Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಾಯಣ ಸಿನಿಮಾಗೆ ಶೂಟಿಂಗ್ ಆರಂಭಿಸಿದ ರಾಕಿಂಗ್ ಸ್ಟಾರ್​ ಯಶ್

ಅಕ್ಸಾ ಬೀಚ್​ನಲ್ಲಿ ‘ರಾಮಾಯಣ’ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿದೆ. ‘ರಾಕಿಂಗ್ ಸ್ಟಾರ್​’ ಯಶ್ ಅವರು ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದಾರೆ. ರಣಬೀರ್ ಕಪೂರ್, ಸಾಯಿ ಪಲ್ಲವಿ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಕೆಲಸಗಳ ಜೊತೆಗೆ ‘ರಾಮಾಯಣ’ ಸಿನಿಮಾಗೂ ಡೇಟ್ಸ್ ನೀಡಿದ್ದಾರೆ.

ರಾಮಾಯಣ ಸಿನಿಮಾಗೆ ಶೂಟಿಂಗ್ ಆರಂಭಿಸಿದ ರಾಕಿಂಗ್ ಸ್ಟಾರ್​ ಯಶ್
Yash
Follow us
ಮದನ್​ ಕುಮಾರ್​
|

Updated on: Feb 22, 2025 | 4:24 PM

ನಟ ಯಶ್ ಅವರಿಗೆ ಇರುವ ಡಿಮ್ಯಾಂಡ್ ಅಷ್ಟಿಷ್ಟಲ್ಲ. ಕನ್ನಡ ಚಿತ್ರರಂಗ ಮಾತ್ರವಲ್ಲದೇ ಬಾಲಿವುಡ್​ನಲ್ಲಿ ಕೂಡ ಅವರಿಗೆ ಸಖತ್ ಬೇಡಿಕೆ ಇದೆ. ‘ರಾಮಾಯಣ’ ಸಿನಿಮಾದಲ್ಲಿ ಅವರು ರಾವಣನ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಬಗ್ಗೆ ಈಗ ಮಾಹಿತಿ ಸಿಕ್ಕಿದೆ. ಯಶ್ ಅವರು ಯಾವಾಗ ಈ ಚಿತ್ರದ ಶೂಟಿಂಗ್​ನಲ್ಲಿ ಭಾಗಿಯಾಗಲಿದ್ದಾರೆ ಎಂದು ಕೇಳುತ್ತಿದ್ದವರಿಗೆ ಇದು ಎಗ್ಸೈಟಿಂಗ್ ನ್ಯೂಸ್. ಈಗಾಗಲೇ ಯಶ್ ಅವರು ‘ರಾಮಾಯಣ’ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಮುಂಬೈನಲ್ಲಿ ಅದ್ದೂರಿಯಾಗಿ ಚಿತ್ರೀಕರಣ ನಡೆಯುತ್ತಿದೆ.

ಯಶ್ ಅವರು ಇಷ್ಟು ದಿನ ‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು. ಅದರ ನಡುವೆ ಬಿಡುವು ಮಾಡಿಕೊಂಡು ಮುಂಬೈಗೆ ತೆರಳಿದ್ದಾರೆ. ಅಲ್ಲಿ ಫೆಬ್ರವರಿ 21ರಿಂದಲೇ ‘ರಾಮಾಯಣ’ ಸಿನಿಮಾದ ಚಿತ್ರೀಕರಣದಲ್ಲಿ ಅವರು ಭಾಗಿ ಆಗಿದ್ದಾರೆ. 2 ದಿನಗಳ ಕಾಲ ಕಾಸ್ಟ್ಯೂಮ್ ಟೆಸ್ಟ್ ಮಾಡಲಾಗಿದೆ. ಬಳಿಕ ಯುದ್ಧದ ದೃಶ್ಯಗಳ ಚಿತ್ರೀಕರಣ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

ಬಾಲಿವುಡ್​ನ ‘ರಾಮಾಯಣ’ ಸಿನಿಮಾಗೆ ನಿತೇಶ್ ತಿವಾರಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ರಣಬೀರ್ ಕಪೂರ್ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ನಟಿ ಸಾಯಿ ಪಲ್ಲವಿ ಅವರಿಗೆ ಸೀತೆಯ ಪಾತ್ರ ನೀಡಲಾಗಿದೆ. ಬಹುತಾರಾಗಣದ ಈ ಸಿನಿಮಾದ ಮೇಲೆ ಬಹಳ ನಿರೀಕ್ಷೆ ಇದೆ. ವರದಿಗಳ ಪ್ರಕಾರ ರಣಬೀರ್ ಕಪೂರ್ ಅವರು ಈಗಾಗಲೇ ತಮ್ಮ ಪಾತ್ರಕ್ಕೆ ಶೇಕಡ 90ರಷ್ಟು ಚಿತ್ರೀಕರಣವನ್ನು ಮುಗಿಸಿದ್ದಾರೆ.

ಈ ಸಿನಿಮಾದ ನಿರ್ಮಾಣದಲ್ಲೂ ಯಶ್ ಅವರು ಪಾಲುದಾರಿಕೆ ಹೊಂದಿದ್ದಾರೆ. ಹಾಗಾಗಿ ಅವರಿಗೆ ಈ ಪ್ರಾಜೆಕ್ಟ್ ತುಂಬ ಮಹತ್ವದ್ದಾಗಿದೆ. ಮುಂಬೈನ ಅಕ್ಸಾ ಬೀಚ್​ನಲ್ಲಿ ಯುದ್ಧದ ದೃಶ್ಯಗಳ ಶೂಟಿಂಗ್ ಮಾಡಲಾಗುತ್ತಿದ್ದು, ಅದರಲ್ಲಿ ಯಶ್ ಪಾಲ್ಗೊಂಡಿದ್ದಾರೆ. ಯುದ್ಧದ ದೃಶ್ಯ ಆಗಿದ್ದರೂ ಕೂಡ ಇದರಲ್ಲಿ ರಣಬೀರ್ ಕಪೂರ್​ ಅವರು ಭಾಗಿಯಾಗಿಲ್ಲ ಎನ್ನಲಾಗಿದೆ. ಮುಂದಿನ ದೃಶ್ಯಗಳನ್ನು ಸ್ಟುಡಿಯೋದಲ್ಲಿ ಚಿತ್ರೀಕರಿಸಲಾಗುವುದು ಎಂದು ವರದಿಯಾಗಿದೆ.

ಇದನ್ನೂ ಓದಿ: ‘ಕೆಜಿಎಫ್ 2’ ಕೆಟ್ಟ ಸಿನಿಮಾ ಹೇಗೆ ಗೆದ್ದಿತೊ‘: ಯಶ್ ಅಭಿಮಾನಿಗಳ ಕೆಣಕಿದ ವರ್ಮಾ

ಭಾರಿ ಬಜೆಟ್​ನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಈ ಮೊದಲು ಶೂಟಿಂಗ್ ವೇಳೆ ರಣಬೀರ್​ ಕಪೂರ್​ ಹಾಗೂ ಸಾಯಿ ಪಲ್ಲವಿ ಅವರ ಫೋಟೋಗಳು ಲೀಕ್ ಆಗಿದ್ದವು. ಆ ಬಳಿಕ ಚಿತ್ರತಂಡ ಹೆಚ್ಚಿನ ಎಚ್ಚರಿಕೆ ವಹಿಸುತ್ತಿದೆ. ರಾವಣನಾಗಿ ಯಶ್ ಅವರ ಫಸ್ಟ್​ ಲುಕ್ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ