು ಕೋಟಿ ರೂಪಾಯಿ ಆಸ್ತಿ ಹೊಂದಿರುವ ಬಾಲಿವುಡ್ ಸೆಲೆಬ್ರಿಟಿಗಳು ಕೂಡ ಸಾಮಾನ್ಯರಂತಾಗಿಬಿಡುತ್ತಾರೆ! ಹಾಗಂತ ಉಡುಗೊರೆ ಕೊಡದೇ ಇರಲು ಸಾಧ್ಯವಿಲ್ಲ. ಕೆಲವು ಮಾಧ್ಯಮಗಳು ವರದಿ ಮಾಡಿರುವ ಪ್ರಕಾರ ಸಲ್ಮಾನ್​ ಖಾನ್​, ಶಾರುಖ್​ ಖಾನ್​, ದೀಪಿಕಾ ಪಡುಕೋಣೆ, ರಣವೀರ್​ ಸಿಂಗ್​ ಮುಂತಾದವರು ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಗಿಫ್ಟ್​ ನೀಡಿದ್ದಾರೆ.

ಶಾರುಖ್​ ಖಾನ್​ ಅವರಿಗೆ ಅಂಬಾನಿ ಕುಟುಂಬದ ಜೊತೆ ವಿಶೇಷ ನಂಟಿದೆ. ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿರುವ ಅನಂತ್​ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್​ ಅವರಿಗೆ ಶಾರುಖ್​ ಖಾನ್​ ಅವರು 5 ಕೋಟಿ ರೂಪಾಯಿ ಬೆಲೆ ಬಾಳುವ ಮರ್ಸಿಡಿಸ್​ ಬೆಂಜ್​ 300 ಎಸ್​ಎಲ್​ಆರ್​ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಸಲ್ಮಾನ್​ ಖಾನ್​ ಅವರು ಅನಂತ್​ ಅಂಬಾನಿಗೆ ಕಸ್ಟಮೈಸ್ಡ್​ ವಾಚ್​ ಉಡುಗೊರೆಯಾಗಿ ನೀಡಿದ್ದಾರೆ. ರಾಧಿಕಾ ಮರ್ಚೆಂಟ್​ಗೆ ಡೈಮಂಡ್​ ಕಿವಿಯೋಲೆ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಅನಂತ್​ ಅಂಬಾನಿ-ರಾಧಿಕಾ ಮರ್ಚೆಂಟ್​ ಪ್ರೀ-ವೆಡ್ಡಿಂಗ್​ ಸಂಭ್ರಮದಲ್ಲಿ ಜಾನ್ವಿ ಕಪೂರ್​

ರಾಧಿಕಾ ಮರ್ಚೆಂಟ್​ ಮತ್ತು ಕಿಯಾರಾ ಅಡ್ವಾಣಿ ಅವರು ಬಾಲ್ಯದ ಸ್ನೇಹಿತರು. ಪತಿ ಸಿದ್ದಾರ್ಥ್ ಮಲ್ಹೋತ್ರಾ ಜೊತೆ ಪ್ರೀ-ವೆಡ್ಡಿಂಗ್ ಸಮಾರಂಭಕ್ಕೆ ಆಗಮಿಸಿದ ಕಿಯಾರಾ ಅಡ್ವಾಣಿ ಅವರು ಬಂಗಾರ ಮತ್ತು ವಜ್ರ ಖಚಿತವಾದ ಗಣೇಶ ಹಾಗೂ ಲಕ್ಷ್ಮೀ ದೇವಿಯ ವಿಗ್ರಹವನ್ನು ಉಡುಗೊರೆಯಾಗಿ ನೀಡಿದ್ದಾರೆ. ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು 29 ಲಕ್ಷ ರೂಪಾಯಿ ಬೆಲೆ ಬಾಳುವ ಏರ್​ ಜೋರ್ಡನ್​ ಶೋ ನೀಡಿದ್ದಾರೆ ಎಂದು ಸುದ್ದಿಯಾಗಿದೆ.

ಇದನ್ನೂ ಓದಿ: ಅನಂತ್​ ಅಂಬಾನಿ ಮದುವೆಗೆ ಬಂದ ರಿಯಾನಾ ಜತೆ ವಿದೇಶದಿಂದ ಬಂತು 4 ಗಾಡಿ ಲಗೇಜ್​

ಬಾಲಿವುಡ್​ನ ಸೆಲೆಬ್ರಿಟಿ ಕಪಲ್​ ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ಅವರು ಡೈಮಂಡ್​​ ಬ್ರಾಸ್ಲೆಟ್​ ಹಾಗೂ ನೆಕ್ಲೆಸ್​ ಕೊಟ್ಟಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್​ ಅವರು ತಲಾ ಒಂದು ಕೋಟಿ ರೂಪಾಯಿ ಬೆಲೆ ಬಾಳುವ ಎರಡು ವಾಚ್​ಗಳನ್ನು ಗಿಫ್ಟ್​ ಮಾಡಿದ್ದಾರೆ ಎನ್ನಲಾಗಿದೆ. ಸದ್ಯಕ್ಕಂತೂ ಇದು ಗಾಸಿಪ್​ ಅಷ್ಟೇ. ಯಾರೂ ಕೂಡ ಈ ಬಗ್ಗೆ ಅಧಿಕೃತವಾಗಿ ಮಾತನಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು