AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಬಳಿಕ KKK ಎಂದು ಬದಲಾಗುತ್ತೆ ಕತ್ರಿನಾ ಕೈಫ್​ ಹೆಸರು; ಏನಿದರ ಅರ್ಥ?

Katrina Kaif: ಕತ್ರಿನಾ ಕೈಫ್​ ಅವರು ಮದುವೆ ಬಳಿಕ ತಮ್ಮ ಹೆಸರಿನ ಜೊತೆ ಗಂಡನ ಸರ್​ನೇಮ್​ ಸೇರಿಸಿಕೊಳ್ಳಲಿದ್ದಾರೆ. ‘ಟೈಗರ್​ 3’ ಸೇರಿದಂತೆ ಮುಂಬರುವ ಎಲ್ಲ ಸಿನಿಮಾದ ಟೈಟಲ್​ ಕಾರ್ಡ್​ನಲ್ಲಿ ಅವರು ಈ ಹೊಸ ಹೆಸರಿನಿಂದ ಗುರುತಿಸಿಕೊಳ್ಳುತ್ತಾರೆ ಎನ್ನಲಾಗಿದೆ.

ಮದುವೆ ಬಳಿಕ KKK ಎಂದು ಬದಲಾಗುತ್ತೆ ಕತ್ರಿನಾ ಕೈಫ್​ ಹೆಸರು; ಏನಿದರ ಅರ್ಥ?
ಕತ್ರಿನಾ ಕೈಫ್
TV9 Web
| Edited By: |

Updated on: Nov 20, 2021 | 8:41 AM

Share

ಬಾಲಿವುಡ್​ ನಟಿ ಕತ್ರಿನಾ ಕೈಫ್ (Katrina Kaif)​ ಅವರು ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ. ಅದಕ್ಕಾಗಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಪ್ರಿಯಕರ ವಿಕ್ಕಿ ಕೌಶಲ್​ (Vicky Kaushal) ಜೊತೆ ಅವರು ಅದ್ದೂರಿಯಾಗಿ ಮದುವೆ ಆಗಲಿದ್ದಾರೆ. ಎರಡೂ ಕುಟುಂಬದವರು ಈಗಾಗಲೇ ರಾಜಸ್ಥಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ರಾಜಸ್ಥಾನದ ಐಷಾರಾಮಿ ಹೋಟೆಲ್​ನಲ್ಲಿ ಈ ಸ್ಟಾರ್​ ಜೋಡಿಯ ವಿವಾಹ (Katrina Kaif Vicky Kaushal Marriage) ನಡೆಯಲಿದೆ. ಮದುವೆ ಬಳಿಕ ಕತ್ರಿನಾ ಕೈಫ್​ ಹೆಸರು ಕೊಂಚ ಬದಲಾಗಲಿದೆ. ಇನ್ಮುಂದೆ ಅವರನ್ನು KKK ಎಂದು ಅಭಿಮಾನಿಗಳು ಕರೆಯಬಹುದು. ಏನಿದು KKK? ಕತ್ರಿನಾ ಕೈಫ್​ ಕೌಶಲ್​! ಹೌದು, ಈ ಬಗ್ಗೆ ಬಾಲಿವುಡ್​ ಅಂಗಳದಿಂದ ಈಗಾಗಲೇ ಗುಸುಗುಸು ಕೇಳಿಬರುತ್ತಿದೆ. ಮದುವೆ ಬಳಿಕ ತಮ್ಮ ಹೆಸರಿನ ಜೊತೆಯಲ್ಲಿ ಕೌಶಲ್​ ಎಂಬ ಸರ್​ನೇಮ್​ ಸೇರಿಸಿಕೊಳ್ಳಲು ಕತ್ರಿನಾ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅವರು ಎಲ್ಲಿಯೂ ಅಧಿಕೃತವಾಗಿ ಹೇಳಿಕೊಂಡಿಲ್ಲ.

ಮದುವೆ ಬಳಿಕ ಅನೇಕ ನಟಿಯರು ತಮ್ಮ ಹೆಸರಿನ ಜೊತೆ ಗಂಡನ ಹೆಸರು ಅಥವಾ ಗಂಡನ ಕುಟುಂಬದ ಸರ್​ನೇಮ್​ ಸೇರಿಸಿಕೊಂಡಿದ್ದಾರೆ. ಐಶ್ವರ್ಯಾ ರೈ ಬಚ್ಚನ್​, ಕರೀನಾ ಕಪೂರ್ ಖಾನ್​ ಮುಂತಾದವರೇ ಈ ಮಾತಿಗೆ ಉದಾಹರಣೆ. ಅದೇ ರೀತಿ ಕತ್ರಿನಾ ಕೈಫ್​ ಕೂಡ ತಮ್ಮ ಹೆಸರಿನ ಜೊತೆ ಕೌಶಲ್​ ಎಂಬ ಸರ್​ನೇಮ್​ ಸೇರಿಸಿಕೊಳ್ಳಲಿದ್ದು, ಮುಂಬರುವ ಎಲ್ಲ ಸಿನಿಮಾದ ಟೈಟಲ್​ ಕಾರ್ಡ್​ನಲ್ಲಿ ಅವರು ಇದೇ ಹೆಸರಿನಿಂದ ಗುರುತಿಸಿಕೊಳ್ಳುತ್ತಾರೆ ಎನ್ನಲಾಗಿದೆ.

ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ಅವರಿಗೆ ಸಾಕಷ್ಟು ಸ್ನೇಹಿತರಿದ್ದಾರೆ. ಅವರೆಲ್ಲರನ್ನೂ ಮದುವೆ ಆಹ್ವಾನಿಸಲಾಗುತ್ತಿದೆ. ಮುಂಬೈ, ದೆಹಲಿ ಮುಂತಾದ ನಗರಗಳಿಂದ ಸ್ನೇಹಿತರು ಜೈಪುರಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಅವರ ಓಡಾಟಕ್ಕಾಗಿ ಜೈಪುರದಲ್ಲಿ ಇರುವ ಎಲ್ಲ ಐಷಾರಾಮಿ ಬಾಡಿಗೆ ಕಾರುಗಳನ್ನು ಈಗಲೇ ಬುಕ್​ ಮಾಡಲಾಗಿದೆ. ಮದುವೆ ನಡೆಯುವ ದಿನಾಂಕಗಳು (ಡಿಸೆಂಬರ್​ 7ರಿಂದ 9ರವರೆಗೆ) ಮಾತ್ರವಲ್ಲದೇ ಅದರ ಆಸುಪಾಸಿನ ದಿನಗಳಿಗೂ ಸೇರಿ ಕಾರುಗಳನ್ನು ಮುಂಗಡವಾಗಿ ಬುಕ್​ ಮಾಡಿಕೊಳ್ಳಲಾಗಿದೆ. ಇದರಿಂದಾಗಿ ಜೈಪುರ ಸುತ್ತಮುತ್ತ ಶೂಟಿಂಗ್​ ಮಾಡುತ್ತಿರುವ ಇತರೆ ಟಿವಿ ಮತ್ತು ಸಿನಿಮಾ ಸೆಲೆಬ್ರಿಟಿಗಳಿಗೆ ಕಾರಿನ ಅಭಾವ ಕಾಡಲಿದೆ ಎಂದು ವರದಿ ಆಗಿದೆ.

ಇದನ್ನೂ ಓದಿ:

ಮದುವೆ ಬಳಿಕ ಹನಿಮೂನ್​ಗೆ ಹೋಗಲ್ಲ ಕತ್ರಿನಾ ಕೈಫ್​-ವಿಕ್ಕಿ ಕೌಶಲ್​; ಕಾರಣ ಏನು?

ವಿಕ್ಕಿ ಕೌಶಲ್​ಗಿಂತ ಕತ್ರಿನಾ ಕೈಫ್​ ಎಷ್ಟು ವರ್ಷ ದೊಡ್ಡವರು? ಮದುವೆಗೆ ಅಡ್ಡಿ ಆಗಲಿಲ್ಲ ವಯಸ್ಸಿನ ಅಂತರ

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ