ಬಾಬಾ ಸಿದ್ಧಿಕಿ ಅಂತ್ಯಕ್ರಿಯೆಯಲ್ಲಿ ಶಾರುಖ್ ಖಾನ್ ಕಾಣಿಸಿಕೊಂಡಿಲ್ಲ ಯಾಕೆ?

ಶಾರುಖ್​ ಖಾನ್​ ಅವರು ಸಲ್ಮಾನ್ ಖಾನ್ ಜೊತೆ ಬಾಬಾ ಸಿದ್ಧಿಕಿಯ ಮನೆಗೆ ಹೋಗಿ ಇಫ್ತಾರ್ ಕೂಟದಲ್ಲಿ ಪಾಲ್ಗೊಂಡಿದ್ದು ಬಹಳ ಸುದ್ದಿ ಆಗಿತ್ತು. ಅಷ್ಟರಮಟ್ಟಿಗೆ ಅವರು ಬಾಬಾ ಸಿದ್ಧಿಕಿ ಜೊತೆ ಆಪ್ತರಾಗಿದ್ದರು. ಆದರೆ ಈಗ ಬಾಬಾ ಸಿದ್ಧಿಕಿಯ ಅಂತ್ಯಕ್ರಿಯೆಗೆ ಶಾರುಖ್ ಖಾನ್ ಬಂದಿಲ್ಲ. ಯಾಕೆ ಎಂಬ ಬಗ್ಗೆ ಬಿ-ಟೌನ್​ ವಲಯದಲ್ಲಿ ಗುಸುಗುಸು ಕೇಳಿಬರುತ್ತಿದೆ.

ಬಾಬಾ ಸಿದ್ಧಿಕಿ ಅಂತ್ಯಕ್ರಿಯೆಯಲ್ಲಿ ಶಾರುಖ್ ಖಾನ್ ಕಾಣಿಸಿಕೊಂಡಿಲ್ಲ ಯಾಕೆ?
ಶಾರುಖ್​ ಖಾನ್, ಬಾಬಾ ಸಿದ್ಧಿಕಿ
Follow us
|

Updated on: Oct 16, 2024 | 3:30 PM

ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ಧಿಕಿ ಹತ್ಯೆಯಿಂದಾಗಿ ಮುಂಬೈ ಮಂದಿಗೆ ಆತಂಕ ಶುರುವಾಗಿದೆ. ಅದರಲ್ಲೂ ಬಾಬಾ ಸಿದ್ಧಿಕಿ ಜೊತೆ ಆಪ್ತವಾಗಿದ್ದ ಎಲ್ಲರೂ ಕೂಡ ಚಿಂತೆಯಲ್ಲೇ ಕಾಲ ಕಳೆಯುವಂತಾಗಿದೆ. ಸಲ್ಮಾನ್​ ಖಾನ್​ ಮತ್ತು ಬಾಬಾ ಸಿದ್ಧಿಕಿ ಅವರು ಆಪ್ತರಾಗಿದ್ದರು. ಅಲ್ಲದೇ, ಶಾರುಖ್ ಖಾನ್​ ಕೂಡ ಬಾಬಾ ಸಿದ್ಧಿಕಿ ಜೊತೆ ಸ್ನೇಹ ಹೊಂದಿದ್ದರು. ಬಾಬಾ ಸಿದ್ಧಿಕಿ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಸಲ್ಮಾನ್​ ಖಾನ್​ ಮತ್ತು ಶಾರುಖ್​ ಖಾನ್​ ಅವರು ಜೊತೆಯಾಗಿ ಭಾಗವಹಿಸಿದ್ದರು. ಆದರೆ ಈಗ ಬಾಬಾ ಸಿದ್ದಿಕಿ ಅವರ ಅಂತ್ಯಕ್ರಿಯೆಯಲ್ಲಿ ಶಾರುಖ್​ ಖಾನ್ ಕಾಣಿಸಿಕೊಂಡಿಲ್ಲ!

ಸಲ್ಮಾನ್​ ಖಾನ್​ ಅವರಿಗೆ ಸಹಾಯ ಮಾಡಿದ್ದಕ್ಕಾಗಿ ಬಾಬಾ ಸಿದ್ಧಿಕಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಲಾರೆನ್ಸ್​ ಬಿಷ್ಣೋಯ್​ ಗ್ಯಾಂಗ್​ನವರು ಹೊಣೆ ಹೊತ್ತಿದ್ದಾರೆ. ಸಲ್ಮಾನ್​ ಖಾನ್​ಗೆ ಯಾರೇ ಸಹಾಯ ಮಾಡಿದರೂ ಕೂಡ ಅವರಿಗೆ ಇದೇ ಗತಿ ಬರಲಿದೆ ಎಂದು ಗ್ಯಾಂಗ್​ ಸದಸ್ಯರು ಬೆದರಿಕೆ ಹಾಕಿದ್ದಾರೆ. ಈ ಪ್ರಕರಣದಲ್ಲಿ ತಮ್ಮ ಹೆಸರು ಸಿಕ್ಕಿಕೊಳ್ಳುವುದು ಶಾರುಖ್ ಖಾನ್ ಅವರಿಗೆ ಇಷ್ಟ ಇಲ್ಲ. ಹಾಗಾಗಿ ಅವರು ಅಂತ್ಯಕ್ರಿಯೆ ಬಂದಿಲ್ಲ ಎನ್ನಲಾಗಿದೆ.

ಇದನ್ನೂ ಓದಿ:  ಯಾರನ್ನೂ ಭೇಟಿ ಮಾಡಲ್ಲ: ಬಾಬಾ ಸಿದ್ಧಿಕಿ ಹತ್ಯೆ ಬಳಿಕ ಸಲ್ಮಾನ್ ಖಾನ್ ನಿರ್ಧಾರ

ಬಾಬಾ ಸಿದ್ಧಿಕಿ ಹತ್ಯೆಯಿಂದಾಗಿ ಅವರ ಕುಟುಂಬಕ್ಕೆ ಸಂಕಷ್ಟ ಎದುರಾಗಿದೆ. ಈ ಸಂದರ್ಭದಲ್ಲಿ ಸಲ್ಮಾನ್ ಖಾನ್ ಅವರು ಬೆಂಬಲಕ್ಕೆ ನಿಂತಿದ್ದಾರೆ. ಸಿನಿಮಾ ಕೆಲಸಗಳನ್ನು ಅವರು ಬದಿಗಿಟ್ಟಿದ್ದಾರೆ. ಬಿಗ್ ಬಾಸ್​ ಕಾರ್ಯಕ್ರಮದ ಚಿತ್ರೀಕರಣವನ್ನು ಅರ್ಧಕ್ಕೆ ನಿಲ್ಲಿಸಿ, ಬಾಬಾ ಸಿದ್ದಿಕಿಯ ಅಂತ್ಯಕ್ರಿಯೆಗೆ ಬೇಕಾದ ತಯಾರಿಯನ್ನು ಮಾಡಿದ್ದಾರೆ. ಬೆದರಿಕೆಗಳಿಗೆ ಹೆದರದೇ ಅವರು ಅಗಲಿದ ಸ್ನೇಹಿತರ ಕುಟುಂಬಕ್ಕೆ ಸಾಥ್ ನೀಡಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್​ಗೆ ಸಹಾಯ ಮಾಡುವವರಿಗೆ ಎಚ್ಚರಿಕೆ ನೀಡಿದ ಬಾಬಾ ಸಿದ್ಧಿಕಿ ಹಂತಕರು

ಶಾರುಖ್ ಖಾನ್​ ಅವರು ಒಂದಷ್ಟು ವರ್ಷಗಳ ಕಾಲ ಸಿನಿಮಾದ ಸತತ ಸೋಲಿನಿಂದ ಕುಗ್ಗಿದ್ದರು. ಅದೇ ಸಮಯದಲ್ಲಿ ಅವರ ಪುತ್ರ ಆರ್ಯನ್​ ಖಾನ್​ ಡ್ರಗ್ಸ್ ಪಾರ್ಟಿ ಆರೋಪದಲ್ಲಿ ಜೈಲು ಪಾಲಾಗಿದ್ದರು. ಆ ತಾಪತ್ರಯಗಳಿಂದ ಅವರು ಈಗ ಹೊರಬಂದಿದ್ದಾರೆ. ಮತ್ತೆ ಅನಗತ್ಯವಾದ ಸಂಕಷ್ಟದಲ್ಲಿ ಸಿಲುಕಿಕೊಳ್ಳಲು ಶಾರುಖ್​ಗೆ ಇಷ್ಟವಿಲ್ಲ. ತಾವಾಯಿತು, ತಮ್ಮ ಸಿನಿಮಾ ಆಯಿತು ಎಂದು ಅವರು ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಿದ್ದರಾಮಯ್ಯ ಆತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ಸಿದ್ದರಾಮಯ್ಯ ಆತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್
ಮಗನೇ ಮತ್ತೊಮ್ಮೆ ಹುಟ್ಟಿಬಂದಷ್ಟು ಸಂತೋಷವಾಗುತ್ತಿದೆ ಎಂದ ಶಿವನಗೌಡ
ಮಗನೇ ಮತ್ತೊಮ್ಮೆ ಹುಟ್ಟಿಬಂದಷ್ಟು ಸಂತೋಷವಾಗುತ್ತಿದೆ ಎಂದ ಶಿವನಗೌಡ
ಪ್ರಕೃತಿಗೆ ಬುದ್ಧಿ ಹೇಳಲಾಗುತ್ತಾ ಅಂತ ಹಾರಿಕೆ ಉತ್ತರಕ್ಕೆ ಶರಣಾದ ಶಿವಕುಮಾರ್
ಪ್ರಕೃತಿಗೆ ಬುದ್ಧಿ ಹೇಳಲಾಗುತ್ತಾ ಅಂತ ಹಾರಿಕೆ ಉತ್ತರಕ್ಕೆ ಶರಣಾದ ಶಿವಕುಮಾರ್
ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡಗುಡೆ
ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡಗುಡೆ
ಇಂದಿರಾನಗರದಲ್ಲಿ ವರುಣಾರ್ಭಟ; 17ನೇ ಡಿ ಕ್ರಾಸ್ ಸಂಪೂರ್ಣ ಜಲಾವೃತ
ಇಂದಿರಾನಗರದಲ್ಲಿ ವರುಣಾರ್ಭಟ; 17ನೇ ಡಿ ಕ್ರಾಸ್ ಸಂಪೂರ್ಣ ಜಲಾವೃತ
ಸುರಿವ ಮಳೆಯಿಂದ ಬೆಂಗಳೂರು ನಿವಾಸಿಗಳಿಗೆ ರಾತ್ರಿಯೂ ತಪ್ಪದ ಬವಣೆ
ಸುರಿವ ಮಳೆಯಿಂದ ಬೆಂಗಳೂರು ನಿವಾಸಿಗಳಿಗೆ ರಾತ್ರಿಯೂ ತಪ್ಪದ ಬವಣೆ