AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಜನನ ಪ್ರಮಾಣಪತ್ರದಲ್ಲಿ ಧರ್ಮದ ಕಾಲಂ ಖಾಲಿ ಬಿಟ್ಟ ಖ್ಯಾತ ನಟ

ಧರ್ಮದ ವಿಚಾರದಲ್ಲಿ ನಟ ವಿಕ್ರಾಂತ್ ಮಾಸಿ ಅವರು ತಮ್ಮದೇ ನಿಲುವು ಹೊಂದಿದ್ದಾರೆ. ಮಗನ ಜನನ ಪ್ರಮಾಣಪತ್ರದಲ್ಲಿ ಧರ್ಮ ಯಾವುದು ಎಂಬುದನ್ನು ಅವರು ತಿಳಿಸಿಲ್ಲ. ಅದಕ್ಕೆ ಕಾರಣ ಕೂಡ ಇದೆ. ಆ ಬಗ್ಗೆ ವಿಕ್ರಾಂತ್ ಮಾಸಿ ಅವರು ವಿವರವಾಗಿ ಮಾತನಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಮಗನ ಜನನ ಪ್ರಮಾಣಪತ್ರದಲ್ಲಿ ಧರ್ಮದ ಕಾಲಂ ಖಾಲಿ ಬಿಟ್ಟ ಖ್ಯಾತ ನಟ
Vikrant Massey
ಮದನ್​ ಕುಮಾರ್​
|

Updated on: Jul 01, 2025 | 6:23 PM

Share

ನಟ ವಿಕ್ರಾಂತ್ ಮಾಸಿ ಅವರು ಬಾಲಿವುಡ್​ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ‘ಛಪಾಕ್’, ‘12th ಫೇಲ್’, ‘ದಿ ಸಾಬರಮತಿ ರಿಪೋರ್ಟ್’ ಮುಂತಾದ ಸಿನಿಮಾಗಳಿಂದ ಅವರಿಗೆ ಖ್ಯಾತಿ ಸಿಕ್ಕಿದೆ. ಅಲ್ಲದೇ ಧರ್ಮದ (Religion) ಬಗ್ಗೆ ತಾವು ಹೊಂದಿರುವ ನಿಲುವಿನ ಕಾರಣದಿಂದಲೂ ವಿಕ್ರಾಂತ್ ಮಾಸಿ ಅವರು ಚರ್​ಚೆಗೆ ಒಳಗಾಗುತ್ತಾರೆ. ಕಳೆದ ವರ್ಷ ಅವರಿಗೆ ಗಂಡು ಮಗು ಜನಿಸಿತು. ಮಗನ ಜನನ ಪ್ರಮಾಣಪತ್ರದ ಬಗ್ಗೆ ವಿಕ್ರಾಂತ್ ಮಾಸಿ (Vikrant Massey) ಅವರು ಈಗ ಮಾತನಾಡಿದ್ದಾರೆ. ಈ ಪ್ರಮಾಣಪತ್ರದಲ್ಲಿ ಧರ್ಮದ ಕಾಲಂ ಖಾಲಿ ಬಿಟ್ಟಿರುವುದಾಗಿ ಅವರು ಹೇಳಿದ್ದಾರೆ.

ನಟಿ ರಿಯಾ ಚಕ್ರವರ್ತಿ ನಡೆಸುವ ಪಾಡ್​ಕಾಸ್ಟ್​ಗೆ ವಿಕ್ರಾಂತ್ ಮಾಸಿ ಅವರು ಸಂದರ್ಶನ ನೀಡಿದ್ದಾರೆ. ವಿಕ್ರಾಂತ್ ಮಾಸಿ ಅವರು ಯಾವ ಧರ್ಮವನ್ನೂ ಪ್ರತ್ಯೇಕವಾಗಿ ಅನುಸರಿಸುವುದಿಲ್ಲ. ಆದರೆ ಅವರಿಗೆ ದೇವರ ಮೇಲೆ ನಂಬಿಕೆ ಇದೆ. ಈ ಎಲ್ಲ ವಿಚಾರಗಳ ಬಗ್ಗೆ ಅವರು ಪಾಡ್​ಕಾಸ್ಟ್​ನಲ್ಲಿ ಮಾತನಾಡಿದ್ದಾರೆ. ಮಗನ ಜನನ ಪ್ರಮಾಣಪತ್ರದಲ್ಲಿ ಧರ್ಮದ ಕಾಲಂ ಖಾಲಿ ಬಿಟ್ಟಿದ್ದಕ್ಕೆ ಅವರು ಕಾರಣ ತಿಳಿಸಿದ್ದಾರೆ.

‘ಧರ್ಮ ಎಂಬುದು ವೈಯಕ್ತಿಕ ಆಯ್ಕೆ ಎಂದು ನನಗೆ ಅನಿಸುತ್ತದೆ. ನನಗೆ ಅದು ಒಂದು ಜೀವನದ ಮಾರ್ಗ. ಎಲ್ಲರಿಗೂ ಅವರವರ ಧರ್ಮವನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕು ಇದೆ. ನನ್ನ ಮನೆಯಲ್ಲಿ ಎಲ್ಲ ರೀತಿಯ ಧರ್ಮ ನಿಮಗೆ ಸಿಗುತ್ತದೆ. ಧರ್ಮ ಎಂಬುದನ್ನು ಮನುಷ್ಯ ಮಾಡಿದ್ದು. ನಾನು ಪೂಜೆ ಮಾಡುತ್ತೇನೆ, ಗುರುದ್ವಾರಕ್ಕೆ ಹೋಗುತ್ತೇನೆ, ದರ್ಗಾಗೂ ಹೋಗುತ್ತೇನೆ. ಈ ಎಲ್ಲದರಲ್ಲೂ ನಾನು ಶಾಂತಿ ಪಡೆಯುತ್ತೇನೆ’ ಎಂದಿದ್ದಾರೆ ವಿಕ್ರಾಂತ್ ಮಾಸಿ.

ಇದನ್ನೂ ಓದಿ
Image
ಸಿನಿಮಾಗಳನ್ನು ಬಿಟ್ಟು ವಾಚ್‌ಮ್ಯಾನ್ ಆದ ನಟ; ಈ ಪರಿಸ್ಥಿತಿ ಯಾರಿಗೂ ಬರಬಾರದು
Image
ದಕ್ಷಿಣದ ನಿರ್ಮಾಪಕರ ನೋಡಿ ಕಲಿಯಿರಿ: ಸ್ಟಾರ್ ನಟ ಟಾಂಗ್
Image
ಬಾಲಿವುಡ್ ಹೀರೋಗಳ ಬಣ್ಣ ಬಯಲು ಮಾಡಿದ ಸೋನು ಸೂದ್
Image
‘ಬಾಲಿವುಡ್ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ’; ರಿಷಬ್ ಶೆಟ್ಟಿ

‘ನನ್ನ ಮಗನ ಜನನ ಪ್ರಮಾಣಪತ್ರದಲ್ಲಿ ನಾನು ಧರ್ಮದ ಕಾಲಂ ಖಾಲಿ ಬಿಟ್ಟಿದ್ದೇವೆ. ಸರ್ಕಾರದಿಂದ ಅವನ ಜನನ ಪ್ರಮಾಣಪತ್ರ ಬಂದಾಗ ಅದರಲ್ಲಿ ಧರ್ಮದ ಉಲ್ಲೇಖ ಇರಲಿಲ್ಲ. ಅಂದರೆ ಸರ್ಕಾರ ನಿಮಗೆ ಅದನ್ನು ಬರೆಯಲೇಬೇಕು ಅಂತ ಹೇಳಲ್ಲ. ಅದು ನಿಮಗೆ ಬಿಟ್ಟಿದ್ದು. ನನ್ನ ಮಗ ಯಾರನ್ನಾದರೂ ಧರ್ಮ, ಜಾತಿ ಆಧಾರದಲ್ಲಿ ನೋಡುತ್ತಾನೆ ಎಂದರೆ ನನಗೆ ಬೇಸರ ಆಗುತ್ತದೆ. ಅವನನ್ನು ನಾನು ಆ ರೀತಿ ಬೆಳೆಸಲ್ಲ’ ಎಂದು ವಿಕ್ರಾಂತ್ ಮಾಸಿ ಹೇಳಿದ್ದಾರೆ.

ಇದನ್ನೂ ಓದಿ: ರವಿ ಶಂಕರ್ ಗುರೂಜಿ ಪಾತ್ರ ಮಾಡಲಿರುವ ‘12th ಫೇಲ್’ ನಟ ವಿಕ್ರಾಂತ್ ಮಾಸಿ

ವಿಕ್ರಾಂತ್ ಮಾಸಿಯ ಕುಟುಂಬದಲ್ಲಿ ಎಲ್ಲ ಧರ್ಮಗಳ ಆಚರಣೆ ಇದೆ. ವಿಕ್ರಾಂತ್ ಮಾಸಿ ತಂದೆ ಕ್ರಿಶ್ಚಿಯನ್, ತಾಯಿ ಸಿಖ್ ಧರ್ಮ ಪಾಲಿಸುತ್ತಾರೆ. ವಿಕ್ರಾಂತ್ ಮಾಸಿ ಸಹೋದರ 17ನೇ ವಯಸ್ಸಿನಲ್ಲೇ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡರು. ರಜಪೂತ್ ಠಾಕೂರ್ ಕುಟುಂಬದ ಶೀತಲ್ ಅವರನ್ನು ವಿಕ್ರಾಂತ್ ಮಾಸಿ ಮದುವೆ ಆದರು. ಈ ರೀತಿ, ಎಲ್ಲ ಆಚರಣೆಗಳು ಅವರ ಮನೆಯಲ್ಲಿ ಇವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು