AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಲಗ್ಗೆ ಇಡುತ್ತಿದೆ ‘ಹೀರೋಪಂತಿ 2’; ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿಕೊಂಡ ಟೈಗರ್

‘ಹೀರೋಪಂತಿ’ ಸಿನಿಮಾ ಗೆದ್ದು ಬೀಗಿತ್ತು. ಈ ಕಾರಣಕ್ಕೆ ಚಿತ್ರದ ಸೀಕ್ವೆಲ್ ಬಗ್ಗೆ ನಿರೀಕ್ಷೆ ಮೂಡಿತ್ತು. ಆದರೆ, ಈ ಚಿತ್ರಕ್ಕೆ ಹೇಳಿಕೊಳ್ಳುವಂತಹ ವಿಮರ್ಶೆ ಸಿಕ್ಕಿಲ್ಲ.

ಒಟಿಟಿಗೆ ಲಗ್ಗೆ ಇಡುತ್ತಿದೆ ‘ಹೀರೋಪಂತಿ 2’; ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿಕೊಂಡ ಟೈಗರ್
ಹೀರೋಪಂತಿ 2
TV9 Web
| Edited By: |

Updated on: May 26, 2022 | 7:00 AM

Share

ನಟ ಟೈಗರ್ ಶ್ರಾಫ್ (Tiger Shroff)​ ಸಿನಿಮಾಗಳಲ್ಲಿ ಆ್ಯಕ್ಷನ್​ ದೃಶ್ಯಗಳಿಗೆ ಹೆಚ್ಚು ಒತ್ತು ನೀಡಲಾಗುತ್ತದೆ. ಮೈನವಿರೇಳಿಸುವ ದೃಶ್ಯಗಳಿಗೆ ಹೆಚ್ಚು ಆದ್ಯತೆ ಇರುತ್ತದೆ. ಈ ಮೊದಲು ಇದು ಅನೇಕ ಬಾರಿ ಸಾಬೀತಾಗಿದೆ. ಅವರು ಮಾಡುವ ಸ್ಟಂಟ್ಸ್​​ಗಳನ್ನು ನೋಡೋಕೆ ಅವರ ಫ್ಯಾನ್ಸ್​ ಇಷ್ಟಪಡುತ್ತಾರೆ. ಇತ್ತೀಚೆಗೆ ಅವರ ನಟನೆಯ ‘ಹೀರೋಪಂತಿ 2’ ಸಿನಿಮಾ (Heropanti 2 ) ರಿಲೀಸ್ ಆಗಿತ್ತು. ಸಿನಿಮಾ ಬಗ್ಗೆ ನೆಗೆಟಿವ್ ವಿಮರ್ಶೆಗಳು ಬಂದವು. ಇನ್ನು, ‘ಕೆಜಿಎಫ್ 2’ ಅಬ್ಬರಕ್ಕೆ ಚಿತ್ರ ನಲುಗಿ ಹೋಗಿತ್ತು. ಹೀಗಾಗಿ, ಕೆಲವೇ ದಿನಗಳಲ್ಲಿ ಟೈಗರ್​ ನಟನೆಯ ಸಿನಿಮಾ ಚಿತ್ರಮಂದಿರದಿಂದ ಕಾಲ್ಕಿತ್ತಿತು. ಈಗ ಸಿನಿಮಾ ಒಟಿಟಿಯಲ್ಲಿ ಲಗ್ಗೆ ಇಡುತ್ತಿದೆ.

ಏಪ್ರಿಲ್ 29ರಂದು ಬಾಲಿವುಡ್​ನಲ್ಲಿ ಟೈಗರ್ ಶ್ರಾಫ್ ಅಭಿನಯದ ‘ಹೀರೋಪಂತಿ 2’ ಹಾಗೂ ಅಜಯ್​ ದೇವಗನ್ ನಟನೆಯ ‘ರನ್​ವೇ 34’ ಸಿನಿಮಾ ಒಟ್ಟೊಟ್ಟಿಗೆ ರಿಲೀಸ್ ಆದವು. ‘ಹೀರೋಪಂತಿ’ ಸಿನಿಮಾ ಗೆದ್ದು ಬೀಗಿತ್ತು. ಈ ಕಾರಣಕ್ಕೆ ಚಿತ್ರದ ಸೀಕ್ವೆಲ್ ಬಗ್ಗೆ ನಿರೀಕ್ಷೆ ಮೂಡಿತ್ತು. ಆದರೆ, ಈ ಚಿತ್ರಕ್ಕೆ ಹೇಳಿಕೊಳ್ಳುವಂತಹ ವಿಮರ್ಶೆ ಸಿಕ್ಕಿಲ್ಲ. ಈ ಚಿತ್ರ ಮೊದಲ ದಿನ 6.50 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಚಿತ್ರದ ಒಟ್ಟಾರೆ ಕಲೆಕ್ಷನ್ 25 ಕೋಟಿ ರೂಪಾಯಿ ದಾಟಿಲ್ಲ.

‘ಹೀರೋಪಂತಿ 2’ ಚಿತ್ರದ ಒಟಿಟಿ ರಿಲೀಸ್ ಬಗ್ಗೆ ಅಮೇಜಾನ್​ ಪ್ರೈಮ್ ವಿಡಿಯೋ ಘೋಷಣೆ ಮಾಡಿದೆ. ಟ್ವಿಟರ್​ನಲ್ಲಿ ಟೈಗರ್​ ಶ್ರಾಫ್​ ವಿಡಿಯೋವನ್ನು ಅಮೇಜಾನ್ ಪ್ರೈಮ್ ವಿಡಿಯೋ ಹಂಚಿಕೊಂಡಿದೆ. ಈ  ವಿಡಿಯೋದಲ್ಲಿ ಮೇ 27ರಂದು ಒಟಿಟಿಯಲ್ಲಿ ‘ಹೀರೋಪಂತಿ 2’ ವೀಕ್ಷಿಸುವಂತೆ ಕೋರಿದ್ದಾರೆ. ಸಖತ್ ಫನ್ನಿಯಾಗಿ ಈ ವಿಡಿಯೋ ಮೂಡಿ ಬಂದಿದೆ. ಒಟಿಟಿಯಲ್ಲಿ ಜನರು ಈ ಚಿತ್ರಕ್ಕೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ದೇವಿ ಅವತಾರದಲ್ಲಿ ದರ್ಶನ ಕೊಟ್ಟ ಶಿಲ್ಪಾ ಶೆಟ್ಟಿ; ಯಾವುದು ಈ ಹೊಸ ಸಿನಿಮಾ?

ಅಹ್ಮದ್​ ಖಾನ್​ ನಿರ್ದೇಶನ ಮಾಡಿರುವ ‘ಹೀರೋಪಂತಿ 2’ ಸಿನಿಮಾದ ಮೊದಲ ಶೆಡ್ಯೂಲ್​ ಮುಂಬೈನಲ್ಲಿ ನೆರವೇರಿತ್ತು.  ನಂತರ ಚಿತ್ರತಂಡ ರಷ್ಯಾ ಮೊದಲಾದ ರಾಷ್ಟ್ರಗಳಿಗೆ ತೆರಳಿ ಶೂಟಿಂಗ್ ಮುಗಿಸಿತ್ತು. ಸಿನಿಮಾಗೆ ಕೋಟ್ಯಂತರ ರೂಪಾಯಿ ಸುರಿದು ನಿರ್ಮಾಪಕರು ಚಿತ್ರದಿಂದ ನಷ್ಟ ಅನುಭವಿಸಿದ್ದಾರೆ ಎಂದು ವರದಿ ಆಗಿದೆ. ಬಾಲಿವುಡ್​ನ ಖ್ಯಾತ ನಿರ್ಮಾಪಕ ಸಾಜಿದ್​ ನಾಡಿಯದ್ವಾಲಾ ಅವರು ‘ಹೀರೋಪಂತಿ’ ಸಿನಿಮಾ ಮೂಲಕ ಟೈಗರ್​ ಶ್ರಾಫ್​ ಅವರನ್ನು ಲಾಂಚ್​ ಮಾಡಿದ್ದರು. ಈ ಸರಣಿಯ ಎರಡನೇ ಸಿನಿಮಾ ಪ್ಲಾಫ್ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ