Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಕ್ಕಳು ಬೇಕು ಎಂಬ ಕಾರಣಕ್ಕೆ ಸೈಫ್​ ಜೊತೆ ಮದುವೆಯಾದೆ’: ಕರೀನಾ ಕಪೂರ್​ ಖಾನ್​

ಸೈಫ್​ ಅಲಿ ಖಾನ್​ ಮತ್ತು ಕರೀನಾ ಕಪೂರ್​ ದಂಪತಿಗೆ ಇಬ್ಬರು ಗಂಡು ಮಕ್ಕಳು ಇದ್ದಾರೆ. ತೈಮೂರ್​ ಅಲಿ ಖಾನ್​, ಜಹಂಗೀರ್​ ಅಲಿ ಖಾನ್​ ಎಂದು ಮಕ್ಕಳಿಗೆ ಹೆಸರು ಇಡಲಾಗಿದೆ. ಮಕ್ಕಳು ಮತ್ತು ಸಂಸಾರಕ್ಕೆ ಕರೀನಾ ಅವರು ಈಗ ಹೆಚ್ಚು ಸಮಯ ನೀಡುತ್ತಿದ್ದಾರೆ. ಮದುವೆ ಬಳಿಕ ಸಿನಿಮಾಗಳ ಆಯ್ಕೆಯಲ್ಲಿ ಅವರು ಬಹಳ ಚ್ಯೂಸಿ ಆಗಿದ್ದಾರೆ.

‘ಮಕ್ಕಳು ಬೇಕು ಎಂಬ ಕಾರಣಕ್ಕೆ ಸೈಫ್​ ಜೊತೆ ಮದುವೆಯಾದೆ’: ಕರೀನಾ ಕಪೂರ್​ ಖಾನ್​
ಸೈಫ್​ ಅಲಿ ಖಾನ್​, ಕರೀನಾ ಕಪೂರ್​
Follow us
ಮದನ್​ ಕುಮಾರ್​
|

Updated on: Nov 14, 2023 | 2:49 PM

ನಟಿ ಕರೀನಾ ಕಪೂರ್​ (Kareena Kapoor) ಅವರು ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇದ್ದಾಗಲೇ ಮದುವೆ ಆದರು. ಅದಕ್ಕೂ ಮುನ್ನ ಅವರು ಶಾಹಿದ್​ ಕಪೂರ್​ ಜೊತೆ ಡೇಟಿಂಗ್​ ಮಾಡುತ್ತಿದ್ದರು. ಆ ಬಳಿಕ ಸೈಫ್​ ಅಲಿ ಖಾನ್​ (Saif Ali Khan) ಜೊತೆ ಅವರಿಗೆ ಪ್ರೀತಿ ಚಿಗುರಿತು. ಅದಾಗಲೇ ಸೈಫ್​ ಅವರು ಅಮೃತಾ ಸಿಂಗ್​ ಜೊತೆ ಮದುವೆಯಾಗಿ, ವಿಚ್ಛೇದನವನ್ನೂ ಪಡೆದಿದ್ದರು. ಸೈಫ್​ ಅವರನ್ನು ತಾವು ಮದುವೆ ಆಗಿದ್ದು ಯಾಕೆ ಎಂಬ ಪ್ರಶ್ನೆಗೆ ಈಗ ಕರೀನಾ ಕಪೂರ್​ ಖಾನ್​ (Kareena Kapoor Khan) ಉತ್ತರ ನೀಡಿದ್ದಾರೆ. ಮಕ್ಕಳನ್ನು ಪಡೆಯುವ ಉದ್ದೇಶದಿಂದ ತಾವು ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವುದಾಗಿ ಅವರು ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ.

‘ಮಕ್ಕಳನ್ನು ಪಡೆಯಬೇಕು ಎಂಬ ಕಾರಣದಿಂದಲೇ ಮದುವೆ ಆಗುವುದು ಅಲ್ಲವೇ? ಆ ಉದ್ದೇಶ ಇಲ್ಲ ಎಂಬುದಾದರೆ ಈ ಕಾಲದಲ್ಲಿ ನೀವು ಲಿವಿಂಗ್​ ಟುಗೆದರ್​ನಲ್ಲಿ ಇರಬಹುದು. ನಾನು ಮತ್ತು ಸೈಫ್​ ಅಲಿ ಖಾನ್​ ಅವರು 5 ವರ್ಷ ಲಿವ್​-ಇನ್​-ರಿಲೇಷನ್​ಶಿಪ್​ನಲ್ಲಿ ಇದ್ದೆವು. ನಮಗೆ ಮಕ್ಕಳನ್ನು ಪಡೆಯಬೇಕು ಎಂದು ಎನಿಸಿದಾಗ ನಾವು ಮದುವೆ ಎಂಬ ಮುಂದಿನ ಹಂತಕ್ಕೆ ಕಾಲಿಟ್ಟೆವು’ ಎಂದು ಕರೀನಾ ಕಪೂರ್​ ಖಾನ್​ ಹೇಳಿದ್ದಾರೆ. 2012ರಲ್ಲಿ ಸೈಫ್​ ಅಲಿ ಖಾನ್​ ಮತ್ತು ಕರೀನಾ ಕಪೂರ್​ ಖಾನ್​ ಅವರು ಮದುವೆಯಾದರು.

ಇದನ್ನೂ ಓದಿ: ‘ಸಿಂಗ್​ ಅಗೇನ್​’ ಚಿತ್ರತಂಡದಿಂದ ಬಿಡುಗಡೆ ಆಯ್ತು ಕರೀನಾ ಕಪೂರ್​ ಫಸ್ಟ್​ ಲುಕ್​ ಪೋಸ್ಟರ್​

ಕರೀನಾ ಅವರು ತಾವು ಹೇಳಿದಂತೆಯೇ ಮಕ್ಕಳು ಮತ್ತು ಸಂಸಾರಕ್ಕೆ ಈಗ ಹೆಚ್ಚು ಸಮಯ ನೀಡುತ್ತಿದ್ದಾರೆ. ಸೈಫ್​ ಅಲಿ ಖಾನ್​ ಮತ್ತು ಕರೀನಾ ಕಪೂರ್​ ದಂಪತಿಗೆ ಇಬ್ಬರು ಗಂಡು ಮಕ್ಕಳು ಜನಿಸಿದ್ದಾರೆ. ತೈಮೂರ್​ ಅಲಿ ಖಾನ್​, ಜಹಂಗೀರ್​ ಅಲಿ ಖಾನ್​ ಎಂದು ಮಕ್ಕಳಿಗೆ ಹೆಸರು ಇಡಲಾಗಿದೆ. ಬೇರೆ ಸೆಲೆಬ್ರಿಟಿಗಳ ರೀತಿಯಲ್ಲಿ ಸೈಫ್​ ಮತ್ತು ಕರೀನಾ ಅವರು ತಮ್ಮ ಮಕ್ಕಳನ್ನು ಗುಟ್ಟಾಗಿ ಬೆಳೆಸುತ್ತಿಲ್ಲ. ಆಗಾಗ ಮಾಧ್ಯಮಗಳ ಎದುರಿಗೆ ಮಕ್ಕಳನ್ನು ಕರೆದುಕೊಂಡು ಬರುತ್ತಾರೆ. ಸೋಶಿಯಲ್​ ಮೀಡಿಯಾದಲ್ಲಿ ತೈಮೂರ್​ ಅಲಿ ಖಾನ್​ ಸ್ಟಾರ್​ ಆಗಿದ್ದಾನೆ ಎಂದರೂ ತಪ್ಪಿಲ್ಲ.

ಇದನ್ನೂ ಓದಿ: ಕರೀನಾ ಕಪೂರ್ ನಡೆದುಕೊಂಡ ರೀತಿಗೆ ನಾರಾಯಣಮೂರ್ತಿ ಬೇಸರ; ಸುಧಾಮೂರ್ತಿ ಉತ್ತರ ಏನು?

ಮದುವೆ ಬಳಿಕ ಕರೀನಾ ಕಪೂರ್​ ಖಾನ್​ ಅವರ ಆದ್ಯತೆಗಳಲ್ಲಿ ಬದಲಾವಣೆ ಆಗಿದೆ. ಮೊದಲು ಬ್ಯಾಕ್​ ಟು ಬ್ಯಾಕ್​ ಸಿನಿಮಾ ಮಾಡುತ್ತಿದ್ದ ಅವರು ಈಗ ಕೊಂಚ ಚ್ಯೂಸಿ ಆಗಿದ್ದಾರೆ. ಮಕ್ಕಳ ಆರೈಕೆಗೆ ಅವರು ಹೆಚ್ಚು ಸಮಯ ನೀಡುತ್ತಿದ್ದಾರೆ. ತಮಗೆ ಸೂಕ್ತ ಎನಿಸುವಂತಹ ಸಿನಿಮಾಗಳನ್ನು ಮಾತ್ರ ಅವರು ಒಪ್ಪಿಕೊಳ್ಳುತ್ತಿದ್ದಾರೆ. ಸದ್ಯ ಅವರು ರೋಹಿತ್​ ಶೆಟ್ಟಿ ನಿರ್ದೇಶನದ ‘ಸಿಂಗ್​ ಅಗೇನ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಹುತಾರಾಗಣದ ಈ ಸಿನಿಮಾದಲ್ಲಿ ಅಜಯ್​ ದೇವಗನ್​, ದೀಪಿಕಾ ಪಡುಕೋಣೆ, ಟೈಗರ್​ ಶ್ರಾಫ್​, ಅಕ್ಷಯ್​ ಕುಮಾರ್​, ರಣವೀರ್​ ಸಿಂಗ್​ ಕೂಡ ಅಭಿನಯಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರತಂಡದಿಂದ ಕರೀನಾ ಅವರ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ