AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ್ ಆರ್ಯನ್ ಜೊತೆ ನಟಿಸೋ ಚಾನ್ಸ್ ಪಡೆದ ತೃಪ್ತಿ ದಿಮ್ರಿ; ಹಾರರ್ ಸಿನಿಮಾಗೆ ಆಯ್ಕೆ

ಬಾಲಿವುಡ್​ನ ಯಶಸ್ವಿ ಫ್ರಾಂಚೈಸ್​ಗಳಲ್ಲಿ ಒಂಇದಕ್ಕಱದು ‘ಭೂಲ್ ಭುಲಯ್ಯ’. ಮೊದಲ ಭಾಗದಲ್ಲಿ ಅಕ್ಷಯ್ ಕುಮಾರ್ ಹಾಗೂ ಎರಡನೇ ಭಾಗಕ್ಕೆ ಕಾರ್ತಿಕ್ ಆರ್ಯನ್ ನಟಿಸಿದ್ದರು. ಈಗ ಈ ಚಿತ್ರಕ್ಕೆ ಮೂರನೇ ಪಾರ್ಟ್ ಸಿದ್ಧವಾಗುತ್ತಿದೆ. ಈ ಚಿತ್ರಕ್ಕೆ ಕಾರ್ತಿಕ್ ಆರ್ಯನ್ ಹೀರೋ. ಈ ಸಿನಿಮಾ ತಂಡಕ್ಕೆ ತೃಪ್ತಿ ಸೇರ್ಪಡೆ ಆಗಿದ್ದಾರೆ.

ಕಾರ್ತಿಕ್ ಆರ್ಯನ್ ಜೊತೆ ನಟಿಸೋ ಚಾನ್ಸ್ ಪಡೆದ ತೃಪ್ತಿ ದಿಮ್ರಿ; ಹಾರರ್ ಸಿನಿಮಾಗೆ ಆಯ್ಕೆ
ತೃಪ್ತಿ
ರಾಜೇಶ್ ದುಗ್ಗುಮನೆ
|

Updated on: Feb 22, 2024 | 2:58 PM

Share

ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ಇದ್ದರೂ ಅನೇಕ ನಟಿಯರಿಗೆ ಒಳ್ಳೆಯ ಅವಕಾಶಗಳು ಸಿಕ್ಕಿರುವುದಿಲ್ಲ. ಆದರೆ, ಒಂದೇ ಒಂದು ಗೆಲುವಿನಿಂದ ಅವರ ವೃತ್ತಿ ಬದುಕೇ ಬದಲಾಗಿ ಬಿಡುತ್ತದೆ. ಈ ರೀತಿ ವೃತ್ತಿ ಬದುಕು ಬದಲಾದವರ ಸಾಲಿನಲ್ಲಿ ನಟಿ ತೃಪ್ತಿ ದಿಮ್ರಿ ಕೂಡ ಇದ್ದಾರೆ. ‘ಅನಿಮಲ್’ ಸಿನಿಮಾದಲ್ಲಿ (Animal Movie) ಜೋಯಾ ಹೆಸರಿನ ಪಾತ್ರವನ್ನು ತೃಪ್ತಿ ಮಾಡಿದ್ದರು. ಅವರ ಪಾತ್ರ ತೆರೆಮೇಲೆ ಕಡಿಮೆ ಹೊತ್ತು ಕಾಣಿಸಿಕೊಂಡಿದ್ದರೂ ಅವರ ವೃತ್ತಿ ಬದುಕನ್ನೇ ಈ ಚಿತ್ರ ಬದಲಾಯಿಸಿದೆ. ಈಗ ಅವರಿಗೆ ದೊಡ್ಡ ಆಫರ್ ಒಂದು ಸಿಕ್ಕಿದೆ.

‘ಭೂಲ್ ಭುಲಯ್ಯ’ ಬಾಲಿವುಡ್​ನ ಯಶಸ್ವಿ ಫ್ರಾಂಚೈಸ್​ಗಳಲ್ಲಿ ಒಂದು. ಮೊದಲ ಭಾಗದಲ್ಲಿ ಅಕ್ಷಯ್ ಕುಮಾರ್ ಹಾಗೂ ಎರಡನೇ ಭಾಗದಲ್ಲಿ ಕಾರ್ತಿಕ್ ಆರ್ಯನ್ ನಟಿಸಿದ್ದರು. ಈಗ ಈ ಚಿತ್ರಕ್ಕೆ ಮೂರನೇ ಪಾರ್ಟ್ ಸಿದ್ಧವಾಗುತ್ತಿದೆ. ಈ ಚಿತ್ರವನ್ನು ಬರುವ ದೀಪಾವಳಿಗೆ ರಿಲೀಸ್ ಮಾಡೋ ಆಲೋಚನೆ ತಂಡಕ್ಕೆ ಇದೆ. ಈ ಸಿನಿಮಾ ತಂಡಕ್ಕೆ ತೃಪ್ತಿ ಕೂಡ ಸೇರ್ಪಡೆ ಆಗಿದ್ದಾರೆ. ಇದನ್ನೂ ಓದಿ: ‘ಅನಿಮಲ್​’ ಸಿನಿಮಾದ ನಟಿ ತೃಪ್ತಿ ದಿಮ್ರಿ ಬಾಯ್​ಫ್ರೆಂಡ್​ ಫೋಟೋ ವೈರಲ್​

ಮೊದಲ ಭಾಗದಲ್ಲಿ ವಿದ್ಯಾ ಬಾಲನ್ ಅವರು ಮಂಜುಲಿಕಾ ಆಗಿ ನಟಿಸಿದ್ದರು. ಅವರು ಮೂರನೇ ಭಾಗದಲ್ಲೂ ಇರಲಿದ್ದಾರೆ ಎಂದು ತಂಡ ಇತ್ತೀಚೆಗೆ ಘೋಷಣೆ ಮಾಡಿತ್ತು. ಈಗ ತೃಪ್ತಿ ಅವರು ಸೇರ್ಪಡೆ ಆದ ಬಗ್ಗೆ ತಂಡ ಮಾಹಿತಿ ಹಂಚಿಕೊಂಡಿದೆ. ಇದರಿಂದ ತೃಪ್ತಿ ವೃತ್ತಿ ಬದುಕು ಬದಲಾಗೋ ನಿರೀಕ್ಷೆ ಇದೆ. ಒಂದೊಮ್ಮೆ ಈ ಸಿನಿಮಾ ಹಿಟ್ ಆದ ತೃಪ್ತಿ ಕರಿಯರ್​ಗೆ ಮೈಲೇಜ್ ಸಿಗಲಿದೆ. ಅಂದಹಾಗೆ, ಈ ಚಿತ್ರದಲ್ಲಿ ಅವರು ನಿರ್ವಹಿಸುತ್ತಿರೋ ಪಾತ್ರದ ಹೆಸರು ಏನು ಎಂಬುದು ಇನ್ನೂ ರಿವೀಲ್ ಆಗಿಲ್ಲ. ‘ಭೂಲ್ ಭುಲಯ್ಯ 3’ ಚಿತ್ರಕ್ಕೆ ಅನೀಸ್ ಬಾಜ್ಮೀ ನಿರ್ದೇಶನ ಮಾಡುತ್ತಿದ್ದಾರೆ.

ಕಾರ್ತಿಕ್ ಆರ್ಯನ್ ಪೋಸ್ಟ್..

ಕೆಲವು ವರ್ಷಗಳಿಂದ ತೃಪ್ತಿ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆದರೆ, ಅವರಿಗೆ ದೊಡ್ಡ ಮಟ್ಟದ ಗೆಲುವು ಸಿಕ್ಕಿರಲಿಲ್ಲ. ಅವರ ವೃತ್ತಿ ಜೀವನವನ್ನು ಬದಲಾಯಿಸಿದ್ದು ‘ಅನಿಮಲ್’ ಸಿನಿಮಾ. ಈ ಚಿತ್ರ ಸೂಪರ್ ಹಿಟ್ ಆದ ಬಳಿಕ ತೃಪ್ತಿ ಜನಪ್ರಿಯತೆ ಕೂಡ ಹೆಚ್ಚಿತು. ಈ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಅವರನ್ನು ಅನೇಕರು ಇಷ್ಟಪಟ್ಟಿದ್ದಾರೆ. ರಣಬೀರ್ ಕಪೂರ್ ನಟನೆಯ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 700 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು