AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಾಯಣ ಸಿನಿಮಾಗೆ ಶೂಟಿಂಗ್ ಆರಂಭಿಸಿದ ರಾಕಿಂಗ್ ಸ್ಟಾರ್​ ಯಶ್

ಅಕ್ಸಾ ಬೀಚ್​ನಲ್ಲಿ ‘ರಾಮಾಯಣ’ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿದೆ. ‘ರಾಕಿಂಗ್ ಸ್ಟಾರ್​’ ಯಶ್ ಅವರು ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದಾರೆ. ರಣಬೀರ್ ಕಪೂರ್, ಸಾಯಿ ಪಲ್ಲವಿ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಕೆಲಸಗಳ ಜೊತೆಗೆ ‘ರಾಮಾಯಣ’ ಸಿನಿಮಾಗೂ ಡೇಟ್ಸ್ ನೀಡಿದ್ದಾರೆ.

ರಾಮಾಯಣ ಸಿನಿಮಾಗೆ ಶೂಟಿಂಗ್ ಆರಂಭಿಸಿದ ರಾಕಿಂಗ್ ಸ್ಟಾರ್​ ಯಶ್
Yash
ಮದನ್​ ಕುಮಾರ್​
|

Updated on: Feb 22, 2025 | 4:24 PM

Share

ನಟ ಯಶ್ ಅವರಿಗೆ ಇರುವ ಡಿಮ್ಯಾಂಡ್ ಅಷ್ಟಿಷ್ಟಲ್ಲ. ಕನ್ನಡ ಚಿತ್ರರಂಗ ಮಾತ್ರವಲ್ಲದೇ ಬಾಲಿವುಡ್​ನಲ್ಲಿ ಕೂಡ ಅವರಿಗೆ ಸಖತ್ ಬೇಡಿಕೆ ಇದೆ. ‘ರಾಮಾಯಣ’ ಸಿನಿಮಾದಲ್ಲಿ ಅವರು ರಾವಣನ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಬಗ್ಗೆ ಈಗ ಮಾಹಿತಿ ಸಿಕ್ಕಿದೆ. ಯಶ್ ಅವರು ಯಾವಾಗ ಈ ಚಿತ್ರದ ಶೂಟಿಂಗ್​ನಲ್ಲಿ ಭಾಗಿಯಾಗಲಿದ್ದಾರೆ ಎಂದು ಕೇಳುತ್ತಿದ್ದವರಿಗೆ ಇದು ಎಗ್ಸೈಟಿಂಗ್ ನ್ಯೂಸ್. ಈಗಾಗಲೇ ಯಶ್ ಅವರು ‘ರಾಮಾಯಣ’ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಮುಂಬೈನಲ್ಲಿ ಅದ್ದೂರಿಯಾಗಿ ಚಿತ್ರೀಕರಣ ನಡೆಯುತ್ತಿದೆ.

ಯಶ್ ಅವರು ಇಷ್ಟು ದಿನ ‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು. ಅದರ ನಡುವೆ ಬಿಡುವು ಮಾಡಿಕೊಂಡು ಮುಂಬೈಗೆ ತೆರಳಿದ್ದಾರೆ. ಅಲ್ಲಿ ಫೆಬ್ರವರಿ 21ರಿಂದಲೇ ‘ರಾಮಾಯಣ’ ಸಿನಿಮಾದ ಚಿತ್ರೀಕರಣದಲ್ಲಿ ಅವರು ಭಾಗಿ ಆಗಿದ್ದಾರೆ. 2 ದಿನಗಳ ಕಾಲ ಕಾಸ್ಟ್ಯೂಮ್ ಟೆಸ್ಟ್ ಮಾಡಲಾಗಿದೆ. ಬಳಿಕ ಯುದ್ಧದ ದೃಶ್ಯಗಳ ಚಿತ್ರೀಕರಣ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

ಬಾಲಿವುಡ್​ನ ‘ರಾಮಾಯಣ’ ಸಿನಿಮಾಗೆ ನಿತೇಶ್ ತಿವಾರಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ರಣಬೀರ್ ಕಪೂರ್ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ನಟಿ ಸಾಯಿ ಪಲ್ಲವಿ ಅವರಿಗೆ ಸೀತೆಯ ಪಾತ್ರ ನೀಡಲಾಗಿದೆ. ಬಹುತಾರಾಗಣದ ಈ ಸಿನಿಮಾದ ಮೇಲೆ ಬಹಳ ನಿರೀಕ್ಷೆ ಇದೆ. ವರದಿಗಳ ಪ್ರಕಾರ ರಣಬೀರ್ ಕಪೂರ್ ಅವರು ಈಗಾಗಲೇ ತಮ್ಮ ಪಾತ್ರಕ್ಕೆ ಶೇಕಡ 90ರಷ್ಟು ಚಿತ್ರೀಕರಣವನ್ನು ಮುಗಿಸಿದ್ದಾರೆ.

ಈ ಸಿನಿಮಾದ ನಿರ್ಮಾಣದಲ್ಲೂ ಯಶ್ ಅವರು ಪಾಲುದಾರಿಕೆ ಹೊಂದಿದ್ದಾರೆ. ಹಾಗಾಗಿ ಅವರಿಗೆ ಈ ಪ್ರಾಜೆಕ್ಟ್ ತುಂಬ ಮಹತ್ವದ್ದಾಗಿದೆ. ಮುಂಬೈನ ಅಕ್ಸಾ ಬೀಚ್​ನಲ್ಲಿ ಯುದ್ಧದ ದೃಶ್ಯಗಳ ಶೂಟಿಂಗ್ ಮಾಡಲಾಗುತ್ತಿದ್ದು, ಅದರಲ್ಲಿ ಯಶ್ ಪಾಲ್ಗೊಂಡಿದ್ದಾರೆ. ಯುದ್ಧದ ದೃಶ್ಯ ಆಗಿದ್ದರೂ ಕೂಡ ಇದರಲ್ಲಿ ರಣಬೀರ್ ಕಪೂರ್​ ಅವರು ಭಾಗಿಯಾಗಿಲ್ಲ ಎನ್ನಲಾಗಿದೆ. ಮುಂದಿನ ದೃಶ್ಯಗಳನ್ನು ಸ್ಟುಡಿಯೋದಲ್ಲಿ ಚಿತ್ರೀಕರಿಸಲಾಗುವುದು ಎಂದು ವರದಿಯಾಗಿದೆ.

ಇದನ್ನೂ ಓದಿ: ‘ಕೆಜಿಎಫ್ 2’ ಕೆಟ್ಟ ಸಿನಿಮಾ ಹೇಗೆ ಗೆದ್ದಿತೊ‘: ಯಶ್ ಅಭಿಮಾನಿಗಳ ಕೆಣಕಿದ ವರ್ಮಾ

ಭಾರಿ ಬಜೆಟ್​ನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಈ ಮೊದಲು ಶೂಟಿಂಗ್ ವೇಳೆ ರಣಬೀರ್​ ಕಪೂರ್​ ಹಾಗೂ ಸಾಯಿ ಪಲ್ಲವಿ ಅವರ ಫೋಟೋಗಳು ಲೀಕ್ ಆಗಿದ್ದವು. ಆ ಬಳಿಕ ಚಿತ್ರತಂಡ ಹೆಚ್ಚಿನ ಎಚ್ಚರಿಕೆ ವಹಿಸುತ್ತಿದೆ. ರಾವಣನಾಗಿ ಯಶ್ ಅವರ ಫಸ್ಟ್​ ಲುಕ್ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?