AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಸೋಲಿನ ಬಳಿಕ 15 ಕೋಟಿ ರೂ. ಸಂಭಾವನೆ ಬಿಟ್ಟುಕೊಟ್ಟ ಕಾರ್ತಿಕ್ ಆರ್ಯನ್

ಕಾರ್ತಿಕ್ ಆರ್ಯನ್ ಅಭಿನಯದ ಹೊಸ ಸಿನಿಮಾ ‘ತು ಮೇರಿ ಮೇ ತೇರ ಮೇ ತೇರ ತು ಮೇರಿ’ ಸೋತಿದೆ. ಈ ಸಿನಿಮಾಗೆ ಬಂಡವಾಳ ಹೂಡಿದ ಕರಣ್ ಜೋಹರ್ ಅವರಿಗೆ ಬಹುಕೋಟಿ ರೂಪಾಯಿ ನಷ್ಟ ಆಗಿದೆ. ಆದ್ದರಿಂದ ಕಾರ್ತಿಕ್ ಆರ್ಯನ್ 15 ಕೋಟಿ ರೂಪಾಯಿ ಸಂಬಳ ಬಿಟ್ಟುಕೊಟ್ಟಿದ್ದಾರೆ ಎಂದು ವರದಿ ಆಗಿದೆ.

ಸಿನಿಮಾ ಸೋಲಿನ ಬಳಿಕ 15 ಕೋಟಿ ರೂ. ಸಂಭಾವನೆ ಬಿಟ್ಟುಕೊಟ್ಟ ಕಾರ್ತಿಕ್ ಆರ್ಯನ್
Kartik Aaryan, Ananya Panday
ಮದನ್​ ಕುಮಾರ್​
|

Updated on: Jan 16, 2026 | 5:19 PM

Share

ನಟ ಕಾರ್ತಿಕ್ ಆರ್ಯನ್ (Kartik Aaryan) ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿದ್ದಾರೆ. 2025ರ ಡಿಸೆಂಬರ್​​ನಲ್ಲಿ ಅವರು ನಟಿಸಿದ ‘ತು ಮೇರಿ ಮೇ ತೇರ ಮೇ ತೇರ ತು ಮೇರಿ’ (TMMTMTTM) ಸಿನಿಮಾ ಬಿಡುಗಡೆ ಆಯಿತು. ಕಾರ್ತಿಕ್ ಆರ್ಯನ್ ಅವರಿಗೆ ಜೋಡಿಯಾಗಿ ಅನನ್ಯಾ ಪಾಂಡೆ ಅವರು ಅಭಿನಯಿಸಿದ್ದರು. ಬಾಕ್ಸ್ ಆಫೀಸ್​​ನಲ್ಲಿ ಈ ಸಿನಿಮಾ ನಿರೀಕ್ಷಿತ ಪ್ರಮಾಣದ ಕಲೆಕ್ಷನ್ ಮಾಡಲಿಲ್ಲ. ಅದರಿಂದಾಗಿ ನಿರ್ಮಾಪಕರಿಗೆ ನಷ್ಟ ಆಗಿದೆ. ಹಾಗಾಗಿ ತಮ್ಮ ಪಾಲಿನ 15 ಕೋಟಿ ರೂಪಾಯಿ ಸಂಭಾವನೆಯನ್ನು (Remuneration) ಬಿಟ್ಟುಕೊಡಲು ಕಾರ್ತಿಕ್ ಆರ್ಯನ್ ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

‘ಧರ್ಮ ಪ್ರೊಡಕ್ಷನ್ಸ್’ ಮೂಲಕ ಕರಣ್ ಜೋಹರ್ ಅವರು ‘ತು ಮೇರಿ ಮೇ ತೇರ ಮೇ ತೇರ ತು ಮೇರಿ’ ಸಿನಿಮಾವನ್ನು ನಿರ್ಮಿಸಿದ್ದಾರೆ. ಕಾರ್ತಿಕ್ ಆರ್ಯನ್ ಮತ್ತು ಅನನ್ಯಾ ಪಾಂಡೆ ಜೊತೆಯಲ್ಲಿ ನೀನಾ ಗುಪ್ತಾ, ಜಾಕಿ ಶ್ರಾಫ್ ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಡಿಸೆಂಬರ್ 25ರಂದು ರಿಲೀಸ್ ಆದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ಅಂದಾಜು 90 ಕೋಟಿ ರೂಪಾಯಿ ಬಜೆಟ್​​ನಲ್ಲಿ ‘ತು ಮೇರಿ ಮೇ ತೇರ ಮೇ ತೇರ ತು ಮೇರಿ’ ಸಿನಿಮಾ ನಿರ್ಮಾಣ ಆಗಿತ್ತು. ಆದರೆ ಬಾಕ್ಸ್ ಆಫೀಸ್​ನಲ್ಲಿ ಈ ಚಿತ್ರ ಗಳಿಸಿದ್ದು 30 ಕೋಟಿ ರೂಪಾಯಿ ಮಾತ್ರ. ಇದರಿಂದಾಗಿ ನಿರ್ಮಾಪಕ ಕರಣ್ ಜೋಹರ್ ಅವರು ನಷ್ಟ ಅನುಭವಿಸಿದ್ದಾರೆ. ನಿರ್ಮಾಪಕರ ನಷ್ಟ ಕಡಿಮೆ ಮಾಡಲು ಕಾರ್ತಿಕ್ ಆರ್ಯನ್ ಅವರು 15 ಕೋಟಿ ರೂಪಾಯಿ ಸಂಭಾವನೆ ಬಿಟ್ಟುಕೊಟ್ಟಿದ್ದಾರೆ ಎಂದು ವರದಿ ಆಗಿದೆ.

2021ರಲ್ಲಿ ಕಾರ್ತಿಕ್ ಆರ್ಯನ್ ಮತ್ತು ಕರಣ್ ಜೋಹರ್ ನಡುವೆ ಮನಸ್ತಾಪ ಉಂಟಾಗಿತ್ತು. ಆದರೆ 2023ರ ವೇಳೆಗೆ ಅವರ ನಡುವಿನ ಮುನಿಸು ಕಡಿಮೆ ಆಯಿತು. ಆ ಬಳಿಕ ಅವರು ಮತ್ತೆ ಜೊತೆಯಾಗಿ ಸಿನಿಮಾ ಮಾಡಲು ಆರಂಭಿಸಿದರು. ಆದರೆ ‘ತು ಮೇರಿ ಮೇ ತೇರ ಮೇ ತೇರ ತು ಮೇರಿ’ ಚಿತ್ರದ ಸೋಲಿನಿಂದಾಗಿ ಅವರಿಬ್ಬರ ನಡುವೆ ಪುನಃ ಕಿರಿಕ್ ಆರಂಭ ಆಗಿದೆ ಎಂಬ ಗಾಸಿಪ್ ಹಬ್ಬಿತ್ತು. ಆ ವದಂತಿಯನ್ನು ಅವರ ಆಪ್ತ ಮೂಲಗಳು ತಳ್ಳಿಹಾಕಿವೆ.

ಇದನ್ನೂ ಓದಿ: ಅಪ್ರಾಪ್ತೆ ಜೊತೆ ಕಾರ್ತಿಕ್ ಆರ್ಯನ್ ಡೇಟಿಂಗ್? ಇಬ್ಬರ ಮಧ್ಯೆ 18 ವರ್ಷ ವಯಸ್ಸಿನ ಅಂತರ

‘ತು ಮೇರಿ ಮೇ ತೇರ ಮೇ ತೇರ ತು ಮೇರಿ’ ಸಿನಿಮಾದ ಸೋಲಿಗೆ ಕೆಲವು ಕಾರಣಗಳಿವೆ. ಪ್ರೇಕ್ಷಕರಿಗೆ ಈ ಸಿನಿಮಾ ಅಷ್ಟೇನೂ ಇಷ್ಟ ಆಗಲಿಲ್ಲ. ಈ ಚಿತ್ರ ಬಿಡುಗಡೆ ಆದಾಗ ಥಿಯೇಟರ್​​ಗಳಲ್ಲಿ ‘ಧುರಂಧರ್’ ಸಿನಿಮಾದ ಅಬ್ಬರ ಜೋರಾಗಿತ್ತು. ‘ಧುರಂಧರ್’ ಚಿತ್ರದ ಎದುರು ಪೈಪೋಟಿ ನೀಡಲು ‘ತು ಮೇರಿ ಮೇ ತೇರ ಮೇ ತೇರ ತು ಮೇರಿ’ ಸಿನಿಮಾಗೆ ಸಾಧ್ಯವಾಗಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೈಕ್​​ಗೆ ಗುದ್ದಿದ ಕಾರು: 10 ಅಡಿ ಎತ್ತರಕ್ಕೆ ಹಾರಿಬಿದ್ದ ಸವಾರ!
ಬೈಕ್​​ಗೆ ಗುದ್ದಿದ ಕಾರು: 10 ಅಡಿ ಎತ್ತರಕ್ಕೆ ಹಾರಿಬಿದ್ದ ಸವಾರ!
ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ, ಮುಂದೇನಾಯ್ತು?
ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ, ಮುಂದೇನಾಯ್ತು?
ಆಸ್ತಿಗಾಗಿ 4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಪಾಪಿ ಅಣ್ಣ!
ಆಸ್ತಿಗಾಗಿ 4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಪಾಪಿ ಅಣ್ಣ!
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಚುನಾವಣೆಯಲ್ಲಿ ಗೆಲುವು
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಚುನಾವಣೆಯಲ್ಲಿ ಗೆಲುವು
ಡಿಕೆಶಿ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ
ಡಿಕೆಶಿ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ
ಬಳ್ಳಾರಿ ಗಲಭೆ; ನಾಳೆ ನಡೆಯಲಿರುವ ಪ್ರತಿಭಟನೆ ಬಗ್ಗೆ SP ಹೇಳಿದ್ದಿಷ್ಟು
ಬಳ್ಳಾರಿ ಗಲಭೆ; ನಾಳೆ ನಡೆಯಲಿರುವ ಪ್ರತಿಭಟನೆ ಬಗ್ಗೆ SP ಹೇಳಿದ್ದಿಷ್ಟು
ಹಾಸನದಲ್ಲಿ ಕಾಡಾನೆಗಳ ತುಂಟಾಟ! ಪರಸ್ಪರ ಕೋರೆ ಮರ್ದಿಸಿದ ಗಜಪಡೆ
ಹಾಸನದಲ್ಲಿ ಕಾಡಾನೆಗಳ ತುಂಟಾಟ! ಪರಸ್ಪರ ಕೋರೆ ಮರ್ದಿಸಿದ ಗಜಪಡೆ
ಪೌರಾಯುಕ್ತೆಗೆ ನಿಂದನೆ ಪ್ರಕರಣ: ಬ್ಯಾನರ್ ತೆಗೆಸೋಕೆ ಇತ್ತು ಬಲವಾದ ಕಾರಣ
ಪೌರಾಯುಕ್ತೆಗೆ ನಿಂದನೆ ಪ್ರಕರಣ: ಬ್ಯಾನರ್ ತೆಗೆಸೋಕೆ ಇತ್ತು ಬಲವಾದ ಕಾರಣ
ಪಾಮ್ ಆಯಿಲ್ ಟ್ಯಾಂಕರ್ ಲಾರಿ ಪಲ್ಟಿ: ಅಡುಗೆ ಎಣ್ಣೆಗಾಗಿ ಮುಗಿಬಿದ್ದ ಜನ
ಪಾಮ್ ಆಯಿಲ್ ಟ್ಯಾಂಕರ್ ಲಾರಿ ಪಲ್ಟಿ: ಅಡುಗೆ ಎಣ್ಣೆಗಾಗಿ ಮುಗಿಬಿದ್ದ ಜನ
ಪೌರಾಯುಕ್ತೆಗೆ ಬೆದರಿಕೆ ಕೇಸ್​​: ರಾಜಿಗೆ ಯತ್ನಿಸಿದ್ದನಾ ರಾಜೀವ್​​ ಗೌಡ?
ಪೌರಾಯುಕ್ತೆಗೆ ಬೆದರಿಕೆ ಕೇಸ್​​: ರಾಜಿಗೆ ಯತ್ನಿಸಿದ್ದನಾ ರಾಜೀವ್​​ ಗೌಡ?