AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತೃಪ್ತಿ ದಿಮ್ರಿಗೆ ಮದುವೆ ಆಗಲ್ಲ’; ಹೀಗೆ ಭವಿಷ್ಯ ನುಡಿದಿದ್ದು ಯಾರು?

‘ಅನಿಮಲ್​’ ಸಿನಿಮಾದಲ್ಲಿ ತೃಪ್ತಿ ದಿಮ್ರಿ ಮಾಡಿದ್ದು ಒಂದು ಚಿಕ್ಕ ಪಾತ್ರ ಅಷ್ಟೇ. ಆದರೆ ಆ ಪಾತ್ರದಿಂದ ಅವರಿಗೆ ಸಿಕ್ಕ ಯಶಸ್ಸು ತುಂಬ ದೊಡ್ಡದು. ಬೋಲ್ಡ್​ ಆಗಿ ಕಾಣಿಸಿಕೊಂಡ ಅವರು ಸಖತ್​ ಜನಪ್ರಿಯತೆ ಗಳಿಸಿದರು. ಈಗ ಅವರ ಡಿಮ್ಯಾಂಡ್​ ಹೆಚ್ಚಿದೆ.

‘ತೃಪ್ತಿ ದಿಮ್ರಿಗೆ ಮದುವೆ ಆಗಲ್ಲ’; ಹೀಗೆ ಭವಿಷ್ಯ ನುಡಿದಿದ್ದು ಯಾರು?
ತೃಪ್ತಿ ದಿಮ್ರಿ
ರಾಜೇಶ್ ದುಗ್ಗುಮನೆ
|

Updated on: Sep 20, 2024 | 8:30 AM

Share

ನಟಿ ತೃಪ್ತಿ ದಿಮ್ರಿ ಅವರು ಚಿತ್ರರಂಗಕ್ಕೆ ಬಂದು ಹಲವು ಸಮಯ ಕಳೆದಿದೆ. ಆದರೆ, ಅವರಿಗೆ ಫೇಮ್ ಸಿಕ್ಕಿದ್ದು ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಮೂಲಕ. ಅವರು ಮಾಡಿದ್ದು ಸಣ್ಣ ಪಾತ್ರವಾದರೂ ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿತ್ತು. ಈಗ ಅವರಿಗೆ ಮದುವೆ ಆಗಲ್ಲ ಎನ್ನುವ ಭಯ ಹುಟ್ಟಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.

‘ನಾನು ಉತ್ತರಾಖಂಡದವಳು. ಆದರೆ ಹುಟ್ಟಿದ್ದು ಬೆಳೆದಿದ್ದು ದೆಹಲಿಯಲ್ಲಿ. ನನ್ನ ಪಾಲಕರು ದೆಹಲಿಯಲ್ಲಿ ಇದ್ದರು. ನಾನು ಬಾಂಬೆಗೆ ಶಿಫ್ಟ್ ಆದಾಗ ನನಗೆ ಭಿನ್ನ ಎನಿಸಿತು. ನಿತ್ಯ 50-60 ಜನ ಇರೋ ರೂಂನಲ್ಲಿ ಇರಬೇಕಿತ್ತು. ಈ ಪ್ರೊಫೇಷನ್​ಗೆ ನಿಮ್ಮ ಮಗಳನ್ನು ಏಕೆ ಕಳುಹಿಸಿದಿರಿ ಎಂದು ಕೇಳಿದವರು ಅನೇಕರು ಇದ್ದಾರೆ. ಅವಳು ಕೆಟ್ಟವರ ಸಹವಾಸ ಮಾಡುತ್ತಾಳೆ, ಅವಳಿಗೆ ಮದುವೆ ಆಗಲ್ಲ ಎಂದು ಹೇಳಿದವರೂ ಇದ್ದಾರೆ’ ಎಂದಿದ್ದಾರೆ ತೃಪ್ತಿ.

‘ಆ ಒಂದು ಹಂತಕ್ಕೆ ಹೋದರೂ ನಿಮಗೆ ಕೆಲಸ ಸಿಗುತ್ತಿಲ್ಲ ಎಂದರೆ ಗೊಂದಲ ಸೃಷ್ಟಿ ಆಗುತ್ತದೆ. ಆದರೆ, ತಂದೆ-ತಾಯಿ ಬಳಿ ಮರಳಿ ಹೋಗಿ ನನ್ನ ಕೈಯಲ್ಲಿ ಅದು ಸಾಧ್ಯವಾಗಿಲ್ಲ ಎಂದು ಹೇಳಬಾರದು ಎಂದು. ನನ್ನ ಮೊದಲ ಸಿನಿಮಾ ಲೈಲಾ ಮಜ್ನು ರಿಲೀಸ್ ಆದ ಬಳಿಕ ಎಲ್ಲರೂ ಖುಷಿ ಪಟ್ಟಿದ್ದರು’ ಎಂದಿದ್ದಾರೆ ತೃಪ್ತಿ. ಈ ಸಿನಿಮಾ ಇತ್ತೀಚೆಗೆ ರೀ-ರಿಲೀಸ್ ಆಗಿದೆ.

ತೃಪ್ತಿ ಜೀವನ ಸಂಪೂರ್ಣವಾಗಿ ಬದಲಾಗಿದ್ದು ‘ಅನಿಮಲ್’ ಸಿನಿಮಾ ಮೂಲಕ. ಇದಾದ ಬಳಿಕ ಅವರನ್ನು ಹುಡುಕಿ ಅನೇಕ ಆಫರ್​ಗಳು ಬರುತ್ತಿವೆ. ಅವರು ನ್ಯಾಷನಲ್ ಕೃಶ್ ಎಂದು ಕೂಡ ಎನಿಸಿಕೊಂಡಿದ್ದಾರೆ. ‘ನಾನು ದೇವರಿಗೆ ಧನ್ಯವಾದ ಹೇಳಬೇಕು. ಜನರು ನನ್ನನ್ನು ಇಷ್ಟಪಡುತ್ತಿದ್ದಾರೆ. ನನ್ನ ಸಿನಿಮಾ ಬಗ್ಗೆ ಜನರು ಮಾತನಾಡುತ್ತಿದ್ದಾರೆ’ ಎಂದು ಅವರು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:  ಸ್ಟಾರ್​ ನಟರ ಸಿನಿಮಾಗಳಿಗೆ ಬಹುಬೇಡಿಕೆಯ ಹೀರೋಯಿನ್​ ಆದ ತೃಪ್ತಿ ದಿಮ್ರಿ

ತೃಪ್ತಿ ದಿಮ್ರಿ ಕೈಯಲ್ಲಿ ಹಲವು ಸಿನಿಮಾಗಳು ಇವೆ. ರಾಜ್​ಕುಮಾರ್ ರಾವ್ ಅವರ ‘ವಿಕ್ಕಿ ವಿದ್ಯಾ ಕಾ ವೋ ವಾಲಾ ವಿಡಿಯೋ’ ಸಿನಿಮಾದಲ್ಲಿ ನಟಿಸುತ್ತಿದ್ದು, ಅಕ್ಟೋಬರ್ 11ರಂದು ಚಿತ್ರ ರಿಲೀಸ್ ಆಗಲಿದೆ. ವಿಶಾಲ್ ಭಾರದ್ವಾಜ್ ಅವರ ನಿರ್ದೇಶನದ ಇನ್ನೂ ಟೈಟಲ್ ಇಡದ ಸಿನಿಮಾದಲ್ಲಿ ಶಾಹಿದ್ ಕಪೂರ್ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ