AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​, ಸಲ್ಮಾನ್​, ಆಮಿರ್​ ಜೊತೆ ಯಾಕೆ ನಟಿಸಿಲ್ಲ? ಅಸಲಿ ಕಾರಣ ತಿಳಿಸಿದ ಶ್ರದ್ಧಾ ಕಪೂರ್​

ಶ್ರದ್ಧಾ ಕಪೂರ್​ ಅವರಿಗೆ ‘ಸ್ತ್ರೀ 2’ ಸಿನಿಮಾದಿಂದ ಸಿಕ್ಕಿರುವ ಗೆಲುವು ಸಖತ್​ ದೊಡ್ಡದು. 6 ದಿನಕ್ಕೆ ವಿಶ್ವಾದ್ಯಂತ 373 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಆಗಿದೆ ಎಂಬುದು ಗಮನಾರ್ಹ ವಿಷಯ. ಚಿತ್ರರಂಗಕ್ಕೆ ಬಂದು ಹಲವು ವರ್ಷ ಕಳೆದಿದ್ದರೂ ಕೂಡ ಶ್ರದ್ಧಾ ಕಪೂರ್​ ಅವರು ಆಮಿರ್​ ಖಾನ್​, ಸಲ್ಮಾನ್​ ಖಾನ್​ ಹಾಗೂ ಶಾರುಖ್​ ಖಾನ್​ ಜೊತೆ ಸಿನಿಮಾ ಮಾಡಿಲ್ಲ.

ಶಾರುಖ್​, ಸಲ್ಮಾನ್​, ಆಮಿರ್​ ಜೊತೆ ಯಾಕೆ ನಟಿಸಿಲ್ಲ? ಅಸಲಿ ಕಾರಣ ತಿಳಿಸಿದ ಶ್ರದ್ಧಾ ಕಪೂರ್​
ಶ್ರದ್ಧಾ ಕಪೂರ್​, ಸಲ್ಮಾನ್​ ಖಾನ್​, ಶಾರುಖ್​ ಖಾನ್​, ಆಮಿರ್​ ಖಾನ್​
ಮದನ್​ ಕುಮಾರ್​
|

Updated on: Aug 21, 2024 | 7:30 PM

Share

ಬಾಲಿವುಡ್​ನಲ್ಲಿ ಆಮಿರ್​ ಖಾನ್​, ಸಲ್ಮಾನ್​ ಖಾನ್​, ಶಾರುಖ್​ ಖಾನ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ಜೊತೆ ನಟಿಸುವ ಅವಕಾಶ ಸಿಕ್ಕರೆ ಬಹುತೇಕ ಯಾವ ನಟಿಯೂ ನೋ ಎನ್ನುವುದಿಲ್ಲ. ಈ ಸೂಪರ್​ ಸ್ಟಾರ್​ಗಳ ಜೊತೆ ನಟಿಸಬೇಕು ಎಂಬುದು ಎಲ್ಲರ ಆಸೆ ಆಗಿರುತ್ತದೆ. ಬಾಲಿವುಡ್​ನ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾದ ಶ್ರದ್ಧಾ ಕಪೂರ್​ ಅವರು ಈವರೆಗೂ ಖಾನ್​ಗಳ ಸಿನಿಮಾದಲ್ಲಿ ನಟಿಸಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ಅವರು ಈಗ ತಿಳಿಸಿದ್ದಾರೆ. ಶ್ರದ್ಧಾ ಕಪೂರ್​ ಅವರಿಗೆ ‘ಸ್ತ್ರೀ 2’ ಸಿನಿಮಾದಿಂದ ಭರ್ಜರಿ ಗೆಲುವು ಸಿಕ್ಕಿದೆ.

ಶ್ರದ್ಧಾ ಕಪೂರ್​ ಅವರು ಬಾಲಿವುಡ್​ಗೆ ಕಾಲಿಟ್ಟು ಹಲವು ವರ್ಷ ಕಳೆದಿವೆ. ಸೂಪರ್​ ಹಿಟ್​ ಸಿನಿಮಾಗಳನ್ನು ಅವರು ನೀಡಿದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ‘ಸ್ತ್ರೀ 2’ ಸಿನಿಮಾ 300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿ, ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಈ ಖುಷಿಯಲ್ಲಿ ಇರುವ ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕೆಲವು ವಿಚಾರ ಹಂಚಿಕೊಂಡಿದ್ದಾರೆ.

ಸ್ಟಾರ್​ ಹೀರೋಗಳ ಸಿನಿಮಾ ಎಂಬುದಕ್ಕಿಂತಲೂ ಹೆಚ್ಚಾಗಿ ತಮ್ಮ ಪಾತ್ರಕ್ಕೆ ಎಷ್ಟು ಪ್ರಾಮುಖ್ಯತೆ ಇದೆ ಎಂಬುದು ಶ್ರದ್ಧಾ ಕಪೂರ್​ ಅವರಿಗೆ ಮುಖ್ಯವಾಗುತ್ತದೆ. ಈ ಹಿಂದೆ ಆಫರ್​ಗಳು ಬಂದಾಗ ತಮ್ಮ ಪಾತ್ರಕ್ಕೆ ಪ್ರಮುಖ್ಯತೆ ಇಲ್ಲ ಎಂಬುದನ್ನು ತಿಳಿದು ಅವರು ರಿಜೆಕ್ಟ್​ ಮಾಡಿದ್ದರು. ಶಾರುಖ್​ ಖಾನ್​, ಆಮಿರ್​ ಖಾನ್​, ಸಲ್ಮಾನ್​ ಖಾನ್​ ಜೊತೆ ಯಾಕೆ ಸಿನಿಮಾ ಮಾಡಿಲ್ಲ ಎಂಬುದಕ್ಕೆ ಇದೇ ಉತ್ತರ.

ಇದನ್ನೂ ಓದಿ: ರಾಹುಲ್​ ಮೋದಿ ಜೊತೆ ಶ್ರದ್ಧಾ ಕಪೂರ್​ ಬ್ರೇಕಪ್​? ನಟಿಯ ಲವ್​ ಸ್ಟೋರಿಗೆ ಪೂರ್ಣವಿರಾಮ

‘ಹಲವು ಬಾರಿ ಆಫರ್​ ಬರುತ್ತದೆ. ಆದರೆ ಆ ಪಾತ್ರ ಎಗ್ಸೈಟಿಂಗ್ ಮಾಡದಿದ್ದರೆ ಅಥವಾ ನಮ್ಮೊಳಗಿನ ಕಲಾವಿದೆಗೆ ಅದು ಚಾಲೆಂಜಿಂಗ್​ ಎನಿಸದೇ ಇದ್ದರೆ ನಾವು ಅದನ್ನು ಒಪ್ಪಿಕೊಳ್ಳುವುದಿಲ್ಲ. ನಾನು ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ತುಂಬ ಕಾಳಜಿ ವಹಿಸುತ್ತೇನೆ’ ಎಂದು ಶ್ರದ್ಧಾ ಕಪೂರ್​ ಅವರು ಹೇಳಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರನ್ನು ಫಾಲೋ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಶ್ರದ್ಧಾ ಕಪೂರ್​ ಅವರಿಗೆ 9.14 ಕೋಟಿ ಫಾಲೋವರ್ಸ್​ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ