AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಪೋಸ್ಟ್​​ಪೋನ್ ಆಗಿದ್ದಕ್ಕೆ ‘ಧುರಂಧರ್ 2’ಗೆ ಆಗೋ ಲಾಭ ಎಷ್ಟು?

'ಟಾಕ್ಸಿಕ್' vs 'ಧುರಂಧರ್ 2' ನಡುವಿನ ಪೈಪೋಟಿ ಈಗ ಮುಕ್ತವಾಗಿದೆ. ಯುದ್ಧ ಭೀತಿಯ ಕಾರಣದಿಂದ 'ಟಾಕ್ಸಿಕ್' ರಿಲೀಸ್ ಮುಂದಕ್ಕೆ ಹೋಗಿದೆ. ಇದರಿಂದ 'ಧುರಂಧರ್ 2'ಗೆ ಹೆಚ್ಚು ಚಿತ್ರಮಂದಿರಗಳು ಲಭ್ಯವಾಗಿವೆ, ಭರ್ಜರಿ ಕಲೆಕ್ಷನ್ ನಿರೀಕ್ಷಿಸಲಾಗಿದೆ. ಆದರೆ, 'ಧುರಂಧರ್ 2' ಚಿತ್ರದ 4 ಗಂಟೆಗಳ ಅವಧಿ ಪ್ರೇಕ್ಷಕರನ್ನು ಸೆಳೆಯುತ್ತದೆಯೇ ಎಂಬ ಪ್ರಶ್ನೆ ಮೂಡಿದೆ.

‘ಟಾಕ್ಸಿಕ್’ ಪೋಸ್ಟ್​​ಪೋನ್ ಆಗಿದ್ದಕ್ಕೆ ‘ಧುರಂಧರ್ 2’ಗೆ ಆಗೋ ಲಾಭ ಎಷ್ಟು?
ಯಶ್-ರಣವೀರ್
ರಾಜೇಶ್ ದುಗ್ಗುಮನೆ
|

Updated on:Mar 04, 2026 | 2:25 PM

Share

‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಚರ್ಚೆ ಸಾಕಷ್ಟು ನಡೆಯಿತು. ಆದರೆ, ಸದ್ಯಕ್ಕೆ ‘ಟಾಕ್ಸಿಕ್’ ತಂಡ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿಕೊಂಡಿದೆ. ಇದು ಯಶ್ ಅಭಿಮಾನಿಗಳಿಗೆ ಸಾಕಷ್ಟು ಬೇಸರ ಮೂಡಿಸಿದೆ. ವಿಶ್ವ ಮಟ್ಟದಲ್ಲಿ ಮೂಡಿರುವ ಯುದ್ಧ ಭೀತಿಯ ಕಾರಣದಿಂದ ‘ಟಾಕ್ಸಿಕ್’ ರಿಲೀಸ್ ವಿಳಂಬ ಆಗುತ್ತಿದೆ ಎಂದು ತಂಡ ಹೇಳಿದೆ. ಈ ಬೆಳವಣಿಗೆಯಿಂದ ‘ಧುರಂಧರ್ 2’ ಹಾದಿ ಸುಗಮನ ಆಗಿದೆ. ಹೆಚ್ಚಿನ ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗುವ ಅವಕಾಶ ಇದೆ.

‘ಧುರಂಧರ್ 2’ ಹಾಗೂ ‘ಟಾಕ್ಸಿಕ್’ ಎರಡೂ ಸಿನಿಮಾಗಳು ಬಿಗ್ ಬಜೆಟ್ ಚಿತ್ರಗಳು. ಎರಡೂ ಸಿನಿಮಾಗಳಿಗೆ ಹೆಚ್ಚಿನ ಚಿತ್ರಮಂದಿರಗಳು ಬೇಕು. ಎರಡೂ ಚಿತ್ರಗಳ ಬಜೆಟ್ ದೊಡ್ಡದಿರುವುದರಿಂದ ಹೆಚ್ಚಿನ ಕಲೆಕ್ಷನ್ ಮಾಡಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಎಲ್ಲಾ ಕಾರಣದಿಂದ ಯಾವುದಾದರೂ ಒಂದು ಚಿತ್ರ ಮುಂದಕ್ಕೆ ಹೋಗಲೇಬೇಕು ಎಂಬ ಪರಿಸ್ಥಿತಿ ನಿರ್ಮಾಣ ಆಗಿತ್ತು. ಎರಡೂ ತಂಡಗಳು ಹಠ ಹಿಡಿದು ಕುಳಿತಿದ್ದವು. ಆದರೆ, ಯುದ್ಧ ಭೀತಿ ಕಾರಣದಿಂದ ‘ಟಾಕ್ಸಿಕ್’ ಸದ್ಯದ ರಿಲೀಸ್ ದಿನಾಂಕ ಮುಂದಕ್ಕೆ ಹಾಕಿಕೊಂಡಿದೆ.

‘ಧುರಂಧರ್ 2’ ಸಿನಿಮಾ ಹಿಂದಿ ಮಾತ್ರವಲ್ಲದೆ, ಕನ್ನಡ, ತಮಿಳು, ತೆಲುಗು ಮೊದಲಾದ ಭಾಷೆಗಳಲ್ಲಿ ತೆರೆಗೆ ಬರುತ್ತಿವೆ. ಈಗ ‘ಟಾಕ್ಸಿಕ್’ ರಿಲೀಸ್ ವಿಳಂಬದಿಂದ ದಕ್ಷಿಣ ಭಾರತದಲ್ಲೂ ಚಿತ್ರಕ್ಕೆ ಹೆಚ್ಚಿನ ಥಿಯೇಟರ್ ಸಿಗಲಿದೆ. ಇವುಗಳಿಂದ ಸಿನಿಮಾ ಅಬ್ಬರದ ಕಲೆಕ್ಷನ್ ಮಾಡಬಹುದು. ಅರಬ್ ರಾಷ್ಟ್ರಗಳಲ್ಲಿ ಈ ಚಿತ್ರದ ಮೇಲೆ ಬ್ಯಾನ್ ಇರುವುದರಿಂದ ಯುದ್ಧ ಭೀತಿ ಈ ಸಿನಿಮಾ ಮೇಲೆ ಯಾವುದೇ ಪರಿಣಾಮ ಬೀರುತ್ತಿಲ್ಲ. ಮೊದಲ ವಾರದಲ್ಲೇ ‘ಧುರಂಧರ್ 2’ಗೆ ಹೆಚ್ಚುವರಿಯಾಗಿ 100 ಕೋಟಿ ರೂಪಾಯಿ ಹರಿದು ಬರೋ ನಿರೀಕ್ಷೆ ಇದೆ.

ಇದನ್ನೂ ಓದಿ: ‘ಧುರಂಧರ್ 2’ ಸಿನಿಮಾದ ಅವಧಿ ಬರೋಬ್ಬರಿ 4 ಗಂಟೆ? ರಿಸ್ಕ್ ತೆಗೆದುಕೊಂಡ ಚಿತ್ರತಂಡ

‘ಧುರಂಧರ್ 2’ ಸಿನಿಮಾದ ಅವಧಿ 4 ಗಂಟೆ ಇದೆ ಎನ್ನಲಾಗಿದೆ. ಇಷ್ಟು ದೀರ್ಘ ಅವಧಿ ಇಟ್ಟುಕೊಂಡು ಪ್ರೇಕ್ಷಕರನ್ನು ಥಿಯೇಟರ್​​ಗೆ ಕರೆತರೋದು ಒಂದು ದೊಡ್ಡ ಸವಾಲು. ಅದನ್ನು ಸಿನಿಮಾ ಹೇಗೆ ಎದುರಿಸುತ್ತದೆ ಎಂಬ ಕುತೂಹಲ ಅಭಿಮಾನಿಗಳಿಗೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:46 am, Wed, 4 March 26

Follow Us
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು