AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಶ್ಮೀರ್ ಫೈಲ್ಸ್​​ನ ವಿರೋಧಿಸಿದವರೇ ಕೇರಳ ಸ್ಟೋರಿಯನ್ನೂ ಟೀಕಿಸುತ್ತಿದ್ದಾರೆ’; ಅನುಪಮ್ ಖೇರ್

Anupam Kher: ‘ದಿ ಕೇರಳ ಸ್ಟೋರಿ’ ಚಿತ್ರದ ಬಗ್ಗೆ, ಅದಾ ಶರ್ಮಾ ಮಾಡಿರುವ ಪಾತ್ರಕ್ಕೆ ವಿರೋಧ ವ್ಯಕ್ತವಾಗಿದೆ. ಇದು ಸರಿ ಅಲ್ಲ ಎಂಬರ್ಥದಲ್ಲಿ ಅನುಪಮ್ ಖೇರ್ ಮಾತನಾಡಿದ್ದಾರೆ.

‘ಕಾಶ್ಮೀರ್ ಫೈಲ್ಸ್​​ನ ವಿರೋಧಿಸಿದವರೇ ಕೇರಳ ಸ್ಟೋರಿಯನ್ನೂ ಟೀಕಿಸುತ್ತಿದ್ದಾರೆ’; ಅನುಪಮ್ ಖೇರ್
ಅನುಪಮ್ ಖೇರ್-ಅದಾ ಶರ್ಮಾ
ರಾಜೇಶ್ ದುಗ್ಗುಮನೆ
|

Updated on: May 09, 2023 | 7:22 AM

Share

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ (The Kashmir Files) ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಈ ಚಿತ್ರವನ್ನು ಬ್ಯಾನ್ ಮಾಡುವ ಬಗ್ಗೆ ಒತ್ತಾಯಗಳು ಕೇಳಿ ಬಂದವು. ಆದರೆ, ಇದ್ಯಾವುದಕ್ಕೂ ಜಗ್ಗದೇ ಸಿನಿಮಾ 250 ಕೋಟಿ ರೂಪಾಯಿ ಗಳಿಕೆ ಮಾಡಿತು. ಈಗ ‘ದಿ ಕೇರಳ ಸ್ಟೋರಿ’ ಸಿನಿಮಾ ಕೂಡ ವಿವಾದದ ಕೇಂದ್ರಬಿಂದು ಆಗಿದೆ. ಈ ಚಿತ್ರಕ್ಕೆ ಭರ್ಜರಿ ವಿರೋಧ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದಲ್ಲಿ ಸಿನಿಮಾನ ಬ್ಯಾನ್ ಮಾಡಲಾಗಿದೆ. ಈ ಎಲ್ಲಾ ಬೆಳವಣಿಗೆ ಬಗ್ಗೆ ಖ್ಯಾತ ನಟ ಅನುಪಮ್ ಖೇರ್ (Anupam Kher) ಮಾತನಾಡಿದ್ದಾರೆ.

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದಲ್ಲಿ ಕಾಶ್ಮೀರಿ ಪಂಡಿತನ ಪಾತ್ರದಲ್ಲಿ ಅನುಪಮ್ ಖೇರ್ ಗಮನ ಸೆಳೆದಿದ್ದರು. ಇಡೀ ಚಿತ್ರದಲ್ಲಿ ಅವರ ಪಾತ್ರ ಹೈಲೈಟ್ ಆಗಿತ್ತು. ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ವಿರೋಧ ವ್ಯಕ್ತವಾದಾಗ ಅನುಪಮ್ ಖೇರ್ ಖಂಡಿಸಿದ್ದರು. ಇದು ಸರಿ ಅಲ್ಲ ಎಂದು ಅವರು ಹೇಳಿದ್ದರು. ಈಗ ‘ದಿ ಕೇರಳ ಸ್ಟೋರಿ’ ಚಿತ್ರದ ಬಗ್ಗೆ, ಅದಾ ಶರ್ಮಾ ಮಾಡಿರುವ ಪಾತ್ರಕ್ಕೆ ವಿರೋಧ ವ್ಯಕ್ತವಾಗಿದೆ. ಇದು ಸರಿ ಅಲ್ಲ ಎಂಬರ್ಥದಲ್ಲಿ ಅನುಪಮ್ ಖೇರ್ ಮಾತನಾಡಿದ್ದಾರೆ.

‘ಈ ರೀತಿಯ ಸಿನಿಮಾಗಳನ್ನು ವಿರೋಧಿಸುವವರು ಎಲ್ಲೆಡೆ ಕಾಣುತ್ತಾರೆ. ಸಿಎಎ ಪ್ರತಿಭಟನೆ, ಶಾಹೀನ್ ಬಾಗ್ ಪ್ರತಿಭಟನೆ ಅಥವಾ ಜೆಎನ್‌ಯು ಪ್ರತಿಭಟನೆಯಲ್ಲಿ ಅವರು ಕಾಣುತ್ತಾರೆ. ಕಾಶ್ಮೀರ್​ ಫೈಲ್ಸ್ ಅನ್ನು ಟೀಕಿಸಿದ್ದು ಇದೇ ಮುಖಗಳು. ನನಗೆ ಅವರ ಉದ್ದೇಶ ಏನು ಎಂಬುದು ತಿಳಿದಿಲ್ಲ. ಅವರ ಕಡೆಗೆ ಗಮನ ಹರಿಸೋಕೆ ಇಷ್ಟ ಇಲ್ಲ’ ಎಂದಿದ್ದಾರೆ ಅನುಪಮ್ ಖೇರ್.

‘ಮತ್ತೆ ನಾನು ಹೇಳುವುದು ಅದನ್ನೇ, ಇದು ಅದೇ ಮುಖಗಳು. ನಾನು ಸಿನಿಮಾ ನೋಡಿಲ್ಲ. ಆದರೆ ಜನ ವಾಸ್ತವಕ್ಕೆ ಹತ್ತಿರವಾದ ಸಿನಿಮಾ ಮಾಡುತ್ತಿರುವುದು ಖುಷಿ ತಂದಿದೆ. ಇದು ಪ್ರೊಪೊಗಾಂಡ ಸಿನಿಮಾ ಎಂದು ಕರೆಯುವವರು ಪರಿಪೂರ್ಣ ಎನಿಸುವ ವಿಷಯದೊಂದಿಗೆ ಸಿನಿಮಾ ಮಾಡಬಹುದು. ಅದನ್ನು ಯಾರೂ ತಡೆಯಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ: The Kerala Story: ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಬ್ಯಾನ್​; ನಿರ್ಧಾರಕ್ಕೆ ಕಾರಣ ತಿಳಿಸಿದ ಮಮತಾ ಬ್ಯಾನರ್ಜಿ

‘ದಿ ಕೇರಳ ಸ್ಟೋರಿ’ ಸಿನಿಮಾಗೆ ಸುದಿಪ್ತೋ ಸೇನ್ ನಿರ್ದೇಶನ ಮಾಡಿದ್ದಾರೆ. ವಿಪುಲ್ ಅಮೃತ್​ಲಾಲ್ ಶಾ ಅವರು ಇದನ್ನು ನಿರ್ಮಾಣ ಮಾಡಿದ್ದಾರೆ. ಮೂರು ದಿನಕ್ಕೆ ಸಿನಿಮಾ 35 ಕೋಟಿ ಗಳಿಕೆ ಮಾಡಿದೆ. ಕೇರಳದ 32 ಸಾವಿರ ಮಹಿಳೆಯರು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿ ಐಸಿಸ್ ಸೇರಿದ ಕಥೆಯನ್ನು ಆಧರಿಸಿ ಸಿನಿಮಾ ಮಾಡಲಾಗಿದೆ. ಇದು ನೈಜ ಘಟನೆ ಆಧಾರಿತ ಎಂದು ತಂಡ ಹೇಳಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?