AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಂದ್ರಮುಖಿ 2’ ಫ್ಲಾಪ್​: ಚಿತ್ರಮಂದಿರದಿಂದ ಎತ್ತಂಗಡಿ ಆದ್ರೂ ಸೂಪರ್​ ಹಿಟ್​ ಎಂದ ಕಂಗನಾ

Chandramukhi 2 Box Office Collection: ‘ಚಂದ್ರಮುಖಿ 2’ ಸಿನಿಮಾದಲ್ಲಿ ರಾಘವ ಲಾರೆನ್ಸ್​ ಮತ್ತು ಕಂಗನಾ ರಣಾವತ್​ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ತಮಿಳು, ಹಿಂದಿ ಮುಂತಾದ ಭಾಷೆಗಳಲ್ಲಿ ಮೂಡಿಬಂದ ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಿದೆ. ಎಲ್ಲ ಭಾಷೆಗಳಲ್ಲೂ ಸೇರಿ 4 ದಿನಕ್ಕೆ ಈ ಚಿತ್ರ ಗಳಿಸಿರುವುದು ಕೇವಲ 24 ಕೋಟಿ ರೂಪಾಯಿ.

‘ಚಂದ್ರಮುಖಿ 2’ ಫ್ಲಾಪ್​: ಚಿತ್ರಮಂದಿರದಿಂದ ಎತ್ತಂಗಡಿ ಆದ್ರೂ ಸೂಪರ್​ ಹಿಟ್​ ಎಂದ ಕಂಗನಾ
ರಾಘವ ಲಾರೆನ್ಸ್​, ಕಂಗನಾ ರಣಾವತ್​
ಮದನ್​ ಕುಮಾರ್​
|

Updated on: Oct 02, 2023 | 3:26 PM

Share

ನಟಿ ಕಂಗನಾ ರಣಾವತ್​ (Kangana Ranaut) ಅವರು ಒಂದು ಗೆಲುವಿಗಾಗಿ ಕಾದಿದ್ದಾರೆ. ‘ಚಂದ್ರಮುಖಿ 2’ ಸಿನಿಮಾದಿಂದ ಆ ಗೆಲುವು ಸಿಗಬಹುದು ಎಂದೇ ಅವರ ಅಭಿಮಾನಿಗಳು ಭಾವಿಸಿದ್ದರು. ಆದರೆ ಅವರ ಲೆಕ್ಕಾಚಾರ ತಲೆ ಕೆಳಗಾಗಿದೆ. ಬಾಲಿವುಡ್​ನಲ್ಲಿ ಗೆಲುವು ಮರೀಚಿಕೆ ಆಗಿದೆ ಎಂಬುದು ಗೊತ್ತಾದಾಗ ಅವರು ಸೌತ್​ ಫಿಲ್ಮ್​ ಇಂಡಸ್ಟ್ರಿಯವರ ಜೊತೆ ಕೈ ಜೋಡಿಸಿ ‘ಚಂದ್ರಮುಖಿ 2’ (Chandramukhi 2) ಚಿತ್ರದಲ್ಲಿ ನಟಿಸಿದರು. ಆದರೆ ಈ ಸಿನಿಮಾ ಕೂಡ ಕೈ ಹಿಡಿದಿಲ್ಲ. ಸೆಪ್ಟೆಂಬರ್​ 28ರಂದು ಬಿಡುಗಡೆ ಆದ ಈ ಚಿತ್ರ ಹೀನಾಯವಾಗಿ ಸೋತಿದೆ ಎಂದು ಟ್ರೇಡ್​ ವಿಶ್ಲೇಷಕರು ಹೇಳುತ್ತಿದ್ದಾರೆ. ಆದರೆ ಕಂಗನಾ ಮಾತ್ರ ತಮ್ಮ ಸಿನಿಮಾ ಚೆನ್ನಾಗಿ ಪ್ರದರ್ಶನ ಕಾಣುತ್ತಿದೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ.

‘ಚಂದ್ರಮುಖಿ 2’ ಸಿನಿಮಾದಲ್ಲಿ ರಾಘವ ಲಾರೆನ್ಸ್​ ಮತ್ತು ಕಂಗನಾ ರಣಾವತ್​ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ತಮಿಳು, ಹಿಂದಿ ಮುಂತಾದ ಭಾಷೆಗಳಲ್ಲಿ ಮೂಡಿಬಂದ ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಿದೆ. 5 ದಿನ ಪ್ರದರ್ಶನ ಕಂಡರೂ ಕೂಡ ಈ ಸಿನಿಮಾದ ಗಳಿಕೆ ಸಮಾಧಾನಕರವಾಗಿಲ್ಲ. ಎಲ್ಲ ಭಾಷೆಗಳಲ್ಲೂ ಸೇರಿ 4 ದಿನಕ್ಕೆ ಈ ಚಿತ್ರ ಗಳಿಸಿರುವುದು ಕೇವಲ 24 ಕೋಟಿ ರೂಪಾಯಿ.

ಟ್ರೇಡ್​ ವಿಶ್ಲೇಷಕ ಮನೋಬಲ ವಿಜಯಬಾಲನ್​ ಅವರು ‘ಚಂದ್ರಮುಖಿ 2’ ಸಿನಿಮಾವನ್ನು ಡಿಸಾಸ್ಟರ್​ (ದುರಂತ) ಎಂದು ಕರೆದಿದ್ದಾರೆ. ಅಲ್ಲದೇ ಹಲವು ಚಿತ್ರಮಂದಿರದಿಂದ ಈ ಸಿನಿಮಾವನ್ನು ಕಿತ್ತು ಹಾಕಲಾಗಿದೆ. ನಿರೀಕ್ಷಿತ ಮಟ್ಟದಲ್ಲಿ ಜನರು ಬಾರದ ಕಾರಣ ಎತ್ತಂಗಡಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ ಚಿತ್ರತಂಡದವರು ಬೇರೆಯದೇ ವಾದ ಮುಂದಿಡುತ್ತಿದ್ದಾರೆ. ‘ರನ್ನಿಂಗ್​ ಸಕ್ಸಸ್​ಪುಲಿ’ ಎಂದು ಸಾರುವ ಪೋಸ್ಟರ್​ ರಾರಾಜಿಸುತ್ತಿದೆ. 4 ದಿನಕ್ಕೆ 40 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಆಗಿದೆ ಎಂದು ಕೆಲವರು ಹೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಕಂಗನಾ ರಣಾವತ್​ ಅವರು, ‘ನಮ್ಮ ಸಿನಿಮಾ ನೋಡಿದ ಪ್ರೇಕ್ಷಕರಿಗೆ ಧನ್ಯವಾಗಳು’ ಎಂದು ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಗೆದ್ದ ಶ್ರೀಲೀಲಾ, ಕಂಗನಾ ಸಾಧಾರಣ, ಕಳಪೆ ಓಪನಿಂಗ್ ಪಡೆದ ವ್ಯಾಕ್ಸಿನ್ ವಾರ್;

ಸೆಪ್ಟೆಂಬರ್​ 28ರಂದು ‘ಚಂದ್ರಮುಖಿ 2’ ಮಾತ್ರವಲ್ಲದೇ ನಯನತಾರಾ ನಟನೆಯ ‘ಇರೈವಾನ್​’, ಶ್ರೀಲೀಲಾ-ರಾಮ್​ ಪೋತಿನೇನಿ ಅಭಿನಯದ ‘ಸ್ಕಂದ’ ಸಿನಿಮಾ ಕೂಡ ಸೋತಿವೆ ಎಂದು ಟ್ರೇಡ್​ ವಿಶ್ಲೇಷಕ ಮನೋಬಲ ವಿಜಯಬಾಲನ್​ ಅವರು ಟ್ವೀಟ್​ ಮಾಡಿದ್ದಾರೆ. ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ ‘ದಿ ವ್ಯಾಕ್ಸಿನ್​ ವಾರ್​’ ಚಿತ್ರ ಕೂಡ ನಿರೀಕ್ಷಿತ ಮಟ್ಟದ ಕಲೆಕ್ಷನ್​ ಮಾಡುವಲ್ಲಿ ವಿಫಲವಾಗಿದೆ. ಕಂಗನಾ ನಟನೆ ‘ತೇಜಸ್​’ ಸಿನಿಮಾ ಅಕ್ಟೋಬರ್​ 27ರಂದು ಬಿಡುಗಡೆ ಆಗಲಿದೆ. ಅವರೇ ನಿರ್ದೇಶನ ಮಾಡಿರುವ ‘ಎಮರ್ಜೆನ್ಸಿ’ ಚಿತ್ರ ಕೂಡ ರಿಲೀಸ್​ಗೆ ಸಜ್ಜಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ