AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕಾಶ್ಮೀರ್​ ಫೈಲ್ಸ್​’ ನಿರ್ಮಾಪಕರ ಹೊಸ ಚಿತ್ರ ಅನೌನ್ಸ್​; ಮತ್ತೆ ನೈಜ ಘಟನೆ ಆಧಾರಿತ ಸಿನಿಮಾಗೆ ಬಂಡವಾಳ

Tiger Nageswara Rao: ನಟ ರವಿ ತೇಜ ಪಾಲಿಗೆ ‘ಟೈಗರ್​ ನಾಗೇಶ್ವರ ರಾವ್​’ ಮೊದಲ ಪ್ಯಾನ್​ ಇಂಡಿಯಾ ಸಿನಿಮಾ ಆಗಲಿದೆ. ಆ ಕಾರಣದಿಂದಲೂ ಈ ಚಿತ್ರ ನಿರೀಕ್ಷೆ ಸೃಷ್ಟಿ ಮಾಡಿದೆ.

‘ದಿ ಕಾಶ್ಮೀರ್​ ಫೈಲ್ಸ್​’ ನಿರ್ಮಾಪಕರ ಹೊಸ ಚಿತ್ರ ಅನೌನ್ಸ್​; ಮತ್ತೆ ನೈಜ ಘಟನೆ ಆಧಾರಿತ ಸಿನಿಮಾಗೆ ಬಂಡವಾಳ
ರವಿ ತೇಜ, ಟೈಗರ್​ ನಾಗೇಶ್ವರ ರಾವ್​ ಸಿನಿಮಾ ಪೋಸ್ಟರ್​
TV9 Web
| Edited By: |

Updated on: Apr 02, 2022 | 8:08 AM

Share

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ಮೂಡಿಬಂದ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ (The Kashmir Files) ಎಷ್ಟು ಸಂಚಲನ ಮೂಡಿಸಿತು ಎಂಬುದನ್ನು ಹೊಸದಾಗಿ ಹೇಳಬೇಕಾಗಿದ್ದಿಲ್ಲ. 200 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿದ ಈ ಸಿನಿಮಾಗೆ ಬಂಡವಾಳ ಹೂಡಿದವರು ನಿರ್ಮಾಪಕ ಅಭಿಷೇಕ್ ಅಗರ್​ವಾಲ್​. ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಿಂದ ಅವರಿಗೆ ಭರ್ಜರಿ ಲಾಭ ಆಗಿದೆ. ಕಡಿಮೆ ಬಜೆಟ್​ನಲ್ಲಿ ಮೂಡಿಬಂದ ಈ ಚಿತ್ರವು ಗಲ್ಲಾ ಪೆಟ್ಟಿಗೆಯಲ್ಲಿ ಧೂಳೆಬ್ಬಿಸಿತು. ಈಗ ಅವರು ಹೊಸ ಸಿನಿಮಾ ಅನೌನ್ಸ್​ ಮಾಡಿದ್ದಾರೆ. ಈ ಚಿತ್ರಕ್ಕೆ ‘ಟೈಗರ್​ ನಾಗೇಶ್ವರ ರಾವ್​’ (Tiger Nageswara Rao) ಎಂದು ಶೀರ್ಷಿಕೆ ಇಡಲಾಗಿದೆ. ವಿಶೇಷ ಏನೆಂದರೆ ಈ ಬಾರಿ ಕೂಡ ಅಭಿಷೇಕ್​ ಅಗರ್​ವಾಲ್​ ಅವರು ನೈಜ ಘಟನೆ ಆಧಾರಿತ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಆ ಕಾರಣದಿಂದ ಮತ್ತೆ ಎಲ್ಲರಲ್ಲೂ ಕೌತುಕ ಮೂಡಿವಂತಾಗಿದೆ. ಬಹುಭಾಷೆಯಲ್ಲಿ ‘ಟೈಗರ್​ ನಾಗೇಶ್ವರ ರಾವ್​’ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಚಿತ್ರದಲ್ಲಿ ಟಾಲಿವುಡ್​ನ ಖ್ಯಾತ ನಟ ‘ಮಾಸ್​ ಮಹಾರಾಜ’ ರವಿ ತೇಜ (Ravi Teja) ಅವರು ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ. ವಂಶಿ ಅವರು ನಿರ್ದೇಶನ ಮಾಡಲಿದ್ದಾರೆ.

ಸ್ಟೂವರ್ಟ್​ಪುರಂನಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ‘ಟೈಗರ್​ ನಾಗೇಶ್ವರ ರಾವ್​’ ನಿರ್ಮಾಣ ಆಗಲಿದೆ. ಇಂದು (ಮಾ.2) ಯುಗಾದಿ ಹಬ್ಬದ ಪ್ರಯುಕ್ತ ಪ್ರೀ-ಲುಕ್​ ಪೋಸ್ಟರ್​ ರಿಲೀಸ್​ ಆಗಲಿದೆ. ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮೂಡಿಬರಲಿದೆ. ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾವನ್ನು ನಿರ್ಮಾಣ ಮಾಡಿದ ಅಭಿಷೇಕ್​ ಅಗರ್​ವಾಲ್​ ಅವರ ‘ಅಭಿಷೇಕ್​ ಅಗರ್​ವಾಲ್​ ಆರ್ಟ್ಸ್​’ ಬ್ಯಾನರ್​ ಮೂಲಕ ‘ಟೈಗರ್​ ನಾಗೇಶ್ವರ ರಾವ್​’ ಚಿತ್ರ ಸಿದ್ಧವಾಗಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

ನಟ ರವಿ ತೇಜ ಪಾಲಿಗೆ ಇದು ಮೊದಲ ಪ್ಯಾನ್​ ಇಂಡಿಯಾ ಸಿನಿಮಾ ಆಗಲಿದೆ. ಆ ಕಾರಣದಿಂದಲೂ ‘ಟೈಗರ್​ ನಾಗೇಶ್ವರ ರಾವ್​’ ಚಿತ್ರ ನಿರೀಕ್ಷೆ ಸೃಷ್ಟಿ ಮಾಡಿದೆ. ಕುಖ್ಯಾತ ಹಾಗೂ ಧೈರ್ಯಶಾಲಿ ಕಳ್ಳನ ಕಥಾನಕವನ್ನು ಒಳಗೊಂಡಿರುವ ಈ ಚಿತ್ರದಲ್ಲಿ ರವಿತೇಜ ಅವರು ಸಂಪೂರ್ಣ ಭಿನ್ನವಾಗಿ ಕಾಣಿಸಿಕೊಳ್ಳಲಿದ್ದಾರೆ. ಅವರಿಗೆ ನಾಯಕಿಯರಾಗಿ ನೂಪುರ್​ ಸನೋನ್​, ಗಾಯತ್ರಿ ಭಾರದ್ವಜ್​ ಅವರು ನಟಿಸಲಿದ್ದಾರೆ. ಮತ್ತೋರ್ವ ನಟಿ ಕೂಡ ಈ ಸಿನಿಮಾದಲ್ಲಿ ಇರಲಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

ರೆಟ್ರೋ ಶೈಲಿಯಲ್ಲಿ ‘ಟೈಗರ್​ ನಾಗೇಶ್ವರ ರಾವ್​’ ಸಿನಿಮಾ ಮೂಡಿಬರಲಿದೆ. ಅದಕ್ಕಾಗಿ ನುರಿತ ತಂತ್ರಜ್ಞರ ತಂಡ ತೆರೆಹಿಂದೆ ಕೆಲಸ ಮಾಡುತ್ತಿದೆ. ಆರ್​. ಮ್ಯಾಥಿ ಐಎಸ್​ಸಿ ಅವರು ಛಾಯಾಗ್ರಹಣ, ಜಿವಿ ಪ್ರಕಾಶ್​ ಕುಮಾರ್​ ಸಂಗೀತ ನಿರ್ದೇಶನ, ಶ್ರೀಕಾಂತ್ ವಿಸ್ಸಾ ಸಂಭಾಷಣೆಯ ಜವಾಬ್ದಾರಿ ಹೊತ್ತಿದ್ದಾರೆ. ಮಯಾಂಕ್ ಸಿಂಘಾನಿಯಾ ಅವರು ಸಹ-ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ.

ಬಹುಕೋಟಿ ರೂಪಾಯಿ ಬಜೆಟ್​ನಲ್ಲಿ ‘ಟೈಗರ್​ ನಾಗೇಶ್ವರ ರಾವ್​’ ತಯಾರಾಗಲಿದೆ. ಈಗ ಎಲ್ಲ ಭಾಷೆಯ ಚಿತ್ರರಂಗದಲ್ಲೂ ಪ್ಯಾನ್​ ಇಂಡಿಯಾ ಸಿನಿಮಾಗಳ ಹವಾ ಹೆಚ್ಚುತ್ತಿದೆ. ಇಂಥ ಸಂದರ್ಭಕ್ಕೆ ಸರಿಯಾಗಿ ರವಿ ತೇಜ ಅವರು ಈ ಚಿತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದ ನಿರ್ಮಾಪಕ ಅಭಿಷೇಕ್​ ಅಗರ್​ವಾಲ್​ ಅವರು ‘ಟೈಗರ್​ ನಾಗೇಶ್ವರ ರಾವ್​’ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ ಎಂಬುದು ಎಲ್ಲರ ಗಮನ ಸೆಳೆದಿದೆ. ಈ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಸಿನಿಪ್ರಿಯರು ಕಾದಿದ್ದಾರೆ.

ಇದನ್ನೂ ಓದಿ:

ಲಾಭ ಮಾಡುವಲ್ಲಿ ‘ಉರಿ’ ಸಿನಿಮಾವನ್ನೂ ಮೀರಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ; ಇಲ್ಲಿದೆ ಲೆಕ್ಕಾಚಾರ

‘ದಿ ಕಾಶ್ಮೀರ್​ ಫೈಲ್ಸ್​​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಶಿ ಹಿನ್ನೆಲೆ ಏನು? ಇಲ್ಲಿದೆ ಅವರ ಲವ್​ಸ್ಟೋರಿ

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ