AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 2’ ಚಿತ್ರಕ್ಕೆ ಹೆದರಿದ ಟಾಲಿವುಡ್​; ಎರಡು ಸಿನಿಮಾಗಳ ರಿಲೀಸ್ ಡೇಟ್ ಮುಂದಕ್ಕೆ

ನಮ್ಮ ಸಿನಿಮಾಗಳ ಅಬ್ಬರ ನೋಡಿಕೊಂಡು ಪರಭಾಷೆಯವರು ಚಿತ್ರಗಳನ್ನು ರಿಲೀಸ್ ಮಾಡಿಕೊಳ್ಳುತ್ತಿದ್ದಾರೆ. ‘ಕೆಜಿಎಫ್ 2’ ವಿಚಾರದಲ್ಲಿ ಇದು ಅಕ್ಷರಶಃ ಸಾಬೀತಾಗಿದೆ.

‘ಕೆಜಿಎಫ್ 2’ ಚಿತ್ರಕ್ಕೆ ಹೆದರಿದ ಟಾಲಿವುಡ್​; ಎರಡು ಸಿನಿಮಾಗಳ ರಿಲೀಸ್ ಡೇಟ್ ಮುಂದಕ್ಕೆ
ಯಶ್
TV9 Web
| Edited By: |

Updated on: Apr 19, 2022 | 4:06 PM

Share

‘ಕೆಜಿಎಫ್ ಚಾಪ್ಟರ್​ 2’ ಸಿನಿಮಾ (KGF Chapter 2)  ಅಬ್ಬರಕ್ಕೆ ಭಾರತೀಯ ಚಿತ್ರರಂಗವೇ ಒಮ್ಮೆ ಶೇಕ್​ ಆಗಿದೆ. ಬಾಲಿವುಡ್ (Bollywood) ಮಂದಿ ಮಾಡಿದ್ದ ದಾಖಲೆಗಳು ಧೂಳಿಪಟ ಆಗಿವೆ. ಎಲ್ಲ ಕಡೆಗಳಲ್ಲಿ ರಾಕಿ ಭಾಯ್ ಹೊಸಹೊಸ ದಾಖಲೆಗಳನ್ನು ಬರೆದುಕೊಂಡು ಬರುತ್ತಿದ್ದಾರೆ. ‘ಕೆಜಿಎಫ್​ 2’ ಬರುವ ಅಬ್ಬರ ನೋಡಿಯೇ ‘ಜೆರ್ಸಿ’ ಸಿನಿಮಾದ (Jersey Movie) ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿತ್ತು. ಈಗ ಈ ವಾರ ತೆರೆಗೆ ಬರುವ ಚಿತ್ರಗಳು ರಿಲೀಸ್​ ದಿನಾಂಕವನ್ನು ಮುಂದೂಡಿಕೊಂಡು ಸೈಲೆಂಟ್ ಆಗಿವೆ. ಟಾಲಿವುಡ್​ನಲ್ಲಂತೂ ‘ಕೆಜಿಎಫ್ 2’ ಹೊಡೆತಕ್ಕೆ ಸಿಲುಕಿಕೊಳ್ಳದೆ, ಎರಡು ಸಿನಿಮಾಗಳ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿವೆ.

ಸಾಮಾನ್ಯವಾಗಿ ಪರಭಾಷೆಯ ಸಿನಿಮಾಗಳು ತೆರೆಗೆ ಬರುತ್ತಿವೆ ಎಂದರೆ ಕನ್ನಡ ಸಿನಿಮಾಗಳ ಎತ್ತಂಗಡಿ ಆಗುತ್ತಿತ್ತು. ಆದರೆ, ಈಗ ಕಾಲ ಬದಲಾಗಿದೆ. ನಮ್ಮ ಸಿನಿಮಾಗಳ ರಿಲೀಸ್​ ದಿನಾಂಕ, ನಮ್ಮ ಸಿನಿಮಾಗಳ ಅಬ್ಬರ ನೋಡಿಕೊಂಡು ಪರಭಾಷೆಯವರು ಚಿತ್ರಗಳನ್ನು ರಿಲೀಸ್ ಮಾಡಿಕೊಳ್ಳುತ್ತಿದ್ದಾರೆ. ‘ಕೆಜಿಎಫ್ 2’ ವಿಚಾರದಲ್ಲಿ ಇದು ಅಕ್ಷರಶಃ ಸಾಬೀತಾಗಿದೆ.

ಏಪ್ರಿಲ್​ 22ರಂದು ತೆಲುಗಿನಲ್ಲಿ ವಿಶ್ವಕ್ ಸೇನ್​ ಅವರ ‘ಅಶೋಕ ವನಂ ಲೋ ಅರ್ಜುನ ಕಲ್ಯಾಣಂ’ ಹಾಗೂ ನಾಗ ಶೌರ್ಯ ಅವರ ‘ಕೃಷ್ಣ ವೃಂದ ವಿಹಾರಿ’ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಈ ಎರಡೂ ಚಿತ್ರಗಳು ಈಗ ರಿಲೀಸ್​ ದಿನಾಂಕವನ್ನು ಮುಂದೂಡಿಕೊಳ್ಳುತ್ತಿವೆ. ಈಗಾಗಲೇ ‘ಅಶೋಕ ವನಂ ಲೋ ಅರ್ಜುನ ಕಲ್ಯಾಣಂ’ ಸಿನಿಮಾದ ರಿಲೀಸ್ ದಿನಾಂಕವನ್ನು ಮೇ 6ಕ್ಕೆ ಮುಂದೂಡಿರುವ ಬಗ್ಗೆ ಚಿತ್ರತಂಡ ಅಧಿಕೃತ ಘೋಷಣೆ ಮಾಡಿದೆ. ‘ಕೃಷ್ಣ ವೃಂದ ವಿಹಾರಿ’ ಕೂಡ ಇದೇ ಆಲೋಚನೆಯಲ್ಲಿದ್ದು, ಈ ಬಗ್ಗೆ ಶೀಘ್ರವೇ ಘೋಷಣೆ ಆಗಲಿದೆ.

ಏಪ್ರಿಲ್ 29ರಂದು ರಾಮ್​ ಚರಣ್ ಹಾಗೂ ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾ ತೆರೆಗೆ ಬರುತ್ತಿದೆ. ಈ ಸಿನಿಮಾದ ಅಬ್ಬರ ಒಂದು ವಾರಗಳ ಕಾಲವಂತೂ ಇದ್ದೇ ಇರುತ್ತದೆ. ಹೀಗಾಗಿ, ಮೇ 6ರ ಬಳಿಕ ಚಿತ್ರಗಳನ್ನು ರಿಲೀಸ್ ಮಾಡುವುದು ಉತ್ತಮ ಎನ್ನುವ ನಿರ್ಧಾರಕ್ಕೆ ಈ ಚಿತ್ರಗಳು ಬಂದಿವೆ ಎಂದು ವರದಿ ಆಗಿದೆ.

‘ಕೆಜಿಎಫ್ 2’ ಸಿನಿಮಾ ಬಾಲಿವುಡ್​ನಲ್ಲಿ ಹೊಸಹೊಸ ದಾಖಲೆ ಬರೆಯುತ್ತಿದೆ. ಈ ಸಿನಿಮಾ ಮೂರು ದಿನಕ್ಕೆ 200 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಚಿತ್ರದ ಗಳಿಕೆ ನೋಡಿ ಬಾಲಿವುಡ್​ ಮಂದಿ ಕಣ್ಣರಳಿಸಿದ್ದಾರೆ. ಸಿನಿಮಾದ ನಾಗಾಲೋಟ ಇನ್ನೂ ಕೆಲವು ವಾರಗಳ ಕಾಲ ಮುಂದುವರಿಯಲಿದೆ.

ಇದನ್ನೂ ಓದಿ: KGF 2 Collection: ಸೋಮವಾರದ ಪರೀಕ್ಷೆಯಲ್ಲಿ ‘ಕೆಜಿಎಫ್​ 2’ ಪಾಸ್; ಹಿಂದಿ ಮಾರುಕಟ್ಟೆಯಲ್ಲಿ 5 ದಿನಕ್ಕೆ 219.56 ಕೋಟಿ ರೂ. ಕಲೆಕ್ಷನ್​

ತಮಿಳುನಾಡಿನಲ್ಲಿ ‘ಕೆಜಿಎಫ್ 2’ ಎದುರು ಮಕಾಡೆ ಮಲಗಿದ ‘ಬೀಸ್ಟ್​’; ಕಲೆಕ್ಷನ್ ಅಂತರ ಎಷ್ಟು?

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ