‘ಚಂದ್ರಮುಖಿ 2’ ಫ್ಲಾಪ್​: ಚಿತ್ರಮಂದಿರದಿಂದ ಎತ್ತಂಗಡಿ ಆದ್ರೂ ಸೂಪರ್​ ಹಿಟ್​ ಎಂದ ಕಂಗನಾ

Chandramukhi 2 Box Office Collection: ‘ಚಂದ್ರಮುಖಿ 2’ ಸಿನಿಮಾದಲ್ಲಿ ರಾಘವ ಲಾರೆನ್ಸ್​ ಮತ್ತು ಕಂಗನಾ ರಣಾವತ್​ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ತಮಿಳು, ಹಿಂದಿ ಮುಂತಾದ ಭಾಷೆಗಳಲ್ಲಿ ಮೂಡಿಬಂದ ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಿದೆ. ಎಲ್ಲ ಭಾಷೆಗಳಲ್ಲೂ ಸೇರಿ 4 ದಿನಕ್ಕೆ ಈ ಚಿತ್ರ ಗಳಿಸಿರುವುದು ಕೇವಲ 24 ಕೋಟಿ ರೂಪಾಯಿ.

‘ಚಂದ್ರಮುಖಿ 2’ ಫ್ಲಾಪ್​: ಚಿತ್ರಮಂದಿರದಿಂದ ಎತ್ತಂಗಡಿ ಆದ್ರೂ ಸೂಪರ್​ ಹಿಟ್​ ಎಂದ ಕಂಗನಾ
ರಾಘವ ಲಾರೆನ್ಸ್​, ಕಂಗನಾ ರಣಾವತ್​
Follow us
|

Updated on: Oct 02, 2023 | 3:26 PM

ನಟಿ ಕಂಗನಾ ರಣಾವತ್​ (Kangana Ranaut) ಅವರು ಒಂದು ಗೆಲುವಿಗಾಗಿ ಕಾದಿದ್ದಾರೆ. ‘ಚಂದ್ರಮುಖಿ 2’ ಸಿನಿಮಾದಿಂದ ಆ ಗೆಲುವು ಸಿಗಬಹುದು ಎಂದೇ ಅವರ ಅಭಿಮಾನಿಗಳು ಭಾವಿಸಿದ್ದರು. ಆದರೆ ಅವರ ಲೆಕ್ಕಾಚಾರ ತಲೆ ಕೆಳಗಾಗಿದೆ. ಬಾಲಿವುಡ್​ನಲ್ಲಿ ಗೆಲುವು ಮರೀಚಿಕೆ ಆಗಿದೆ ಎಂಬುದು ಗೊತ್ತಾದಾಗ ಅವರು ಸೌತ್​ ಫಿಲ್ಮ್​ ಇಂಡಸ್ಟ್ರಿಯವರ ಜೊತೆ ಕೈ ಜೋಡಿಸಿ ‘ಚಂದ್ರಮುಖಿ 2’ (Chandramukhi 2) ಚಿತ್ರದಲ್ಲಿ ನಟಿಸಿದರು. ಆದರೆ ಈ ಸಿನಿಮಾ ಕೂಡ ಕೈ ಹಿಡಿದಿಲ್ಲ. ಸೆಪ್ಟೆಂಬರ್​ 28ರಂದು ಬಿಡುಗಡೆ ಆದ ಈ ಚಿತ್ರ ಹೀನಾಯವಾಗಿ ಸೋತಿದೆ ಎಂದು ಟ್ರೇಡ್​ ವಿಶ್ಲೇಷಕರು ಹೇಳುತ್ತಿದ್ದಾರೆ. ಆದರೆ ಕಂಗನಾ ಮಾತ್ರ ತಮ್ಮ ಸಿನಿಮಾ ಚೆನ್ನಾಗಿ ಪ್ರದರ್ಶನ ಕಾಣುತ್ತಿದೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ.

‘ಚಂದ್ರಮುಖಿ 2’ ಸಿನಿಮಾದಲ್ಲಿ ರಾಘವ ಲಾರೆನ್ಸ್​ ಮತ್ತು ಕಂಗನಾ ರಣಾವತ್​ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ತಮಿಳು, ಹಿಂದಿ ಮುಂತಾದ ಭಾಷೆಗಳಲ್ಲಿ ಮೂಡಿಬಂದ ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಿದೆ. 5 ದಿನ ಪ್ರದರ್ಶನ ಕಂಡರೂ ಕೂಡ ಈ ಸಿನಿಮಾದ ಗಳಿಕೆ ಸಮಾಧಾನಕರವಾಗಿಲ್ಲ. ಎಲ್ಲ ಭಾಷೆಗಳಲ್ಲೂ ಸೇರಿ 4 ದಿನಕ್ಕೆ ಈ ಚಿತ್ರ ಗಳಿಸಿರುವುದು ಕೇವಲ 24 ಕೋಟಿ ರೂಪಾಯಿ.

ಟ್ರೇಡ್​ ವಿಶ್ಲೇಷಕ ಮನೋಬಲ ವಿಜಯಬಾಲನ್​ ಅವರು ‘ಚಂದ್ರಮುಖಿ 2’ ಸಿನಿಮಾವನ್ನು ಡಿಸಾಸ್ಟರ್​ (ದುರಂತ) ಎಂದು ಕರೆದಿದ್ದಾರೆ. ಅಲ್ಲದೇ ಹಲವು ಚಿತ್ರಮಂದಿರದಿಂದ ಈ ಸಿನಿಮಾವನ್ನು ಕಿತ್ತು ಹಾಕಲಾಗಿದೆ. ನಿರೀಕ್ಷಿತ ಮಟ್ಟದಲ್ಲಿ ಜನರು ಬಾರದ ಕಾರಣ ಎತ್ತಂಗಡಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ ಚಿತ್ರತಂಡದವರು ಬೇರೆಯದೇ ವಾದ ಮುಂದಿಡುತ್ತಿದ್ದಾರೆ. ‘ರನ್ನಿಂಗ್​ ಸಕ್ಸಸ್​ಪುಲಿ’ ಎಂದು ಸಾರುವ ಪೋಸ್ಟರ್​ ರಾರಾಜಿಸುತ್ತಿದೆ. 4 ದಿನಕ್ಕೆ 40 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಆಗಿದೆ ಎಂದು ಕೆಲವರು ಹೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಕಂಗನಾ ರಣಾವತ್​ ಅವರು, ‘ನಮ್ಮ ಸಿನಿಮಾ ನೋಡಿದ ಪ್ರೇಕ್ಷಕರಿಗೆ ಧನ್ಯವಾಗಳು’ ಎಂದು ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಗೆದ್ದ ಶ್ರೀಲೀಲಾ, ಕಂಗನಾ ಸಾಧಾರಣ, ಕಳಪೆ ಓಪನಿಂಗ್ ಪಡೆದ ವ್ಯಾಕ್ಸಿನ್ ವಾರ್;

ಸೆಪ್ಟೆಂಬರ್​ 28ರಂದು ‘ಚಂದ್ರಮುಖಿ 2’ ಮಾತ್ರವಲ್ಲದೇ ನಯನತಾರಾ ನಟನೆಯ ‘ಇರೈವಾನ್​’, ಶ್ರೀಲೀಲಾ-ರಾಮ್​ ಪೋತಿನೇನಿ ಅಭಿನಯದ ‘ಸ್ಕಂದ’ ಸಿನಿಮಾ ಕೂಡ ಸೋತಿವೆ ಎಂದು ಟ್ರೇಡ್​ ವಿಶ್ಲೇಷಕ ಮನೋಬಲ ವಿಜಯಬಾಲನ್​ ಅವರು ಟ್ವೀಟ್​ ಮಾಡಿದ್ದಾರೆ. ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ ‘ದಿ ವ್ಯಾಕ್ಸಿನ್​ ವಾರ್​’ ಚಿತ್ರ ಕೂಡ ನಿರೀಕ್ಷಿತ ಮಟ್ಟದ ಕಲೆಕ್ಷನ್​ ಮಾಡುವಲ್ಲಿ ವಿಫಲವಾಗಿದೆ. ಕಂಗನಾ ನಟನೆ ‘ತೇಜಸ್​’ ಸಿನಿಮಾ ಅಕ್ಟೋಬರ್​ 27ರಂದು ಬಿಡುಗಡೆ ಆಗಲಿದೆ. ಅವರೇ ನಿರ್ದೇಶನ ಮಾಡಿರುವ ‘ಎಮರ್ಜೆನ್ಸಿ’ ಚಿತ್ರ ಕೂಡ ರಿಲೀಸ್​ಗೆ ಸಜ್ಜಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಥಳಿಸಿದ ಪ್ರಯಾಣಿಕರು
ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಥಳಿಸಿದ ಪ್ರಯಾಣಿಕರು
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ