‘ಕೆಜಿಎಫ್ 2’ ಚಿತ್ರಕ್ಕೆ ಹೆದರಿದ ಟಾಲಿವುಡ್​; ಎರಡು ಸಿನಿಮಾಗಳ ರಿಲೀಸ್ ಡೇಟ್ ಮುಂದಕ್ಕೆ

ನಮ್ಮ ಸಿನಿಮಾಗಳ ಅಬ್ಬರ ನೋಡಿಕೊಂಡು ಪರಭಾಷೆಯವರು ಚಿತ್ರಗಳನ್ನು ರಿಲೀಸ್ ಮಾಡಿಕೊಳ್ಳುತ್ತಿದ್ದಾರೆ. ‘ಕೆಜಿಎಫ್ 2’ ವಿಚಾರದಲ್ಲಿ ಇದು ಅಕ್ಷರಶಃ ಸಾಬೀತಾಗಿದೆ.

‘ಕೆಜಿಎಫ್ 2’ ಚಿತ್ರಕ್ಕೆ ಹೆದರಿದ ಟಾಲಿವುಡ್​; ಎರಡು ಸಿನಿಮಾಗಳ ರಿಲೀಸ್ ಡೇಟ್ ಮುಂದಕ್ಕೆ
ಯಶ್
Follow us
| Updated By: ರಾಜೇಶ್ ದುಗ್ಗುಮನೆ

Updated on: Apr 19, 2022 | 4:06 PM

‘ಕೆಜಿಎಫ್ ಚಾಪ್ಟರ್​ 2’ ಸಿನಿಮಾ (KGF Chapter 2)  ಅಬ್ಬರಕ್ಕೆ ಭಾರತೀಯ ಚಿತ್ರರಂಗವೇ ಒಮ್ಮೆ ಶೇಕ್​ ಆಗಿದೆ. ಬಾಲಿವುಡ್ (Bollywood) ಮಂದಿ ಮಾಡಿದ್ದ ದಾಖಲೆಗಳು ಧೂಳಿಪಟ ಆಗಿವೆ. ಎಲ್ಲ ಕಡೆಗಳಲ್ಲಿ ರಾಕಿ ಭಾಯ್ ಹೊಸಹೊಸ ದಾಖಲೆಗಳನ್ನು ಬರೆದುಕೊಂಡು ಬರುತ್ತಿದ್ದಾರೆ. ‘ಕೆಜಿಎಫ್​ 2’ ಬರುವ ಅಬ್ಬರ ನೋಡಿಯೇ ‘ಜೆರ್ಸಿ’ ಸಿನಿಮಾದ (Jersey Movie) ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿತ್ತು. ಈಗ ಈ ವಾರ ತೆರೆಗೆ ಬರುವ ಚಿತ್ರಗಳು ರಿಲೀಸ್​ ದಿನಾಂಕವನ್ನು ಮುಂದೂಡಿಕೊಂಡು ಸೈಲೆಂಟ್ ಆಗಿವೆ. ಟಾಲಿವುಡ್​ನಲ್ಲಂತೂ ‘ಕೆಜಿಎಫ್ 2’ ಹೊಡೆತಕ್ಕೆ ಸಿಲುಕಿಕೊಳ್ಳದೆ, ಎರಡು ಸಿನಿಮಾಗಳ ರಿಲೀಸ್ ದಿನಾಂಕ ಮುಂದೂಡಲ್ಪಟ್ಟಿವೆ.

ಸಾಮಾನ್ಯವಾಗಿ ಪರಭಾಷೆಯ ಸಿನಿಮಾಗಳು ತೆರೆಗೆ ಬರುತ್ತಿವೆ ಎಂದರೆ ಕನ್ನಡ ಸಿನಿಮಾಗಳ ಎತ್ತಂಗಡಿ ಆಗುತ್ತಿತ್ತು. ಆದರೆ, ಈಗ ಕಾಲ ಬದಲಾಗಿದೆ. ನಮ್ಮ ಸಿನಿಮಾಗಳ ರಿಲೀಸ್​ ದಿನಾಂಕ, ನಮ್ಮ ಸಿನಿಮಾಗಳ ಅಬ್ಬರ ನೋಡಿಕೊಂಡು ಪರಭಾಷೆಯವರು ಚಿತ್ರಗಳನ್ನು ರಿಲೀಸ್ ಮಾಡಿಕೊಳ್ಳುತ್ತಿದ್ದಾರೆ. ‘ಕೆಜಿಎಫ್ 2’ ವಿಚಾರದಲ್ಲಿ ಇದು ಅಕ್ಷರಶಃ ಸಾಬೀತಾಗಿದೆ.

ಏಪ್ರಿಲ್​ 22ರಂದು ತೆಲುಗಿನಲ್ಲಿ ವಿಶ್ವಕ್ ಸೇನ್​ ಅವರ ‘ಅಶೋಕ ವನಂ ಲೋ ಅರ್ಜುನ ಕಲ್ಯಾಣಂ’ ಹಾಗೂ ನಾಗ ಶೌರ್ಯ ಅವರ ‘ಕೃಷ್ಣ ವೃಂದ ವಿಹಾರಿ’ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಈ ಎರಡೂ ಚಿತ್ರಗಳು ಈಗ ರಿಲೀಸ್​ ದಿನಾಂಕವನ್ನು ಮುಂದೂಡಿಕೊಳ್ಳುತ್ತಿವೆ. ಈಗಾಗಲೇ ‘ಅಶೋಕ ವನಂ ಲೋ ಅರ್ಜುನ ಕಲ್ಯಾಣಂ’ ಸಿನಿಮಾದ ರಿಲೀಸ್ ದಿನಾಂಕವನ್ನು ಮೇ 6ಕ್ಕೆ ಮುಂದೂಡಿರುವ ಬಗ್ಗೆ ಚಿತ್ರತಂಡ ಅಧಿಕೃತ ಘೋಷಣೆ ಮಾಡಿದೆ. ‘ಕೃಷ್ಣ ವೃಂದ ವಿಹಾರಿ’ ಕೂಡ ಇದೇ ಆಲೋಚನೆಯಲ್ಲಿದ್ದು, ಈ ಬಗ್ಗೆ ಶೀಘ್ರವೇ ಘೋಷಣೆ ಆಗಲಿದೆ.

ಏಪ್ರಿಲ್ 29ರಂದು ರಾಮ್​ ಚರಣ್ ಹಾಗೂ ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾ ತೆರೆಗೆ ಬರುತ್ತಿದೆ. ಈ ಸಿನಿಮಾದ ಅಬ್ಬರ ಒಂದು ವಾರಗಳ ಕಾಲವಂತೂ ಇದ್ದೇ ಇರುತ್ತದೆ. ಹೀಗಾಗಿ, ಮೇ 6ರ ಬಳಿಕ ಚಿತ್ರಗಳನ್ನು ರಿಲೀಸ್ ಮಾಡುವುದು ಉತ್ತಮ ಎನ್ನುವ ನಿರ್ಧಾರಕ್ಕೆ ಈ ಚಿತ್ರಗಳು ಬಂದಿವೆ ಎಂದು ವರದಿ ಆಗಿದೆ.

‘ಕೆಜಿಎಫ್ 2’ ಸಿನಿಮಾ ಬಾಲಿವುಡ್​ನಲ್ಲಿ ಹೊಸಹೊಸ ದಾಖಲೆ ಬರೆಯುತ್ತಿದೆ. ಈ ಸಿನಿಮಾ ಮೂರು ದಿನಕ್ಕೆ 200 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಚಿತ್ರದ ಗಳಿಕೆ ನೋಡಿ ಬಾಲಿವುಡ್​ ಮಂದಿ ಕಣ್ಣರಳಿಸಿದ್ದಾರೆ. ಸಿನಿಮಾದ ನಾಗಾಲೋಟ ಇನ್ನೂ ಕೆಲವು ವಾರಗಳ ಕಾಲ ಮುಂದುವರಿಯಲಿದೆ.

ಇದನ್ನೂ ಓದಿ: KGF 2 Collection: ಸೋಮವಾರದ ಪರೀಕ್ಷೆಯಲ್ಲಿ ‘ಕೆಜಿಎಫ್​ 2’ ಪಾಸ್; ಹಿಂದಿ ಮಾರುಕಟ್ಟೆಯಲ್ಲಿ 5 ದಿನಕ್ಕೆ 219.56 ಕೋಟಿ ರೂ. ಕಲೆಕ್ಷನ್​

ತಮಿಳುನಾಡಿನಲ್ಲಿ ‘ಕೆಜಿಎಫ್ 2’ ಎದುರು ಮಕಾಡೆ ಮಲಗಿದ ‘ಬೀಸ್ಟ್​’; ಕಲೆಕ್ಷನ್ ಅಂತರ ಎಷ್ಟು?

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ