AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗನ ಮೊದಲ ಬಾಲಿವುಡ್ ಸಿನಿಮಾಕ್ಕೆ 23 ಕಟ್

Baaghi 4 movie: ಶಾರುಖ್ ಖಾನ್, ಸಲ್ಮಾನ್ ಖಾನ್ ಅವರುಗಳು ದಕ್ಷಿಣದ ನಿರ್ದೇಶಕರ ಮೊರೆ ಹೋಗಿದ್ದಾರೆ. ಆಮಿರ್ ಖಾನ್​ಗೂ ಸಹ ಲೋಕೇಶ್ ಕನಗರಾಜ್ ಹೊಸ ಸಿನಿಮಾ ನಿರ್ದೇಶಿಸಲಿದ್ದಾರೆ. ಆದರೆ ಹೀಗೆ ಬಾಲಿವುಡ್​ಗೆ ಹೋದವರಲ್ಲಿ ತಮಿಳು, ತೆಲುಗಿನ ನಿರ್ದೇಶಕರೇ ಹೆಚ್ಚು. ಆದರೆ ಇದೀಗ ಕನ್ನಡದ ಸಿನಿಮಾ ನಿರ್ದೇಶಕರೊಬ್ಬರು ಬಾಲಿವುಡ್​ಗೆ ಪದಾರ್ಪಣೆ ಮಾಡಿದ್ದಾರೆ. ಆದರೆ ಅವರ ಮೊದಲ ಸಿನಿಮಾಕ್ಕೆ ಸಿಬಿಎಫ್​ಸಿ ಬರೋಬ್ಬರಿ 23 ಕಟ್​​ಗಳನ್ನು ಸೂಚಿಸಿದೆ.

ಕನ್ನಡಿಗನ ಮೊದಲ ಬಾಲಿವುಡ್ ಸಿನಿಮಾಕ್ಕೆ 23 ಕಟ್
Baaghi
ಮಂಜುನಾಥ ಸಿ.
|

Updated on: Sep 05, 2025 | 10:44 AM

Share

ದಕ್ಷಿಣ ಭಾರತದ ಸಿನಿಮಾ ನಿರ್ದೇಶಕರು ಬಾಲಿವುಡ್ ಸ್ಟಾರ್ ನಟರುಗಳಿಗೆ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಶಾರುಖ್ ಖಾನ್, ಸಲ್ಮಾನ್ ಖಾನ್ ಇದೀಗ ಆಮಿರ್ ಖಾನ್​ಗೂ ಸಹ ಲೋಕೇಶ್ ಕನಗರಾಜ್ ಹೊಸ ಸಿನಿಮಾ ನಿರ್ದೇಶಿಸಲಿದ್ದಾರೆ. ಆದರೆ ಹೀಗೆ ಬಾಲಿವುಡ್​ಗೆ ಹೋದವರಲ್ಲಿ ತಮಿಳು, ತೆಲುಗಿನ ನಿರ್ದೇಶಕರೇ ಹೆಚ್ಚು. ಆದರೆ ಇದೀಗ ಕನ್ನಡದ ಸಿನಿಮಾ ನಿರ್ದೇಶಕರೊಬ್ಬರು ಬಾಲಿವುಡ್​ಗೆ ಪದಾರ್ಪಣೆ ಮಾಡಿದ್ದಾರೆ. ಆದರೆ ಅವರ ಮೊದಲ ಸಿನಿಮಾಕ್ಕೆ ಸಿಬಿಎಫ್​ಸಿ ಬರೋಬ್ಬರಿ 23 ಕಟ್​​ಗಳನ್ನು ಸೂಚಿಸಿದೆ.

‘ಭಜರಂಗಿ’, ‘ಗೆಳೆಯ’, ‘ವಜ್ರಕಾಯ’, ‘ವೇದ’ ಇನ್ನೂ ಕೆಲವು ಸೂಪರ್ ಹಿಟ್ ಸಿನಿಮಾಗಳನ್ನು ಕನ್ನಡಕ್ಕೆ ನೀಡಿರುವ ಎ ಹರ್ಷ ಇದೀಗ ಬಾಲಿವುಡ್​ಗೆ ಕಾಲಿಟ್ಟಿದ್ದಾರೆ. ಬಾಲಿವುಡ್​ನ ಸ್ಟಾರ್ ಯುವ ನಟ ಟೈಗರ್ ಶ್ರಾಫ್ ನಟನೆಯ ‘ಭಾಗಿ 4’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಸಿನಿಮಾನಲ್ಲಿ ಸಂಜಯ್ ದತ್ ವಿಲನ್. ಸೋನಮ್ ಭಾಜ್ವಾ, ಹರ್ನಾಜ್ ಸಂಧು ಅವರುಗಳು ನಾಯಕಿಯರಾಗಿ ನಟಿಸಿದ್ದಾರೆ. ಸಿನಿಮಾ ಇಂದು (ಸೆಪ್ಟೆಂಬರ್ 5) ಬಿಡುಗಡೆ ಆಗಿದ್ದು ಮೊದಲ ಶೋಕ್ಕೆ ಒಳ್ಳೆಯ ಪ್ರತಿಕ್ರಿಯೆ ದೊರೆತಿದೆ.

ಆದರೆ ಈ ಸಿನಿಮಾಕ್ಕೆ ಸಿಬಿಎಫ್​​ಸಿ ಬರೋಬ್ಬರಿ 23 ಕಟ್​​ಗಳನ್ನು ಸೂಚಿಸಿದೆ. ಪಕ್ಕಾ ಆಕ್ಷನ್ ಸಿನಿಮಾ ಇದಾಗಿದ್ದು, ಸಿನಿಮಾನಲ್ಲಿ ನಾಯಕ ಪ್ರೇಮವೈಫಲ್ಯದಿಂದಾಗಿ ಕುಡಿತದ ದಾಸನಾಗಿರುತ್ತಾನೆ. ಹಾಗಾಗಿ ಸಿನಿಮಾನಲ್ಲಿ ಕುಡಿತದ ದೃಶ್ಯಗಳು, ಸಿಗರೇಟು, ಗಾಂಜಾ ಸೇದುವ ದೃಶ್ಯಗಳು ಸಹ ಹೆಚ್ಚಿಗೆ ಇವೆ. ಆಕ್ಷನ್ ಸಿನಿಮಾ ಆಗಿರುವ ಕಾರಣದಿಂದಾಗಿ ಸಹಜವಾಗಿಯೇ ಸಿನಿಮಾನಲ್ಲಿ ಹಿಂಸೆಯೂ ಸಹ ಹೆಚ್ಚಾಗಿಯೇ ಇದೆ. ಹೀಗಾಗಿ ಸಿಬಿಎಫ್​​ಸಿ 23 ದೃಶ್ಯಗಳಿಗೆ ಕತ್ತರಿ ಹಾಕಿದೆ. ಹಲವು ಸಂಭಾಷಣೆಗಳ್ನು ಮ್ಯೂಟ್ ಮಾಡಿದೆ, ಬದಲಾವಣೆ ಮಾಡಿಸಲಾಗಿದೆ. ಇದೆಲ್ಲದರ ಹೊರತಾಗಿಯೂ ಸಹ ಸಿನಿಮಾಕ್ಕೆ ಎ ಪ್ರಮಾಣ ಪತ್ರ ನೀಡಲಾಗಿದೆ.

ಇದನ್ನೂ ಓದಿ:ಸಂಕಷ್ಟದಲ್ಲಿ ಯೋಗಿ ಆದಿತ್ಯನಾಥ ಕುರಿತ ಸಿನಿಮಾ, ಸಿಬಿಎಫ್​ಸಿಗೆ ಕೋರ್ಟ್ ನೊಟೀಸ್

ದೀಪದಲ್ಲಿ ಸಿಗರೇಟು ಹೊತ್ತಿಸುವ ದೃಶ್ಯವನ್ನು ತೆಗೆದು ಹಾಕಲಾಗಿದೆ. ಜೊತೆಗೆ ಕೆಲವು ಅಶ್ಲೀಲ ಸಂಭಾಷಣೆಗಳನ್ನು ಮ್ಯೂಟ್ ಮಾಡಲಾಗಿದ್ದು, ಕೆಲವನ್ನು ತೆಗೆದು ಹಾಕಲಾಗಿದೆ. ಸಾಕಷ್ಟು ಬದಲಾವಣೆಗಳ ಬಳಿಕವೂ ಸಹ ಸಿನಿಮಾಕ್ಕೆ ಎ ಸರ್ಟಿಫಿಕೇಟ್ ದೊರೆತಿದ್ದು, ‘ಭಾಗಿ 4’ ಸಿನಿಮಾ ಇಂದು (ಸೆಪ್ಟೆಂಬರ್ 5) ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದು, ಮೊದಲ ಶೋಕ್ಕೆ ವೀಕ್ಷಕರು ಒಳ್ಳೆಯ ಪ್ರತಿಕ್ರಿಯೆ ನೀಡಿದ್ದಾರೆ.

‘ಭಾಗಿ’ ಸಿನಿಮಾ ಸರಣಿ ಹಲವು ವರ್ಷಗಳಿಂದಲೂ ಯಶಸ್ವಿಯಾಗಿ ನಡೆಯುತ್ತಾ ಬಂದಿದೆ. ಟೈಗರ್ ಶ್ರಾಫ್ ವರೇ ‘ಭಾಗಿ’ ಸರಣಿಯ ನಾಯಕರಾಗಿ ನಟಿಸುತ್ತಾ ಬಂದಿದ್ದಾರೆ. ಆಕ್ಷನ್ ಸಿನಿಮಾ ಆಗಿದ್ದ ‘ಭಾಗಿ’ ಅನ್ನು ಈ ಬಾರಿ ಆಕ್ಷನ್ ಜೊತೆಗೆ ರೊಮ್ಯಾಂಟಿಕ್ ಥ್ರಿಲ್ಲರ್ ಆಗಿಯೂ ಬದಲಾಯಿಸಿದ್ದಾರೆ ಎ ಹರ್ಷ. ಈ ಸಿನಿಮಾದ ಯಶಸ್ಸಿನ ಮೂಲಕ ಹರ್ಷ ಬಾಲಿವುಡ್​​ನಲ್ಲಿ ಇನ್ನಷ್ಟು ಅವಕಾಶಗಳನ್ನು ಪಡೆದುಕೊಳ್ಳುತ್ತಾರಾ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ