AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕಾಶ್ಮೀರ್​ ಫೈಲ್ಸ್​’ ನಿರ್ಮಾಪಕರ ಹೊಸ ಚಿತ್ರ ಅನೌನ್ಸ್​; ಮತ್ತೆ ನೈಜ ಘಟನೆ ಆಧಾರಿತ ಸಿನಿಮಾಗೆ ಬಂಡವಾಳ

Tiger Nageswara Rao: ನಟ ರವಿ ತೇಜ ಪಾಲಿಗೆ ‘ಟೈಗರ್​ ನಾಗೇಶ್ವರ ರಾವ್​’ ಮೊದಲ ಪ್ಯಾನ್​ ಇಂಡಿಯಾ ಸಿನಿಮಾ ಆಗಲಿದೆ. ಆ ಕಾರಣದಿಂದಲೂ ಈ ಚಿತ್ರ ನಿರೀಕ್ಷೆ ಸೃಷ್ಟಿ ಮಾಡಿದೆ.

‘ದಿ ಕಾಶ್ಮೀರ್​ ಫೈಲ್ಸ್​’ ನಿರ್ಮಾಪಕರ ಹೊಸ ಚಿತ್ರ ಅನೌನ್ಸ್​; ಮತ್ತೆ ನೈಜ ಘಟನೆ ಆಧಾರಿತ ಸಿನಿಮಾಗೆ ಬಂಡವಾಳ
ರವಿ ತೇಜ, ಟೈಗರ್​ ನಾಗೇಶ್ವರ ರಾವ್​ ಸಿನಿಮಾ ಪೋಸ್ಟರ್​
TV9 Web
| Edited By: |

Updated on: Apr 02, 2022 | 8:08 AM

Share

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ಮೂಡಿಬಂದ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ (The Kashmir Files) ಎಷ್ಟು ಸಂಚಲನ ಮೂಡಿಸಿತು ಎಂಬುದನ್ನು ಹೊಸದಾಗಿ ಹೇಳಬೇಕಾಗಿದ್ದಿಲ್ಲ. 200 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿದ ಈ ಸಿನಿಮಾಗೆ ಬಂಡವಾಳ ಹೂಡಿದವರು ನಿರ್ಮಾಪಕ ಅಭಿಷೇಕ್ ಅಗರ್​ವಾಲ್​. ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಿಂದ ಅವರಿಗೆ ಭರ್ಜರಿ ಲಾಭ ಆಗಿದೆ. ಕಡಿಮೆ ಬಜೆಟ್​ನಲ್ಲಿ ಮೂಡಿಬಂದ ಈ ಚಿತ್ರವು ಗಲ್ಲಾ ಪೆಟ್ಟಿಗೆಯಲ್ಲಿ ಧೂಳೆಬ್ಬಿಸಿತು. ಈಗ ಅವರು ಹೊಸ ಸಿನಿಮಾ ಅನೌನ್ಸ್​ ಮಾಡಿದ್ದಾರೆ. ಈ ಚಿತ್ರಕ್ಕೆ ‘ಟೈಗರ್​ ನಾಗೇಶ್ವರ ರಾವ್​’ (Tiger Nageswara Rao) ಎಂದು ಶೀರ್ಷಿಕೆ ಇಡಲಾಗಿದೆ. ವಿಶೇಷ ಏನೆಂದರೆ ಈ ಬಾರಿ ಕೂಡ ಅಭಿಷೇಕ್​ ಅಗರ್​ವಾಲ್​ ಅವರು ನೈಜ ಘಟನೆ ಆಧಾರಿತ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಆ ಕಾರಣದಿಂದ ಮತ್ತೆ ಎಲ್ಲರಲ್ಲೂ ಕೌತುಕ ಮೂಡಿವಂತಾಗಿದೆ. ಬಹುಭಾಷೆಯಲ್ಲಿ ‘ಟೈಗರ್​ ನಾಗೇಶ್ವರ ರಾವ್​’ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಚಿತ್ರದಲ್ಲಿ ಟಾಲಿವುಡ್​ನ ಖ್ಯಾತ ನಟ ‘ಮಾಸ್​ ಮಹಾರಾಜ’ ರವಿ ತೇಜ (Ravi Teja) ಅವರು ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ. ವಂಶಿ ಅವರು ನಿರ್ದೇಶನ ಮಾಡಲಿದ್ದಾರೆ.

ಸ್ಟೂವರ್ಟ್​ಪುರಂನಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ‘ಟೈಗರ್​ ನಾಗೇಶ್ವರ ರಾವ್​’ ನಿರ್ಮಾಣ ಆಗಲಿದೆ. ಇಂದು (ಮಾ.2) ಯುಗಾದಿ ಹಬ್ಬದ ಪ್ರಯುಕ್ತ ಪ್ರೀ-ಲುಕ್​ ಪೋಸ್ಟರ್​ ರಿಲೀಸ್​ ಆಗಲಿದೆ. ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮೂಡಿಬರಲಿದೆ. ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾವನ್ನು ನಿರ್ಮಾಣ ಮಾಡಿದ ಅಭಿಷೇಕ್​ ಅಗರ್​ವಾಲ್​ ಅವರ ‘ಅಭಿಷೇಕ್​ ಅಗರ್​ವಾಲ್​ ಆರ್ಟ್ಸ್​’ ಬ್ಯಾನರ್​ ಮೂಲಕ ‘ಟೈಗರ್​ ನಾಗೇಶ್ವರ ರಾವ್​’ ಚಿತ್ರ ಸಿದ್ಧವಾಗಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

ನಟ ರವಿ ತೇಜ ಪಾಲಿಗೆ ಇದು ಮೊದಲ ಪ್ಯಾನ್​ ಇಂಡಿಯಾ ಸಿನಿಮಾ ಆಗಲಿದೆ. ಆ ಕಾರಣದಿಂದಲೂ ‘ಟೈಗರ್​ ನಾಗೇಶ್ವರ ರಾವ್​’ ಚಿತ್ರ ನಿರೀಕ್ಷೆ ಸೃಷ್ಟಿ ಮಾಡಿದೆ. ಕುಖ್ಯಾತ ಹಾಗೂ ಧೈರ್ಯಶಾಲಿ ಕಳ್ಳನ ಕಥಾನಕವನ್ನು ಒಳಗೊಂಡಿರುವ ಈ ಚಿತ್ರದಲ್ಲಿ ರವಿತೇಜ ಅವರು ಸಂಪೂರ್ಣ ಭಿನ್ನವಾಗಿ ಕಾಣಿಸಿಕೊಳ್ಳಲಿದ್ದಾರೆ. ಅವರಿಗೆ ನಾಯಕಿಯರಾಗಿ ನೂಪುರ್​ ಸನೋನ್​, ಗಾಯತ್ರಿ ಭಾರದ್ವಜ್​ ಅವರು ನಟಿಸಲಿದ್ದಾರೆ. ಮತ್ತೋರ್ವ ನಟಿ ಕೂಡ ಈ ಸಿನಿಮಾದಲ್ಲಿ ಇರಲಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

ರೆಟ್ರೋ ಶೈಲಿಯಲ್ಲಿ ‘ಟೈಗರ್​ ನಾಗೇಶ್ವರ ರಾವ್​’ ಸಿನಿಮಾ ಮೂಡಿಬರಲಿದೆ. ಅದಕ್ಕಾಗಿ ನುರಿತ ತಂತ್ರಜ್ಞರ ತಂಡ ತೆರೆಹಿಂದೆ ಕೆಲಸ ಮಾಡುತ್ತಿದೆ. ಆರ್​. ಮ್ಯಾಥಿ ಐಎಸ್​ಸಿ ಅವರು ಛಾಯಾಗ್ರಹಣ, ಜಿವಿ ಪ್ರಕಾಶ್​ ಕುಮಾರ್​ ಸಂಗೀತ ನಿರ್ದೇಶನ, ಶ್ರೀಕಾಂತ್ ವಿಸ್ಸಾ ಸಂಭಾಷಣೆಯ ಜವಾಬ್ದಾರಿ ಹೊತ್ತಿದ್ದಾರೆ. ಮಯಾಂಕ್ ಸಿಂಘಾನಿಯಾ ಅವರು ಸಹ-ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ.

ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ‘ಟೈಗರ್​ ನಾಗೇಶ್ವರ ರಾವ್​’ ತಯಾರಾಗಲಿದೆ. ಈಗ ಎಲ್ಲ ಭಾಷೆಯ ಚಿತ್ರರಂಗದಲ್ಲೂ ಪ್ಯಾನ್​ ಇಂಡಿಯಾ ಸಿನಿಮಾಗಳ ಹವಾ ಹೆಚ್ಚುತ್ತಿದೆ. ಇಂಥ ಸಂದರ್ಭಕ್ಕೆ ಸರಿಯಾಗಿ ರವಿ ತೇಜ ಅವರು ಈ ಚಿತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದ ನಿರ್ಮಾಪಕ ಅಭಿಷೇಕ್​ ಅಗರ್​ವಾಲ್​ ಅವರು ‘ಟೈಗರ್​ ನಾಗೇಶ್ವರ ರಾವ್​’ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ ಎಂಬುದು ಎಲ್ಲರ ಗಮನ ಸೆಳೆದಿದೆ. ಈ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಸಿನಿಪ್ರಿಯರು ಕಾದಿದ್ದಾರೆ.

ಇದನ್ನೂ ಓದಿ:

ಲಾಭ ಮಾಡುವಲ್ಲಿ ‘ಉರಿ’ ಸಿನಿಮಾವನ್ನೂ ಮೀರಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ; ಇಲ್ಲಿದೆ ಲೆಕ್ಕಾಚಾರ

‘ದಿ ಕಾಶ್ಮೀರ್​ ಫೈಲ್ಸ್​​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಶಿ ಹಿನ್ನೆಲೆ ಏನು? ಇಲ್ಲಿದೆ ಅವರ ಲವ್​ಸ್ಟೋರಿ

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?