ಒಟಿಟಿಗೆ ಲಗ್ಗೆ ಇಡುತ್ತಿದೆ ‘ಹೀರೋಪಂತಿ 2’; ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿಕೊಂಡ ಟೈಗರ್

‘ಹೀರೋಪಂತಿ’ ಸಿನಿಮಾ ಗೆದ್ದು ಬೀಗಿತ್ತು. ಈ ಕಾರಣಕ್ಕೆ ಚಿತ್ರದ ಸೀಕ್ವೆಲ್ ಬಗ್ಗೆ ನಿರೀಕ್ಷೆ ಮೂಡಿತ್ತು. ಆದರೆ, ಈ ಚಿತ್ರಕ್ಕೆ ಹೇಳಿಕೊಳ್ಳುವಂತಹ ವಿಮರ್ಶೆ ಸಿಕ್ಕಿಲ್ಲ.

ಒಟಿಟಿಗೆ ಲಗ್ಗೆ ಇಡುತ್ತಿದೆ ‘ಹೀರೋಪಂತಿ 2’; ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿಕೊಂಡ ಟೈಗರ್
ಹೀರೋಪಂತಿ 2
Follow us
| Updated By: ರಾಜೇಶ್ ದುಗ್ಗುಮನೆ

Updated on: May 26, 2022 | 7:00 AM

ನಟ ಟೈಗರ್ ಶ್ರಾಫ್ (Tiger Shroff)​ ಸಿನಿಮಾಗಳಲ್ಲಿ ಆ್ಯಕ್ಷನ್​ ದೃಶ್ಯಗಳಿಗೆ ಹೆಚ್ಚು ಒತ್ತು ನೀಡಲಾಗುತ್ತದೆ. ಮೈನವಿರೇಳಿಸುವ ದೃಶ್ಯಗಳಿಗೆ ಹೆಚ್ಚು ಆದ್ಯತೆ ಇರುತ್ತದೆ. ಈ ಮೊದಲು ಇದು ಅನೇಕ ಬಾರಿ ಸಾಬೀತಾಗಿದೆ. ಅವರು ಮಾಡುವ ಸ್ಟಂಟ್ಸ್​​ಗಳನ್ನು ನೋಡೋಕೆ ಅವರ ಫ್ಯಾನ್ಸ್​ ಇಷ್ಟಪಡುತ್ತಾರೆ. ಇತ್ತೀಚೆಗೆ ಅವರ ನಟನೆಯ ‘ಹೀರೋಪಂತಿ 2’ ಸಿನಿಮಾ (Heropanti 2 ) ರಿಲೀಸ್ ಆಗಿತ್ತು. ಸಿನಿಮಾ ಬಗ್ಗೆ ನೆಗೆಟಿವ್ ವಿಮರ್ಶೆಗಳು ಬಂದವು. ಇನ್ನು, ‘ಕೆಜಿಎಫ್ 2’ ಅಬ್ಬರಕ್ಕೆ ಚಿತ್ರ ನಲುಗಿ ಹೋಗಿತ್ತು. ಹೀಗಾಗಿ, ಕೆಲವೇ ದಿನಗಳಲ್ಲಿ ಟೈಗರ್​ ನಟನೆಯ ಸಿನಿಮಾ ಚಿತ್ರಮಂದಿರದಿಂದ ಕಾಲ್ಕಿತ್ತಿತು. ಈಗ ಸಿನಿಮಾ ಒಟಿಟಿಯಲ್ಲಿ ಲಗ್ಗೆ ಇಡುತ್ತಿದೆ.

ಏಪ್ರಿಲ್ 29ರಂದು ಬಾಲಿವುಡ್​ನಲ್ಲಿ ಟೈಗರ್ ಶ್ರಾಫ್ ಅಭಿನಯದ ‘ಹೀರೋಪಂತಿ 2’ ಹಾಗೂ ಅಜಯ್​ ದೇವಗನ್ ನಟನೆಯ ‘ರನ್​ವೇ 34’ ಸಿನಿಮಾ ಒಟ್ಟೊಟ್ಟಿಗೆ ರಿಲೀಸ್ ಆದವು. ‘ಹೀರೋಪಂತಿ’ ಸಿನಿಮಾ ಗೆದ್ದು ಬೀಗಿತ್ತು. ಈ ಕಾರಣಕ್ಕೆ ಚಿತ್ರದ ಸೀಕ್ವೆಲ್ ಬಗ್ಗೆ ನಿರೀಕ್ಷೆ ಮೂಡಿತ್ತು. ಆದರೆ, ಈ ಚಿತ್ರಕ್ಕೆ ಹೇಳಿಕೊಳ್ಳುವಂತಹ ವಿಮರ್ಶೆ ಸಿಕ್ಕಿಲ್ಲ. ಈ ಚಿತ್ರ ಮೊದಲ ದಿನ 6.50 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಚಿತ್ರದ ಒಟ್ಟಾರೆ ಕಲೆಕ್ಷನ್ 25 ಕೋಟಿ ರೂಪಾಯಿ ದಾಟಿಲ್ಲ.

‘ಹೀರೋಪಂತಿ 2’ ಚಿತ್ರದ ಒಟಿಟಿ ರಿಲೀಸ್ ಬಗ್ಗೆ ಅಮೇಜಾನ್​ ಪ್ರೈಮ್ ವಿಡಿಯೋ ಘೋಷಣೆ ಮಾಡಿದೆ. ಟ್ವಿಟರ್​ನಲ್ಲಿ ಟೈಗರ್​ ಶ್ರಾಫ್​ ವಿಡಿಯೋವನ್ನು ಅಮೇಜಾನ್ ಪ್ರೈಮ್ ವಿಡಿಯೋ ಹಂಚಿಕೊಂಡಿದೆ. ಈ  ವಿಡಿಯೋದಲ್ಲಿ ಮೇ 27ರಂದು ಒಟಿಟಿಯಲ್ಲಿ ‘ಹೀರೋಪಂತಿ 2’ ವೀಕ್ಷಿಸುವಂತೆ ಕೋರಿದ್ದಾರೆ. ಸಖತ್ ಫನ್ನಿಯಾಗಿ ಈ ವಿಡಿಯೋ ಮೂಡಿ ಬಂದಿದೆ. ಒಟಿಟಿಯಲ್ಲಿ ಜನರು ಈ ಚಿತ್ರಕ್ಕೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ದೇವಿ ಅವತಾರದಲ್ಲಿ ದರ್ಶನ ಕೊಟ್ಟ ಶಿಲ್ಪಾ ಶೆಟ್ಟಿ; ಯಾವುದು ಈ ಹೊಸ ಸಿನಿಮಾ?

ಅಹ್ಮದ್​ ಖಾನ್​ ನಿರ್ದೇಶನ ಮಾಡಿರುವ ‘ಹೀರೋಪಂತಿ 2’ ಸಿನಿಮಾದ ಮೊದಲ ಶೆಡ್ಯೂಲ್​ ಮುಂಬೈನಲ್ಲಿ ನೆರವೇರಿತ್ತು.  ನಂತರ ಚಿತ್ರತಂಡ ರಷ್ಯಾ ಮೊದಲಾದ ರಾಷ್ಟ್ರಗಳಿಗೆ ತೆರಳಿ ಶೂಟಿಂಗ್ ಮುಗಿಸಿತ್ತು. ಸಿನಿಮಾಗೆ ಕೋಟ್ಯಂತರ ರೂಪಾಯಿ ಸುರಿದು ನಿರ್ಮಾಪಕರು ಚಿತ್ರದಿಂದ ನಷ್ಟ ಅನುಭವಿಸಿದ್ದಾರೆ ಎಂದು ವರದಿ ಆಗಿದೆ. ಬಾಲಿವುಡ್​ನ ಖ್ಯಾತ ನಿರ್ಮಾಪಕ ಸಾಜಿದ್​ ನಾಡಿಯದ್ವಾಲಾ ಅವರು ‘ಹೀರೋಪಂತಿ’ ಸಿನಿಮಾ ಮೂಲಕ ಟೈಗರ್​ ಶ್ರಾಫ್​ ಅವರನ್ನು ಲಾಂಚ್​ ಮಾಡಿದ್ದರು. ಈ ಸರಣಿಯ ಎರಡನೇ ಸಿನಿಮಾ ಪ್ಲಾಫ್ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ